ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಮುಖಮಂಟಪ ಲೋಕಾರ್ಪಣೆ, ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ನಾಳೆ
ಬದಿಯಡ್ಕ: ಅಗಲ್ಪಾಡಿ ಶ್ರೀ ಗೋಪಾಲಕೃಷ್ಣ ಭಜನ ಮಂದಿರದ ನೂತನ ಮುಖಮಂಟಪ ಲೋಕಾರ್ಪಣೆ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಮಹೋತ್ಸವ ನಾಳೆ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ. ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ವಿವಿಧ ಸರ್ಧೆಗಳು ಜರಗಲಿವೆ. ನಾಳೆ ಬೆಳಿಗ್ಗೆ 7ರಿಂದ ಸಂಗೀತಾರ್ಚನೆ, 8 ಗಂಟೆಗೆ ದ್ವಾದಶ ನಾಳೀಕೇರ ಶ್ರೀ ಮಹಾಗಣಪತಿ ಹೋಮ, ಧಾರ್ಮಿಕ ಮುಂದಾಳು ಬಿ.ವಸಂತ ಪೈ ಬದಿಯಡ್ಕ ಅವರಿಂದ ದೀಪಪ್ರಜ್ವಲನೆ, 8.30ಕ್ಕೆ ಪೂಜೆ, 8.35ರಿಂದ ಚಪ್ಪರ ಮದುವೆ, 8.40ರಿಂದ ತುಳಸಿಹಾರ ನೇಯುವ ಸ್ಪರ್ಧೆ ಮಹಿಳೆಯರಿಗೆ, …