ಫುಟ್‌ಬಾಲ್ ಪ್ರೇಮಿಗಳಿಂದ ಸ್ಥಾಪಿಸುವ ಫ್ಲೆಕ್ಲ್‌ಬೋರ್ಡ್‌ಗಳಲ್ಲಿ ಹೊಗೆಬತ್ತಿ ಸೇವನೆ ಚಿತ್ರವಿರಬಾರದು- ಡಿಎಂಒ

ಕಾಸರಗೋಡು: ಫಿಫಾ ವಿಶ್ವಕಪ್ ಫುಟ್‌ಬಾಲ್‌ಗೆ ಸಂಬಂಧಿಸಿ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಫುಟ್‌ಬಾಲ್ ಪ್ರೇಮಿ ಗಳು ಸ್ಥಾಪಿಸಿದ ಬೋರ್ಡ್ ಗಳಲ್ಲಿ ಹೊಗೆಬತ್ತಿ ಸೇವನೆ ಚಿತ್ರಗಳನ್ನು ಉಪಯೋಗಿಸ ಬಾರದೆಂದು ಜಿಲ್ಲಾ ವೈದ್ಯಾಧಿ ಕಾರಿ ಡಾ. ಬಿ. ಸಂತೋಷ್ ತಿಳಿಸಿದ್ದಾರೆ. ಹೊಗೆಬತ್ತಿ ಸೇವಿಸುವ ಕ್ರೀಡಾಪಟುಗಳು ಒಳಗೊಂಡಿರುವ ಫ್ಲೆಕ್ಸ್ ಬೋರ್ಡ್‌ಗಳನ್ನು ಸ್ಥಾಪಿಸಲಾ ಗಿದೆ ಎಂಬುದು ಗಮನಕ್ಕೆ ಬಂದಿರುವುದಾಗಿಯೂ ಈ ರೀತಿಯ ಬೋರ್ಡ್‌ಗಳನ್ನು ತೆರವುಗೊಳಿಸುವುದು ಅಥವಾ ದೃಶ್ಯಗಳನ್ನು ಮರೆಮಾಚ ಬೇಕೆಂದು ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ. ಇಲ್ಲದಿದ್ದರೆ ರಾಷ್ಟ್ರೀಯ ಹೊಗೆಬತ್ತಿ ಸೇವನೆ ನಿಯಂತ್ರಣ ಕಾನೂನು ಪ್ರಕಾರ …

ಒಬಿಸಿ ಮೀಸಲಾತಿಯನ್ನು ಏಕೀಕರಿಸಲು, ಪಟ್ಟಿಯನ್ನು ಲೋಪದೋಷರಹಿತವಾಗಿಸಲು ಎಚ್‌ಎಸ್‌ಎಸ್‌ವಿ ಆಗ್ರಹ

ಮಂಜೇಶ್ವರA: ಮಂಜೇಶ್ವರದಲ್ಲಿ ನಡೆದ ಹಿಂದೂ ಸಮುದಾಯ ಸೌಹೃದವೇದಿ ಕಾಸರಗೋಡು ಜಿಲ್ಲಾ ಸಮಾವೇಶವನ್ನು ರಾಜ್ಯ ಪ್ರಧಾನ ಕಾರ್ಯದರ್ಶಿ ಅಡ್ವ. ಪಯ್ಯನ್ನೂರ್ ಶಾಜಿ ಉದ್ಘಾಟಿಸಿದರು. ಕೇರಳ-ಕೇಂದ್ರ ಒಬಿಸಿ ಪಟ್ಟಿಯಲ್ಲಿರುವ ಕಾಗುಣಿತ ಲೋಪ ದೋಷ ಗಳನ್ನು ಸರಿಪಡಿಸಬೇಕು ಮತ್ತು ರಾಜ್ಯ, ರಾಷ್ಟ್ರೀಯ ಸರಕಾರಗಳು ದೋಷರಹಿತ ಒಬಿಸಿ ಪಟ್ಟಿಯನ್ನು ಮರು ಪ್ರಕಟಿಸಲು ಸಿದ್ಧರಾಗಿರಬೇಕು ಎಂದು ಸಭೆ ಒತ್ತಾಯಿ ಸಿತು. ವಾಣಿಯ- ಗಾಣಿಗ, ತೀಯ, ಪದ್ಮಶಾಲಿಯ, ವೇಳುತೇಡತ್ತ್ ನಾಯರ್, ಕೋಟೆಯಾರ್ (ರಾಮ ಕ್ಷತ್ರಿಯ), ಯೋಗಿ, ಹೆಗಡೆ, ಭಂಡಾರಿ, ಮಣಿಯಾಣಿ, ಗಟ್ಟಿ ಮೊದಲಾದ ಸಮುದಾಯಗಳ ಪ್ರತಿನಿಧಿಗಳು …

ವಿಶ್ವ ರೆಫ್ರಿಜರೇಶನ್ ದಿನಾಚರಣೆಯಂಗವಾಗಿ ಅಸೋಸಿಯೇಶನ್‌ನಿಂದ ಮಾದರಿ ಸೇವಾ ಕಾರ್ಯ

ಕಾಸರಗೋಡು: ವಿಶ್ವ ರೆಫ್ರಿ ಜರೇಶನ್ ದಿನಾಚರಣೆಯಂಗವಾಗಿ ಎಚ್‌ವಿಎಸಿಆರ್‌ಇ ಅಸೋಸಿಯೇ ಶನ್ ಕಾಸರಗೋಡು ತಾಲೂಕು ಸಮಿತಿ ನೇತೃತ್ವದಲ್ಲಿ ಮಾದರಿ ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಯಿತು. ಕಾಸರಗೋಡು ನಗರ ಠಾಣೆಯ ಏರ್ ಕಂಡೀಶನರ್‌ಗಳನ್ನು ಸಂಘಟನೆಯ ನೇತೃತ್ವದಲ್ಲಿ ಉಚಿತವಾಗಿ ಸರ್ವೀಸ್ ಮಾಡಿಕೊಡಲಾಯಿತು.  ಹಗಲಿರುಳು ಜನರಿಗಾಗಿ ಸೇವೆ ಮಾಡುವ ಪೊಲೀಸ್ ಅಧಿಕಾರಿಗಳಿಗಾಗಿ, ಠಾಣೆಯ ಕಂಟ್ರೋ ಲ್ ರೂಮ್‌ನಲ್ಲಿರುವ ಎಸಿಗಳನ್ನು ಉಚಿತವಾಗಿ ಸರ್ವೀಸ್ ಮಾಡಲಾಗಿದೆ. ಸಂಘಟನೆಯ ಕಾಸರಗೋಡು ತಾಲೂಕು ಅಧ್ಯಕ್ಷ ಅಶ್ವತ್ಥ್‌ರಾಜ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಕಾರ್ಯದರ್ಶಿ ಬ್ಲೆಸ್ಸನ್ಸ್ ಶುಭ ಹಾರೈಸಿದರು. ರಾಜ್ಯ ಕೌನ್ಸಿಲ್ ಸದಸ್ಯ …

ರಂಗಭಾನು ತರಬೇತಿ ಕಾರ್ಯಾಗಾರಕ್ಕೆ ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ ಚಾಲನೆ

ಮಂಜೇಶ್ವರ: ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜುನಲ್ಲಿ ರಂಗಚೇತನ ಕಾಸರಗೋಡು ಇದರ ವತಿಯಿಂದ ೧೫ ದಿನಗಳ ರಂಗಭೂಮಿ ಪ್ರಾಯೋಗಿಕ ತರಬೇತಿ ಕಾರ್ಯಾಗಾರ ಆರಂಭ ಗೊಂಡಿತು. ರಂಗಚೇತನ ಕಾಸರಗೋಡು ಸಂಸ್ಥೆಯ ಅಧ್ಯಕ್ಷ ಡಾ. ಯತೀಶ್ ಕುಮಾರ್ ರೈ ಮುಳ್ಳೇರಿಯ ಉದ್ಘಾಟಿಸಿ ದರು. ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ಪ್ರಾಂಶುಪಾಲ ಡಾ.ಮಹಮ್ಮ ದಲಿ ಅಧ್ಯಕ್ಷತೆ ವಹಿಸಿದರು. ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಶಿವಶಂಕರ ಸ್ವಾಗತಿಸಿ, ಪ್ರಸ್ತಾಪಿಸಿದರು. ರಂಗಚೇತನ ಉಪಾಧ್ಯಕ್ಷ ವಿಜಯ ಕುಮಾರ್ ಪಾವಳ ಶುಭ ಕೋರಿದರು.ರಂಗಚೇತನ ಕಾಸರಗೋಡು ಇದರ …

ಪ್ರಜಾಪ್ರಭುತ್ವವನ್ನು ಧ್ವಂಸಗೈದವರು ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ವಾಗ್ಮಿಗಳಾಗುತ್ತಾರೆ- ಟಿ.ಪಿ. ಜಯಚಂದ್ರನ್

ಕಾಸರಗೋಡು: ಪ್ರಜಾಪ್ರಭುತ್ವವನ್ನು ಕೊಚ್ಚಿ ಹಾಕಿದ ಕಾಂಗ್ರೆಸ್ ಪಕ್ಷದ ಹೊಸ ತಲೆಮಾರು ಮುಖಂಡರು ಪ್ರಜಾಪ್ರಭುತ್ವ ಹಕ್ಕುಗಳ ಬಗ್ಗೆ ವಾಗ್ಮಿಗಳಾಗುತ್ತಿದ್ದಾರೆ. ತನ್ನ ಹಿಂದಿನ ತಲೆಮಾರುಗಳು ನಡೆಸಿದ ಮಾನವಹಕ್ಕು ಧ್ವಂಸವನ್ನು ತಿರಸ್ಕರಿಸಲು ತಯಾರಾಗದೆ ಜೇಬಲ್ಲಿ ಸಂವಿಧಾನವನ್ನು ಇರಿಸಿಕೊಂಡು ನಡೆಯುವ ರಾಹುಲ್ ಗಾಂಧಿ ಸ್ವಯಂ ಅಪಹಾಸ್ಯರಾಗುತ್ತಿರುವು ದಾಗಿ ಬಿಜೆಪಿ ರಾಜ್ಯ ವಕ್ತಾರ ಟಿ.ಪಿ. ಜಯಚಂದ್ರನ್ ಮಾಸ್ತರ್ ನುಡಿದರು. ತುರ್ತು ಪರಿಸ್ಥಿತಿಯ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆ ಯಂಗವಾಗಿ ಬಿಜೆಪಿ ಜಿಲ್ಲಾ ಸಮಿತಿ ಆಯೋಜಿಸಿದ ತುರ್ತು ಪರಿಸ್ಥಿತಿ ವಿರುದ್ಧ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. …

ತಿರುವನಂತಪುರ ಕಾರ್ಪೊರೇಶನ್‌ನಲ್ಲಿ ಸಿಪಿಎಂ ಆಕ್ರಮಣ: ನಗರದಲ್ಲಿ ಬಿಜೆಪಿ ಪ್ರತಿಭಟನೆ

ಕಾಸರಗೋಡು: ತಿರುವನಂತಪುರ ಕಾರ್ಪೊರೇಶನ್‌ನಲ್ಲಿ ಮೇಯರ್, ಡೆಪ್ಯುಟಿ ಮೇಯರ್ ಸಹಿತದ ಬಿಜೆಪಿ ಕೌನ್ಸಿಲರ್‌ಗಳಿಗೆ ಆಕ್ರಮಣ ನಡೆಸಿದ ಸಿಪಿಎಂನ ವಿರುದ್ಧ ಬಿಜೆಪಿ ಜಿಲ್ಲಾ ಸಮಿತಿ ಆಶ್ರಯದಲ್ಲಿ ಕಾಸರಗೋಡು ನಗರದಲ್ಲಿ ಪ್ರತಿಭಟನೆ ಮೆರವಣಿಗೆ, ಧರಣಿ ನಡೆಸಲಾಯಿತು. ಜಿಲ್ಲಾಧ್ಯಕ್ಷೆ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ಆಡಳಿತ ಕಳೆದುಕೊಂಡ ಸಿಪಿಎಂ ಅಸ್ವಸ್ಥತೆ ಹೊಂದಿದ್ದು, ಮೇಯರ್ ಕಚೇರಿಯ ಚಟುವಟಿಕೆ ಹೆಚ್ಚು ಜನಪರವನ್ನಾಗಿ ಮಾಡಿರುವುದು ಸಿಪಿಎಂಗೆ ಬೆದರಿಕೆ ಉಂಟಾಗಿದೆ ಎಂದು ಇದರಿಂದ ಆಕ್ರಮಣಕ್ಕೆ ಮುಂದಾಗಿರುವು ದಾಗಿ ಅಶ್ವಿನಿ ಅಭಿಪ್ರಾಯಪಟ್ಟರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯ ದರ್ಶಿಗಳಾದ ಮನುಲಾಲ್ ಮೇಲತ್, …

ತುರ್ತು ಪರಿಸ್ಥಿತಿ ವಿರುದ್ಧ ಹೋರಾಟ: 51ನೇ ವಾರ್ಷಿಕಾಚರಣೆ ಆರಂಭ

ಕಾಸರಗೋಡು: ತುರ್ತು ಪರಿಸ್ಥಿತಿ ವಿರುದ್ಧ ಹೋರಾಟದ 51ನೇ ವಾರ್ಷಿಕಾಚರಣೆಯ ಅಂಗವಾಗಿ ಬಿಜೆಪಿ ಜಿಲ್ಲಾ ಘಟಕದ ನೇತೃತ್ವದಲ್ಲಿ  ಬಿಜೆಪಿ ಜಿಲ್ಲಾ ಕಚೇರಿಯಾದ ಡಾ. ಶ್ಯಾಮ್‌ಪ್ರಸಾದ್ ಮುಖರ್ಜಿ ಮಂದಿರದಲ್ಲಿ  ತುರ್ತು ಪರಿಸ್ಥಿತಿ ವಿರೋಧಿ ಸಮ್ಮೇಳನ ಇಂದು ನಡೆಯುತ್ತಿದೆ.  ಬಿಜೆಪಿ ರಾಜ್ಯ ವಕ್ತಾರ ಪಿ.ಪಿ. ಜಯಚಂದ್ರನ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅಧ್ಯಕ್ಷತೆ ವಹಿಸಿದರು. ಹಲವರು ನೇತಾರರು ಉಪಸ್ಥಿತರಿದ್ದಾರೆ. ಈ ಸಂದರ್ಭದಲ್ಲಿ ತುರ್ತು ಪರಿಸ್ಥಿತಿ ವಿರುದ್ಧದ ಹೋರಾಟಗಾರರನ್ನು ಸನ್ಮಾನಿಸಲಾಗುವುದು.

ಗೃಹಿಣಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ: ಗೃಹಿಣಿಯೋರ್ವೆ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಪೈಕ ಚಾಮುಂಡಿಮೂಲೆ ನಿವಾಸಿಯೂ ನೆಲ್ಲಿಕಟ್ಟೆಯಲ್ಲಿ ಅಡಿಕೆ ವ್ಯಾಪಾರಿಯಾಗಿರುವ  ಶಂಕರ ಎಂಬವರ ಪತ್ನಿ ಚಿತ್ರಕಲಾ (41) ಸಾವಿಗೀಡಾದ ಮಹಿಳೆ. ನಿನ್ನೆ ಮಧ್ಯಾಹ್ನ ವೇಳೆ ಇವರು ಮನೆಯ ಬಚ್ಚಲು ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲವೆಂದು ಸಂಬಂಧಿಕರು ತಿಳಿಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆ ಕಾಸರ ಗೋಡು ಜನರಲ್ ಆಸ್ಪತ್ರೆಯಲ್ಲಿ  ನಡೆಸಲಾಯಿತು. ಘಟನೆ ಬಗ್ಗೆ ಬದಿಯಡ್ಕ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂ ಡಿದ್ದಾರೆ.  ಗೋಸಾಡ …

ಪದವಿ ವಿದ್ಯಾರ್ಥಿನಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪದವಿ ವಿದ್ಯಾರ್ಥಿನಿಯೋರ್ವೆ ಮನೆಯ  ಬೆಡ್‌ರೂಂನಲ್ಲಿ ಫ್ಯಾನ್‌ಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕಾಸರಗೋಡು ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮೀಪುಗುರಿ ಶೆಟ್ಟಿಗದ್ದೆಯ ಗಿರೀಶ್-ದೀಪಿಕಾ ದಂಪತಿಯ ಪುತ್ರಿ ಪ್ರತ್ಯೂಕ (19) ಸಾವಿಗೆ ಶರಣಾದ ವಿದ್ಯಾರ್ಥಿನಿ. ನಿನ್ನೆ ಮಧ್ಯಾಹ್ನ ವೇಳೆ ಪ್ರತ್ಯೂಕ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಪ್ಲಸ್‌ಟು ಬಳಿಕ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಮೂರು ದಿನಗಳ ಹಿಂದೆಯಷ್ಟೇ ಈಕೆ ಪದವಿ ಶಿಕ್ಷಣಕ್ಕೆ ಸೇರಿದ್ದಳು. ನಿನ್ನೆ ಈಕೆ ಕಾಲೇಜಿಗೆ …

ಕಾರು ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ: ಚಾಲಕನ ವಿರುದ್ಧ ಕೇಸು

ಮುಳ್ಳೇರಿಯ:   ಕಾರು ಢಿಕ್ಕಿ ಹೊಡೆದು ಇಬ್ಬರು ವಿದ್ಯಾರ್ಥಿಗಳು ಗಂಭೀರ ಗಾಯಗೊಂಡ ಘಟನೆಗೆ ಸಂಬಂಧಿಸಿ ಕಾರು ಚಾಲಕನ ವಿರುದ್ಧ ಆದೂರು ಪೊಲೀಸರು ಕೇಸು ದಾಖಲಿಸಿಕೊಂ ಡಿದ್ದಾರೆ. ನಿರ್ಲಕ್ಷ್ಯ ಹಾಗೂ ಅಜಾಗ್ರತೆಯಿಂದ ಅಪರಿಮಿತ ವೇಗದಲ್ಲಿ, ಮನುಷ್ಯ ಜೀವಕ್ಕೆ  ಅಪಾಯ ಉಂಟಾಗುವ  ರೀತಿಯಲ್ಲಿ ಕಾರು ಚಲಾಯಿಸಿರು ವುದಾಗಿ ಪ್ರಕರಣ ದಾಖಲಿಸಲಾಗಿದೆ.  ಕಳೆದ ಮಂಗಳವಾರ ಸಂಜೆ 4 ಗಂಟೆ ವೇಳೆ ಅಪಘಾತ ಸಂಭವಿಸಿದೆ. ಮುಳ್ಳೇರಿಯ ವಿವೇಕಾನಂದನಗರದ ಶ್ರೀಯಾನ್ (5), ದೀಕ್ಷಾ (17) ಎಂಬಿವರು ಗಾಯಗೊಂಡಿದ್ದು, ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸ ಲಾಗಿದೆ. ದೀಕ್ಷಾ ಮುಳ್ಳೇರಿಯ …