ಸ್ಕೂಟರ್‌ನ ಹಿಂಬದಿಗೆ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

ಕಾಸರಗೋಡು: ಸ್ಕೂಟರ್‌ನ ಹಿಂಬದಿಗೆ  ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು  ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಳನಾಡು ರೈಲ್ವೇ ನಿಲ್ದಾಣ ಸಮೀಪದ ಪಯೋಟ ಹೌಸ್‌ನ ಮುಹಮ್ಮದ್ ಅಶ್ರಫ್ ಪಯೋಟ (64) ಮೃತಪಟ್ಟ ವ್ಯಕ್ತಿ. ಇಂದು ಬೆಳಿಗ್ಗೆ 8ಗಂಟೆ ವೇಳೆ ಕೆಎಸ್‌ಟಿಪಿ ರಸ್ತೆಯ ಕಳನಾಡಿನಲ್ಲಿ ಅಪಘಾತ ಉಂಟಾಗಿದೆ. ಮುಹಮ್ಮದ್ ಅಶ್ರಫ್ ಉದುಮ ಭಾಗಕ್ಕೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಕಳನಾಡಿಗೆ ತಲುಪಿದಾಗ ಬಂದ ಕೆಎಸ್‌ಆರ್‌ಟಿಸಿ ಬಸ್ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದೆ.  ಗಂಭೀರ ಗಾಯಗೊಂಡ ಮುಹಮ್ಮದ್ ಅಶ್ರಫ್‌ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಗಲ್ಫ್ …

ಪತ್ನಿಯ ಮನೆಗೆ ಬಂದ ಯುವಕ ತೊಟ್ಟಿಲಿನ ಹಗ್ಗದಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಉಪ್ಪಳ: ಪತ್ನಿಯ ಮನೆಗೆ ಬಂದ ಯುವಕ ತೊಟ್ಟಿಲಿನ ಹಗ್ಗದಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ ಯಾಗಿದ್ದಾನೆ. ಕರ್ನಾಟಕದ ಬೆಳ್ತಂಗಡಿ ದಿಡುಪೆ ಸಿಂಗನಾರ್ ಎಂಬಲ್ಲಿನ  ದಿ| ಎಲ್ಯಣ್ಣ ಎಂಬವರ ಪುತ್ರ ಎಸ್.ಎ. ಸುರೇಶ್ (34) ಮೃತಪಟ್ಟ ವ್ಯಕ್ತಿ. ಎರಡು ದಿನಗಳ ಹಿಂದೆ ಸುರೇಶ್ ಬಾಯಾರು ಬಳಿ ಬಲಿಪಗುರಿ ಮೇಗಿನಪಂಜದಲ್ಲಿರುವ ಪತ್ನಿ ಮನೆಗೆ ಬಂದಿದ್ದರು. ನಿನ್ನೆ ಮಧ್ಯಾಹ್ನ   ಮನೆ ಕೊಠಡಿಗೆ ಹೋದ ಇವರು ದೀರ್ಘ ಹೊತ್ತಾದರೂ ಹೊರಗೆ ಬಾರದ ಹಿನ್ನೆಲೆಯಲ್ಲಿ ಮನೆಯವರು ನೋಡಿದಾಗ ಬಾಗಿಲು ಒಳಗಿನಿಂದ ಚಿಲಕ ಹಾಕಿದ …

ಜಿಎಸ್‌ಟಿ ಸುಧಾರಣೆ ವಿದ್ಯುಕ್ತವಾಗಿ ಜ್ಯಾರಿಗೆ: 36 ಜೀವ ಉಳಿಸುವ ಔಷಧಗಳಿಗೆ ತೆರಿಗೆ ಇಲ್ಲ; ಹಲವು ಸಾಮಗ್ರಿಗಳು ಇನ್ನು ಅಗ್ಗ

ನವದೆಹಲಿ: ನವರಾತ್ರಿಯ ಕೊಡುಗೆ ಎಂಬಂತೆ ಕೇಂದ್ರ ಸರಕಾರ ಕೈಗೊಂಡ ಅತೀ ಮಹತ್ತರ ತೀರ್ಮಾನವಾದ ಜಿಎಸ್‌ಟಿ (ಸರಕು ಸೇವಾ ತೆರಿಗೆ) ಸುಧಾ ರಣೆ (ಜಿಎಸ್‌ಟಿ -2.0) ದೇಶದಲ್ಲಿ ಇಂದಿನಿಂದ ವಿದ್ಯುಕ್ತವಾಗಿ ಜ್ಯಾರಿಗೆ ಬಂದಿದೆ. ಇದು ಮುಂದಿನ ಪೀಳಿಗೆಯ ಜಿಎಸ್‌ಟಿ ಸುಧಾರಣೆಗಳಾಗಿದೆ.  ಜಿಎಸ್‌ಟಿ ಬಚಾತ್ ಉತ್ಸವ (ಉಳಿತಾಯ ಹಬ್ಬ) ಎಂಬ ಇನ್ನೊಂದು ಹೆಸರಲ್ಲೂ ಇದನ್ನು ಜ್ಯಾರಿಗೊಳಿಸಲಾಗುತ್ತಿದೆ. ಇದರಂತೆ ಕ್ಯಾನ್ಸರ್, ಜೆನಿಟಿಕ್ ಮತ್ತು ಅಪರೂಪದ ಖಾಯಿಲೆಗಳು ಹಾಗೂ ಹೃದಯ ಸಂಬಂಧಿ ಖಾಯಿಲೆಗಳಿಗೆ ಸಂಬಂಧಿಸಿದ 36ನಿರ್ಣಾಯಕ ಜೀವ ಉಳಿಸುವ ಔಷಧಿಗಳ ಮೇಲೆ ಇನ್ನು …

ಯುವಕ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮಂಜೇಶ್ವರ: ಯುವಕನೋರ್ವ ಮನೆಯೊಳಗೆ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾನೆ. ಮಂಜೇಶ್ವರ ಪಾವೂರು ಚೌಕಿಯ ದಿ| ಡ್ಯಾನಿಯಲ್ ಗೋವಿಯಸ್‌ರ ಪುತ್ರ ಪ್ರವೀಣ್ ಗೋವಿಯಸ್ (41) ಮೃತಪಟ್ಟ ವ್ಯಕ್ತಿ. ಶನಿವಾರ ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಫ್ಯಾನ್‌ಗೆ ಇವರು ಸೀರೆ ಉಪಯೋಗಿಸಿ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅದನ್ನು ಕಂಡ ಮನೆಯವರು ಅವರನ್ನು ತೂಮಿನಾಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ.  ಮೃತರು ತಾಯಿ ಸ್ಟೆಲ್ಲಾ, ಪತ್ನಿ ಪ್ರಮಿಳಾ, ಪುತ್ರ ಪ್ರವೀಶ್, ಸಹೋದರಿ ಪ್ಲೇವಿ ಹಾಗೂ …

ಶಬರಿಮಲೆ ಸಂರಕ್ಷಣಾ ಸಂಗಮಕ್ಕೆ ಚಾಲನೆ

ಪಂದಳಂ: ಪಂಪಾದಲ್ಲಿ ತಿರುವಿದಾಂಕೂರ್ ಮುಜರಾಯಿ ಮಂಡಳಿ ನೇತೃತ್ವದಲ್ಲಿ ಮೊನ್ನೆ ನಡೆದ ಜಾಗತಿಕ ಅಯ್ಯಪ್ಪ ಸಂಗಮ ಕಾರ್ಯಕ್ರಮದ ಬೆನ್ನಲ್ಲೇ, ಶಬರಿಮಲೆ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಆಯೋಜಿಸಲಾದ ಶಬರಿಮಲೆ ಸಂರಕ್ಷಣಾ ಸಂಗಮ ಪಂದಳಂನಲ್ಲಿ ಇಂದು ಬೆಳಿಗ್ಗೆ ವಿದ್ಯುಕ್ತವಾಗಿ ಆರಂಭಗೊಂಡಿದೆ. ಸಹಸ್ರಾರು ಮಂದಿ ಇದರಲ್ಲಿ ಭಾಗವಹಿಸುತ್ತಿದ್ದಾರೆ. ಪಂದಳಂ ನಾನಾಕ್ ಕನ್ವೆನ್ಶನ್ ಸೆಂಟರ್‌ನಲ್ಲಿ ಇಂದು ಬೆಳಿಗ್ಗೆ ಆರಂಭಗೊಂಡ ಶಬರಿಮಲೆ ಸಂರಕ್ಷಣಾ ಕಾರ್ಯಕ್ರಮವನ್ನು ವಾಳೂರು ತೀರ್ಥಪಾದಾಶ್ರಮದ ಸ್ವಾಮೀಜಿ ಪ್ರಜ್ಞಾನಂದ ತೀರ್ಥಪಾದರು ಉದ್ಘಾಟಿಸಿದರು. ಶಬರಿಮಲೆ ಸಂರಕ್ಷಣಾ ಕ್ರಿಯಾ ಸಮಿತಿ ಅಧ್ಯಕ್ಷೆ ಕೆ.ಪಿ. ಶಶಿಕಲ ಟೀಚರ್ ಅಧ್ಯಕ್ಷತೆ …

12 ದ್ವಿಚಕ್ರ ವಾಹನಗಳು, ಸಿಗ್ನಲ್ ಲೈಟ್‌ಗಳು ನಜ್ಜುಗುಜ್ಜು; ತಪ್ಪಿದ ಭಾರೀ ದುರಂತ

ಕಾಸರಗೋಡು: ಸರಕು ಲಾರಿ ಯೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ ಸೇರಿದಂತೆ 12 ದ್ವಿಚಕ್ರವಾಹನಗಳು ಮತ್ತು ಸಿಗ್ನಲ್ ಲೈಟುಕಂಬಗಳಿಗೆ ಢಿಕ್ಕಿ ಹೊಡೆದು ಅವುಗಳನ್ನು ನಜ್ಜುಗುಜ್ಜುಗೊಳಿಸಿದ ಘಟನೆ ಮೊಗ್ರಾಲ್ ಪುತ್ತೂರಿಗೆ ಸಮೀಪದ ಎರಿಯಾಲ್ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಡರ್ ಪ್ಯಾಸೇಜ್ ಬಳಿ ನಿನ್ನೆ ಬೆಳಿಗ್ಗೆ ನಡೆದಿದೆ. ಈ ಅಪಘಾತದ ವೇಳೆ ಆ ರಸ್ತೆಯಲ್ಲಿ ಯಾರೂ ಇಲ್ಲದೇ ಇದ್ದುದರಿಂದಾಗಿ ಸಂಭಾವ್ಯ ಭಾರೀ ದೊಡ್ಡ ಅನಾಹುತ ಅದೃಷ್ಟವಶಾತ್ ತಪ್ಪಿ ಹೋಗಿದೆ. ಕರ್ನಾಟಕದ ಹುಬ್ಬಳ್ಳಿ ಯಿಂದ ಸರಕು ಹೇರಿಕೊಂಡು …

ಮನೆ ನಿರ್ಮಾಣ ಕಾಮಗಾರಿ ವೇಳೆ ಬಿದ್ದು ಕಾರ್ಮಿಕ ಮೃತ್ಯು

ಕುಂಬಳೆ:  ಮನೆ ನಿರ್ಮಾಣ ಕಾಮಗಾರಿ ವೇಳೆ ಎರಡನೇ ಮಹಡಿಯಿಂದ ಬಿದ್ದು ಸೆಂಟ್ರಿಂಗ್ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಕುಂಬಳೆ ಶೇಡಿಕಾವು ನಿವಾಸಿ ಶಂಕರ್ ಯಾನೆ ಗಂಗು (52) ಮೃತಪಟ್ಟ ದುರ್ದೈವಿ. ಶನಿವಾರ ಮಧ್ಯಾಹ್ನ ೨ ಗಂಟೆ ವೇಳೆ ನಾರಾಯಣಮಂಗಲದಲ್ಲಿ  ಎರಡಂತಸ್ತಿನ ಮನೆ ನಿರ್ಮಾಣ ಕಾಮಗಾರಿ ವೇಳೆ ಘಟನೆ ಸಂಭವಿಸಿದೆ. ಕೆಳಕ್ಕೆ ಬಿದ್ದ ಶಂಕರ್‌ರನ್ನು ಇತರ ಕಾರ್ಮಿಕರು ಕೂಡಲೇ ಕುಂಬಳೆಯ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ದಿ| ನಾರಾಯಣ ಶೆಟ್ಟಿ-ನಮ್ಮಕ್ಕ ದಂಪತಿಯ ಪುತ್ರನಾದ ಮೃತರು ಸಹೋದರ-ಸಹೋದರಿಯರಾದ …

ವ್ಯಕ್ತಿ ಸಮುದ್ರ ಕಿನಾರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕುಂಬಳೆ: ಮುಟ್ಟಂ ಬೇರಿಕೆ ಕಡಪ್ಪುರದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.  ಮಂಡೆಕಾಪು ಕುಡಾಲುಮೇರ್ಕಳದ ದಿ| ಮದನ ಮೂಲ್ಯ-ಕಮಲ ದಂಪತಿಯ ಪುತ್ರ ಎನ್. ಗೋಪಾಲ ಯಾನೆ ದೇವು (47) ಮೃತಪಟ್ಟ ವ್ಯಕ್ತಿ. ಶನಿವಾರ ಮಧ್ಯಾಹ್ನ ಇವರ ಮೃತದೇಹ ಕಡಪ್ಪುರದಲ್ಲಿ ಕಂಡುಬಂದಿತ್ತು. ಕೂಲಿ ಕಾರ್ಮಿಕನಾದ ದೇವು ಕಳೆದ 15 ವರ್ಷಗಳಿಂದ ಬಂದ್ಯೋಡಿನ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದರು. ಮೃತರು ಸಹೋದರ-ಸಹೋದರಿಯರಾದ ಸುಂದರ, ಸಂಜೀವ, ಗಿರಿಜ, ದೇವಕಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜಿಗೆ ಹಾನಿ

ಉಪ್ಪಳ: ಮನೆ ಶೆಡ್‌ನಲ್ಲಿ ನಿಲ್ಲಿಸಿದ್ದ ಕಾರಿನ ಗಾಜು ಹಾನಿಗೊಳಿಸಿದ ಘಟನೆ ನಡೆದಿದೆ. ಮಂಜೇಶ್ವರ ಬಪ್ಪಾಯಿ ತೊಟ್ಟಿ ರಸ್ತೆಯ ಇ.ಎಂ. ಸೈನುದ್ದೀನ್‌ರ ಕಾರಿನ ಹಿಂಭಾಗದ ಗಾಜನ್ನು ಕಿಡಿಗೇಡಿಗಳು ಹಾನಿಗೊಳಿಸಿದ್ದಾರೆ. ಇದರಿಂದ 15 ಸಾವಿರ ರೂ.ಗಳ ನಷ್ಟ ಉಂಟಾಗಿರುವುದಾಗಿ ದೂರಲಾಗಿದೆ. ಶುಕ್ರವಾರ ರಾತ್ರಿ 11.30ರ ವೇಳೆ ಈ ಘಟನೆ ನಡೆದಿದ್ದು, ಈ ಬಗ್ಗೆ ಸೈನುದ್ದೀನ್ ನೀಡಿದ ದೂರಿನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.

ಬಾವಿಗೆ ಬಿದ್ದ ಕುಬ್ಜ ತಳಿಯ ದನದ ರಕ್ಷಣೆ

ಪೆರ್ಲ: ಬಾವಿಗೆ ಬಿದ್ದ ಕುಬ್ಜ ತಳಿಗೆ ಸೇರಿದ ದನವನ್ನು ಅಗ್ನಿಶಾಮಕ ದಳದವರು ಮೇಲ ಕ್ಕೆತ್ತಿ ರಕ್ಷಿಸಿದ ಘಟನೆ ಕಾಟುಕುಕ್ಕೆ ಬಳಿ ನಿನ್ನೆ ನಡೆದಿದೆ. ಕಾಟುಕುಕ್ಕೆ ಕಾಂತಾರಿ ಎಂಬಲ್ಲಿನ 31 ಅಡಿ ಆಳದ ಹಾಗೂ ಸುಮಾರು 20 ಅಡಿ ನೀರು ತುಂಬಿದ ಕಟ್ಟೆಯಿಲ್ಲದ ಉಪಯೋ ಗಶೂನ್ಯ ಬಾವಿಗೆ ನಿನ್ನೆ ಬೆಳಿಗ್ಗೆ 10 ಗಂಟೆಗೆ ಈ ದನ ಬಿದ್ದಿದೆ. ತಕ್ಷಣ ಊರವರು ನೀಡಿದ ಮಾಹಿತಿಯಂತೆ ಕಾಸರಗೋಡು ಅಗ್ನಿಶಾಮಕ ದಳದ ಸೀನಿಯರ್ ಫಯರ್ ಆಂಡ್ ರೆಸ್ಕ್ಯೂಂ ಆಫೀಸರ್ ವಿ.ಎನ್. ವೇಣುಗೋಪಾಲ್‌ರ ನೇತೃತ್ವದಲ್ಲಿ …