ಅಪಾಯಕಾರಿ ರೀತಿಯಲ್ಲಿ ಸಂಚರಿಸಿದ ಥಾರ್‌ಜೀಪು ತಡೆದು ನಿಲ್ಲಿಸಿದ ನಾಗರಿಕರು :ಮದ್ಯದಮಲಿನಲ್ಲಿದ್ದ ಚಾಲಕ ಕಸ್ಟಡಿಗೆ

ಕಾಸರಗೋಡು: ಮದ್ಯದ ಅಮಲಿ ನಲ್ಲಿ  ಅಪಾಯಕರ ರೀತಿಯಲ್ಲಿ ಥಾರ್‌ಜೀಪು  ಚಲಾಯಿಸಿದ ವ್ಯಕ್ತಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿ ದ್ದಾರೆ. ತಮಿಳುನಾಡಿನ ಧರ್ಮಪುರಿ ನಿವಾಸಿ ಬಿ. ಶ್ಯಾಮ್‌ರಾಜ್ (55) ಎಂಬಾತ ಪೊಲೀಸ್ ಕಸ್ಟಡಿಯಲ್ಲಿರುವ ವ್ಯಕ್ತಿ.  ಎದ್ದು ನಿಲ್ಲಲು ಕೂಡಾ ಸಾಧ್ಯವಾಗದ ರೀತಿಯಲ್ಲಿ  ಈತ ಮದ್ಯದಮಲಿ ನಲ್ಲಿದ್ದನು. ನಿನ್ನೆ ಸಂಜೆ ಈತ ಅಪರಿಮಿತ ವೇಗದಲ್ಲಿ ಜೀಪು ಚಲಾಯಿಸುತ್ತಿದ್ದನೆನ್ನಲಾಗಿದೆ. ಜೀಪಿನ ಒಂದು ಟಯರ್ ಹಾನಿಗೀಡಾದ  ಸ್ಥಿತಿಯಲ್ಲಿತ್ತು. ಇದು ಗಮನಕ್ಕೆ ಬಂದ ನಾಗರಿಕರು ಪರಪ್ಪ ಶಾಲೆ ಸಮೀಪ ಜೀಪನ್ನು ತಡೆದು ನಿಲ್ಲಿಸಿದ್ದಾರೆ. ಬಳಿಕ ನಾಗರಿಕರು …

ಬಿಜೆಪಿಯಿಂದ ಗುರುನಮನ

ಮಂಜೇಶ್ವರ: ಬಿಜೆಪಿ ಮಂಜೇಶ್ವರ ಮಂಡಲ ಹಾಗೂ ಪಂಚಾಯತ್ ಸಮಿತಿ ನೇತೃತ್ವದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗುರುಗಳಾಗಿ ಮಾರ್ಗದರ್ಶನ ಮಾಡಿದ, ಮಾಡುತ್ತಿರುವ ಗುರುಗಳನ್ನು ಗುರು ಪೂರ್ಣಿಮೆ ಪ್ರಯುಕ್ತ ಗೌರವಿಸಲಾಯಿತು.ಭರತನಾಟ್ಯ ಗುರು ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ, ಉಳುವಾನ ಶಂಕರ ಭಟ್, ರಾಘವ ಮಾಸ್ಟರ್ ಬೆರಿಪದವು, ಆನಂದ ಮಾಸ್ಟರ್ ತೂಮಿನಾಡು, ಬಾಯರು ರಮೇಶ್ ಶೆಟ್ಟಿ, ಸಂಜೀವ ಶೆಟ್ಟಿ ಮಾಡ, ಲಲಿತ ಟೀಚರ್, ರಾಮಚಂದ್ರ ಆಚಾರ್ಯ, ಚಂದ್ರಶೇಖರ ನಾಯಕ್, ಜೋಕಿಮ್ ಮೊಂತೇರೊ, ವಸಂತ ಭಟ್, ರಾಧಾಕೃಷ್ಣ ಶೆಟ್ಟಿ, ಪುಷ್ಪರಾಜ್ ಶೆಟ್ಟಿ ಮೊದಲಾದವರನ್ನು ಸನ್ಮಾನಿಸಿ ಗುರು …

ಕಾಸರಗೋಡು ರೈಲ್ವೇ ಪಾರ್ಸೆಲ್ ಕಚೇರಿ ಮುಂದುವರಿಕೆ: ಅಧಿಕಾರಿಗಳ ಭರವಸೆ

ಕಾಸರಗೋಡು: ಕಾಸರಗೋಡು ರೈಲ್ವೇ ಪಾರ್ಸೆಲ್ ಕಚೇರಿ ಇದೀಗಿನ ರೀತಿಯಲ್ಲೇ ಮುಂದುವರಿಯಲಿದೆಯೆಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.  ರೈಲ್ವೇ ಡಿವಿಶನ್ ಮೆನೇಜರ್ ಮಧುಕರ ರೌತ್, ಎಡಿಆರ್‌ಎಂ ಮುಹಮ್ಮದ್ ಇಸ್ಲಾಂ, ಸೀನಿಯರ್ ಡಿವಿಶನ್ ಕಮರ್ಶಿಯಲ್ ಮೆನೇಜರ್ ಬಾಲಮುರುಗನ್, ಮಿಥುನ್, ಶೈಲೇಶ್ ಕುಮಾರ್ ಎಂಬಿವರು ಕಾಸರಗೋಡು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ  ಪ್ಯಾಸೆಂಜರ್ಸ್ ಅಸೋಸಿಯೇಶನ್  ವಿವಿಧ ಬೇಡಿಕೆ  ಮುಂದುವರಿಸಿ ಮನವಿ ಸಲ್ಲಿಸಿದ್ದು,   ಮನವಿಯನ್ನು ಸ್ವೀಕರಿಸಿದ ಅಧಿಕಾರಗಳು ಪಾರ್ಸೆಲ್ ಕಚೇರಿ ಮುಂದುವರಿಸುವ  ಬಗ್ಗೆ ಭರವಸೆ ನೀಡಿದ್ದಾರೆ. ಸಂಜೆ ಹೊತ್ತಿನಲ್ಲಿ ಕಲ್ಲಿಕೋಟೆಯಿಂದ ಕಣ್ಣೂರುವರೆಗೆ …

ಅಭಿಭಾಷಕ ಪರಿಷತ್‌ನಿಂದ ಗುರುವಂದನೆ

ಕಾಸರಗೋಡು: ಗುರು ಪೂರ್ಣಿಮೆಯಂದು ಭಾರತೀಯ ಅಭಿಭಾಷಕ ಪರಿಷತ್ ಕಾಸರಗೋಡು ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ಗುರುವಂದನಾ ಕಾರ್ಯಕ್ರಮ ವನ್ನು ಏರ್ಪಡಿಸಲಾಯಿತು. ಕಾಸರಗೋಡಿನ ಹಿರಿಯ ವಕೀಲರಾದ ಐ.ವಿ. ಭಟ್ ಹಾಗೂ ಅಡೂರು ಉಮೇಶ್ ನಾಯï್ಕರನ್ನು ಅವರ ನಿವಾಸಗಳಿಗೆ ತೆರಳಿ ಗೌರವಿಸಲಾಯಿತು. ಅಭಿಭಾಷಕ ಪರಿಷತ್ ರಾಜ್ಯ ಉಪಾಧ್ಯಕ್ಷ ಅಡ್ವಕೇಟ್ ಬಿ. ರವೀಂದ್ರನ್, ಜಿಲ್ಲಾ ಅಧ್ಯಕ್ಷ ಅಡ್ವಕೇಟ್ ಎ.ಸಿ ಅಶೋಕ್ ಕುಮಾರ್, ಜಿಲ್ಲಾ ಕಾರ್ಯದರ್ಶಿ ಅಡ್ವಕೇಟ್ ನವೀನ್ ರಾಜ್, ಅಡ್ವಕೇಟ್ ಕರುಣಾ ಕರ ನಂಬಿಯಾರ್ ಮಾತನಾಡಿದರು. ರಾಜೇಶ್, ವಕೀಲರಾದ ಪ್ರಕಾಶ್ ರಾವ್, ಜಾಹ್ನವಿ …

ಎನ್‌ಫೋರ್ಸ್‌ಮೆಂಟ್ ಸ್ಕ್ವಾಡ್‌ನಿಂದ  ತ್ಯಾಜ್ಯ ನೀತಿ ಉಲ್ಲಂಘನೆ ಪತ್ತೆ: ದಂಡ ವಸೂಲಿ

ಕಾಸರಗೋಡು:  ಸ್ಥಳೀಯಾ ಡಳಿತ ಇಲಾಖೆಯ ಜಿಲ್ಲಾ ಎನ್ಫೋರ್ಸ್‌ಮೆಂಟ್ ಸ್ಕ್ವಾಡ್ ವಿವಿಧ ಸ್ಥಳೀಯಾಡಳಿತ ಸಂಸ್ಥೆ ವ್ಯಾಪ್ತಿಯಲ್ಲಿ ನಡೆಸಿದ ತಪಾಸಣೆಗಳಲ್ಲಿ ತ್ಯಾಜ್ಯ ಸಂಸ್ಕರಣೆ ವಲಯದ ಕಾನೂನು ಉಲ್ಲಂಘನೆಗಳನ್ನು ಪತ್ತೆಹಚ್ಚಿ ದಂಡ ಹೇರಿದೆ. ದೇಲಂಪಾಡಿ ಪಂಚಾಯತ್‌ನ ಅಡೂರ್‌ನಲ್ಲಿರುವ ಸ್ಟೋರ್, ಹೋಟೆಲ್, ಮಾರ್ಟ್ ಎಂಬೀ ಸಂಸ್ಥೆಗಳಲ್ಲೂ, ಬದಿಯಡ್ಕದ ಅಪಾರ್ಟ್‌ಮೆಂಟ್‌ನಲ್ಲೂ, ಮಧೂರಿನ ಪಟ್ಲ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲೂ ಅವೈಜ್ಞಾನಿಕವಾಗಿ ತ್ಯಾಜ್ಯ ಸಂಸ್ಕರಣೆ ನಡೆಸಿರುವುದನ್ನು ಪತ್ತೆಹಚ್ಚಿದ ಹಿನ್ನೆಲೆಯಲ್ಲಿ 2೦,೦೦೦ ರೂ. ದಂಡ ಹೇರಲಾಗಿದೆ. ಕುಂಬಳೆಯ ರಸ್ತೆಯಲ್ಲಿ ಕೆರೆ ನಿರ್ಮಿಸಿ ಅದಕ್ಕೆ ತ್ಯಾಜ್ಯವನ್ನು ತಂದು ಹಾಕಲು …

ಕಟ್ಟೆ ಬಜಾರ್ ತಿರುವಲ್ಲಿ ಅಪಘಾತ ಭೀತಿ ಬಾಯ್ದೆರೆದ ಚರಂಡಿ ದುರಸ್ತಿಗೊಳಿಸಲು ಒತ್ತಾಯ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಬಂಗ್ರ ಮಂಜೇಶ್ವರ ರಸ್ತೆಯ ಕಟ್ಟೆಬಜಾರ್ ತಿರುವು ವಾಹನ ಸವಾರರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಈ ತಿರುವಿನ ಇಕ್ಕೆಡೆಗಳಲ್ಲಿ ರಸ್ತೆಗೆ ತಾಗಿಕೊಂಡು ತೆರೆದ ಸ್ಥಿತಿಯಲ್ಲಿರುವ ಚರಂಡಿ ವಾಹನ ಸವಾರರಲ್ಲಿ ಆತಂಕ ವನ್ನುಂಟುಮಾಡಿದೆ. ಮಂಜೇಶ್ವರ ಭಾಗದಿಂದ ಹೊಸಂಗಡಿ ಕಡೆಗೆ ಸಂಚರಿಸುವಾಗ ತಿರುವಿನಲ್ಲಿ ಎದುರಿನಿಂದ ಬರುವ ವಾಹನಕ್ಕೆ ಸೈಡು ನೀಡುವ ವೇಳೆ ಚರಂಡಿಗೆ ಬಿದ್ದು ಅಪಘಾತಕ್ಕೆ ಕಾರಣವಾಗುತ್ತಿದೆ. ಕೆಲವರು ಕೂದಲೆಳೆ ಅಂತರದಿAದ ಪಾರಾಗಿದ್ದಾರೆ. ಈ ಪರಿಸರದಲ್ಲಿ ಚರಂಡಿಯಲ್ಲಿ ಗಿಡ, ಪೊದೆಗಳು ತುಂಬಿ ಚರಂಡಿ ಗಮನಕ್ಕೆ ಬಾರದೆ ಇನ್ನಷ್ಟು …

ಹಿಂದೂ ಸಮಾಜ ಸೌಹಾರ್ದ ವೇದಿಕೆಯ  ರಾಜ್ಯ ಸಮ್ಮೇಳನ ಯಶಸ್ವಿಗೆ ಕರೆ

ಮಂಜೇಶ್ವರ: ಆಗಸ್ಟ್ ೮ರಂದು ಗುರುವಾಯೂರಿನಲ್ಲಿ ನಡೆಯಲಿರುವ ಹಿಂದೂ ಸಮಾಜ ಸೌಹಾರ್ದ ವೇದಿಕೆಯ ರಾಜ್ಯ ಸಮ್ಮೇಳನವನ್ನು ಯಶಸ್ವಿಗೊಳಿಸುವ ಕುರಿತು ಜಿಲ್ಲಾ ಸಮಿತಿ ಸಭೆ ಮಂಜೇಶ್ವರದಲ್ಲಿ ನಡೆಯಿತು. ಸಮ್ಮೇಳನವನ್ನು ಯಶಸ್ವಿಗೊಳಿಸಲು ಜಿಲ್ಲೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಬೇಕು ಎಂದು ಸಭೆಯಲ್ಲಿ ಕರೆ ನೀಡಲಾಯಿತು. ಹಿಂದುಳಿದ ವರ್ಗಗಳ, ಸಮುದಾಯಗಳ ಹಕ್ಕುಗಳು ಮತ್ತು ನ್ಯಾಯಸಮ್ಮತ ಬೇಡಿಕೆಗಳ ಕುರಿತು ಚರ್ಚಿಸಲಾಯಿತು. ಹಿಂದುಳಿದ ವರ್ಗಗಳ ಹಕ್ಕುಗಳಿಗಾಗಿ ಸಂಘಟಿತವಾಗಿ ಹೋರಾಟ ನಡೆಸುವ ಅಗತ್ಯವಿದೆ ಎಂದು ಸಭೆ ಅಭಿಪ್ರಾಯಪಟ್ಟಿತು. ಹಿಂದುಳಿದ ವರ್ಗಗಳಿಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು …

ಕಮಲ ರೈ ನಿಧನ

ಮುಳ್ಳೇರಿಯ: ಆದೂರು ಕಾನಕ್ಕೋಡು ನಿವಾಸಿ ನಾರಾಯಣ ರೈ ಅವರ ಪತ್ನಿ ಕಮಲ ರೈ (೬೮) ನಿಧನ ಹೊಂದಿದರು. ಮೃತರು ಪತಿ, ಮಕ್ಕಳಾದ ಕರುಣಾಕರ್ ರೈ, ಸುಮಿತ್ರ, ಸ್ವರ್ಣಲತ, ಅಳಿಯಂದಿರಾದ ದಿನೇಶ್ ಚೌಟ, ಪ್ರಶಾಂತ್ ಭಂಡಾರಿ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಎಡನೀರು ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ

ಬದಿಯಡ್ಕ: ವರ್ತಮಾನದ ತಲ್ಲಣಗಳಿಗೆ ಕಾರಣಗಳನ್ನು ಪತ್ತೆ ಮಾಡುತ್ತಾ ಹೋದಲ್ಲಿ ಪರಿಹಾರಗಳು ಲಭ್ಯವಾಗುತ್ತದೆ. ಈ ನಿಟ್ಟಿನಲ್ಲಿ ಆದಿ ಶಂಕರರು ನೀಡಿದ ಸಂದೇಶಗಳು ನಮ್ಮ ಕಣ್ತೆರೆಸಿ ಬದುಕಿನ ಮೂಲ ಲಕ್ಷö್ಯದ ದಾರಿ ತೋರಿಸುತ್ತದೆ. ಶ್ರೀಶಂಕರರ ಸಂದೇಶಗಳನ್ನು ಪಾಲಿಸುತ್ತಾ ಬಂದಲ್ಲಿ ಆಂತರ್ಯದ ಸಂಘರ್ಷಗಳಿಗೆ ಉತ್ತರ ಕಂಡುಕೊಳ್ಳಬಹುದು. ಅವರ ಸಂದೇಶ ಗಳನ್ನು ಪಸರಿಸುವಲ್ಲಿ ಪೀಠಗಳು, ಮಠಾಧೀಶರ ಕೊಡುಗೆಗಳು ಸಮಾಜಕ್ಕೆ ಅತ್ಯಪೂರ್ವವಾದುದು ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಅಭಿಪ್ರಾಯ ವ್ಯಕ್ತಪಡಿಸಿದರು.ಎಡನೀರು ಮಠದ ಶ್ರೀ ಸಚ್ಚಿದಾ ನಂದ ಭಾರತೀ ಸ್ವಾಮೀಜಿಯವರ …

ಬಿಜೆಪಿ ಕುಂಬಳೆ ಮಂಡಲ ಸಮಿತಿಯಿಂದ ಗುರುವಂದನೆ

ಕುಂಬಳೆ: ಬಿಜೆಪಿ ಕುಂಬಳೆ ಮಂಡಲ ಸಮಿತಿಯ ನೇತೃತ್ವದಲ್ಲಿ ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹಾಗೂ ಯಕ್ಷಗಾನ ಕಲಾವಿದ ರಾಮ ಅವರನ್ನು ಗುರು ಪೂರ್ಣಿಮೆ ಪ್ರಯಕ್ತ ಗೌರವಿಸಲಾಯಿತು.ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ, ರಾಜ್ಯ ಸಮಿತಿ ಸದಸ್ಯರಾದ ವಿ. ರವೀಂದ್ರನ್, ಸತೀಶ್ಚಂದ್ರ ಭಂಡಾರಿ, ಜಿಲ್ಲಾ ಉಪಾಧ್ಯಕ್ಷರಾದ ಪಿ. ರಮೇಶ್, ಮುರಳೀಧರ, ಕುಂಬಳೆ ಮಂಡಲ ಅಧ್ಯಕ್ಷ ವಿಕ್ರಮ್ ಪೈ, ಮಂಡಲ ಉಪಾಧ್ಯಕ್ಷರಾದ ಬಾಲಕೃಷ್ಣ ಅಂಬಾರ್, ಪದ್ಮನಾಭ, …