ಮುಸ್ಲಿಂ ಲೀಗ್ ಕಾರ್ಯಕರ್ತರ ಆಕ್ರಮಣದಿಂದ ಗಾಯಗೊಂಡಿದ್ದ ಸಿಪಿಎಂ ಕಾರ್ಯಕರ್ತ ನಿಧನ

ಕಣ್ಣೂರು: ಮುಸ್ಲಿಂ ಲೀಗ್ ಕಾರ್ಯಕರ್ತರ ಆಕ್ರಮಣದಲ್ಲಿ ಗಂಭೀರ ಗಾಯಗೊಂಡು 13 ವರ್ಷದಿಂದ ಶಯ್ಯಾವಲಂಭಿಯಾಗಿದ್ದ ಸಿಪಿಎಂ ಕಾರ್ಯಕರ್ತ ನಿಧನ ಹೊಂದಿದರು. ತಳಿಪರಂಬ್ ಅರಿಯಿಲ್ ವಳ್ಳೇರಿ ಮೋಹನನ್ (60) ಮೃತಪಟ್ಟವರು. 2012 ಫೆಬ್ರವರಿ 12ರಂದು ಮೋಹನ್‌ರಿಗೆ ಆಕ್ರಮಣ ನಡೆಸಲಾಗಿತ್ತು. ಅಂದು ಬೆಳಿಗ್ಗೆ ಮೋಹನನ್‌ರನ್ನು ಮನೆಯಿಂದ ಎಳೆದುಕೊಂಡು ಹೋಗಿ ಕಡಿದು ಗಾಯಗೊಳಿಸಲಾಗಿತ್ತು. ಮೃತಪಟ್ಟರೆಂದು ತಿಳಿದು ಪೊದೆಗಳೆಡೆಯಲ್ಲಿ ಉಪೇಕ್ಷಿಸಿ ಅಕ್ರಮಿ ತಂಡ ಪರಾರಿಯಾಗಿತ್ತು. ಆಕ್ರಮಣವನ್ನು ತಡೆಯಲೆತ್ನಿಸಿದ   ವಿದ್ಯಾರ್ಥಿಯಾದ ಪುತ್ರ ಮಿಥುನ್‌ಗೂ ಗಾಯವುಂಟಾಗಿತ್ತು. ಆ ಬಳಿಕ 13 ವರ್ಷದಿಂದ ಚಿಕಿತ್ಸೆಯಲ್ಲಿದ್ದ ಮೋಹನನ್ ನಿನ್ನೆ ಬೆಳಿಗ್ಗೆ …

ಕುಂಬಳೆ ಭಾಸ್ಕರನಗರದಲ್ಲಿ ನವೋದಯ ಗ್ರಂಥಾಲಯ, ವಾಚನಾಲಯ ಉದ್ಘಾಟನೆ

ಕುಂಬಳೆ: ಭಾಸ್ಕರನಗರದಲ್ಲಿ ನವೋದಯ ಫ್ರೆಂಡ್ಸ್ ಕ್ಲಬ್ ಆರಂಭಿಸಿದ ನವೋದಯ ಗ್ರಂಥಾಲಯ ಹಾಗೂ ವಾಚನಾಲಯದ ಉದ್ಘಾಟನೆಯನ್ನು ನಿನ್ನೆ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಉದ್ಘಾಟಿಸಲಾಯಿತು. ಪಂಚಾಯತ್ ಅಧ್ಯಕ್ಷೆ ಯು.ಪಿ. ತಾಹಿರ ಉದ್ಘಾಟನೆ ನಿರ್ವಹಿಸಿ ಶುಭಾಶಂಸನೆಗೈದರು. ನಿವೃತ್ತ ಎಎಸ್‌ಪಿ ಟಿ.ಪಿ. ರಂಜಿತ್ ಧ್ವಜಾರೋಹಣ ನಡೆಸಿದರು. ನಿವೃತ್ತ ಅಡಿಶನಲ್ ಎಸ್.ಐ. ಬಾಬು, ನಿವೃತ್ತ ಎಎಸ್‌ಐ ಗೋಪಾಲಕೃಷ್ಣ, ಬ್ಲಾಕ್ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಳೆ, ಪಂ. ಸದಸ್ಯೆ ಶೋಭಾ, ವಿವಿಧ ರಾಜಕೀಯ ಪಕ್ಷಗಳ ಪ್ರತಿನಿ ಧಿಗಳು ಹಾಗೂ ನಾಗರಿಕರು ಭಾಗವಹಿಸಿದರು.

ಕೊಲೆ ಪ್ರಕರಣ: ನಟ ದರ್ಶನ್ ಜಾಮೀನು ರದ್ದು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಾದ ಚಿತ್ರನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಗೆ ನೀಡಲಾದ ಜಾಮೀನನ್ನು ಸುಪ್ರೀಂಕೋರ್ಟ್ ಇಂದು ಬೆಳಿಗ್ಗೆ ರದ್ದುಪಡಿಸಿದೆ. ಈ ಏಳು ಮಂದಿ ಆರೋಪಿಗಳಿಗೆ ಈ ಹಿಂದೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಅದರ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಪರಿಶೀಲಿಸಿದ ಸುಪ್ರೀಂಕೋರ್ಟ್ ಆರೋಪಿಗಳಿಗೆ  ಮಂಜೂರು ಮಾಡಲಾದ ಜಾಮೀನನ್ನು ರದ್ದುಪಡಿಸಲು ತೀರ್ಪು ನೀಡಿದೆ.

ಮೂತ್ರ ವಿಸರ್ಜನೆ ವೇಳೆ ರಸ್ತೆ ಬದಿಯ ಮರದ ರೆಂಬೆ ತಲೆಗೆ ಬಿದ್ದು ಲಾರಿ ಚಾಲಕ ದಾರುಣ ಮೃತ್ಯು

ಬದಿಯಡ್ಕ: ರಸ್ತೆ ಬದಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಲಾರಿ ಚಾಲಕನ ತಲೆ ಮೇಲೆ ಮರದ ರೆಂಬೆ ಮುರಿದು ಬಿದ್ದು ಅವರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ದ.ಕ ಜಿಲ್ಲೆಯ ಬಂಟ್ವಾಳ ಪೆರಾಜೆ ಕೂಡೋಲು ಎಂಬಲ್ಲಿನ ಕೆ. ಜಗದೀಶ ಗೌಡ (5೦) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.  ನಿನ್ನೆ ಬೆಳಿಗ್ಗೆ 6.15ರ ವೇಳೆ ಪೆರ್ಲ-ಸೀತಾಂಗೋಳಿ ರಸ್ತೆಯ ಬೆದ್ರಂಪಳ್ಳದಲ್ಲಿ ಘಟನೆ ಸಂಭವಿಸಿದೆ. ಜಗದೀಶ್ ಗೌಡ ಮೂಡುಬಿದ್ರೆಯಿಂದ ಕಾಸರಗೋಡು ಭಾಗಕ್ಕೆ ಲಾರಿಯಲ್ಲಿ ಕೋಳಿ ಆಹಾರ ಸಾಗಿಸುತ್ತಿದ್ದರು. ಜತೆಗೆ ಕ್ಲೀನರ್ ಕೂಡಾ …

ಕೆಂಪುಕಲ್ಲು ಸಾಗಾಟ ಲಾರಿ-ಬೈಕ್ ಢಿಕ್ಕಿ: ವ್ಯಾಪಾರಿ ಸಹಿತ ಇಬ್ಬರಿಗೆ ಗಂಭೀರ ಗಾಯ

ಸೀತಾಂಗೋಳಿ: ಕೆಂಪುಕಲ್ಲು ಸಾಗಾಟದ ಲಾರಿ ಹಾಗೂ ಬೈಕ್ ಢಿಕ್ಕಿ ಹೊಡೆದು ವ್ಯಾಪಾರಿ ಸಹಿತ ಇಬ್ಬರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಮಾನ್ಯ ನಿವಾಸಿಯೂ ನೀರ್ಚಾಲು ಮೇಲಿನ ಪೇಟೆಯಲ್ಲಿ  ಫ್ಯಾನ್ಸಿ ಅಂಗಡಿ ನಡೆಸುವ ಪಚ್ಚು ಯಾನೆ ಪ್ರಕಾಶ್ (36), ಚೆಡೇಕಲ್ ನಿವಾಸಿಯೂ ನೀರ್ಚಾಲಿನಲ್ಲಿ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ರತೀಶ್ (32) ಎಂಬವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ 5 ಗಂಟೆ ವೇಳೆ ಸೀತಾಂಗೋಳಿ ಪೆಟ್ರೋಲ್ ಬಂಕ್ ಸಮೀಪದ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಪ್ರಕಾಶ್ ಹಾಗೂ …

ಡಿವೈಎಫ್‌ಐ ನೇತಾರ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಡಿವೈಎಫ್‌ಐ ನೇತಾರ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬೇಡಗಂ ಪೋಳ ಎಂಬಲ್ಲಿನ ವಿನೀಶ್ (34) ಮೃತಪಟ್ಟ ವ್ಯಕ್ತಿ. ಇವರು ಬೀಂಬುಂಗಾಲ್ ವಲಯ ಅಧ್ಯಕ್ಷರೂ, ಕುಂಡಂಗುಳಿ ಫಾರ್ಮರ್ಸ್ ಬ್ಯಾಂಕ್ ನೌಕರನೂ ಆಗಿದ್ದರು. ಇಂದು ಬೆಳಿಗ್ಗೆ ಇವರು ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಬೇಡಡ್ಕದ ತಾಲೂಕು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಬೇಡಗಂ ಪೊಲೀಸರು ಮೃತದೇಹದ ಮಹಜರು ನಡೆಸಿದರು. ಮೃತರು ತಾಯಿ ನಿರ್ಮಲ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

8.64 ಲೀಟರ್ ಮದ್ಯ ಸಹಿತ ಓರ್ವ ಸೆರೆ

ಕಾಸರಗೋಡು: ಓಣಂ ಸ್ಪೆಷಲ್ ಡ್ರೈವ್‌ನಂತೆ ಕಾಸರಗೋಡು ಎಕ್ಸೈಸ್ ರೇಂಜ್ ಎಕ್ಸೈಸ್ ಇನ್‌ಸ್ಪೆಕ್ಟರ್ ಸೂರಜ್ ಎನ್ ನೇತೃತ್ವದ ಅಬಕಾರಿ ತಂಡ ಕೂಡ್ಲು ಮೀಪುಗುರಿಯಲ್ಲಿ ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ 8.64 ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿಕೊಂಡಿದೆ. ಮೀಪುಗುರಿಯ ಹರೀಶ್ ಬಿ (50) ಎಂಬಾತನನ್ನು ಇದಕ್ಕೆ ಸಂಬಂಧಿಸಿ  ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಪ್ರಿವೆಂಟೀವ್ ಆಫೀಸರ್ ರಂಜಿತ್ ಕೆ.ವಿ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪ್ರಶಾಂತ್ ಕುಮಾರ್, ಅಮಲ್‌ಜಿತ್ ಎಂ.ಸಿ, ಸಂಶುದ್ದೀನ್ ವಿ.ಟಿ ಮತ್ತು ಅಶ್ವತಿ ವಿ ಎಂಬವರು ಈ ಕಾರ್ಯಾಚರಣೆ …

ನಗರದ ಬಾರ್ ಬಳಿ ಯುವಕರ ಮಧ್ಯೆ ಘರ್ಷಣೆ: ಎರಡು ಕೇಸು ದಾಖಲು

ಕಾಸರಗೋಡು: ನಗರದ ನುಳ್ಳಿಪ್ಪಾಡಿಯ ಮದ್ಯ ಬಾರ್‌ಬಳಿ ಯುವಕರ ಮಧ್ಯೆ ಘರ್ಷಣೆ ನಡೆದು ಅದರಲ್ಲಿ ಓರ್ವ ಇರಿತಕ್ಕೊಳಗಾಗಿದ್ದು ಇನ್ನೋರ್ವ  ಗಾಯಗೊಂಡ ಘಟನೆ ಮೊನ್ನೆ ರಾತ್ರಿ ನಡೆದಿದೆ. ಈ ಘರ್ಷಣೆಯಲ್ಲಿ ತಿರುವನಂತಪುರ ಬಾಲರಾಮಪುರ ನಿವಾಸಿ ತೌಫೀಕ್ ಮತ್ತು ಕಾಸರಗೋಡು ನೆಲ್ಕಳ ಹೌಸ್‌ನ ರಿಜೇಶ್ ಕೆ.ಆರ್ ಎಂಬವರು ಗಾಯಗೊಂಡಿದ್ದಾರೆ. ಈ ಪೈಕಿ ತೌಫೀಕ್‌ನನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆತ ನೀಡಿದ ದೂರಿನಂತೆ  ಕಾಸರಗೋಡು ಪೊಲೀಸರು ಕೊಲೆಯತ್ನ ಕೇಸು ದಾಖಲಿಸಿಕೊಂಡಿದ್ದಾರೆ. ಇದೇ ವೇಳೆ ರಿಜೇಶ್ ನೀಡಿದ ದೂರಿನಂತೆ ಕಂಡಲ್ಲಿ ಗುರುತುಹಚ್ಚಲು …

ಮದ್ಯ ಸಹಿತ ಓರ್ವ ಸೆರೆ

ಕುಂಬಳೆ: ಕರ್ನಾಟಕ ನಿರ್ಮಿತ ವಿದೇಶ ಮದ್ಯ ಸಹಿತ ಓರ್ವನನ್ನು ಬಂಧಿಸಲಾಗಿದೆ. ಕುಬಣೂರು ನಿವಾಸಿ ರಮೇಶ್ (49) ಎಂಬಾತನನ್ನು ಕುಂಬಳೆ ಎಸ್‌ಐ ಶ್ರೀಜೇಶ್ ಕೆ ಬಂಧಿಸಿದ್ದಾರೆ. ಆರೋಪಿಯ ಕೈಯಿಂದ ಕರ್ನಾಟಕ ನಿರ್ಮಿತ 8 ಬಾಟ್ಲಿ ಹಾಗೂ 34 ಪ್ಯಾಕೆಟ್ ಮದ್ಯ ವಶಪಡಿಸಲಾಗಿದೆ. ಇವುಗಳನ್ನು ಚೀಲದಲ್ಲಿ ತುಂಬಿಸಿ ಆರೋಪಿ ಮಾರಾಟ ಕ್ಕಾಗಿ ಕೊಂಡೊಯ್ಯುತ್ತಿದ್ದ ವೇಳೆ ಕುಬ ಣೂರು ಶಾಂತಿಗುರಿಯಿಂದ ವಶಪಡಿಸಿ ರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಇಬ್ಬರಿಗೆ ರಾಷ್ಟ್ರಪತಿ ಪೊಲೀಸ್ ಮೆಡಲ್

ಕಾಸರಗೋಡು: ರಾಷ್ಟ್ರಪತಿಯವರ ಪೊಲೀಸ್ ಮೆಡಲ್‌ಗೆ ಕಾಸರಗೋಡು ಜಿಲ್ಲೆಯಿಂದ ಇಬ್ಬರು ಆಯ್ಕೆಗೊಂಡಿದ್ದಾರೆ. ಮಾಜಿ ಅಡಿಶನಲ್  ಎಸ್‌ಪಿ ಹಾಗೂ ಕಣ್ಣೂರು ರಾಜ್ಯ ಕ್ರೈಂ ಬ್ರಾಂಚ್ ಎಸ್ಪಿಯಾದ  ಪಿ. ಬಾಲಕೃಷ್ಣನ್ ನಾಯರ್, ಕಲ್ಲಿಕೋಟೆ ರೂರಲ್ ಕ್ರೈಂಬ್ರಾಂಚ್ ಡಿವೈಎಸ್ಪಿ ಯು. ಪ್ರೇಮನ್ ಎಂಬವರು ಮೆಡಲ್‌ಗೆ ಅರ್ಹರಾಗಿದ್ದಾರೆ.  ಬೇಕಲ ಪಾಲಕುನ್ನು ನಿವಾಸಿಯಾದ ಪಿ. ಬಾಲಕೃಷ್ಣನ್ ನಾಯರ್ ಇತ್ತೀಚೆಗೆ ಕಣ್ಣೂರು ಕ್ರೈಂ ಬ್ರಾಂಚ್ ಎಸ್ಪಿಯಾಗಿ ಅಧಿಕಾರ  ವಹಿಸಿಕೊಂಡಿದ್ದರು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಇನ್‌ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಿರುವ ಯು. ಪ್ರೇಮನ್ ಕಾಞಂಗಾಡ್ ಚೆಮ್ಮಟಂವಯಲ್ ನಿವಾಸಿಯಾಗಿದ್ದಾರೆ.