ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾರ್ಮಿಕರ ಮಧ್ಯೆ ಘರ್ಷಣೆ ಇಬ್ಬರಿಗೆ ಇರಿತ; ಆರೋಪಿಗಳೆನ್ನಲಾದ ತಂದೆ, ಪುತ್ರ ನಾಪತ್ತೆ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿಗಾಗಿ ತಲುಪಿದ ಕಾರ್ಮಿಕರ ಮಧ್ಯೆ ನಡೆದ ಘರ್ಷಣೆಯಲ್ಲಿ ಇಬ್ಬರಿಗೆ ಇರಿತ ಉಂಟಾಗಿದೆ. ಮೇಘ ಕನ್ಸ್ಟ್ರಕ್ಷನ್ ಕಂಪೆನಿಯ ಮೈಲಾಟಿಯಲ್ಲಿರುವ ಲೇಬರ್ ಕ್ಯಾಂಪ್ನಲ್ಲಿ ನಿನ್ನೆ ಸಂಜೆ ಘರ್ಷಣೆ ನಡೆದಿದೆ. ಉತ್ತರ ಭಾರತ ನಿವಾಸಿಗಳಾದ ಯತಿವೀಂದರ್ ಸಿಂಗ್, ಗುರ್ಬಾ ಸಿಂಗ್ ಎಂಬಿವರು ಇರಿತದಿಂದ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನನ್ನು ಮಂಗಳೂರಿನ ಆಸ್ಪತ್ರೆಯಲ್ಲೂ, ಇನ್ನೋರ್ವನನ್ನು ಕಾಞಂಗಾಡ್ನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಕಾರ್ಮಿಕರ ಮಧ್ಯೆ ನಡೆದ ವಾಗ್ವಾದವೇ ಘರ್ಷಣೆಯಲ್ಲಿ ಕೊನೆಗೊಂಡಿದೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿದು ಬೇಕಲ ಪೊಲೀಸರು ಸ್ಥಳಕ್ಕೆ …