ಕುಂಬಳೆ ಪಂ.: ಐದು ವರ್ಷದ ಐಕ್ಯರಂಗದ ಸಾಧನೆ ಎಂದರೆ ಭ್ರಷ್ಟಾಚಾರ, ದುರ್ವಾಸನೆಯಿಂದ ಪೇಟೆಗೆ ಪ್ರವೇಶಿಸಲು ಸಾಧ್ಯವಾಗದಿರುವುದು-ಸಿ.ಎ. ಸುಬೈರ್
ಕುಂಬಳೆ: ಐಕ್ಯರಂಗದ 5 ವರ್ಷದ ಆಡಳಿತದಿಂದ ಸ್ಥಳೀಯರಿಗೆ ಕುಂಬಳೆ ಪೇಟೆಗೆ ಪ್ರವೇಶಿಸಲು ಸಾಧ್ಯವಾಗದ ಸ್ಥಿತಿ ಉಂಟಾಗಿದೆಯೆಂದು ಸಿಪಿಎಂ ಏರಿಯಾ ಕಾರ್ಯದರ್ಶಿ ಸಿ.ಎ. ಸುಬೈರ್ ಆರೋಪಿಸಿದರು. ಕುಂಬಳೆ ಪೇಟೆಯಲ್ಲಿ ನಾಲ್ಕು ಬಸ್ ತಂಗುದಾಣ ಕೇಂದ್ರಗಳನ್ನು ಸ್ಥಾಪಿಸಿ 39 ಲಕ್ಷ ರೂ.ಸ್ವಂತ ಜೇಬಿಗಿಳಿಸಿರುವುದಕ್ಕೆ ಪುರಾವೆ ಪೇಟೆಯ ಹೃದಯ ಭಾಗದಲ್ಲಿ ಮೂಕ ಸಾಕ್ಷಿಯಾಗಿ ನಿಂತಿದೆ. ಸಾವಿರ ಸ್ಕ್ವಾರ್ ಫೀಟ್ ವಿಸ್ತೀರ್ಣವಿರುವ ‘ಟೇಕ್ ಎ ಬ್ರೇಕ್’ನ ಹೆಸರಲ್ಲಿ 39 ಲಕ್ಷ ಗುಳುಂಕರಿಸಲಾಗಿದೆ. ಈ ಕಟ್ಟಡದಲ್ಲಿ ನೀರಿಲ್ಲ, ವಿದ್ಯುತ್ ಇಲ್ಲ. ಈ ಎರಡೂ ಕಟ್ಟಡಗಳ …