ಕ್ರಿಯಾಸಮಿತಿಯ ಅರ್ಜಿ ತಿರಸ್ಕರಿಸಿ ಆರಿಕ್ಕಾಡಿ ಹೆದ್ದಾರಿಯಲ್ಲಿ ತಾತ್ಕಾಲಿಕ ಟೋಲ್ಗೇಟ್ ಆರಂಭಿಸಲು ನ್ಯಾಯಾಲಯ ಹಸಿರು ನಿಶಾನೆ
ಕುಂಬಳೆ: ಆರಿಕ್ಕಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ಗೇಟ್ ನಿರ್ಮಾಣಕ್ಕಿದ್ದ ತಡೆಯನ್ನು ನ್ಯಾಯಾಲಯ ರದ್ದುಪಡಿಸಿದೆ. ಕ್ರಿಯಾ ಸಮಿತಿ ಸಹಿತವಿರುವವರು ನೀಡಿದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ನ್ಯಾಯಾಧೀಶ ಎನ್. ನಗರೇಶ್ ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ಕೇಂದ್ರ ಸರಕಾರದ ಅನುಮತಿಯೊಂದಿಗೆ ಟೋಲ್ ಗೇಟ್ ನಿರ್ಮಿಸುತ್ತಿರುವುದಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮುಂದಿಟ್ಟ ವಾದವನ್ನು ನ್ಯಾಯಾಲಯ ಅಂಗೀಕರಿಸಿದೆ. ಈ ಹಿನ್ನೆಲೆಯಲ್ಲಿ ಇನ್ನು ಇಲ್ಲಿ ಟೋಲ್ ಗೇಟ್ ನಿರ್ಮಾಣ ಕಾರ್ಯಗಳಿಗೆ ಚಾಲನೆ ನೀಡಬಹುದಾಗಿದೆ. ಇದೇ ವೇಳೆ ಈ ತೀರ್ಪಿನ ವಿರುದ್ಧ ವಿಭಾಗೀಯ ಪೀಠಕ್ಕೆ ಅಪೀಲು …