ಕಾರಿಗೆ ಅಡ್ಡಗಟ್ಟಿ ಕೋಳಿ ವ್ಯಾಪಾರಿಯ ಚಿನ್ನದ ಸರ ಅಪಹರಿಸಿದ ಪ್ರಕರಣ: ಆರೋಪಿ ಸೆರೆ: 4 ದಿನದ ಹಿಂದೆ ಜೈಲಿನಿಂದ ಬಿಡುಗಡೆಗೊಂಡಿದ್ದ ಆರೋಪಿ
ವರ್ಕಾಡಿ: ಆಮ್ನಿ ವ್ಯಾನ್ ತಡೆದು ನಿಲ್ಲಿಸಿ ಕೋಳಿ ವ್ಯಾಪಾರಿಯ ಕುತ್ತಿಗೆಗೆ ಕತ್ತಿ ಇರಿಸಿ ಬೆದರಿಸಿ ೩ ಲಕ್ಷ ರೂ. ಮೌಲ್ಯದ ಚಿನ್ನದ ಸರ ಅಪಹರಿಸಿದ ಪ್ರಕರಣದಲ್ಲಿ ಪ್ರಧಾನ ಆರೋಪಿ ಸೆರೆಯಾಗಿದ್ದಾನೆ. ಕುಂಬಳೆ, ಬಂದ್ಯೋಡು, ಅಡ್ಕ ವೀರನಗರ, ಕೋಟೆ ಹೌಸ್ ನಿವಾಸಿ ಅಬ್ದುಲ್ ಲತೀಫ್ ಯಾನೆ ತೋಕ್ ಲತೀಫ್ (29)ನನ್ನು ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಇ. ಅನೂಬ್ ಕುಮಾರ್ ಹಾಗೂ ತಂಡ ಸೆರೆ ಹಿಡಿದಿದೆ. ಮೊರತ್ತಣೆಯಲ್ಲಿ ಶನಿವಾರ ಮಧ್ಯಾಹ್ನ 12.30ರ ವೇಳೆ ಕೇಸಿಗೆ ಆಸ್ಪದವಾದ ಘಟನೆ ನಡೆದಿದೆ. ಅರಿಬೈಲ್ …