ಮುಳಿಯಾರು ಎಬಿಸಿ ಕೇಂದ್ರಕ್ಕೆ ಕೇಂದ್ರ ತಂಡ ಭೇಟಿ

ಕಾಸರಗೋಡು:  ಬೀದಿ ನಾಯಿ ಗಳನ್ನು  ಸಂತಾನಹರಣ ಶಸ್ತ್ರಚಿಕಿತ್ಸೆಗೊಳಪ ಡಿಸಲು ಮುಳಿಯಾರಿನಲ್ಲಿ ಸ್ಥಾಪಿಸಿದ ಎಬಿಸಿ ಕೇಂದ್ರ ತಂಡ ಇಂದು ಸಂದರ್ಶಿ ಸಲಿದೆ.  ಕೇಂದ್ರದ ಚಟುವಟಿಕೆಗೆ ಅಗತ್ಯದ ಅನುಮತಿ ಲಭಿಸಲು ರಾಷ್ಟ್ರೀಯ ಮೃಗ ಕ್ಷೇಮ ಮಂಡಳಿಯ ಪ್ರತ್ಯೇಕ  ಪರಿಶೀಲನೆಗಾಗಿ  ಕೇಂದ್ರ ತಂಡ ಇಲ್ಲಿಗೆ ಆಗಮಿಸಲಿದೆಯೆಂದು ತಿಳಿದುಬಂದಿದೆ. ಈ ತಂಡದ ಪರಿಶೀಲನೆ ಬಳಿಕ ಅನುಮತಿ ಲಭಿಸಿದರೆ ಮಾತ್ರವೇ  ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ನಡೆಸಬಹು ದಾಗಿದೆ. ಬೀದಿ ನಾಯಿಗಳ ಉಪಟಳ ತೀವ್ರಗೊಂಡ ಹಿನ್ನೆಲೆಯಲ್ಲಿ ಎಬಿಸಿ ಕೇಂದ್ರದ ಚಟುವಟಿಕೆ ಆರಂಭಿಸಬೇಕೆಂಬ ಬೇಡಿಕೆ  …

ಎಡನೀರು ಮಠದಲ್ಲಿ ರೆಮೋನಾ ಇವೆಟ್ಟ್ ಪೆರೇರಾರಿಗೆ ಅಭಿನಂದನೆ, ಸಾಧನಾ ಪುರಸ್ಕಾರ ಪ್ರದಾನ

ಬದಿಯಡ್ಕ: ಕಲೆ, ಸಂಸ್ಕೃತಿಗಳು ಈ ಮಣ್ಣಿನ ಸತ್ತ÷್ವದ ಸಂಕೇತಗಳು. ಅದನ್ನು ಕರಗತಮಾಡಿಕೊಳ್ಳುವುದು ಜೀವಮಾನ ಸಾಧನೆಯಾಗಿದ್ದು, ಅದರಲ್ಲೂ ವಿಶ್ವ ದಾಖಲೆ ನಿರ್ಮಿಸುವುದು ಅತ್ಯಪೂರ್ವ. ದೇವರ ಅನುಗ್ರಹ, ಸಂಕಲ್ಪ ಶಕ್ತಿಗಳಿಂದ ವ್ಯಕ್ತಿ ಶಕ್ತಿಯಾಗುವುದೇ ಬದುಕಿನ ಸಾರ್ಥಕತೆ ಎಂದು ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ನುಡಿದರು.ಶ್ರೀಮಠದಲ್ಲಿ ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಡೆಯುತ್ತಿರುವ ಸಾಂ ಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯದಲ್ಲಿ ಸಾಧನೆಗೈದ ಮಂಗಳೂರಿನ ರೆಮೋನಾ ಇವೆಟ್ಟ್ ಪೆರೇರಾ ಅವರನ್ನು ಅಭಿನಂದಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.ಮುಖ್ಯ ಅತಿಥಿಗಳಾಗಿ …

ಹೊಸಂಗಡಿ ಬಳಿ ಅಂಗಡಿಗಳ ಮುಂದೆ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆ: ತನಿಖೆ ಆರಂಭ

ಉಪ್ಪಳ: ಹೊಸಂಗಡಿ ಬಳಿಯ ಅಂಗಡಿಪದವು ದುರ್ಗಿಪಳ್ಳ ಪರಿಸರದಲ್ಲಿ ಎರಡು ಅಂಗಡಿಗಳ ಮುಂದೆ ರಕ್ತ ಹೆಪ್ಪುಗಟ್ಟಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇಂದು ಬೆಳಿಗ್ಗೆ ಅಂಗಡಿಗಳನ್ನು ತೆರೆಯಲು ವ್ಯಾಪಾರಿಗಳು ತಲುಪಿದಾಗ ರಕ್ತ ಕಂಡುಬಂದಿದೆ. ಭಾರೀ ಪ್ರಮಾಣದಲ್ಲಿ ರಕ್ತ ಚೆಲ್ಲಿರಬಹುದೆಂದು ಅಂದಾಜಿ ಸಲಾಗಿದೆ. ಈ ಬಗ್ಗೆ ವ್ಯಾಪಾರಿಗಳು ನೀಡಿದ ಮಾಹಿತಿಯಂತೆ ಮಂಜೇಶ್ವರ ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಇಲ್ಲಿ ರಕ್ತ ಚೆಲ್ಲಿರಬಹುದೆಂದು ಅಂದಾಜಿಸಲಾಗಿದೆ. ಇದು ಮನುಷ್ಯನದ್ದೇ ಅಥವಾ ಯಾವುದಾದರೂ ಪ್ರಾಣಿಯದ್ದಾಗಿರಬಹುದೇ ಎಂದು ಖಚಿತಪಡಿಸಲಾಗಿಲ್ಲ. ಎರಡು ಅಂಗಡಿಗಳ ಮುಂದೆ ರಕ್ತ …

ಮಹಿಳಾ ಡಾಕ್ಟರ್ ವಾಸಸ್ಥಳದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕೊಚ್ಚಿ: ಮಹಿಳಾ ಡಾಕ್ಟರ್ ವಾಸ ಸ್ಥಳದಲ್ಲಿ ಮೃತಪಟ್ಟಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದೆ. ಆಲುವಾ ರಾಜಗಿರಿ ಆಸ್ಪತ್ರೆಯ ಡಾಕ್ಟರ್ ಮೀನಾಕ್ಷಿ ವಿಜಯ ಕುಮಾರ್ ಮೃತಪಟ್ಟವರು. ರಾಜಗಿರಿ ಆಸ್ಪತ್ರೆಯ ಸರ್ಜಿಕಲ್ ಐಸಿಯುನಲ್ಲಿ ಇವರು ಕರ್ತವ್ಯ ನಿರ್ವಹಿಸುತ್ತಿದ್ದರು. ಕುನ್ನುವಳಿಯಲ್ಲಿ ರುವ ಫ್ಲ್ಯಾಟ್‌ನಲ್ಲಿ ಇವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ ಆಸ್ಪತ್ರೆಯಿಂದ ಫೋನ್ ಕರೆ ಮಾಡಿದರೂ ಸ್ವೀಕರಿಸಿರಲಿಲ್ಲ. ಬಳಿಕ ಆಸ್ಪತ್ರೆ ಅಧಿಕಾರಿಗಳು ಫ್ಲ್ಯಾಟ್‌ನಲ್ಲಿರು ವವರಿಗೆ ಮಾಹಿತಿ ನೀಡಿದ್ದು, ಅವರು ಬಂದು ನೋಡಿದಾಗ ಡಾಕ್ಟರ್ ಮಲಗುವ ಕೊಠಡಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿರುವುದು ಕಂಡು ಬಂದಿದೆ. ಇವರ ಕೈಗೆ …

ಮಹಿಳೆ ಕೆರೆಗೆ ಬಿದ್ದು ಮೃತ್ಯು

ಪೆರ್ಲ: ಮಹಿಳೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಎಣ್ಮಕಜೆ ಸೇರಾಜೆ ನಿವಾಸಿ ದಿ| ಅಮ್ಮು ರೈಯವರ ಪತ್ನಿ ಕುಸುಮ (85) ಮೃತಪಟ್ಟವರು. ಇವರು ನಿನ್ನೆ ಬೆಳಿಗ್ಗೆ ಮನೆ ಸಮೀಪದ ತೋಟಕ್ಕೆ ತೆರಳಿದ್ದರು. ಮರಳಿ ಬಾರದ ಹಿನ್ನೆಲೆಯಲ್ಲಿ ಮನೆಯವರು ತೋಟದಲ್ಲಿ ಹುಡುಕಿದಾಗ ಕೆರೆಯಲ್ಲಿ ಇವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ನ್ನಲಾಗಿದೆ. ಮೃತದೇಹವನ್ನು ಮೇಲಕ್ಕೆತ್ತಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮನೆ ಹಿತ್ತಿಲಲ್ಲಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಮೃತರು ಮಕ್ಕಳಾದ ಕಸ್ತೂರಿ, ಕೃಷ್ಣವೇಣಿ, ಸುರೇಶ, …

ಹಿತ್ತಿಲಿನಲ್ಲಿ ಎಂಡಿಎಂಎ ಬಳಕೆ: ಯುವತಿ ಸಹಿತ ಮೂವರ ಸೆರೆ

ಮಂಜೇಶ್ವರ: ಮಾದಕ ವಸ್ತುವಾದ ಎಂಡಿಎಂಎ ಸೇದುತ್ತಿದ್ದ ಓರ್ವೆ ಯುವತಿ ಹಾಗೂ ಇಬ್ಬರು ಯುವಕರನ್ನು ಮಂಜೇಶ್ವರ ಪೊಲೀಸರು ಸೆರೆ ಹಿಡಿದಿದ್ದಾರೆ. ಮಂಗಳೂರು ಸುರತ್ಕಲ್‌ನ ನಿಕೇತ್ ಸುರೇಶ್ (39), ಕುದ್ರೋಳಿಯ ಹುಸೈನ್ (34), ಕದ್ರಿಯ ಫಾತಿಮತ್ ಫೈರೋಸ್ ಪರ್ವಿನ್ (33) ಎಂಬಿವರು ಬಂಧಿತರಾದವರಾಗಿದ್ದಾರೆ. ಇವರು ನಿನ್ನೆ ಬೆಳಿಗ್ಗೆ ತೂಮಿನಾಡು ಹಿಲ್‌ಟಾಪ್ ನಗರದ ಖಾಸಗಿ ವ್ಯಕ್ತಿಯ ಹಿತ್ತಿಲಿನಲ್ಲಿ ಎಂಡಿಎಂಎ ಸೇದುತ್ತಿದ್ದರೆನ್ನಲಾಗಿದೆ. ಈ ಭಾಗದಲ್ಲಿ ನಿನ್ನೆ ಎಸ್‌ಐ ಅಜಯ್ ಎಸ್. ಮೆನೋನ್‌ರ ನೇತೃತ್ವದಲ್ಲಿ ಪೊಲೀಸರು ಗಸ್ತು ನಡೆಸುತ್ತಿದ್ದ ವೇಳೆ ಈ ಮೂರು ಮಂದಿ …

ಹಿರಿಯ ಬಿಜೆಪಿ ಕಾರ್ಯಕರ್ತ ನಿಧನ

ಕೂಡ್ಲು: ಕೋಣಿಬೈಲು ಬಾಳಿಕೆ ಧರ್ಮಚಾವಡಿ ಟ್ರಸ್ಟಿ, ನಗರದಲ್ಲಿ  ಹಲವು ವರ್ಷಗಳ ಕಾಲ ಟೈಲರ್ ಆಗಿದ್ದ  ಬಿ. ಗೋಪಾಲಕೃಷ್ಣ ಶೆಟ್ಟಿ (77) ನಿಧನ ಹೊಂದಿದರು. ಕೂಡ್ಲು ನಾಂಗುರಿ ನಿವಾಸಿಯಾದ ಇವರು ಪ್ರಸ್ತುತ ರಾಮದಾಸನಗರದಲ್ಲಿ ವಾಸಿಸುತ್ತಿದ್ದರು. ಬಿಜೆಪಿ, ಸಂಘ ಪರಿವಾರದ ಹಿರಿಯ ಕಾರ್ಯಕರ್ತ ರಾಗಿದ್ದ ಇವರು ಧಾರ್ಮಿಕ ರಂಗಗಳಲ್ಲೂ ಸಕ್ರಿಯರಾಗಿದ್ದರು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಜೈಲು ವಾಸ ಅನುಭವಿಸಿದ್ದರು.  ಇವರ ಪತ್ನಿ ಕಲ್ಯಾಣಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಶರತ್, ಭರತ್, ಪ್ರತಾಪ್, ರೇಶ್ಮಾ, ಅಳಿಯ ರಂಜಿತ್, …

ಆಟೋ ರಿಕ್ಷಾ ತಡೆದು ನಿಲ್ಲಿಸಿ ಚಾಲಕನ ತಲೆಗೆ ಕಲ್ಲಿನಿಂದ ಹಲ್ಲೆ

ಕಾಸರಗೋಡು: ಆಟೋ ರಿಕ್ಷಾ ತಡೆದು ನಿಲ್ಲಿಸಿ ಚಾಲಕನ ತಲೆಗೆ ಕಲ್ಲಿ ನಿಂದ ಹೊಡೆದು ಕೊಲೆಗೈಯ್ಯಲೆತ್ನಿಸಿದ ಘಟನೆ ನಡೆದಿದೆ. ಆಟೋ ಚಾಲಕ ಪರಪ್ಪ ಕೂರಾಂಕುಂಡ್ ನಿವಾಸಿ  ಮಧು (48) ಎಂಬವರ ಮೇಲೆ  ಹಲ್ಲೆ ನಡೆಸಿದ್ದು ಈ ಸಂಬಂಧ ಚೆಂಬಂಚೇರಿ ನಿವಾಸಿ  ಸುನಿಲ್  (39) ಎಂಬಾ ತನನ್ನು ವೆಳ್ಳರಿಕುಂಡ್ ಪೊಲೀಸರು ಬಂಧಿಸಿದ್ದಾರೆ. ನಿನ್ನೆ ರಾತ್ರಿ 11 ಗಂಟೆಗೆ ಬಳಾಲ್ ಚೆಂಬಂ ಚೇರಿ ಎಂಬಲ್ಲಿ ರಸ್ತೆಗೆ ಕಲ್ಲುಗಳನ್ನಿರಿಸಿ ಆಟೋ ರಿಕ್ಷಾ ತಡೆದಿ ರುವುದಾಗಿಯೂ, ಬಳಿಕ ಕಲ್ಲಿನಿಂದ ಮಧುವಿನ ತಲೆಗೆ ಹಲ್ಲೆಗೈದಿರುವುದಾಗಿ ದೂರಲಾಗಿದೆ. …

ವಿವಾಹ ನಡೆಸದ ದ್ವೇಷದಿಂದ ತಾಯಿ, ತಂದೆಯನ್ನು ಇರಿದು ಕೊಲೆಗೈದ ಪುತ್ರ

ಆಲಪ್ಪುಳ: ಆಲಪ್ಪುಳದಲ್ಲಿ ಪುತ್ರ ತಂದೆ ಹಾಗೂ ತಾಯಿಯನ್ನು ಕೊಲೆಗೈದಿರುವುದು ವಿವಾಹ ನಡೆಸದ ದ್ವೇಷದಿಂದವೆಂದು ಹೇಳಿಕೆ ನೀಡಿದ್ದಾನೆ. ಆಲಪ್ಪುಳ ಒಪಿ ಪಾಲಂ ಕೊಮ್ಮಾಡಿ ಸಮೀಪ ವಾಸಿಸುವ ಮನ್ನತ್ ವಾರ್ಡ್ ಪನವೇಲಿಪುರ ಇಡತ್ತಿಲ್ ತಂಗರಾಜು ಹಾಗೂ ಆಗ್ನೇಸ್‌ರನ್ನು ಗುರುವಾರ ರಾತ್ರಿ 9 ಗಂಟೆ ವೇಳೆಗೆ ಪುತ್ರ ಬಾಬು ಇರಿದು ಕೊಲೆಗೈದಿದ್ದನು. ತರಕಾರಿ ಅಂಗಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಮಯದಲ್ಲಿ ಬಾಬುವಿಗೆ ಓರ್ವೆ ಯುವತಿಯೊಂದಿಗೆ ಸಂಪರ್ಕವಿತ್ತೆನ್ನಲಾಗಿದೆ. ಇವರಿಬ್ಬರ ವಿವಾಹ ಮಾಡಿಕೊಡಬೇಕೆಂದು ಆಗ್ರಹಿಸಿದ್ದರೂ ತಾಯಿ ಇದನ್ನು ವಿರೋಧಿಸಿದರು. ಇದರಿಂದಾಗಿ ಅವರಲ್ಲಿ ತೀವ್ರ ದ್ವೇಷ ಉಂಟಾಯಿತೆಂದು …

ನಿವೃತ್ತ ಅಡಿಶನಲ್ ಕಾರ್ಯದರ್ಶಿ ನಿಧನ

ಮಂಜೇಶ್ವರ: ಕೇರಳ ಸರಕಾ ರದ ತಿರುವನಂತಪುರ ಸೆಕ್ರೆಟರಿಯೇ ಟ್‌ನಲ್ಲಿ ಅಡಿಶನಲ್ ಸೆಕ್ರೆಟರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕುಂಜತ್ತೂರು ಬಳಿಯ ತೂಮಿನಾಡು ನಿವಾಸಿ ನಾರಾಯಣ ಪೂಜಾರಿ (78) ನಿಧನ ಹೊಂದಿದರು. ಇವರು ಕಳೆದ ಆರು ತಿಂಗಳಿAದ ಅಸೌಖ್ಯದಿಂದ ಚಿಕಿತ್ಸೆಯಲ್ಲಿದ್ದರು. ಕಳೆದ ಒಂದು ವಾರದ ಹಿಂದೆ ರೋಗ ಉಲ್ಬಣಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಗುರುವಾರ ಮಧ್ಯಾಹ್ನ ನಿಧನ ಹೊಂದಿದರು. ಮೃತರು ಪತ್ನಿ ಪ್ರೇಮ, ಮಕ್ಕಳಾದ ನವೀನ್ ಕುಮಾರ್.ವಿ.ಸಿ (ಮಂ ಜೇಶ್ವರ ವಿದ್ಯುತ್ ಕಚೇರಿಯಲ್ಲಿ ಅಸಿ ಸ್ಟೆಂಟ್ ಇಂಜಿನಿಯರ್), …