ಜೈಲಿನಲ್ಲಿರುವ ಆರೋಪಿಯಿಂದ ಪತ್ನಿಗೆ ಕೊಲೆ ಬೆದರಿಕೆ: ಆರೋಪಿ ವಿರುದ್ಧ ಮತ್ತೊಂದು ಕೇಸು

ಕಣ್ಣೂರು: ಕಣ್ಣೂರು ಸೆಂಟ್ರಲ್ ಜೈಲಿನಲ್ಲಿರುವ ಕಾಪಾ ಪ್ರಕರಣದ ಆರೋಪಿ ತನ್ನ ಪತ್ನಿಗೆ ಫೋನ್ ಕರೆ ಮಾಡಿ ಕೊಲೆ ಬೆದರಿಕೆಯೊಡ್ಡಿರುವುದಾಗಿ ಆರೋಪವುಂಟಾಗಿದೆ. ಬೆದರಿಕೆ ಕರೆಯನ್ನು ರೆಕಾರ್ಡ್ ಮಾಡಿ ಪತ್ನಿ ಜೈಲು ಸೂಪರಿಂಟೆಂಡೆಂಟ್‌ಗೆ ಕಳುಹಿಸಿಕೊಟ್ಟಿದ್ದು, ಇದರ ಮುಂದುವರಿಕೆಯಾಗಿ ನಡೆದ ತನಿಖೆಯಲ್ಲಿ ಆರೋಪಿಯ ಕೈಯಲ್ಲಿ ಮೊಬೈಲ್ ಫೋನ್ ಪತ್ತೆಹಚ್ಚಲಾಗಿದೆ. ಜೈಲು ಸೂಪರಿಂಟೆಂಡೆಂಟ್ ಕೆ. ವೇಣು ನೀಡಿದ ದೂರಿನಂತೆ ೧೫ನೇ ನಂಬ್ರ ಸೆಲ್‌ನ ಕಾಪಾ ಪ್ರಕರಣದ ಆರೋಪಿ ಯಾದ ತೃಶೂರು ಪುದುಕ್ಕಾಡ್ ನಾಯರಂಗಾಡಿ ತಾಳೇಕಾಟಿಲ್ ಹೌಸ್‌ನ ಗೋಪ ಕುಮಾರ್ ವಿರುದ್ಧ ಇನ್ನೊಂದು ಕೇಸು …

ಶಬರಿಮಲೆ ಚಿನ್ನವನ್ನು ಕಳವುಗೈಯ್ಯಲು ಅವಕಾಶ ಮಾಡಿಕೊಟ್ಟ ಮಾಜಿ ಎಕ್ಸಿಕ್ಯೂಟಿವ್ ಅಧಿಕಾರಿ ಬಂಧನ

ಪಂದಳಂ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ  ಸಂಬಂಧಿಸಿ ವಿಶೇಷ ತನಿಖಾ ತಂಡ (ಎಸ್‌ಐಟಿ) ಇನ್ನೋರ್ವನನ್ನು ಬಂಧಿಸಿದೆ. ಆ ಮೂಲಕ ಈ ಪ್ರಕರಣಕ್ಕೆ ಸಂಬಂಧಿಸಿ ಬಂಧಿತರಾದವರ ಸಂಖ್ಯೆ ಈಗ ಮೂರಕ್ಕೇರಿದೆ. ಶಬರಿಮಲೆ ಕ್ಷೇತ್ರದ ಈ ಹಿಂದಿನ ಎಕ್ಸಿಕ್ಯೂಟಿವ್ ಆಫೀಸರ್ ಡಿ. ಸುಧೀಶ್ ಕುಮಾರ್ ಬಂಧಿತ ಆರೋಪಿ.  ತನಿಖಾ ತಂಡ ಈತನನ್ನು ನಿನ್ನೆ ಕಸ್ಟಡಿಗೆ ತೆಗೆದು ತಿರುವನಂತಪುರ   ಕ್ರೈಂ ಬ್ರಾಂಚ್ ಕಚೇರಿಗೆ ಸಾಗಿಸಿ   ಆತನನ್ನು ಸತತ ಮೂರು ತಾಸುಗಳ ತನಕ  ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡ ನಂತರ ಆತನನ್ನು …

ಕೆ. ಸುರೇಂದ್ರನ್ ನಡೆಸಿದ ಪಾದಯಾತ್ರೆಗಾಗಿ ಪಡೆದ ವಾಹನ ಮರಳಿ ನೀಡದ ಬಗ್ಗೆ ದೂರು ಶಿವಸೇನೆ ನೇತಾರರ ವಿರುದ್ಧ ಕೇಸು

ಕಾಸರಗೋಡು: ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ  ಕೆ. ಸುರೇಂದ್ರನ್ ಕಾಸರಗೋಡಿನಿಂದ ತಿರುವನಂತಪುರಕ್ಕೆ ನಡೆಸಿದ ಪಾದಯಾತ್ರೆಯ ಅಗತ್ಯಕ್ಕಾಗಿ ಪಡೆದ ವಾಹನವನ್ನು ಮರಳಿ ನೀಡಿಲ್ಲವೆಂಬ ಆರೋಪವುಂ ಟಾಗಿದೆ. ಕಾಞಂಗಾಡ್ ಕುಶಾಲ್ ನಗರದ ಕೆ.ಕೆ. ಸಂತೋಷ್ ಕುಮಾರ್‌ರ ಪತ್ನಿ ಗೀತು ರೈ (42) ನೀಡಿದ ದೂರಿನಂತೆ ಶಿವಸೇನೆ ಎರ್ನಾಕುಳಂ ಜಿಲ್ಲಾಧ್ಯಕ್ಷ ಸುಧೀರ್ ಗೋಪಿ, ಶಿವಸೇನೆ ರಾಜ್ಯಾಧ್ಯಕ್ಷ ಪೇರೂರ್‌ಕಡ ಹರಿಕುಮಾರ್ ಎಂಬಿವರ ವಿರುದ್ಧ ಹೊಸದುರ್ಗ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ದೂರು ದಾತೆಯ ಪತಿಯ ಮಾಲ ಕತ್ವದಲ್ಲಿರುವ ಟಾಟಾ ಏಸ್ ವಾಹನವನ್ನು ಕೆ. ಸುರೇಂದ್ರನ್ ನಡೆಸಿದ ಪಾದಯಾತ್ರೆಗಾಗಿ …

ನಾಲ್ಕೂವರೆ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಜೀವಾವಧಿ ಸಜೆ, ಜುಲ್ಮಾನೆ

ಕಾಸರಗೋಡು: ನಾಲ್ಕೂವರೆ ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಕಾಸರಗೋಡು ಫಾಸ್ಟ್‌ಟ್ರಾಕ್ ಸ್ಪೆಷಲ್ (ಪೋಕ್ಸೋ) ನ್ಯಾಯಾಲಯದ ನ್ಯಾಯಾಧೀಶರಾದ ರಾಮು ರಮೇಶ್ಚಂದ್ರಭಾನುರವರು ಜೀವಾವಧಿ ಸಜೆ ಮತ್ತು 3 ಲಕ್ಷ ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಕೊಲ್ಲಂ ಕಾರಿಚ್ಚಿರದ ಎಸ್. ರಾಜೀವನ್ (55) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಒಂದು ವರ್ಷ ಹೆಚ್ಚುವರಿ ಕಠಿಣ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ೨೦೨೨ ಆಗಸ್ಟ್ ತಿಂಗಳಲ್ಲಿ ನಾಲ್ಕೂವರೆ ವರ್ಷ ಪ್ರಾಯದ ಬಾಲಕಿಗೆ …

ರಾಜ್ಯೋತ್ಸವ ವಿಶೇಷ: ತಮಿಳು ಕ್ಷೌರಿಕನ ಕನ್ನಡಪ್ರೇಮ

ಕಾಸರಗೋಡು: ವ್ಯವಹಾರ ಸಂಸ್ಥೆಗಳ ನಾಮಫಲಕಗಳು ಆಂಗ್ಲ ಭಾಷೆಯಲ್ಲಿ ಮಾತ್ರ ವಿಜ್ರಂಭಿಸುತ್ತಿರುವ ಕಾಲಘಟ್ಟದಲ್ಲಿ ಹೊರ ರಾಜ್ಯದಿಂದ ಇಲ್ಲಿಗೆ ಬಂದ ಅನ್ಯಭಾಷಾ ಪ್ರೇಮಿಯೊಬ್ಬರ ಭಾಷಾ ಸಾಮರಸ್ಯವು ರಾಜ್ಯೋತ್ಸವ ಸಂದರ್ಭದಲ್ಲಿ ಕನ್ನಡಿಗರಿಗೆ ಹಿತಾನುಭವ ಮೂಡಿಸುತ್ತಿದೆ. ತಮಿಳುನಾಡಿನ ತಂಜಾವೂರು ತಿರುಚ್ಚಿಯ ಇಳಂಗೋವನ್ ಎಂಬವರು ನಗರದ ಚಂದ್ರಗಿರಿ ಜಂಕ್ಷನ್ ಎಂ.ಜಿ ರಸ್ತೆಯ ಪೆಟ್ರೋಲ್ ಬಂಕ್ ಮತ್ತು ಜೀವ ವಿಮಾ ನಿಗಮದ ಕಚೇರಿ ನಡುವೆ ಇರುವ ಕಟ್ಟಡದಲ್ಲಿ ಆರಂಭಿಸಿರುವ ತಮ್ಮ ಸೆಲೂನ್‌ಗೆ ‘ಕ್ಷೌರದಂಗಡಿ’ ಎಂದು ಅಚ್ಚ ಕನ್ನಡ ಭಾಷೆಯಲ್ಲಿ ನಾಮಫಲಕ ಹಾಕಿರು ವುದು ಕನ್ನಡ ಭಾಷಾ …

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ: ಆರೋಪಿಗೆ 20 ವರ್ಷ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಗೆ ಹೊಸದುರ್ಗ ಕ್ಷಿಪ್ರ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಪಿ.ಎಂ. ಸುರೇಶ್ ಅವರು 20 ವರ್ಷ, 6 ತಿಂಗಳ ಕಠಿಣ ಸಜೆ ಹಾಗೂ 16,000  ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಮುಳಿಯಾರು ಪೈಕದ ಕೆ. ನಿತ್ಯಾನಂದ (29) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ 8 ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. 2023 ಜುಲೈ 21ರಂದು ಆದೂರು ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ …

ವಾಹನ ಅಪಘಾತದಲ್ಲಿ ವ್ಯಕ್ತಿಯ ಪಕ್ಕೆಲುಬು ಮುರಿತ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಕುಂಬಳೆ: ವಾಹನ ಅಪಘಾತದಲ್ಲಿ ಪಕ್ಕೆಲುಬು ಮುರಿತಕ್ಕೊಳಗಾದ ವ್ಯಕ್ತಿಗೆ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆ ತಜ್ಞರು  ಅತೀ ಸಾಹಸಿಕ ರೀತಿಯ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.  ಕರ್ನಾಟಕದ ಪುತ್ತೂರಿನಲ್ಲಿ  ಎರಡು ದಿನಗಳ ಹಿಂದೆ ಸಂಭವಿಸಿದ ವಾಹನ ಅಪಘಾತದಲ್ಲಿ ಕುಂಬಳೆ ನಿವಾಸಿಯಾದ 57ರ ಹರೆಯದ ವ್ಯಕ್ತಿಯ ಪಕ್ಕೆಲುಬು ಮುರಿದಿತ್ತು. ಇದರಿಂದ ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಾದ ವ್ಯಕ್ತಿಗೆ ಅತೀ ಸಾಹಸಿಕ ಹಾಗೂ ಸಂಕೀರ್ಣ ರೀತಿಯ ಶಸ್ತ್ರಚಿಕಿತ್ಸೆ ನಡೆಸಿ ಪಕ್ಕೆಲುಬನ್ನು ಪೂರ್ವಸ್ಥಿತಿಗೆ ತಲುಪಿಸಲಾಯಿತು.  ಮೂರು ದಿನಗಳೊಳಗೆ ಆಸ್ಪತ್ರೆಯಿಂದ ವ್ಯಕ್ತಿಯನ್ನು ಬಿಡುಗಡೆಗೊಳಿಸಬಹುದೆಂದು ತಿಳಿಸಲಾಗಿದೆ. …

ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ 80ರ ಹರೆಯದ ವ್ಯಕ್ತಿಗೆ ಅತ್ಯಪೂರ್ವ ಅಡ್ರಿನಲ್ ಟ್ಯೂಮರ್ ಶಸ್ತ್ರಚಿಕಿತ್ಸೆ  

ಕಾಸರಗೋಡು: ಹೃದಯದ ವಾಲ್ವ್‌ಗೆ ಉಂಟಾದ ಹಾನಿ ಸಹಿತ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದ 80ರ ಹರೆಯದ ವ್ಯಕ್ತಿಗೆ ಕಾಸರಗೋಡು ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಅಡ್ರಿನಲಾಕ್ಟಮಿ (ಹೊಟ್ಟೆಯನ್ನು ತೆರೆಯದೆ ಕೀಹೋಲ್ ಶಸ್ತ್ರಚಿಕಿತ್ಸೆ ಮೂಲಕ  ಅಡ್ರಿನಲ್ ಗ್ರಂಥಿ ಹಾಗೂ ಟ್ಯೂಮರ್ ತೆರವುಗೊಳಿಸುವಿಕೆ) ಯಶಸ್ವಿಯಾಗಿ ನಡೆಸಲಾಯಿತು. ಈ ಅತೀ ಸಾಹಸಕರ ಶಸ್ತ್ರಚಿಕಿತ್ಸೆ ಮೂಲಕ ಕಾಸರಗೋಡು ಆರೋಗ್ಯ ರಂಗದಲ್ಲಿ ವೈದ್ಯರ ಸಾಧನೆ ಆಸ್ಟರ್ ಮಿಮ್ಸ್ ಆಸ್ಪತ್ರೆಯಲ್ಲಿ ಮತ್ತೊಮ್ಮೆ ಸಾಬೀತುಗೊಂ ಡಿದೆ.  ರೋಗಿಯ ಕಿಡ್ನಿಯ ಮೇಲ್ಭಾಗದಲ್ಲಿರುವ 12 ಸೆಂಟಿಮೀಟರ್ ವ್ಯಾಪ್ತಿಯ ಹ್ಯೂಮರ್ ತೆರವುಗೊಳಿಸಲು …

ಕೆಲಸದ ಮಧ್ಯೆ ಅಸ್ವಸ್ಥಗೊಂಡ ಕೂಲಿ ಕಾರ್ಮಿಕ ನಿಧನ

ಉಪ್ಪಳ: ಪ್ರತಾಪನಗರ ನಿವಾಸಿ, ಕೂಲಿ ಕಾರ್ಮಿಕ ಸದಾನಂದ (56) ನಿಧನ ಹೊಂದಿದರು. ಮೊನ್ನೆ ಮನೆ ಸಮೀಪದ ತೋಟದಲ್ಲಿ ಕೆಲಸ ನಿರ್ವಹಿಸುತ್ತಿರುವಾಗ ಅಸ್ವಸ್ಥಗೊಂಡಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಹಿಂತಿರುಗಿದ್ದರು. ಆದರೆ ರಾತ್ರಿ ಮತ್ತೆ ಉಲ್ಬಣಗೊಂಡು ನಿಧನ ಸಂಭವಿಸಿದೆ. ಮೃತರು ಪತ್ನಿ ಸರಸ್ವತಿ, ಮಕ್ಕಳಾದ ಯತೀಶ್ ಕುಮಾರ್, ನವ್ಯ, ಸೊಸೆ ಸನ್ಮಿತ, ಅಳಿಯ ಕೃಷ್ಣ, ಸಹೋದರ-ಸಹೋದರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಪೂರ್ತಿಯಾಗುತ್ತಿದೆ ಆರಿಕ್ಕಾಡಿ ಟೋಲ್‌ಗೇಟ್ ನಿರ್ಮಾಣ: ನ್ಯಾಯಾಲಯದಲ್ಲಿ ವಿಚಾರಣೆ ಮತ್ತೆ ಮುಂದೂಡಿಕೆ

ಕುಂಬಳೆ: ನ್ಯಾಯಾಲಯದ ನಿರೀಕ್ಷಣೆ, ಕೇಸು ಜ್ಯಾರಿಯಲ್ಲಿರುವಾಗಲೇ ಕೇಂದ್ರ ಸರಕಾರದ ಅನುಮತಿ ಇಲ್ಲದೆ ಆರಿಕ್ಕಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸುವ ಟೋಲ್‌ಗೇಟ್ ಕಾಮಗಾರಿ ಪೂರ್ತಿ ಗೊಳ್ಳುತ್ತಿದೆ. ಸಣ್ಣಪುಟ್ಟ ಕೆಲಸಗಳನ್ನು ಹೊರತುಪಡಿಸಿದರೆ ಟೋಲ್‌ಗೇಟ್‌ನ 95 ಶೇಕಡಾ ಕೆಲಸವು ಪೂರ್ತಿಗೊಂಡಿದೆ. ಗೇಟ್‌ನ ಷರತ್ತುಗಳು ಅಡಕವಾದ ಬೋರ್ಡ್‌ಗಳನ್ನು ಸ್ಥಾಪಿಸಲಾಗಿದೆ. ಟೋಲ್ ಸಂಗ್ರಹಿಸುವುದಕ್ಕಿರುವ ಕೇಂದ್ರ ಸರಕಾರದ ಅನುಮತಿಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಾಯುತ್ತಿದೆ. ಅದು ಲಭಿಸಿದ ಕೂಡಲೇ ಟೋಲ್ ಸಂಗ್ರಹ ಆರಂಭಗೊಳ್ಳಲಿದೆ. ಹೆದ್ದಾರಿ 66 ಆರಿಕ್ಕಾಡಿಯಲ್ಲಿ ನಿರ್ಮಿಸುವ ಟೋಲ್ ಪ್ಲಾಝಾ ವಿರುದ್ಧ ನ್ಯಾಯಾಲಯ ವಿಚಾರಣೆ ಅಕ್ಟೋಬರ್ …