ರಾಜ್ಯ ಬಜೆಟ್ ನಾಳೆ ಮಂಡನೆ: ಹಲವು ಮಹತ್ತರ ಜನಕಲ್ಯಾಣ ಯೋಜನೆಗಳ ಘೋಷಣೆ ಸಾಧ್ಯತೆ
ತಿರುವನಂತಪುರ: ಪಿಣರಾಯಿ ವಿಜಯನ್ ನೇತೃತ್ವದ ಎರಡನೇ ಸರಕಾರದ ಕೊನೆಯ ಬಜೆಟ್ನ್ನು ವಿಧಾನಸಭೆಯಲ್ಲಿ ರಾಜ್ಯ ಹಣಕಾಸು ಸಚಿವ ಕೆ.ಎನ್. ಬಾಲಗೋಪಾಲನ್ ನಾಳೆ ಬೆಳಿಗ್ಗೆ 9ಕ್ಕೆ ಮಂಡಿಸುವರು. ಇದು 2026-27ನೇ ಆರ್ಥಿಕ ವರ್ಷದ ಬಜೆಟ್ ಆಗಿದೆ. ರಾಜ್ಯ ವಿಧಾನಸಭೆಗೆ ಎಪ್ರಿಲ್ನಲ್ಲಿ ಚುನಾವಣೆ ನಡೆಯಲಿರುವ ಸಾಧ್ಯತೆಯನ್ನು ಮುಂದಕ್ಕೆ ಕಂಡುಕೊಂಡು ಜನರನ್ನು ತಮ್ಮತ್ತ ಆಕರ್ಷಿಸುವಂತೆ ಮಾಡಲು ಹಲವು ಜನಕಲ್ಯಾಣ ಯೋಜನೆಗಳನ್ನು ಬಜೆಟ್ನಲ್ಲಿ ಘೋಷಿಸುವ ಸಾಧ್ಯತೆ ಇದೆ. ಕೇಂದ್ರ ಬಜೆಟ್ ಮಂಡನೆಯ ಮೊದಲೇ ಈ ಬಾರಿ ರಾಜ್ಯ ಬಜೆಟ್ ಮಂಡಿಸಲಾಗುತ್ತಿದೆ ಎಂಬ ವಿಶೇಷತೆಯೂ ಇದಕ್ಕಿದೆ. …
Read more “ರಾಜ್ಯ ಬಜೆಟ್ ನಾಳೆ ಮಂಡನೆ: ಹಲವು ಮಹತ್ತರ ಜನಕಲ್ಯಾಣ ಯೋಜನೆಗಳ ಘೋಷಣೆ ಸಾಧ್ಯತೆ”