ವಿಕಲ ಚೇತನ ಬಾಲಕಿಗೆ ಕಿರುಕುಳ: ಇಬ್ಬರು ಆಟೋ ಚಾಲಕರ ಸಹಿತ ಮೂವರು ಆರೋಪಿಗಳ ಬಂಧನ

ಕಾಸರಗೋಡು: ವಿಕಲ ಚೇತನಳಾದ 17ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಟಿಕುಳಂ ರೈಲ್ವೇ ನಿಲ್ದಾಣ ಸಮೀಪದ ಸಾಲಿ ಯಾನೆ ಮುಹಮ್ಮದ್ ಸಾಲಿಹ್ (29), ಪೆರುಂಬಳ ಕೋಳಿಯಡ್ಕದ ಶೆರೀಫ್ ಕಡಪ್ಪಳ್ಳಂ ಯಾನೆ ಕೆ.ಪಿ. ಶರೀಫ್ (40),ಮೈಲಾಟಿ ಕುಟ್ಟಪ್ಪುನ್ನ ಕುರುಕನ್‌ಕುನ್ನು ನಿವಾಸಿಯೂ ಪ್ರಸ್ತುತ ತಚ್ಚಂಗಾಡ್ ಅರಬಿಪಳ್ಳಿ ಸಮೀಪ ವಾಸಿಸುವ ಎ.ಟಿ. ಮುಹಮ್ಮದ್ ನೌಶಾದ್ (39) ಎಂಬಿವರನ್ನು ಬೇಕಲ ಪೊಲೀಸರು ಬಂಧಿಸಿದ್ದಾರೆ. ಇವರ ಪೈಕಿ ನೌಶಾದ್ ಹಾಗೂ ಶೆರೀಫ್ ಆಟೋ ಚಾಲಕರಾಗಿದ್ದಾರೆ. ಮುಹಮ್ಮದ್ ಸಾಲಿಹ್ ತರಕಾರಿ …

ಆರಿಕ್ಕಾಡಿಯಲ್ಲಿ ಸ್ವಂತ ಹಣದಿಂದ ತಂಗುದಾಣ ನಿರ್ಮಿಸಿ ಮಾದರಿಯಾದ ಸಾಮಾಜಿಕ ಕಾರ್ಯಕರ್ತ

ಕುಂಬಳೆ:  ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಂಗವಾಗಿ ತೆರವುಗೊ ಳಿಸಿದ  ಆರಿಕ್ಕಾಡಿ ಬಸ್ ಪ್ರಯಾಣಿಕರ ತಂಗುದಾಣವನ್ನು ಮರು ಸ್ಥಾಪಿಸಬೇಕೆಂಬ  ನಾಗರಿಕರು ಹಾಗೂ ಪ್ರಯಾಣಿಕರು ಹಲವು ಕಾಲದಿಂದ  ಒತ್ತಾಯಿಸುತ್ತಾ ಬಂದರೂ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಅಧಿಕಾರಿಗಳು ಹಾಗೂ ಪಂಚಾಯತ್ ನಿರ್ಲಕ್ಷ್ಯ ನಿಲುವು ತೋರಿಸಿದ ಹಿನ್ನೆಲೆಯಲ್ಲಿ ಮೀನು ಕಾರ್ಮಿಕನೂ, ಸಾಮಾಜಿಕ ಕಾರ್ಯಕರ್ತನೂ ಆದ ಆರಿಫ್ ಕಡವತ್ ಸ್ವಂತ ಹಣ ಖರ್ಚುಮಾಡಿ ತಂಗುದಾಣ ನಿರ್ಮಿಸಿ ದ್ದಾರೆ.  ಬಿಸಿಲು ಹಾಗೂ ಮಳೆಗೆ ಆರಿಕ್ಕಾಡಿಯಲ್ಲಿ ಬಸ್‌ಗಾಗಿ ಕಾದು ನಿಲ್ಲಲು ತಂಗುದಾಣವಿಲ್ಲದಿರುವುದು ಪ್ರಯಾಣಿಕರಿಗೆ ಭಾರೀ ಸಮಸ್ಯೆ ಯಾಗಿ ಪರಿಣಮಿಸಿತ್ತು. …

ಕೊಂಡೆವೂರಿನಲ್ಲಿ ಉಚಿತ ಪಿಎಸ್‌ಸಿ ಮಾಹಿತಿ ಶಿಬಿರ

ಉಪ್ಪಳ: ಸರ್ಕಾರಿ ಉದ್ಯೋಗದ ಕನಸು ಹೊತ್ತ ಯುವಜನರಿಗೆ ಮಾರ್ಗ ದರ್ಶನ ನೀಡುವ ಉದ್ದೇಶದಿಂದ ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆ ವೂರು ಇವರ ಆಯೋಜನೆಯಲ್ಲಿ ಪಿ.ಎಸ್.ಸಿ ಉಚಿತ ಮಾಹಿತಿ ಶಿಬಿರ ಉದ್ಘಾಟನೆಗೊಂಡಿತು. ಅವೇಕ್ ಕಾಸರಗೋಡು ಸಂಸ್ಥೆಯ ಸಹಯೋಗದೊಂದಿಗೆ ನಡೆಯುತ್ತಿರುವ ಈ ಉಚಿತ ತರಬೇತಿ ಶಿಬಿರಕ್ಕೆ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಚಾಲನೆ ನೀಡಿದರು. ಶಿಬಿರವು ಪ್ರತಿ ಭಾನುವಾರ ಬೆಳಗ್ಗೆ ೧೦ ರಿಂದ – ಮಧ್ಯಾಹ್ನ ೧ ಗಂಟೆಯವರೆಗೆ ಶ್ರೀ ಸದ್ಗುರು ನಿತ್ಯಾನಂದ ವಿದ್ಯಾಪೀಠದಲ್ಲಿ ಜರುಗುವುದು. ಶ್ರೀ ಯೋಗಾನಂದ ಸರಸ್ವತಿ …

ಕಂಚಿಕಟ್ಟೆ ಸೇತುವೆಯ ದುರವಸ್ಥೆ ಪ್ರತಿಭಟಿಸಿ ಎಸ್‌ಡಿಪಿಐಯಿಂದ ಫುಟ್ಭಾಲ್ ಶೂಟೌಟ್

ಕುಂಬಳೆ:  ಕಂಚಿಕಟ್ಟೆ ಸೇತುವೆಯ ಶೋಚನೀಯಾವಸ್ಥೆಯನ್ನು ಪರಿಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಮುಂದುವರಿಸುತ್ತಿರುವ ನಿರ್ಲಕ್ಷ್ಯವನ್ನು ಪ್ರತಿಭಟಿಸಿ ಎಸ್‌ಡಿಪಿಐ ಕುಂಬಳೆ ಪಂಚಾಯತ್ ಸಮಿತಿ  ಸೇತುವೆ ಮೇಲೆ ಫುಟ್ಭಾಲ್ ಶೂಟೌಟ್ ಹಮ್ಮಿಕೊಂಡಿತು. ಮಂಜೇಶ್ವರ ಮಂಡಲ ಅಧ್ಯಕ್ಷ ನಾಸರ್ ಬಂಬ್ರಾಣ ಉದ್ಘಾಟಿಸಿದರು.  ಕಂಚಿಕಟ್ಟೆ ಸೇತುವೆಯ ದುರವಸ್ಥೆಯಿಂದ ಪ್ರಯಾಣಿಕರು ಸಂಚರಿಸಲು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ಹಲವಾರು ದೂರುಗಳನ್ನು ಅಧಿಕಾರಿಗಳಿಗೆ ಸಲ್ಲಿಸಿದ್ದು ಅಲ್ಲದೆ  ಪ್ರತಿಭಟನೆ ನಡೆಸಿದರೂ ಸಂಬಂಧಪಟ್ಟ ಇಲಾಖೆಗಳು ಸೇತುವೆ ನವೀಕರಣಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳದಿರುವುದು ಖಂಡನೀಯ ವೆಂದು ನಾಸರ್ ಬಂಬ್ರಾಣ ತಿಳಿಸಿದ್ದಾರೆ. ಪಂಚಾಯತ್ ಸಮಿತಿ …

ಕಟ್ಟೆಬಜಾರ್‌ನಲ್ಲಿ ಹಳೆ ಮನೆ ಕುಸಿದು ನಾಶ ನಷ್ಟ

ಮಂಜೇಶ್ವರ: ಜೋರಾಗಿ ಸುರಿದ ಮಳೆ, ಗಾಳಿಗೆ ಹಳೆಯ ಮನೆಯೊಂದು ಕುಸಿದು ಬಿದ್ದ ಘಟನೆ ನಡೆದಿದೆ. ಮಂಜೇಶ್ವರ ಪಂಚಾಯತ್‌ನ ಕಟ್ಟೆಬಜಾರ್ ನಿವಾಸಿ ಜಗದೀಶ ಎಂಬವರ ಮನೆ ಕುಸಿದು ಬಿದ್ದಿದೆ. ಮಣ್ಣಿನ ಗೋಡೆ ಹೊಂದಿರುವ ಹೆಂಚು ಹಾಸಿದ ಈ ಮನೆಗೆ ನೂರಕ್ಕೂ ಮಿಕ್ಕು ವರ್ಷಗಳು ಕಳೆದಿರುವುದಾಗಿ ಹೇಳಲಾಗುತ್ತಿದೆ.ಈ ಮನೆಯಲ್ಲಿ ಜಗದೀಶರವರ ಭಾವ ಮಾತ್ರವೇ ಇದ್ದು, ಇತರರು ಪಕ್ಕದಲ್ಲಿರುವ ಸಂಬAಧಿಕರ ಮನೆಗೆ ತೆರಳಿದ್ದರು. ಮನೆ ಕುಸಿತದಿಂದ ವಿವಿಧ ವಸ್ತುಗಳು ನಾಶಗೊಂಡಿದ್ದು, ವ್ಯಾಪಕ ನಷ್ಟ ಉಂಟಾಗಿರುವುದಾಗಿ ತಿಳಿಸಿದ್ದಾರೆ. ಕುಟುಂಬ ಈಗ ಪರಿಸರದ ಸಂಬAಧಿಕರ …

ಎಲ್‌ಐಸಿ ಏಜೆಂಟರುಗಳಿಗೆ ಇಎಸ್‌ಐ ಸೌಲಭ್ಯ ನೀಡಬೇಕು- ಎ.ಐ.ಎಲ್.ಐ.ಎ.ಎಫ್

ಕಾಸರಗೋಡು: ಎಲ್‌ಐಸಿ ಏಜೆಂ ಟರುಗಳಿಗೆ ಇಎಸ್‌ಐ ಸೌಲಭ್ಯಗಳನ್ನು ಲಭ್ಯಗೊಳಿಸಲು ತುರ್ತು ಕ್ರಮ ಕೈಗೊಳ್ಳಬೇಕೆಂದು ಆಲ್ ಇಂಡಿಯ ಲೈಫ್ ಇನ್ಶೂರೆನ್ಸ್ ಏಜೆಂಟ್ಸ್ ಫೆಡರೇಶನ್ ಕಾಸರಗೋಡು ಬ್ರಾಂಚ್ ಸಮ್ಮೇಳನ ಆಗ್ರಹಿಸಿದೆ. ಆರ್ಗನೈಸಿಂಗ್ ಸೆಕ್ರೆಟರಿ ಎಂ. ಶಶೀಂದ್ರನ್ ಉದ್ಘಾಟಿಸಿ ದರು. ಶಿವನಾರಾಯಣ ಶರ್ಮ ಅಧ್ಯಕ್ಷತೆ ವಹಿಸಿದರು. ಸಿ. ವತ್ಸರಾಜ್, ಟಿ. ಕುಂಞಿಕೃಷ್ಣನ್, ಸಿ.ಡಿ. ನಾಯರ್, ಕೆ. ಕುಂಞಿಕೃಷ್ಣನ್ ನಾಯರ್, ಕೆ. ವಸಂತಿ, ಪಿ.ಎ. ರಾಜೀವ್, ಎ. ಗಣೇಶ್, ರಾಘವೇಂದ್ರ ಅಮ್ಮಣ್ಣಾಯ ಮಾತನಾಡಿದರು. ಕೆ.ಪಿ. ಗಂಗಾಧರನ್ ಸ್ವಾಗತಿಸಿ, ಪಿ. ಭರತನ್ ವಂದಿಸಿದರು. ನೂತನ …

ಶಿವಗಿರಿಯಲ್ಲಿ ಅಪಾಯ ಆಹ್ವಾನಿಸುವ ವಿದ್ಯುತ್ ಕಂಬ: ಸ್ಥಳೀಯರಲ್ಲಿ ಆತಂಕ

ಪೆರ್ಲ: ವಿದ್ಯುತ್ ಕಂಬವೊಂದು ಯಾವುದೇ ಕ್ಷಣ ಉರುಳಿ ಬಿದ್ದು ಅಪಾಯ ಆಹ್ವಾನಿಸುವ ಸ್ಥಿತಿಯಲ್ಲಿದೆ. ಇದು ಸ್ಥಳೀಯರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಪೆರ್ಲ ಗುಂಡ್ಯಡ್ಕ ಶಿವಗಿರಿ ಕನ್ಯಾರುಮೂಲೆ ಸಂಪರ್ಕ ರಸ್ತೆಯ ಅಪ್ಪಯಮೂಲೆ ಶಿವಗಿರಿ ಮಧ್ಯೆ ರಸ್ತೆ ಬದಿ ಈ ಕಂಬ ನಿಂತಿದೆ. ಕಂಬದ ಬುಡದಿಂದ ಮಣ್ಣು ಕುಸಿದಿದ್ದು, ಇನ್ನಷ್ಟು ಮಣ್ಣು ಕುಸಿಯುವ ಸಾಧ್ಯತೆ ಇದೆ. ವಿದ್ಯುತ್ ಕಂಬ ಕುಸಿದು ಬಿದ್ದರೆ ಕೆಳ ಭಾಗದಲ್ಲಿರುವ ಮನೆಗಳ  ಮೇಲೆ ವಿದ್ಯುತ್ ತಂತಿಗಳು ಬೀಳುವ ಅಪಾಯ ಕಂಡು ಬರುತ್ತಿದೆ. ದೊಡ್ಡ ದುರಂತ …

ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿಲಾಮಯ ಗರ್ಭಗುಡಿಗೆ ಪಾದುಕಾನ್ಯಾಸ

ಕಾಸರಗೋಡು: ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶಿಲಾಮಯ ಗರ್ಭಗುಡಿಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪಾದುಕಾನ್ಯಾಸ ನೇರವೇರಿಸಿದರು. ಇದೇ ವೇಳೆ ಜೀರ್ಣೋದ್ಧಾರ ಸಮಿತಿಯ ನೂತನ ಕಾರ್ಯಾಲಯ ಉದ್ಘಾಟಿ ಲಾಯಿತು. ಈ ವೇಳೆ ಕ್ಷೇತ್ರ ತಂತ್ರಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ, ಮುಕ್ತೇಸರ ಸುಧಾಕರ ಕೋಟೆ ಕುಂ ಜತ್ತಾಯ, ಅರ್ಚಕ ಪದ್ಮನಾಭ ಮನೋ ಳಿತ್ತಾಯ, ಕಾರ್ಯ ನಿರ್ವಾಹಣಾಧಿ ಕಾರಿ ಪಿ. ರಾಜೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಅನಂತ್ ಕಾಮತ್, ಉಪಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, …

ವಿಕಲಚೇತನ ಬಾಲಕಿಗೆ ಕಿರುಕುಳ: 5 ಪೋಕ್ಸೋ ಕೇಸು ದಾಖಲು; ಆರೋಪಿಗಳಿಗಾಗಿ ಶೋಧ

ಕಾಸರಗೋಡು: ವಿಕಲ ಚೇತನಳಾದ  17ರ ಹರೆಯದ ಬಾಲಕಿಗೆ ದೌರ್ಜನ್ಯವೆಸಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಚೈಲ್ಡ್ ವೆಲ್ಫೇರ್ ಕಮಿಟಿ ನೀಡಿದ ವರದಿಯ ಪ್ರಕಾರ  ಬೇಕಲ ಪೊಲೀಸರು 5 ಪೋಕ್ಸೋ ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ಪಳ್ಳಿಕ್ಕೆರೆ ಪಂಚಾಯತ್ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿ ದೌರ್ಜನ್ಯಕ್ಕೊಳಗಾಗಿರುವುದಾಗಿ ದೂರಲಾಗಿದೆ.  ಮೊದಲು ಓರ್ವ ಆಟೋ ಚಾಲಕ ಕಿರುಕುಳ ನೀಡಿರುವು ದಾಗಿ ಹೇಳಲಾಗುತ್ತಿದೆ. ಅನಂತರ  ಈ ಚಾಲಕನ ಸ್ನೇಹಿತ ಸಹಿತ ೪ ಮಂದಿ ಕಿರುಕುಳ ನೀಡಿರುವುದಾಗಿ ಆರೋಪಿ ಸಲಾಗಿದೆ. ಈ ಬಗ್ಗೆ ಬೇಕಲ ಪೊಲೀಸರಿಗೆ   ಮೊದಲೇ ಸೂಚನೆಗಳು ಲಭಿಸಿತ್ತು. …

ಮಧ್ಯವಯಸ್ಕ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ವ್ಯಕ್ತಿಯೊಬ್ಬರು ಮನೆಯೊಳಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಕೂಡಲೇ ಆಸ್ಪತ್ರೆಗೆ ತಲುಪಿಸುತ್ತಿದ್ದಂತೆ ಮೃತಪಟ್ಟ ಘಟನೆ ನಡೆದಿದೆ.  ಗಾಡಿಗುಡ್ಡೆ ಬಳಿಯ ತಲೆಬೈಲು ನಿವಾಸಿ  ರೋಬರ್ಟ್ ಕ್ರಾಸ್ತ (50) ಮೃತಪಟ್ಟ ವ್ಯಕ್ತಿ. ಕೂಲಿ ಕಾರ್ಮಿಕನಾಗಿದ್ದ ಇವರು ಅವಿವಾಹಿತನಾಗಿದ್ದು, ಮನೆಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಇಂದು ಬೆಳಿಗ್ಗೆ  ಇವರು ಹೊರಗೆಲ್ಲೂ ಕಾಣಿಸದ ಹಿನ್ನೆಲೆಯಲ್ಲಿ ಸಂಬಂಧಿಕರು ತೆರಳಿ ನೋಡಿದಾಗ  ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ರೋಬರ್ಟ್ ಕ್ರಾಸ್ತ ಕಂಡುಬಂದಿ ದ್ದಾರೆ. ಕೂಡಲೇ ಅವರನ್ನು ಕೆಳಗಿಳಿಸಿ ಮುಳ್ಳೇರಿಯದ ಆಸ್ಪತ್ರೆಗೆ ಕೊಂಡೊ ಯ್ಯುತ್ತಿದ್ದಂತೆ ಮೃತಪಟ್ಟಿದ್ದಾರೆ.   ಮೃತದೇಹವನ್ನು …