ಕುಂಬಳೆ ಉಪಜಿಲ್ಲಾ ಮಟ್ಟದ ಗಣಿತ ಮೇಳ ಉದ್ಘಾಟನೆ
ಸೂರಂಬೈಲು : ಕುಂಬಳೆ ಉಪಜಿಲ್ಲಾ ಮಟ್ಟದ ಗಣಿತ ಮೇಳ ಸೂರಂಬೈಲು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಸದಸ್ಯ ನಾರಾಯಣ ನಾಯ್ಕ್ ಉದ್ಘಾಟಿಸಿದರು. ಪುತ್ತಿಗೆ ಪಂಚಾಯತ್ ಸದಸ್ಯೆ ಅನಿತಾಶ್ರೀ ಅಧ್ಯಕ್ಷತೆ ವಹಿಸಿದ್ದರು. ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಶಶಿಧರ ಎಂ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುತ್ತಿಗೆ ಪಂಚಾಯತ್ ಸದಸ್ಯರಾದ ಜನಾರ್ದನ ಪೂಜಾರಿ, ಜಯಂತಿ, ಕುಂಬಳೆ ಎಚ್ ಎಂ ಫಾರಂ ಕಾರ್ಯದರ್ಶಿ ಸುರೇಂದ್ರನ್ ಎಂ ವಿ, ಪಿಟಿಎ ಅಧ್ಯಕ್ಷ ಮೊಯಿದು ಸೀತಾಂಗೋಳಿ, ಎಂಪಿಟಿಎ ಅಧ್ಯಕ್ಷೆ ರಾಜಿ ರಾಜೇಶ್, ಪಿಟಿಎ ಉಪಾಧ್ಯಕ್ಷ ರಮೇಶ್ …