ಒಂದು ಲಕ್ಷಕ್ಕೇರುವ ಹಾದಿಯಲ್ಲಿ ಚಿನ್ನ: ಇಂದು ಗ್ರಾಂಗೆ 305 ರೂ. ದಾಖಲೆ ಏರಿಕೆ

ಕೊಚ್ಚಿ: ದಾಖಲೆಗಳನ್ನು ಸೃಷ್ಟಿಸಿ ಮುಂದುವರಿಯುತ್ತಿರು ಚಿನ್ನದ ದರ ಇಂದು ಏರಿಕೆಯಲ್ಲಿ ದಾಖಲೆ ಸೃಷ್ಟಿಸಿದೆ. ಒಂದೇ ದಿನ 305 ರೂ. ಗ್ರಾಂನಲ್ಲಿ ಏರಿಕೆಯಾಗಿದೆ. ಇದರಿಂದಾಗಿ ಪವನ್ಗೆ 97360 ರೂ. ಆಗಿ ಹೆಚ್ಚಳವಾಗಿದ್ದು, ಒಂದು ಲಕ್ಷಕ್ಕೆ ಇನ್ನು ಕಿರು ಬೆರಳಿನ ದೂರವಷ್ಟೇ ಉಳಿದಿದೆ. ಇಂದು ಪವನ್ಗೆ 2,440 ರೂ. ಹೆಚ್ಚಳವಾಗಿದೆ ಒಂದು ಗ್ರಾಂಗೆ 12,170 ರೂನಂತೆ ವಹಿವಾಟು ನಡೆಯುತ್ತಿದೆ. ಇದರೊಂದಿಗೆ ಎರಡು ವಾರದಲ್ಲಿ ಒಂದು ಪವನ್ ಚಿನ್ನದ ಬೆಲೆಯಲ್ಲಿ 10,800 ರೂ. ಹೆಚ್ಚಾಗಿದೆ.ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಾಖಲೆ ಸೃಷ್ಟಿಸಿ …

ಮೊಗ್ರಾಲ್‌ನಲ್ಲಿ ಶಾಲಾ ಕಲೋತ್ಸವ ಮಧ್ಯೆ ತಂಡಗಳೊಳಗೆ ಹೊಡೆದಾಟ

ಕುಂಬಳೆ: ಮೊಗ್ರಾಲ್ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆ ಸಮೀಪ ಪರಸ್ಪರ ಹೊಡೆದಾಡಿಕೊಂಡ ತಂಡಗಳನ್ನು ಪೊಲೀಸರು ಲಾಠಿ ಬೀಸಿ ಚದುರಿಸಿದರು. ಘಟನೆಗೆ ಸಂಬಂಧಿಸಿ ಕುಂಬಳೆ ಪೊಲೀಸರು ೫೦ ಮಂದಿ ವಿರುದ್ಧ ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 7.30ರ ವೇಳೆ ಘಟನೆ ನಡೆದಿದೆ. ಕಲೋತ್ಸವ ಮಧ್ಯೆ ವಿದ್ಯಾರ್ಥಿಗಳೊಳಗೆ ಉಂಟಾದ ತರ್ಕವೇ ಘರ್ಷಣೆಯಲ್ಲಿ ಕೊನೆಗೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶಾಲಾ ಪರಿಸರದಿಂದ ಆರಂಭಗೊಂಡ ಘರ್ಷಣೆ ರಾಷ್ಟ್ರೀಯ ಹೆದ್ದಾರಿವರೆಗೆ ತಲುಪಿದೆ. ಈ  ವಿಷಯ ತಿಳಿದು ತಲುಪಿದ ಕುಂಬಳೆ ಎಸ್‌ಐ ಕೆ. ಶ್ರೀಜೇಶ್ …

ಶಬರಿಮಲೆ ಚಿನ್ನ ಕಳವು:ಮುಖ್ಯ ಆರೋಪಿ ಉಣ್ಣಿಕೃಷ್ಣನ್ ಪೋತ್ತಿ ಬಂಧನ: ಇಂದು ನ್ಯಾಯಾಲಯಕ್ಕೆ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕದ್ದ ಪ್ರಕರಣದ ಪ್ರಧಾನ ಸೂತ್ರಧಾರ ಹಾಗೂ ಒಂದನೇ ಆರೋ ಪಿಯಾಗಿರುವ ಪ್ರಾಯೋಜಕ ಉಣ್ಣಿಕೃಷ್ಣನ್ ಪೋತ್ತಿಯನ್ನು ವಿಶೇಷ ತನಿಖಾ ತಂಡ ಬಂಧಿಸಿದೆ. ಶಬರಿಮಲೆ ದೇಗುಲದ  ಗರ್ಭಗುಡಿ  ದ್ವಾರ ಮತ್ತು ದ್ವಾರಪಾಲಕ ಮೂರ್ತಿಗಳ ಚಿನ್ನ ಕದ್ದ ಆರೋಪದಂತೆ ಈತನನ್ನು  ಬಂಧಿಸಲಾಗಿದೆ. ನಂತರ ಈತನನ್ನು ವೈದ್ಯಕೀಯ ತಪಾಸಣೆಗಾಗಿ ಇಂದು ಬೆಳಿಗ್ಗೆ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬಳಿಕ ಮಧ್ಯಾಹ್ನ ಆತನನ್ನು ಪತ್ತನಂತಿಟ್ಟದ ನ್ಯಾಯಾಲಯದಲ್ಲಿ ಹಾಜರುಪಡಿಸಲಾಗುವುದೆಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಆರೋಪಿ ಪೋತ್ತಿ ವಿರುದ್ದ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ. ವಿಶೇಷ ತನಿಖಾ …

ಜಪಾನ್‌ನ ಭಾರತೀಯ ರಾಯಭಾರಿಯಾಗಿ ಕಾಸರಗೋಡಿನ ನಗ್ಮಾ ಮೊಹಮ್ಮದ್ ಮಾಲಿಕ್

ಕಾಸರಗೋಡು: ಜಪಾನಿನ ಭಾರತೀಯ ರಾಯಭಾರಿಯಾಗಿ ಕಾಸರಗೋಡು ನಿವಾಸಿ ನಗ್ಮಾ ಮೊಹಮ್ಮದ್ ಮಾಲೀಕ್‌ರನ್ನು ಕೇಂದ್ರ ಸರಕಾರ ನೇಮಿಸಿದೆ. ಇವರು ಕಾಸರಗೋಡು ಕೋಟೆ ರಸ್ತೆಯ ಮೊಹಮ್ಮದ್ ಹಬೀಬುಲ್ಲಾ-ಸುಲುಭಾನು ದಂಪತಿ ಪುತ್ರಿಯಾಗಿದ್ದಾರೆ. ತಂದೆ ಮೊಹಮ್ಮದ್ ಹಬೀಬುಲ್ಲಾರಿಗೆ ಕೇಂದ್ರ ಸರಕಾರದ ಓವರ್‌ಸೀಸ್ ಕಮ್ಯೂನಿಕೇಶನ್ ಇಲಾಖೆಯಲ್ಲಿ ಉದ್ಯೋಗ ಲಭಿಸಿದ ಹಿನ್ನೆಲೆಯಲ್ಲಿ ಅವರು ವರ್ಷಗಳ ಹಿಂದೆ ತಮ್ಮ ಕುಟಂಬದ ಸಹಿತ ದಿಲ್ಲಿಯಲ್ಲಿ ವಾಸವಾಗಿದ್ದರು. ದಿಲ್ಲಿಯಲ್ಲೇ ಜನಿಸಿದ ನಗ್ಮಾ ಮೊಹಮ್ಮದ್ ಮಾಲೀಕ್ ದಿಲ್ಲಿಯ ಸೈಂಟ್ ಸ್ಟೀಫನ್ ಕಾಲೇಜು ಮತ್ತು ಡೆಲ್ಲಿ ಸ್ಕೂಲ್ ಆಫ್ ಇಕಾನೋಮಿಕ್ಸ್‌ನಲ್ಲಿ ಶಿಕ್ಷಣ ಪಡೆದರು. …

ಜಿಲ್ಲೆಯಾದ್ಯಂತ ಪಟಾಕಿ ಅಂಗಡಿಗಳಿಗೆ ಪೊಲೀಸ್ ದಾಳಿ: ಹೆಚ್ಚುವರಿಯಾಗಿ ದಾಸ್ತಾನಿರಿಸಿದ್ದ ಪಟಾಕಿ ಅನಂತಪುರದಿಂದ ವಶ

ಕಾಸರಗೋಡು: ದೀಪಾವಳಿ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಪೊಲೀಸರು ಎಲ್ಲಾ ಪಟಾಕಿ ಅಂಗಡಿಗಳಿಗೆ ದಾಳಿ ಆರಂಭಿಸಿದ್ದಾರೆ. ನಿಗದಿತ ಪ್ರಮಾಣಕ್ಕಿಂತ ಹೆಚ್ಚು ವರಿಯಾಗಿ  ದಾಸ್ತಾನಿರಿಸಲಾಗಿರುವ ಸುಡುಮದ್ದುಗಳ ಪತ್ತೆಗಾಗಿ ಪೊಲೀಸರು ಇಂತಹ ದಾಳಿ ಆರಂಭಿಸಿದ್ದಾರೆ. ಇದರಂತೆ  ಅನಂತಪುರ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿರುವ ಪಟಾಕಿ ಅಂಗಡಿಯೊಂದಕ್ಕೆ ಕುಂಬಳೆ ಪೊಲೀಸರು ದಾಳಿ ನಡೆಸಿ ಅಲ್ಲಿ ಲೈಸನ್ಸ್ ಪ್ರಕಾರ ನಿಗದಿತ ಪ್ರಮಾಣಕ್ಕಿಂತ ಹೆಚ್ಚುವರಿಯಾಗಿ ದಾಸ್ತಾನಿರಿಸಲಾಗಿದ್ದ 4058.4 ಕಿಲೋ ಗ್ರಾಂ ಪಟಾಕಿಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಆ ಸಂಸ್ಥೆಯ ಮಾಲಕನ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಇದೇ …

3 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ಆರೋಪಿ ಸೆರೆ

ಕಾಸರಗೋಡು: ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದು, ಬಳಿಕ ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚೆರ್ಕಳ ಬೇರ್ಕ ಹೌಸ್‌ನ ಕುಂಞಿ ಮಾಹಿನ್ ಅಶ್ರಫ್ ಕೆ.ಕೆ. (30) ಬಂಧಿತ ಆರೋಪಿ. ಈತನ ವಿರುದ್ಧ ೨೦೨೨ರಲ್ಲಿ ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಿಸಲಾಗಿತ್ತು. ಆ ಬಳಿಕ ಆತ ತಲೆಮರೆಸಿಕೊಂಡಿದ್ದನು. ಆತನ ಬಂಧನಕ್ಕಾಗಿ ಎಲ್.ಪಿ. ವಾರೆಂಟ್ ಹೊರಡಿಸಲಾಗಿತ್ತು. ಅದಾದ ಮೂರು ವರ್ಷಗಳ ಬಳಿಕ ಚೆರ್ಕಳದಿಂದ ಆತನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಬಿ.ವಿ. ವಿಜಯ್ …

ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ: ಇನ್ನೋರ್ವ ಮೃತ್ಯು

ಕಣ್ಣೂರು: ಪುದಿಯಂಗಾಡಿಯಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಬೆಂಕಿ ಹತ್ತಿ  ಸುಟ್ಟು ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಇನ್ನೋರ್ವ ಮೃತಪಟ್ಟಿದ್ದಾರೆ. ಒಡಿಶ್ಶಾ ನಿವಾಸಿ ಜಿತೇಂದ್ರ ಬಹ್ರ (31) ನಿನ್ನೆ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಇದರಿಂದ ಈ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ ನಾಲ್ಕಕ್ಕೇರಿದೆ.  ಒಡಿಶ್ಶಾ ನಿವಾಸಿಗಳಾದ ಶಿಬಾ ಬೆಹ್ರ (೩೪), ಸುಭಾಷ್ ಬೆಹ್ರ (53), ನಿಗಮ್ ಬೆಹ್ರ (38) ಎಂಬಿವರು ಇತ್ತೀಚೆಗೆ ಮೃತಪಟ್ಟಿದ್ದರು. ಪುದಿಯಂಗಾಡಿ ಫಿಶ್‌ಪ್ಲಾಂಟ್ ಸಮೀಪ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ಇತ್ತೀಚೆಗೆ ಬೆಳಿಗ್ಗೆ ೬ ಗಂಟೆಗೆ ದುರಂತ ಸಂಭವಿಸಿತ್ತು. ರಾತ್ರಿ …

116 ಕಿಲೋ ಗಾಂಜಾ ವಶ ಪ್ರಕರಣ: ಓರ್ವ ಆರೋಪಿ ಮೈಸೂರಿನಿಂದ ಸೆರೆ

ಮಂಜೇಶ್ವರ: ವರ್ಕಾಡಿ ಕೊಡ್ಲಮೊಗರು ಬಳಿಯ ಸುಳ್ಯಮೆಯಿಂದ 116 ಕಿಲೋ ಗಾಂಜಾ ವಶಪಡಿಸಿಕೊಂಡ ಪ್ರಕರಣದಲ್ಲಿ ಓರ್ವನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕದ ಮೈಸೂರು ತಾಲೂಕು ಕೇರಿಗಾಳಿ ಜಯಪುರ ಹೋಬಳಿ ನಿವಾಸಿ ಸಿದ್ಧೆ ಗೌಡ  ಎಂ. (25) ಎಂಬಾತ ಬಂಧಿತ ವ್ಯಕ್ತಿಯಾಗಿ ದ್ದಾನೆ. ಈತನನ್ನು ಪೊಲೀಸರು ನ್ಯಾಯಾಲಯದಲ್ಲಿ ಹಾಜರುಪಡಿಸಿದ್ದು, ಈ ವೇಳೆ ಆರೋಪಿಗೆ ರಿಮಾಂಡ್ ವಿಧಿಸಲಾಗಿದೆ.  ಸುಳ್ಯಮೆಯ ಮನೆಯೊಂದರ ಬಳಿ ಶೆಡ್‌ನಲ್ಲಿ ಬಚ್ಚಿಟ್ಟಿದ್ದ ಗಾಂಜಾವನ್ನು ಅಕ್ಟೋಬರ್ ೮ರಂದು ರಾತ್ರಿ ಪೊಲೀಸರು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದರು. ಈ ವೇಳೆ ಶೆಡ್‌ನ ಸಮೀಪ ಮಿನಿ …

ನರ್ಸಿಂಗ್ ವಿದ್ಯಾರ್ಥಿನಿಯ ಸಾವು: ಪತ್ರ ಪತ್ತೆ

ಕಾಸರಗೋಡು: ಮನೆಯ ಬೆಡ್‌ರೂಮ್‌ನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿ ಯಲ್ಲಿ ಪತ್ತೆಯಾದ ನರ್ಸಿಂಗ್ ವಿದ್ಯಾರ್ಥಿನಿ ಬರೆದಿಟ್ಟ ಪತ್ರವೊಂ ದನ್ನು ಬೇಡಗಂ ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ‘ನನ್ನ ಸಾವಿಗೆ ಬೇರೆ ಯಾರೂ ಹೊಣೆಗಾರರಲ್ಲ’ ಎಂದು ಪತ್ರದಲ್ಲಿ ಬರೆದಿಟ್ಟಿರು ವುದಾಗಿ ಹೇಳಲಾಗುತ್ತಿದೆ. ಕುಟ್ಟಿಕ್ಕೋಲ್ ಬೇತೂರುಪಾರದ ದಿ| ಬಾಬು ಎಂಬವರ ಪುತ್ರಿ ಮಹಿಮಾ (20) ಬುಧವಾರ ಬೆಳಿಗ್ಗೆ ಬೆಡ್‌ರೂಮ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಕೆಯನ್ನು   ಕಾರಿನಲ್ಲಿ ಚೆರ್ಕಳದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಮಧ್ಯೆ ಪಡಿಮರುದು ಎಂಬಲ್ಲಿಗೆ ತಲುಪಿದಾಗ ಕಾರು …

ಮಂಜೇಶ್ವರದಲ್ಲಿ ಪತ್ತೆಯಾದ ಕಾಳಧನ ನ್ಯಾಯಾಲಯಕ್ಕೆ ಹಾಜರು

ಮಂಜೇಶ್ವರ: ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಮಂಜೇಶ್ವರ ಪೊಲೀಸರು ವಶಪಡಿಸಿಕೊಂಡ ಕಾಳಧನವನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ. ನಿನ್ನೆ ಬೆಳಿಗ್ಗೆ ಹೈವೇ ಪಟ್ರೋಲಿಂಗ್ ನಡೆಸುತ್ತಿದ್ದ ಪೊಲೀಸರು ಮಂಗಳೂರು ಭಾಗದಿಂದ ಬಂದ ಕಾರನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರಲ್ಲಿ 72,24,500 ರೂಪಾಯಿಗಳನ್ನು  ಪತ್ತೆಯಾಗಿತ್ತು. ಕಾರಿನಲ್ಲಿ ಕಾಞಂಗಾಡ್ ನಿವಾಸಿಗಳಾದ  ತುಕಾರಾಮ್, ಪತ್ನಿ ಸುನಿತ ಹಾಗೂ ಸಹಾಯಕ ಅಕ್ಷಯ್ ಎಂಬಿವರಿದ್ದರು. ಹಣದ ಮೂಲವೇನೆಂದು ಪ್ರಶ್ನಿಸಿದಾಗ ಕಾರಿನಲ್ಲಿದ್ದವರು ಯಾವುದೇ ಮಾಹಿತಿಯನ್ನೂ ನೀಡಲಿಲ್ಲ. ಈ ಹಿನ್ನೆಲೆಯಲ್ಲಿ ಕಾರು  ಹಾಗೂ ಹಣವನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದರು.