ಕೇಂದ್ರ ಹಿಂದಿ ಸಲಹಾ ಸಮಿತಿ ಸದಸ್ಯರಾಗಿ ಸವಿತಾ ಟೀಚರ್ ನೇಮಕ

ಕಾಸರಗೋಡು: ಬಿಜೆಪಿಯ ಹಿರಿಯ ನಾಯಕಿ ಹಾಗೂ ಕಾಸರಗೋಡು ನಗರಸಭಾ ಕೌನ್ಸಿಲರ್ ಸವಿತಾ ಟೀಚರ್‌ರನ್ನು ಕೇಂದ್ರ ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ  ತಂತ್ರಜ್ಞಾನ ಸಚಿವಾಲಯದ ಹಿಂದಿ ಸಲಹಾ ಸಮಿತಿ ಸದಸ್ಯರನ್ನಾಗಿ ನೇಮಿಸಲಾಗಿದೆ. ಇದಕ್ಕಾಗಿ ಸವಿತಾ ಟೀಚರ್‌ಗೆ ಎಲ್ಲೆಡೆಗಳಿಂದ ಅಭಿನಂದನೆಗಳ ಮಹಾಪೂರಗಳೇ ಹರಿದುಬರತೊಡಗಿವೆ.

ಜಿಲ್ಲೆಯಲ್ಲಿ ತೀವ್ರ ಮಳೆ: ಬೇವಿಂಜೆ, ವೀರಮಲಕುನ್ನ್ ಮೂಲಕ ಹೆದ್ದಾರಿಯಲ್ಲಿ ವಾಹನಗಳಿಗೆ ನಿಷೇಧ

ಕಾಸರಗೋಡು: ಜಿಲ್ಲೆಯಲ್ಲಿ ತೀವ್ರ ರೀತಿಯಲ್ಲಿ ಮಳೆ ಮುಂದುವರಿ ಯುತ್ತಿರುವ ಸನ್ನಿವೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ನಡೆಯುತ್ತಿರುವ ಪ್ರದೇಶಗಳಲ್ಲಿ ಗುಡ್ಡೆ ಕುಸಿತ ಭೀತಿ ಎದುರಾಗಿರುವ ರಸ್ತೆಗಳಲ್ಲಿ ಸಂಚಾರ ನಿಷೇಧ ಹೇರಲಾಗಿದೆ. ವೀರಮಲಕುನ್ನ್, ಬೇವಿಂಜೆ ಪ್ರದೇಶಗಳ ಮೂಲಕ ಪ್ಯಾಸೆಂಜರ್ ವಾಹನಗಳಿಗೆ  ಸಂಚಾರ ಇನ್ನೊಂದು ಸೂಚನೆ ನೀಡುವವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದೊಡ್ಡ ವಾಹನಗಳು, ಆಂಬುಲೆನ್ಸ್, ಫಯರ್ ಟ್ರಕ್ ಮೊದಲಾದ ತುರ್ತು ವಾಹನಗಳಿಗೆ ಮಾತ್ರವೇ ಈ ದಾರಿಯಾಗಿ ಸಂಚರಿಸಲು ಅನುಮತಿ ನೀಡುವುದಾಗಿ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರದ ಅಧ್ಯಕ್ಷನಾಗಿರುವ ಜಿಲ್ಲಾಧಿಕಾರಿ …

ಪುತ್ರ ವಿದೇಶದಿಂದ ತಲುಪುವ ಗಂಟೆಗಳ ಮೊದಲು ತಂದೆ, ತಾಯಿಯರ ಮೃತದೇಹಗಳು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆ

ಕಣ್ಣೂರು: ಇಲ್ಲಿಗೆ ಸಮೀಪದ ಅಲವಿಲಿಲ್ ಎಂಬಲ್ಲಿ ದಂಪತಿ ಬೆಂಕಿ ತಗಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಲ್ಲಾಳತ್ತಿಲ್ ಪ್ರೇಮರಾಜನ್, ಎ.ಕೆ. ಶ್ರೀಲೇಖ ಎಂಬಿವರು ಮೃತಪಟ್ಟವರು. ಸಚಿವ ಎ.ಕೆ. ಶಶೀಂದ್ರನ್‌ರ ಸಹೋದರಿಯಾಗಿದ್ದಾರೆ ಇವರು. ಮನೆಯ ಮಲಗುವ ಕೊಠಡಿಯಲ್ಲಿ ದಂಪತಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಸಂಜೆ 5 ಗಂಟೆ ವೇಳೆ ಘಟನೆ ತಿಳಿದು ಬಂದಿದೆ. ಚಾಲಕ ಕರೆದರೂ ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಪರಿಶೀಲಿಸಿದಾಗ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಪುತ್ರ ವಿದೇಶದಿಂದ ತಲುಪುವುದಕ್ಕೆ ಗಂಟೆಗಳ ಮುಂಚಿತ ಇವರಿಬ್ಬರ ಮೃತದೇಹ …

ಕೋ-ಓಪರೇಟಿವ್ ಎಂಪ್ಲೋಯೀಸ್ ಯೂನಿಯನ್ ಜಿಲ್ಲಾ ಸಮ್ಮೇಳನ ನಾಳೆಯಿಂದ

ಕಾಸರಗೋಡು: ಕೇರಳ ಕೋ-ಆಪರೇಟಿವ್ ಎಂಪ್ಲೋಯೀಸ್ ಯೂನಿಯನ್ (ಸಿಐಟಿಯು) ಜಿಲ್ಲಾ ಸಮ್ಮೇಳನ ನಾಳೆ ಹಾಗೂ ಆದಿತ್ಯವಾರ ಮುನ್ನಾಡ್‌ನಲ್ಲಿ ನಡೆಯಲಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ. ಸಿಐಟಿಯು ರಾಜ್ಯ ಸಮಿತಿ ಸದಸ್ಯ ಎಂ.ವಿ. ಜಯರಾಜನ್ ಉದ್ಘಾಟಿ ಸುವರು. ಇದರಂಗವಾಗಿ ನಡೆಯುವ ಸಹಕಾರಿ ಸಮ್ಮೇಳನವನ್ನು ಶಾಸಕ ಸಿ.ಎಚ್. ಕುಂಞಂಬು ಉದ್ಘಾಟಿಸುವರು. ಸೇವೆಯಿಂದ ನಿವೃತ್ತರಾದವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಲಿದೆ. ಸಹಕಾರಿ ಠೇವಣಿ ಗ್ಯಾರಂಟಿ ಫಂಡ್ ಬೋರ್ಡ್ ಉಪಾಧ್ಯಕ್ಷ ಕೆ.ಪಿ. ಸತೀಶ್ಚಂದ್ರನ್ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸುವರು.  ಸಹಕಾರಿ ವಲಯವನ್ನು ನಾಶಪಡಿಸಲಿರುವ ಕೇಂದ್ರ ಸರಕಾರದ ನೀತಿ ವಿರುದ್ಧ …

ಗುತ್ತಿಗೆದಾರನ ಮನೆ ಕಳವಿಗೆತ್ನ: ಕುಖ್ಯಾತ ಆರೋಪಿ ಸೆರೆ

ಕಾಸರಗೋಡು: ಕುಖ್ಯಾತ ಕಳವು ಆರೋಪಿಯನ್ನು ಗುತ್ತಿಗೆದಾರನ ಮನೆ ಕಳವು ಯತ್ನ ವೇಳೆ ಸೆರೆ ಹಿಡಿಯ ಲಾಗಿದೆ. ಪಶ್ಚಿಮ ಬಂಗಾಳದಲ್ಲಿ ಖಾಯಂ ವಾಸಿಸುವ ಮೂವಾಟುಪುಳ ನಿವಾಸಿ ನೌಫಲ್ ಎಂಬಾತನನ್ನು ಇಂದು ಮುಂಜಾನೆ ನರಿಮಾಳದಲ್ಲಿ  ಸೆರೆಹಿಡಿಯಲಾಗಿದೆ.  ನೀಲೇಶ್ವರ ಚಾಯೋಂನ ನರಿಮಾಳ ಎಂಬಲ್ಲಿನ ಗುತ್ತಿಗೆದಾರ ಸುರೇಶ್ ಪೆರಿಂಗುಳ ಎಂಬವರ ಮನೆಯಲ್ಲಿ ಕಳವಿಗೆತ್ನಿಸಿದ ವೇಳೆ ಈತನನ್ನು ಬಂಧಿಸಲಾಗಿದೆ. ಇಂದು ಮುಂಜಾನೆ 3 ಗಂಟೆ ವೇಳೆ ಶಬ್ದ ಕೇಳಿ ಮನೆಯವರು ಎಚ್ಚೆತ್ತಾಗ ವ್ಯಕ್ತಿಯೋರ್ವ ಕಳವಿಗೆತ್ನಿಸಿ ಕಳ್ಳ ಪರಾರಿ ಯಾಗಿರುವುದು ಕಂಡು ಬಂದಿದೆ. ಮನೆಯ ಹಿಂಬದಿಯ …

ಒಂದೇ ಕುಟುಂಬದ ಮೂರು ಮಂದಿ ಆಸಿಡ್ ಸೇವಿಸಿ ಸಾವು: ಒಬ್ಬನ ಸ್ಥಿತಿ ಗಂಭೀರ

ಕಾಸರಗೋಡು: ಒಂದೇ ಕುಟುಂಬದ ಮೂರು ಮಂದಿ ಆಸಿಡ್ ಸೇವಿಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಒಬ್ಬರ ಸ್ಥಿತಿ ಅತೀ ಗಂಭೀರವಾಗಿದೆ ಎಂದು ಮಾಹಿತಿಯಿದೆ. ಅಂಬಲತ್ತರ ಪರಕ್ಕಳಾಯಿ ಒಂಡಂಪುಳಿಕ್ಕಾಲ್ ನಿವಾಸಿ ಗೋಪಿ (60), ಪತ್ನಿ ಇಂದಿರ (57), ಪುತ್ರ ರಾಜೇಶ್ (22) ಎಂಬಿವರು ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ. ಇನ್ನೋರ್ವ ಪುತ್ರ ರಾಕೇಶ್‌ನನ್ನು ಗಂಭೀರ ಸ್ಥಿತಿಯಲ್ಲಿ ಪರಿಯಾರಂನ ಕಣ್ಣೂರು ಸರಕಾರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇಂದು ಮುಂಜಾನೆ 4 ಗಂಟೆ ವೇಳೆಗೆ ಈ …

ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳವು: ಗಲ್ಫ್‌ಗೆ ಪರಾರಿಯಾದ ಆರೋಪಿ ಕಣ್ಣೂರಿನಿಂದ ಸೆರೆ

ಕುಂಬಳೆ: ಕುಂಬಳೆ ರೈಲು ನಿಲ್ದಾಣ ಸಮೀಪ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳವುಗೈದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಯುವಕನನ್ನು ಕಣ್ಣೂರು ವಿಮಾನ ನಿಲ್ದಾಣದಿಂದ ಸೆರೆ ಹಿಡಿಯಲಾಗಿದೆ. ಮೇಲ್ಪರಂಬ ನಿವಾಸಿ ರಿಸ್ವಾನ್ (23) ಎಂಬಾತ ಬಂಧಿತ ಆರೋಪಿಯಾಗಿ ದ್ದಾ ನೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜುಲೈ 13ರಂದು ಕುಂಬಳೆ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಬೈಕ್‌ನಿಂದ ರಿಸ್ವಾನ್ ಹಾಗೂ ಕುಂಬಳೆ ನೀರೋಳಿಯ ರುಮೈಸ್ ಎಂಬವರು ಪೆಟ್ರೋಲ್ ಕಳವುಗೈದಿದ್ದರು. ಕಳವುಗೈಯ್ಯುತ್ತಿರು ವುದನ್ನು ತಿಳಿದ ವಾಹನ ಪಾರ್ಕಿಂಗ್ ಸ್ಥಳದ ಕಾವಲುಗಾರ ಪೊಲೀಸರಿಗೆ ಮಾಹಿತಿ …

ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟಪರಾರಿಯಾದ ಆರೋಪಿ ಬಂಧನ

ಬದಿಯಡ್ಕ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಪರಾರಿಯಾದ ಆರೋಪಿಯನ್ನು ಬಂಧಿಸಲಾಗಿದೆ.  ಬಾಪಾಲಿಪೊನ ನಿವಾಸಿ ಬಿ.ಎಂ. ಸಹದ್ ಯಾನೆ ಅದ್ದು ಎಂಬಾತನನ್ನು ನಿನ್ನೆ ರಾತ್ರಿ ಕಾಸರಗೋಡು ಅಣಂಗೂರಿನಿಂದ ಬದಿಯಡ್ಕ ಎಸ್‌ಐ ಅಖಿಲ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಮೊನ್ನೆ ರಾತ್ರಿ ಚೆರ್ಲಡ್ಕ ಬಸ್ ನಿಲ್ದಾಣ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಆಟೋ ರಿಕ್ಷಾದಲ್ಲಿ 1.312 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಈವೇಳೆ ರಿಕ್ಷಾದಲ್ಲಿದ್ದ ಅಂಗಡಿಮೊಗರು ಪೆರ್ಲಾಡಂ ನಿವಾಸಿ ರಿಫಾಯಿ ಬಿ.ಎಂ. ಎಂಬಾತನನ್ನು ಬಂಧಿಸಲಾಗಿತ್ತು. …

ಮಹಿಳೆಯ ಕುತ್ತಿಗೆಯಿಂದ ಎಗರಿಸಿದ ಚಿನ್ನದ ಸರ ಕಾಸರಗೋಡಿನ ಜ್ಯುವೆಲ್ಲರಿಯಲ್ಲಿ ಪತ್ತೆ

ಕಾಸರಗೋಡು: ತಳಿಪರಂಬ ಮುಯ್ಯತ್ ಎಂಬಲ್ಲಿನ ಮಹಿಳೆಯ ಕುತ್ತಿಗೆಯಿಂದ ಎಗರಿಸಿದ ಒಂದೂ ಕಾಲು ಪವನ್ ತೂಕದ ಚಿನ್ನದ ಸರವನ್ನು ಕಾಸರಗೋಡಿನ ಜ್ಯುವೆಲ್ಲರಿಯೊಂದರಿಂದ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದಿದ್ದಾರೆ. ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂಡ್‌ನಲ್ಲಿರುವ ಬೇಕಲ ಉದುಮ ವೆಡಿತ್ತರಕ್ಕಾಲ್ ಪಾಕ್ಯಾರ ಹೌಸ್‌ನ ಮುಹಮ್ಮದ್ ಇಜಾಸ್ (23), ಸುಳ್ಯದ ಅಬ್ದುಲ್ ರಹ್ಮಾನ್ (30) ಎಂಬಿವರನ್ನು ಕಸ್ಟಡಿಗೆ ತೆಗೆದು ತನಿಖೆ ನಡೆಸಿದಾಗ ಚಿನ್ನದ ಸರವನ್ನು ಕಾಸರಗೋಡಿನ ಜ್ಯುವೆಲ್ಲರಿಯಲ್ಲಿ ಮಾರಾಟ ನಡೆಸಿರುವುದಾಗಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೇರಿಸಿಕೊಂಡು ಕಾಸರಗೋಡಿಗೆ ತಲುಪಿದ ತಳಿಪರಂಪ  ಪೊಲೀಸರು …

ಕಾರು-ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು

ಮಂಜೇಶ್ವರ: ಉಪ್ಪಳ ರೈಲ್ವೇ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯ ಅಬ್ದುಲ್ ಹಮೀದ್ (48) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಅಜಾಸ್ ಅಹಮ್ಮದ್ (41) ಎಂಬವರನ್ನು ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ೬.೩೦ರ ವೇಳೆ ಅಪಘಾತ ಸಂಭವಿಸಿದೆ. ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಬರುತ್ತಿದ್ದ ಸ್ಕೂಟರ್ ಹಾಗೂ ಹೊಸಂಗಡಿ ಭಾಗದಿಂದ ಉಪ್ಪಳಕ್ಕೆ ಬಂದ ಕಾರು ಪರಸ್ಪರ …