ಪುದುಕೋಳಿ ರುದ್ರಭೂಮಿಯಲ್ಲಿ ಕಟ್ಟಡ ನಿರ್ಮಾಣ, ತ್ಯಾಜ್ಯ ಸಂಗ್ರಹ: ಪ್ರತಿಭಟನಾನಿರತರಿಗೆ ಅಧಿಕಾರಿಗಳಿಂದ ಪರಿಹಾರ ಭರವಸೆ
ಬದಿಯಡ್ಕ: ಮನುಷ್ಯರ ಮರಣ ಬಳಿಕ ನಡೆಸುವ ಅಂತ್ಯ ಕಾರ್ಯಗಳಿಗೂ ಪುದುಕೋಳಿ ನಿವಾಸಿಗಳು ಹೋರಾಟ ನಡೆಸಬೇಕಾದ ಸ್ಥಿತಿ ಉಂಟಾಗಿದೆ. ನೀರ್ಚಾಲು ಸಮೀಪದ ಪುದುಕೋಳಿಯಲ್ಲಿ ದಶಕಗಳಿಂದ ಕಾರ್ಯಾಚರಿಸುತ್ತಿರುವ ಹಿಂದೂ ರುದ್ರಭೂಮಿಯನ್ನು ಕಬಳಿಸುವ ಯತ್ನ ಆರಂಭಗೊಂಡಿದೆ ಎಂದು ಆರೋಪಿಸಿ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬದಿಯಡ್ಕ ಪಂ. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರಲ್ಲಿ ಮಾತುಕತೆ ನಡೆಸಿ ರುದ್ರಭೂಮಿ ಅಭಿವೃದ್ಧಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಬದಿಯಡ್ಕ ಪಂ. ವ್ಯಾಪ್ತಿಯ ಮಾನ್ಯ, ನೀರ್ಚಾಲು, ಪೆರಡಾಲ, ಕಾರ್ಮಾರು, ಬೇಳ, ಕನ್ನೆಪ್ಪಾಡಿ, ತಲ್ಪಣಾಜೆ, …