ಜನರ ಹೃದಯದಿಂದ ದೂರವಾದ ಎಡರಂಗ- ಜೆ.ಎಸ್. ಸೋಮಶೇಖರ್
ಉಪ್ಪಳ: ಮಂಗಲ್ಪಾಡಿ ಮಂಡಲ ಕಾಂಗ್ರೆಸ್ ಸಮಿತಿ ಸಭೆಯನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ್ ಜೆ.ಎಸ್. ಉದ್ಘಾಟಿಸಿದರು. ಅವರು ಮಾತನಾಡಿ, ಕೋಮುಶಕ್ತಿಗಳ ಬೆಂಬಲದೊಂದಿಗೆ ಕೀಳುತಂತ್ರದ ಮೂಲಕ ಅಧಿಕಾರಕ್ಕೇರಿದ ಎಡರಂಗ ಜನರ ಹೃದಯದಿಂದ ಶಾಶ್ವತವಾಗಿ ಮರೆಯಾಗುವ ಹಂತದಲ್ಲಿದೆ. ಕಾರ್ಮಿಕರು, ಕೃಷಿಕರು, ಭೂರಹಿತರು ಮುಂತಾದವರಿಗಾಗಿ ಹೋರಾಟ ನಡೆಸುತ್ತಿದ್ದ ಸಿಪಿಎಂ ಈಗ ಶೋಷಕರಾಗಿ ಮಾರ್ಪಟ್ಟದ್ದು ವಿಷಾದನೀಯವೆಂದು ಅವರು ನುಡಿದರು. ಸಿಪಿಎಂ ಹಾಗೂ ಬಿಜೆಪಿಯನ್ನು ತೊರೆದು ಕಾಂಗ್ರೆಸ್ಗೆ ಸೇರ್ಪಡೆಯಾಗು ತ್ತಿರುವುದು ಕಾಂಗ್ರೆಸ್ನ ಉಚ್ಛ್ರಾಯ ಸ್ಥಿತಿಗೆ ಉದಾಹರಣೆಯಾಗಿದೆ ಎಂದು ಅವರು ನುಡಿದರು. ಸಿಪಿಎಂ ಕಾರ್ಯಕರ್ತರಾದ …