ಕೆಎಸ್ಆರ್ಟಿಸಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾಟುಕುಕ್ಕೆಯ ಯುವಕ ಸೆರೆ
ಪೆರ್ಲ: ಕೆಎಸ್ಆರ್ಟಿಸಿ ಬಸ್ ನಲ್ಲಿ ಗಾಂಜಾ ಸಹಿತ ಪ್ರಯಾಣಿಸುತ್ತಿದ್ದ ಯುವಕನನ್ನು ಬಂಧಿಸಲಾಗಿದೆ. ಕಾಟುಕುಕ್ಕೆ ಪೆರ್ಲತ್ತಡ್ಕ ನಿವಾಸಿ ಅಬ್ದುಲ್ ಸಮದ್ (37) ಎಂಬಾತನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ನಿನ್ನೆ ಸಂಜೆ 5 ಗಂಟೆಗೆ ಮಂಜೇಶ್ವರ ಅಬಕಾರಿ ಚೆಕ್ಪೋಸ್ಟ್ನಲ್ಲಿ ನಡೆಸಿದ ವಾಹನ ತಪಾಸಣೆ ವೇಳೆ ಈತ ಸೆರೆಗೀಡಾಗಿದ್ದಾನೆ. ಮಂಗಳೂರಿನಿಂದ ಕಾಸರಗೋಡಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಅಬ್ದುಲ್ ಸಮದ್ ಪ್ರಯಾಣಿಸುತ್ತಿದ್ದನು. ಈತನ ಕೈಯಲ್ಲಿ 12 ಗ್ರಾಂ ಗಾಂಜಾ ಪತ್ತೆಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕಾಟುಕುಕ್ಕೆಯ ಶಾಲಾ ಮಕ್ಕಳಿಗೆ ಹಾಗೂ ಪೆರ್ಲದ ಕಾಲೇಜು ವಿದ್ಯಾರ್ಥಿಗಳಿಗೆ …
Read more “ಕೆಎಸ್ಆರ್ಟಿಸಿ ಬಸ್ನಲ್ಲಿ ಗಾಂಜಾ ಸಾಗಿಸುತ್ತಿದ್ದ ಕಾಟುಕುಕ್ಕೆಯ ಯುವಕ ಸೆರೆ”