ಕುಂಬಳೆ ಪಂಚಾಯತ್ ನಿರ್ಲಕ್ಷ್ಯ ವಿರುದ್ಧ ವ್ಯಾಪಾರಿಗಳಿಂದ 6ರಂದು ಮಾರ್ಚ್

ಕುಂಬಳೆ: ಪಂಚಾಯತ್ ಹಾಗೂ ಪೊಲೀಸರು ಕುಂಬಳೆ ಪೇಟೆಯೊಂದಿಗೆ ತೋರುವ ಅವಗಣನೆಯನ್ನು ಪ್ರತಿಭಟಿಸಿ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ, ಮರ್ಚೆಂಟ್ಸ್ ಯೂತ್‌ವಿಂಗ್ ತೀವ್ರ ಆಂದೋಲನಕ್ಕೆ ನೇತೃತ್ವ ನೀಡಲಿದೆ ಎಂದು ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೋರಾಟದ ಮೊದಲ ಹಂತವಾಗಿ ಈ ತಿಂಗಳ 6ರಂದು ಬೆಳಿಗ್ಗೆ  10 ಗಂಟೆಗೆ ಪಂಚಾಯತ್ ಕಚೇರಿಗೆ ವ್ಯಾಪಾರಿಗಳು ಮಾರ್ಚ್ ನಡೆಸುವರು. ರಾಜ್ಯ ಸಮಿತಿ ಉಪಾಧ್ಯಕ್ಷ ಕೆ. ಅಹಮ್ಮದ್ ಶರೀಫ್ ಉದ್ಘಾಟಿಸುವರು. ರಾಜೇಶ್ ಮನಯತ್ ಅಧ್ಯಕ್ಷತೆ …

ಅನಾಥ ಮೃತದೇಹದ ಅಂತ್ಯ ಸಂಸ್ಕಾರ: ಕೊಂಡೆವೂರು ಶ್ರೀಗಳಿಂದ ಸ್ಪಷ್ಟೀಕರಣ

ಉಪ್ಪಳ: ಹಿಂದೂ ಕಾರ್ಯಕರ್ತನ ಮೃತದೇಹವನ್ನು ಮುಸ್ಲಿಂ ಮಹಿಳೆಯ ನೇತೃತ್ವದಲ್ಲಿ ಸಂಸ್ಕರಿಸಲಾಯಿತೆಂಬ ವರದಿಗಳ ಹಿನ್ನೆಲೆಯಲ್ಲಿ ಕೊಂಡೆವೂರು ಆಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಮಂಗಲ್ಪಾಡಿ ಸೇವಾ ಭಾರತಿ ಸ್ಪಷ್ಟೀಕರಣ ನೀಡಿದೆ. ನಿನ್ನೆ ಕೊಂಡೆವೂರು ಆಶ್ರಮದಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಸ್ವಾಮೀಜಿ ಸ್ಪಷ್ಟೀಕರಣ ನೀಡಿದ್ದಾರೆ. ಮೃತ ನಾರಾಯಣರ ಮೃತದೇಹವನ್ನು ಸಂಸ್ಕರಿಸಲು ಶೇಖ್ ಜಾಯಿದ್ ವೃದ್ಧಾಶ್ರಮದ ಸಂಚಾಲಕ ಇಕ್ಬಾಲ್ ವಿನಂತಿಸಿಕೊಂಡ ಹಿನ್ನೆಲೆಯಲ್ಲಿ ಆಶ್ರಮದ ಕಡೆಯಿಂದ ಮಂಗಲ್ಪಾಡಿ ಸೇವಾ ಭಾರತಿಯ ಅಧ್ಯಕ್ಷ ರಘು ಚೆರುಗೋಳಿಯವರಿಗೆ ಜವಾಬ್ದಾರಿ ನೀಡಲಾಗಿತ್ತು. ಇದರಂತೆ ಜೂನ್ ೨೬ರಂದು ಮಧ್ಯಾಹ್ನ …

ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ

ಕುಂಬಳೆ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಾಸರಗೋಡು ಜಿಲ್ಲಾ ಘಟಕದ ಜಂಟಿ ಆಶ್ರಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಹಾಗೂ ಪತ್ರಿಕಾ ದಿನ ಪ್ರಶಸ್ತಿ ಪ್ರಧಾನ ಸಮಾರಂಭ ಕುಂಬಳೆ ಸಮೀಪದ ನಾಯ್ಕಾಪು ಲಿಟ್ಲ್ ಲಿಲ್ಲಿ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಿನ್ನೆ ನಡೆಯಿತು.ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ ಉದ್ಘಾಟಿಸಿದರು. ಅವರು ಮಾತನಾಡಿ, ವಸ್ತು ನಿಷ್ಠ ವರದಿಗಾರಿಕೆಗೆ ಪತ್ರಿಕೆಗಳು ಹೊಣೆಗಾರಿಕೆಯಾಗಿದೆ. …

ಶಾಲೆಗಳ ರಜೆ ಸುದ್ದಿ ಬಗ್ಗೆ ನಕಲಿ ಪ್ರಚಾರ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ

ಕಾಸರಗೋಡು: ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಸಂದೇಶಗಳನ್ನು ಪ್ರಚಾರಪಡಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ. ಔದ್ಯೋಗಿಕ ಸೂಚನೆಗಳು ಪಿಆರ್‌ಡಿ ಪ್ರಕಟಣೆಗಳಾಗಿಯೂ, ಜಿಲ್ಲಾಧಿಕಾರಿಯವರ ಔದ್ಯೋಗಿಕ ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಪೇಜ್‌ಗಳಲ್ಲೂ, ಜಿಲ್ಲಾ ಇನ್ ಫರ್ಮೇಶನ್ ಕಚೇರಿಯ ಫೇಸ್‌ಬುಕ್ ಪೇಜ್‌ನಲ್ಲೂ ಪ್ರಕಟಪಡಿಸಲಾ ಗುವುದು. ಅಲ್ಲದೆ ನಕಲಿ ಸುದ್ದಿಗಳನ್ನು ಪ್ರಚಾರಪಡಿಸಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಅವರು ಎಚ್ಚರಿಸಿದ್ದಾರೆ.

ಮುಸ್ಲಿಂ ಯೂತ್ ಲೀಗ್ ವಿರುದ್ಧ ನಕಲಿ ಪೋಸ್ಟರ್ ಪ್ರಚಾರ: ವಿದ್ಯಾನಗರ ಪೊಲೀಸರಿಂದ ಕೇಸು ದಾಖಲಿಸಿ ತನಿಖೆ ಆರಂಭ

ಕಾಸರಗೋಡು: ಮುಸ್ಲಿಂ ಯೂತ್‌ಲೀಗ್‌ನ ವಿರುದ್ಧ ಸಾಮಾ ಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ ರ್‌ಗಳನ್ನು ಪ್ರಚಾರಪಡಿಸಿರುವುದಾಗಿ ನೀಡಿದ ದೂರಿನಂತೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಮಧೂರು, ಚೆಟ್ಟಂಗುಳಿ ಇಸಾಂ ಮಹಲ್‌ನ ಕಲಂದರ್ ಶಾಫಿ ನೀಡಿದ ದೂರಿನಂತೆ ವಿದ್ಯಾನಗರ ಪೊಲೀಸರು  ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಜೂನ್ ೯ರಿಂದ ಸಮಾಜದಲ್ಲಿ ಗಲಭೆ ಉಂಟುಮಾಡುವ ಉದ್ದೇಶದಿಂದ ಇನ್‌ಸ್ಟಾಗ್ರಾಮ್‌ನಲ್ಲಿ ನಕಲಿ ಪ್ರಚಾರ ನಡೆಸಿರುವುದಾಗಿ ದೂರಲಾಗಿತ್ತು. ದ ಕಮ್ಯೂನಿಸ್ಟ್ ವೇ, ಡಿವೈಎಫ್‌ಐ ಉಕ್ಕಿನಡ್ಕ, ಲೆಫ್ಟಿಸ್ಟ್‌ಸ್, ಕಾಮ್ರೇಡ್ಸ್ ಚೆಟ್ಟುಂಗುಳಿ ಎಂಬೀ ಪೇಜುಗಳ ಮೂಲಕ ವಿಭಾಗೀಯತೆ ಬೆಳೆಸುವ ರೀತಿಯಲ್ಲಿರುವ …

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಮತ್ತು ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಳಿಕೆ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಫೆಬ್ರವರಿ 28ರಿಂದ ಆವರಿಸಿಕೊಂಡಿದ್ದ ಯುದ್ಧದ ಕರಿಛಾಯೆ ಕೊನೆಗೊಂಡ ನಂತರ ಹಾರ್ಮುಜ್ ಜಲಸಂಧಿಯ ಮೂಲಕ ಕಚ್ಚಾತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಹರಿವು ಪುನಃ ಸ್ಥಾಪಿಸಿದ ನಂತರ ಜಾಗತಿಕ ಕಚ್ಚಾತೈಲಗಳ ಬೆಲೆ ಇಳಿಯತೊ ಡಗಿದೆ. ಅದಕ್ಕೆ ಹೊಂದಿಕೊಂಡು ಭಾರತೀಯ ತೈಲ ಮಾರುಕಟ್ಟೆ ಕಂಪೆನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್, ಪೆಟ್ರೋಲ್ ಮತ್ತು ಡೀಸೆಲ್‌ನ ಬೆಲೆಯನ್ನು ಇಳಿಸಿದೆ. ಇದು ದೇಶದಲ್ಲಿ ಇಂದಿನಿಂದಲೇ ವಿದ್ಯುಕ್ತವಾಗಿ ಜ್ಯಾರಿಗೆ ಬಂದಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ …

ಚಂದ್ರಗಿರಿ ರಸ್ತೆಯ ಚಳಿಯಂಗೋಡ್ ಜಂಕ್ಷನ್‌ನಲ್ಲಿ ಗುಡ್ಡೆ ಕುಸಿತ : ವಾಹನ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

ಕಾಸರಗೋಡು: ತೀವ್ರ ಮಳೆ ಹಿನ್ನೆಲೆಯಲ್ಲಿ ಕಾಸರ ಗೋಡು- ಕಾಞಂಗಾಡ್ ಕೆಎಸ್‌ಟಿಪಿ ರಸ್ತೆಯಲ್ಲಿ ಗುಡ್ಡೆ ಕುಸಿದಿದೆ. ಚಂದ್ರಗಿರಿ, ಚಳಿಯಂಗೋಡು, ಕೋಟರು ವತ್‌ನಲ್ಲಿ ಇಂದು ಬೆಳಿಗ್ಗೆ ಅಪಾಯ ಉಂಟಾಗಿದೆ. ಮಣ್ಣು ಕುಸಿಯುವುದನ್ನು ತಡೆಯುವುದಕ್ಕಾಗಿ ನಿರ್ಮಿಸಿದ ಕಾಂಕ್ರೀಟ್ ತಡೆಗೋಡೆಯ ಮೇಲಿನ ಭಾಗದಿಂದ ಮಣ್ಣು ಹಾಗೂ ಬಂಡೆಕಲ್ಲುಗಳು ರಸ್ತೆಗೆ ಬಿದ್ದಿದೆ. ಬೃಹತ್ ಗಾತ್ರದ ಬಂಡೆಕಲ್ಲು  ಆ ದಾರಿಯಾಗಿ ಸಾಗುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದ ಕಾರಿನ ಮುಂಭಾಗ ಹಾನಿಗೊಂಡಿದೆ. ಇದರಿಂದಾಗಿ ಈ ರಸ್ತೆ ಮೂಲಕ ವಾಹನ ಸಂಚಾರ ಅಲ್ಪಹೊತ್ತು ಮೊಟಕುಗೊಂಡಿತ್ತು. ಮಾಹಿತಿ ತಿಳಿದು …

ಅಪರಿಮಿತ ವೇಗದಲ್ಲಿ ತಲುಪಿದ ಕಾರು ಢಿಕ್ಕಿ ಹೊಡೆದಿದ್ದ ಪ್ಲಸ್ ಟು ವಿದ್ಯಾರ್ಥಿನಿ ಮೃತ್ಯು: ಮುಳ್ಳೇರಿಯದಲ್ಲಿ ಶೋಕಸಾಗರ

ಮುಳ್ಳೇರಿಯ: ಅಪರಿಮಿತ ವೇಗದಲ್ಲಿ ಸಂಚರಿಸಿದ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಪ್ಲಸ್‌ಟು ವಿದ್ಯಾರ್ಥಿನಿ ಮೃತಪಟ್ಟಳು. ಮುಳ್ಳೇರಿಯ ಸರಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿನಿ ದೀಕ್ಷ (17) ನಿನ್ನೆ ಮಧ್ಯಾಹ್ನ ೨ ಗಂಟೆ ವೇಳೆ ಮೃತಪಟ್ಟಿದ್ದಾಳೆ. ಇಂದು ಬೆಳಿಗ್ಗೆ ಮುಳ್ಳೇರಿಯ ಶಾಲೆಯಲ್ಲಿ ಮೃತದೇಹವನ್ನು ಸಾರ್ವಜನಿಕ ದರ್ಶನಕ್ಕಿರಿಸಿದ ಬಳಿಕ ಮುಳ್ಳೇರಿಯ ವಿವೇಕಾನಂದ ನಗರದ ಮನೆ ಬಳಿ ಅಂತ್ಯ ಸಂಸ್ಕಾರ ನಡೆಸಲಾಯಿತು. ವಿವೇಕಾನಂದ ನಗರ ನಿವಾಸಿ ಹಾಗೂ ಮುಳ್ಳೇರಿಯ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ …

ವೈದ್ಯಕೀಯ ರಂಗದಲ್ಲಿ ಸಾಧನೆಗೈದ ಡಾ| ನಾರಾಯಣ ನಾಯ್ಕ್

ಜೀವನದಲ್ಲಿ ಕಠಿಣ ಪರಿಸ್ಥಿತಿಗಳನ್ನು ಜಯಿಸಿ, ಶಿಕ್ಷಣದ ಮೂಲಕ ಜೀವನವನ್ನು ರೂಪಿಸಿಕೊಂಡು, ಸಮಾಜಸೇವೆಗೆ ತಮ್ಮನ್ನು ಸಮರ್ಪಿಸಿದ ಹಿರಿಯ ವೈದ್ಯರಾಗಿದ್ದಾರೆ ಡಾ| ಬಿ. ನಾರಾಯಣ ನಾಯ್ಕ್. ಕಾಸರಗೋಡು ಜಿಲ್ಲೆಯ ಗ್ರಾಮೀಣ ಪ್ರದೇಶದ ಬಡ ಕುಟುಂಬದಲ್ಲಿ ಜನಿಸಿದ ಇವರು ತಮ್ಮ ಪರಿಶ್ರಮ, ದೃಢಸಂಕಲ್ಪ ಮತ್ತು ಸೇವಾಭಾವದಿಂದ ವೈದ್ಯಕೀಯ ಕ್ಷೇತ್ರದಲ್ಲಿ ಹಾಗೂ ಸಮಾಜ ಸೇವೆಯಲ್ಲಿ ಅಪಾರ ಗೌರವ ಗಳಿಸಿದ್ದಾರೆ. ಡಾ| ನಾರಾಯಣ ನಾಯ್ಕ್ ಕಾಸರಗೋಡು ಜಿಲ್ಲೆಯ ಎಣ್ಮಕಜೆ ಪಂಚಾಯತ್‌ನ ಏಳ್ಕಾನ ಬಾಲೆಗುಳಿ ಗ್ರಾಮದಲ್ಲಿ ಆರ್ಥಿಕವಾಗಿ ಹಿಂದುಳಿದ ಕುಟುಂಬದಲ್ಲಿ ಜನಿಸಿದರು. ಎಂಟು ಮಕ್ಕಳಲ್ಲಿ ಏಳನೇಯವರಾಗಿದ್ದರು.   …

ಮನೆಗಳ ಮೇಲೆ ಗುಡ್ಡೆ ಕುಸಿದು ಮೂವರು ದಾರುಣ ಮೃತ್ಯು; ಮೃತಪಟ್ಟವರಲ್ಲಿ ಇಬ್ಬರು ಮಕ್ಕಳು: ಮಂಗಳೂರು ಕಂಕನಾಡಿ ಗರೋಡಿ ಎಂಬಲ್ಲಿ ಇಂದು ಮುಂಜಾನೆ ದಾರುಣ ಘಟನೆ

ಮಂಗಳೂರು: ಧಾರಾಕಾರ ಮಳೆ ಸುರಿಯುತ್ತಿದ್ದಂತೆ  ಗುಡ್ಡೆ ಕುಸಿದು ಮನೆಗಳ ಮೇಲೆ ಬಿದ್ದು ಸಂಭವಿಸಿದ ದುರ್ಘಟನೆಯಲ್ಲಿ ಮೂರು ಮಂದಿ ಮೃತಪಟ್ಟ ಘಟನೆ ಕಂಕನಾಡಿ ನಾಗುರಿ ಬಳಿಯ ಗರೋಡಿ ಎಂಬಲ್ಲಿ ನಡೆದಿದೆ.  ಬಿಹಾರ ನಿವಾಸಿಗಳಾದ ಲಾಲ್ ಬಾಬು ಎಂಬವರ ಮಕ್ಕಳಾದ ಚೌರಸ್ಯ (8), ಪ್ಯಾರಿ (4), ನೆರೆಮನೆ ನಿವಾಸಿ  ಬಾಲಕೃಷ್ಣ ಎಂಬವರ ಪತ್ನಿ ಶಾಂತ (40) ಎಂಬಿವರು ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಂದು ಮುಂಜಾನೆ 5 ಗಂಟೆ ವೇಳೆ ದುರ್ಘಟನೆ ಸಂಭವಿಸಿದೆ. ಬಿಹಾರ ನಿವಾಸಿಗಳಾದ ಕುಟುಂಬಗಳು ವಾಸಿಸುವ ಎರಡು ಮನೆಗಳ ಮೇಲೆ …