ತಾಯಿಯನ್ನು ಕುತ್ತಿಗೆ ಇರಿದು ಕೊಲೆಗೈದ ಪುತ್ರ: ಕೊಲೆಗೀಡಾಗಿರುವುದು ಮಹಿಳಾ ಮೋರ್ಛಾ ಜಿಲ್ಲಾ ಸಮಿತಿ ಸದಸ್ಯೆ; ಆರೋಪಿ ಪೊಲೀಸರ ಮುಂದೆ ಶರಣು

ಕಣ್ಣೂರು: ಸ್ವಂತ ತಾಯಿಯನ್ನು ಪುತ್ರ ಕುತ್ತಿಗೆ ಇರಿದು ಕೊಲೆಗೈದ ಭೀಕರ ಘಟನೆ  ನಡೆದಿದೆ. ಕೃತ್ಯದ ಬಳಿಕ ಆರೋಪಿ ಪುತ್ರ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಕೇಳಗಂ ಕೊಳಕ್ಕಾಡ್ ತಾನಿಕುನ್ನು ವಿನ ಮಡತ್ತಿಪರಂಬಿಲ್ ತಂಗಚ್ಚನ್ ಎಂಬವರ ಪತ್ನಿ ಗೀತಮ್ಮ (50) ಕೊಲೆಗೀಡಾದ ಮಹಿಳೆಯಾಗಿದ್ದಾರೆ.   ಇವರನ್ನು ಪುತ್ರ ಕ್ರಿಸ್ಟಿ (25) ಕುತ್ತಿಗೆ ಇರಿದು ಕೊಲೆಗೈದಿರುವುದಾಗಿ ದೂರಲಾಗಿದೆ. ಕೊಲೆಗೀಡಾದ ಗೀತಮ್ಮ ಮಹಿಳಾ ಮೋರ್ಛಾ ಕಣ್ಣೂರು ಜಿಲ್ಲಾ ಸಮಿತಿ ಸದಸ್ಯೆಯಾಗಿದ್ದಾರೆ. ನಿನ್ನೆ ರಾತ್ರಿ 10.30ರ ವೇಳೆ ಈ ಕೊಲೆ ಕೃತ್ಯ ನಡೆದಿದೆ. ಗೀತಮ್ಮರೊಂದಿಗೆ …

ರಸ್ತೆ ತಿರುವಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿಯಿಂದ ಸಂಚಾರ ಸಮಸ್ಯೆ

ಮಂಜೇಶ್ವರ: ಹೊಸಂಗಡಿ ಬಳಿಯ ಬಂಗ್ರಮAಜೇಶ್ವರ ರಸ್ತೆಯ ತಿರುವುವೊಂದರಲ್ಲಿ ವಿದ್ಯುತ್ ಕಂಬಕ್ಕೆ ಅಳವಡಿಸಿದ ಆಧಾರ ತಂತಿ ವಾಹನ ಸವಾರರಿಗೆ ಆತಂಕವನ್ನುAಟುಮಾಡು ತ್ತಿದೆ. ಈ ತಂತಿ ರಸ್ತೆ ಬದಿಯಲ್ಲಿ ಅಳವಡಿಸಲಾಗಿದ್ದು, ಹೊಸಂಗಡಿ ಭಾಗಕ್ಕೆ ಬರುವ ವಾಹನ ಸವಾರರ ಗಮನಕ್ಕೆ ಬಾರದೆ ಹಾಗೂ ಎದುರಿನಿಂದ ಬರುವ ವಾಹನಕ್ಕೆ ಸೈಡು ನೀಡುವ ವೇಳೆ ಕೂಡಾ ತಂತಿಗೆ ಬಡಿದು ಅಪಘಾತ ಉಂಟಾಗುವ ಭೀತಿ ಇದೆ. ಈ ದಾರಿಯಾಗಿ ಕಟ್ಟೆ ಬಜಾರ್, ಹೊಸಬೆಟ್ಟು, ತಲಪಾಡಿ ಮೊದಲಾದ ಭಾಗಗಳಿಂದ ಹೊಸಂಗಡಿ ಪೇಟೆಗೆ ದಿನನಿತ್ಯ ನೂರಾರು ವಾಹನಗಳು ಸಂಚಾರ …

ತೆಂಗಿನ ಮರದಿಂದ ಬಿದ್ದು ಚಿಕಿತ್ಸೆಯಲ್ಲಿದ್ದ ಯುವಕ ಇಲಿ ವಿಷ ಸೇವಿಸಿ ಆತ್ಮಹತ್ಯೆ

ಕಾಸರಗೋಡು: ಮನೆ ಯಂಗಳದ ತೆಂಗಿನಮರದಿಂದ ಬಿದ್ದು ಗಂಭೀರ ಗಾಯಗೊಂಡು  ೧೩ ವರ್ಷಗಳಿಂದ ಚಿಕಿತ್ಸೆಯಲ್ಲಿದ್ದ ಯುವಕ ಇಲಿವಿಷ ಸೇವಿಸಿ ಆತ್ಮಹತ್ಯೆಗೈದಿದ್ದಾರೆ. ವೆಳ್ಳರಿಕುಂಡ್ ಬಳಾಲ್ ಪಡಯಂಗಲ್ ನಿವಾಸಿ ಕುಂಞಿರಾಮನ್‌ರ ಪುತ್ರ ಕೆ. ಬೈಜು (೩೮) ಆತ್ಮಹತ್ಯೆಗೈದ ಯುವಕ. ಗುರುವಾರ ಅಪರಾಹ್ನ ಬೈಜು ವಿಷ ಸೇವಿಸಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಪರಿಯಾರಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿಸಲಾಯಿತಾದರೂ ನಿನ್ನೆ ಬೆಳಿಗ್ಗೆ ನಿಧನ ಸಂಭವಿಸಿದೆ. ೧೩ ವರ್ಷದ ಹಿಂದೆ ಮನೆಯಂಗಳದ ತೆಂಗಿನ ಮರಕ್ಕೆ ಹತ್ತಿದಾಗ ಬಿದ್ದು ಗಾಯಗೊಂಡಿದ್ದರು. ಆ ಬಳಿಕ …

ಕುಂಬಳೆಯಲ್ಲಿ ಆಗಾಗ ವಿದ್ಯುತ್ ಮೊಟಕು:ಮುಸ್ಲಿಂ ಲೀಗ್‌ನಿಂದ ವಿದ್ಯುತ್ ಕಚೇರಿ ದಿಗ್ಬಂಧನ

ಕುಂಬಳೆ: ಆಗಾಗ ಉಂಟಾಗುತ್ತಿರುವ ಅಘೋಷಿತ ವಿದ್ಯುತ್ ಪವರ್‌ಕಟ್‌ಗೆ ಕೂಡಲೇ ಪರಿಹಾರ ಕಾಣಬೇಕೆಂದು ಆಗ್ರಹಿಸಿ ಕುಂಬಳೆಯಲ್ಲಿ ಮುಸ್ಲಿಂ ಲೀಗ್ ಜನಪ್ರತಿನಿಧಿಗಳು ಕೆಎಸ್‌ಇಬಿ ಕಚೇರಿ ದಿಗ್ಬಂಧನ ನಡೆಸಿದರು. ಮುಸ್ಲಿಂ ಲೀಗ್ ಪಂಚಾಯತ್ ಸಮಿತಿಯ ನೇತೃತ್ವದಲ್ಲಿ ದಿಗ್ಬಂಧನ ನಡೆಸಲಾಗಿದೆ. ಪಂಚಾಯತ್ ಸಮಿತಿ ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಹಾಜಿ, ಜಿಲ್ಲಾ ಪಂಚಾಯತ್ ಸದಸ್ಯ ಅಸೀಸ್ ಕಳತ್ತೂರು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಎಂ.ಪಿ. ಖಾಲಿದ್, ಇನಾಸ್ ಪವಾಸ್, ಸದಸ್ಯರಾದ ಫಲ್ಸರ್, ಸಾಬುರ ನೇತೃತ್ವ ನೀಡಿದರು.  ಬಿ.ಎನ್. ಮೊಹಮ್ಮದಾಲಿ ಅಧ್ಯಕ್ಷತೆ ವಹಿಸಿದರು. ಎ.ಕೆ. ಆರೀಫ್ …

ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ  ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ  ಸಹಸ್ರ ಕಲಶಾಭಿಷೇಕ-ಬ್ರಹ್ಮಕಲಶಾಭಿಷೇಕ ನಾಳೆ ನಡೆಯಲಿರುವುದು.  ನಾಳೆ ಮುಂಜಾನೆ ೫ರಿಂದ ಗಣಪತಿಹೋಮ, ಕವಾಟೋ ದ್ಘಾಟನೆ, ಶಾಂತಿ, ಪ್ರಾಯಶ್ಚಿತ್ತ ಮತ್ತು ತತ್ವಹೋಮಗಳ ಕಲಶಾಭಿಷೇಕ ನಡೆಯಲಿದೆ. ಅನಂತರ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ದೇವರಿಗೆ ಸಹಸ್ರ ಕಲಶಾಭಿಷೇಕ, ಬ್ರಹ್ಮಕಲಶಾಭಿಷೇಕ, ಅವಭೃತ ಪ್ರೋಕ್ಷಣೆ, ಮಹಾಪೂಜೆ, ಮಂಗಲಮಂತ್ರಾಕ್ಷತೆ, ರಾತ್ರಿ ೭ರಿಂದ ಶ್ರೀ ದೇವರ ಉತ್ಸವಬಲಿ, ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ ೧೧.೩೦ಕ್ಕೆ ಶ್ರೀ ಸಂಸ್ಥಾನ ಗೋಕರ್ಣ  ಶ್ರೀರಾಮಚಂದ್ರಾಪುರ ಮಠದ ಪರಮಪೂಜ್ಯ  …

ಹೊಳೆಗಳು, ಜಲಮೂಲಗಳು ಬತ್ತಿಬರಡು :ಕುಡಿಯುವ ನೀರಿಗೆ ತೀವ್ರ ಕ್ಷಾಮ

ಕಾಸರಗೋಡು: ಬೇಸಿಗೆ ಮಳೆ ತೀವ್ರಗೊಳ್ಳದ ಹಿನ್ನೆಲೆಯಲ್ಲಿ ಹೊಳೆಗಳು, ಜಲಮೂಲಗಳು ಬತ್ತಿ ಬರಡಾಗಿದ್ದು, ಜಿಲ್ಲೆ ತೀವ್ರ ಬರ ಎದುರಿಸುವ ಹಾಗೂ ಕುಡಿ ಯುವ ನೀರು ಕ್ಷಾಮಕ್ಕೆ ತುತ್ತಾಗುವ ಸಾಧ್ಯತೆ ಕಂಡುಬರುತ್ತಿದೆ. ಬೇಸಿಗೆಯ ಬಿಸಿ ಅತೀವ ಅಸಹನೀಯವಾಗಿ ಮುಂದುವರಿ ಯುತ್ತಿದೆ. ಜನರು ಬೇಯುತ್ತಿದ್ದು, ಕುಡಿ ಯುವ ನೀರು ಕ್ಷಾಮ ಕೂಡ ಎದುರಿ ಸುತ್ತಿರುವುದರಿಂದ ಅತ್ಯಂತ ಸಂಕಷ್ಟ ಉಂಟಾಗಿದೆ. ಕೃಷಿಗೆ ಅಗತ್ಯವಾಗಿರುವ ನೀರು ಲಭಿಸದ ಹಿನ್ನೆಲೆಯಲ್ಲಿ ಕೃಷಿಕರು ಸಂದಿಗ್ಧತೆಯಲ್ಲಿದ್ದಾರೆ. ಹೊಳೆಗಳು ಬತ್ತಿ ಬರಡಾದ ಕಾರಣ ಕೃಷಿಗಾಗಿ ಇಲ್ಲಿಂದ ಉಪಯೋಗಿಸುತ್ತಿದ್ದ ನೀರು ಇಲ್ಲದಂತಾಗಿದೆ. …

ಸೂರ್ಯಾಘಾತವೆಂಬ ಶಂಕೆ: ಕಾರಡ್ಕದಲ್ಲಿ ಗೇರುಬೀಜ ಸಂಗ್ರಹಿಸಲು ತೆರಳಿದ್ದ ವೃದ್ಧ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ಗೇರುಬೀಜ ಹೆಕ್ಕಲೆಂದು ಹೋಗಿದ್ದ ವೃದ್ಧ ಗೇರು ತೋಟದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಣ್ಣೂರು ಉದಯಗಿರಿ ಆಲಕ್ಕೋಡ್ ನಿವಾಸಿ, ಕಾರಡ್ಕ ಪಂಚಾಯತ್‌ನ ನೆಚ್ಚಿಪಡ್ಪು ನೀರೋಳಿಪಾರದಲ್ಲಿ  ವಾಸವಾಗಿ ರುವ ಎ.ಡಿ. ದೇವಸ್ಯ (೭೨) ನಿಧನಹೊಂದಿದವರು. ನಿನ್ನೆ ಸಂಜೆ ೩  ಗಂಟೆಗೆ ದೇವಸ್ಯ ಗೇರುಬೀಜ ಹೆಕ್ಕಲು ಹೋಗಿದ್ದರೆನ್ನಲಾಗಿದೆ. ಸಂಜೆ ವೇಳೆಗೆ ಆ ದಾರಿಯಲ್ಲಿ ಹೋದವರು ದೇವಸ್ಯರನ್ನು ಅಸ್ವಸ್ಥ ಸ್ಥಿತಿಯಲ್ಲಿ ಕಂಡಿದ್ದಾರೆ. ಕೂಡಲೇ ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವಉಳಿಸಲು ಸಾಧ್ಯವಾಗಲಿಲ್ಲ. ಮೃತದೇಹವನ್ನು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಘಟನೆಯಲ್ಲಿ ಆದೂರು ಪೊಲೀಸರು ಅಸಹಜ ಸಾವಿಗೆ …

ರೈಲಿನ ಗಾಳಿಗೆ ಸಿಲುಕಿ ಬಿದ್ದು ಗಾಯಗೊಂಡ ಬಾಲಕಿ ಮೃತ್ಯು

ಕಾಸರಗೋಡು:  ರೈಲುಗಾಡಿ ಸಂಚರಿಸುವ ವೇಳೆ ಬೀಸಿದ ಬಲವಾದ ಗಾಳಿಗೆ ಸಿಲುಕಿ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ದಾಖಲಿಸಲ್ಪಟ್ಟ ಬಾಲಕಿ ಸಾವನ್ನಪ್ಪಿದ್ದಾಳೆ. ಚೆಂಗಳ ನಾಲ್ಕನೇ ಮೈಲು ತೈವಳಪ್ಪು ನಿವಾಸಿ ಗಲ್ಪ್ ಉದ್ಯೋಗಿ ತಾಹೀರ್ ನಜಾದ್ -ಆಸಿಯ  ದಂಪತಿ ಪುತ್ರಿ ಮರಿಯಂ ನವಾಲ್ ತಾಹೀರ್ (5) ಸಾವನ್ನಪ್ಪಿದ ಬಾಲಕಿ. ಈತಿಂಗಳ ೧೮ರಂದು ಸಂಜೆ ಅಜ್ಜಿ ಅಡ್ಕತ್ತಬೈಲಿನ ನಫೀಸ (52)ರ ಜೊತೆ ಮೊಗ್ರಾಲ್ ನಾಂಗಿಯಲ್ಲಿ ರೈಲು ಹಳಿಯ ಸಮೀಪ ನಡೆದುಹೋಗುತಿದ್ದ ವೇಳೆ   ಮಂಗಳೂರಿನಿಂದ ತಿರುವನಂತಪುರಕ್ಕೆ ಸಂಚರಿಸಿದ ಮಾವೇಲಿ ಎಕ್ಸ್‌ಪ್ರೆಸ್ ರೈಲಿನ ಗಾಳಿಗೆ …

ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ  ಪೊಲೀಸರನ್ನು ಕಂಡು ಪರಾರಿಯಾದ ಟಿಪ್ಪರ್ ಲಾರಿ ಮಾಲಕ ಸೆರೆ

ಕುಂಬಳೆ: ಅನಧಿಕೃತವಾಗಿ ಹೊಯ್ಗೆ ಸಂಗ್ರಹಿಸುತ್ತಿದ್ದ ವೇಳೆ ಪೊಲೀಸರನ್ನು ಕಂಡು ಟಿಪ್ಪರ್ ಲಾರಿ ಹಾಗೂ ಹೊಯ್ಗೆ ಸಂಗ್ರಹ ಉಪಕರಣಗಳನ್ನು ಉಪೇಕ್ಷಿಸಿ ಪರಾರಿಯಾದ ಪ್ರಕರಣದಲ್ಲಿ ವಾಹನದ ಆರ್‌ಸಿ ಮಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಪೆರಿಯಡ್ಕದ ಎಂ. ಅಶ್ರಫ್ ಬಂಧಿತ ವ್ಯಕ್ತಿಯೆಂದು ಪೊಲೀಸರು ತಿಳಿಸಿದ್ದಾರೆ. ಹೊಯ್ಗೆ ಲೋಡ್ ಮಾಡುವ ಕಾರ್ಮಿಕರ ಸಹಿತ ಐದು ಮಂದಿ ವಿರುದ್ಧ ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಪ್ರಕರಣದಲ್ಲಿ ಇತರ ಆರೋಪಿಗಳಾದ ಲೋಡಿಂಗ್ ಕಾರ್ಮಿಕರಿಗಾಗಿ  ಶೋಧ ಮುಂದುವರಿ ಯುತ್ತಿದೆ. ಮಾರ್ಚ್ ೩೦ರಂದು ಸಂಜೆ ಶಿರಿಯ ಹೊಳೆಯ ಹೇರೂರು ಪೈಯಾರ್‌ಕಡವಿನಲ್ಲಿ ಅನಧಿಕೃತವಾಗಿ …

ಶೇಣಿ ಇಂದಿರಾ ನಿಧನ

ಪೆರ್ಲ: ಹಿರಿಯ ಬಿಜೆಪಿ ಮುಖಂಡ ಶೇಣಿ ಬಾಲಕೃಷ್ಣ ನಾಯಕ್‌ರ ಪತ್ನಿ ಇಂದಿರಾ (52) (ಲತಾ ನಾಯಕ್) ನಿನ್ನೆ ನಿಧನ ಹೊಂದಿದರು. ಕಳೆದ ಕೆಲವು ಸಮಯಗಳಿಂದ ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದರು. 2005ರಲ್ಲಿ ನಡೆದ ಪಂಚಾಯತ್ ಚುನಾವಣೆಯಲ್ಲಿ ಶೇಣಿ ವಾರ್ಡ್‌ನಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಮೃತರು ಪತಿ, ಮಕ್ಕಳಾದ ರೂಪ, ದೀಪ, ಪ್ರದೀಪ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.