ವಾಹನಗಳಿಂದ ಟೋಲ್ ಸಂಗ್ರಹ: ಕುಂಬಳೆ ಟೋಲ್‌ಬೂತ್‌ಗೆ ಮುತ್ತಿಗೆ ಹಾಕಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆಯಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸುತ್ತಿರುವುದರ ವಿರುದ್ಧ ಕ್ರಿಯಾ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಚಳವಳಿ ತೀವ್ರಗೊಂಡಿದೆ. ಇದರ ಅಂಗವಾಗಿ ನಿನ್ನೆ ಮಹಿಳೆಯರು ನಡೆಸಿದ ಟೋಲ್ ಬೂತ್ ಮಾರ್ಚ್‌ನಿಂದ ಅಲ್ಪ ಹೊತ್ತು ಸಂಘರ್ಷಾವಸ್ಥೆ ಸೃಷ್ಟಿಸಿತು. ವಿವಿಧ ಭಾಗಗಳಿಂದ ಆಗಮಿಸಿದ ಮಹಿಳೆಯರು ಟೋಲ್ ಬೂತ್‌ಗೆ ನುಗ್ಗಲು ಯತ್ನಿಸಿದರು. ಬಳಿಕ ಶಾಸಕರ ನೇತೃತ್ವದಲ್ಲಿ ಮುಷ್ಕರ ಸಮಿತಿ ಪದಾಧಿಕಾರಿಗಳು ಮಾತುಕತೆ ನಡೆಸಿದುದರಿಂದ ಚಳವಳಿನಿರತರು ರಸ್ತೆಯಲ್ಲಿ ಕುಳಿತು ಪ್ರತಿಭಟಿಸಿದರು. ಇದರಿಂದ ಅರ್ಧ ಗಂಟೆ ಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಅನಂತರ …

ನಾಪತ್ತೆಯಾಗಿದ್ದ ಯುವಕನ ಮೃತದೇಹ ಹೊಳೆಯಲ್ಲಿ ಪತ್ತೆ

ಕಾಸರಗೋಡು: ಚಟ್ಟಂಚಾಲ್ ಸಮೀಪದ ಬೆಂಡಿಚ್ಚಾಲ್‌ನಿಂದ ನಾಪತ್ತೆಯಾದ ಯುವಕನ ಮೃತದೇಹ ಚಂದ್ರಗಿರಿ ಹೊಳೆಯಲ್ಲಿ ತಳಂಗರೆ ಸೇತುವೆ ಸಮೀಪ ಪತ್ತೆಯಾಗಿದೆ. ಎಯ್ಯಳದ ದಿ| ಅಬ್ದುಲ್ಲ ಕುಂಞಿಯವರ ಪುತ್ರ  ನಿಸಾರ್ (47) ಮೃತಪಟ್ಟ ವ್ಯಕ್ತಿ. ಕಳೆದ ಶನಿವಾರ ಮಧ್ಯಾಹ್ನ ಆಹಾರ ಸೇವಿಸಿ ಮನೆಯಿಂದ ಹೊರಗೆ ಹೋದ ನಿಸಾರ್ ಮರಳಿ ಬಂದಿರಲಿಲ್ಲ. ಈ ಬಗ್ಗೆ ಸಹೋದರಿಯ ಪತಿ ಅಬ್ದುಲ್ ಖಾದರ್ ಎಂಬವರು ಮೇಲ್ಪರಂಬ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಂತೆ ಆದಿತ್ಯವಾರ ರಾತ್ರಿ ೧೦ ಗಂಟೆ ವೇಳೆ ಮೃತದೇಹ …

ಕರ್ತವ್ಯ ಮಧ್ಯೆ ಕಾರಿನಲ್ಲಿ ಕುಳಿತು ಪೊಲೀಸರ ಬಹಿರಂಗ ಮದ್ಯಪಾನ: ಆರು ಮಂದಿ ಅಮಾನತು

ತಿರುವನಂತಪುರ: ಕೆಲಸ ಸಮಯದಲ್ಲಿ ಕಾರಿನಲ್ಲಿ ಕುಳಿತುಕೊಂಡು ಬಹಿರಂಗವಾಗಿ ಮದ್ಯಪಾನ ನಡೆಸುವ ಪೊಲೀಸರ ದೃಶ್ಯ ಬಹಿರಂಗಗೊಂಡ ಬೆನ್ನಲ್ಲೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಿದ್ದಾರೆ. ತಪ್ಪಿತಸ್ಥರಾದ 6 ಮಂದಿ ಪೊಲೀಸರನ್ನು ಅಮಾನತ ಗೊಳಿಸಲಾಗಿದೆ. ತಿರುವನಂತಪುರ ಕಳಕೂಟಂ ಪೊಲೀಸ್  ಠಾಣೆಯ 6 ಮಂದಿ ಪೊಲೀಸರನ್ನು ಅಮಾನತು ಮಾಡಲಾಗಿದ್ದು, ಇವರನ್ನು ಉತ್ತಮ ನಡತೆ ತರಬೇತಿಗಾಗಿ ಕಳುಹಿಸಲಾಗುವುದು. ಇತ್ತೀಚೆಗೆ ಕಾರಿನೊಳಗೆ ಕುಳಿತುಕೊಂಡು ಈ ಪೊಲೀಸರು ಮದ್ಯಪಾನಗೈಯ್ಯುತ್ತರುವ ದೃಶ್ಯ ಬಹಿರಂಗಗೊಂಡಿತ್ತು. ಇದರ ವಿರುದ್ಧ ವ್ಯಾಪಕ ಟೀಕೆಗಳುಂಟಾಗಿತ್ತು. ಅದರ ಬೆನ್ನಲ್ಲೇ ತನಿಖೆಗೆ ಆದೇಶಿಸಲಾಗಿತ್ತು. ಪೊಲೀಸರ ಕ್ರಮ ಗಂಭೀರ ಲೋಪವೆಂದು …

ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತೀಯಾ ಸಮಾಜ ಬೇಡಿಕೆ: ಹಕ್ಕುಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ಆರಂಭ

ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು,  ಈಳವರಿಂದ ಪ್ರತ್ಯೇಕಿಸಿ ತೀಯಾ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು ಮೊದಲಾದ ಬೇಡಿಕೆ ಮುಂದಿರಿಸಿ ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ.  ಹೋರಾಟದಂಗವಾಗಿ ಹಕ್ಕು ಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ಕುಂಬಳೆಯಿಂದ ಮೊನ್ನೆ ಆರಂಭಗೊಂಡಿತು. ಸದ್ಗುರು ನಿತ್ಯಾನಂದ ಮಠದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭಗೊಂಡ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಶನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು. ತೀಯಾ ಕ್ಷೇಮ ಸಭಾ ರಾಜ್ಯಾಧ್ಯಕ್ಷ …

ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಈಸ್ಟ್ ಘಟಕ ವತಿಯಿಂದ ಗಣರಾಜ್ಯೋತ್ಸವ ಆಚರಣೆ

ಮಧೂರು: ಗಣರಾಜ್ಯೋತ್ಸ ದಂಗವಾಗಿ ಉಳಿಯ ಪರಕ್ಕಿಲ ಅಂಗನವಾಡಿ ಮಕ್ಕಳಿಗೆ ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿ ಯೇಶನ್ ಈಸ್ಟ್ ಘಟಕದ ನೇತೃತ್ವದಲ್ಲಿ ಕುರ್ಚಿ ವಿತರಿಸಲಾಯಿತು. ವಾರ್ಡ್ ಪ್ರತಿನಿಧಿ ಶಮೀಮ ಶರೀಫ್ ಧ್ವಜಾರೋಹಣಗೈದರು. ಅಂಗನವಾಡಿ ಶಿಕ್ಷಕಿ ವಿಮಲ ಯು ಸ್ವಾಗತಿಸಿದರು. ಈಸ್ಟ್ ಯೂನಿಟ್ ಅಧ್ಯಕ್ಷ ರಾಜಶೇಖರನ್, ಕೋಶಾಧಿಕಾರಿ ಶ್ರೀಕಾಂತ್ ಶುಭ ಕೋರಿದರು. ಮನೀಶ್,ಅಜಿತ್ ಕುಮಾರ್ ಉಪಸ್ಥಿತರಿದ್ದರು. ಸಿಹಿ ತಿಂಡಿ  ಹಂಚಲಾಯಿತು.

ನ್ಯಾಯವಾದಿ ಮನೆಯಿಂದ ನಗ-ನಗದು ದೋಚಿದ ತಂಡದಲ್ಲಿ  ನಾಲ್ಕು ಮಂದಿ ಭಾಗಿ ಶಂಕೆ: ಬಂಧಿತ ಆರೋಪಿಗೆ ರಿಮಾಂಡ್

ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ  ಹಣ ಕಳವು ನಡೆಸಿದ ಪ್ರಕರಣದಲ್ಲಿ ಸೆರೆಗೀಡಾದ ಆರೋಪಿ ಕಾಸರಗೋಡು, ಕುಂಬಳೆ ಪೊಲೀಸ್ ಠಾಣೆಯ ವಿವಿಧೆಡೆ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ಇಬ್ರಾಹಿಂ ಯಾನೆ ಕಲಂದರ್ ಇಬ್ರಾಹಿಂ ಎಂಬಾತನಿಗೆ  ನ್ಯಾಯಾಲಯ ರಿಮಾಂಡ್ ವಿಧಿಸಿದೆ. ಈತನನ್ನು ಹೆಚ್ಚಿನ ತನಿಖೆಗೊಳಪಡಿಸುವ ಅಂಗವಾಗಿ ರಿಮಾಂಡ್‌ನಿಂದ ಕಸ್ಟಡಿಗೆ ತೆಗೆಯಲು ಅರ್ಜಿ ಸಲ್ಲಿಸುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದೇ ವೇಳೆ ಈ ಕಳವು ಕೃತ್ಯದಲ್ಲಿ ಇಬ್ರಾಹಿಂ ಸಹಿತ ನಾಲ್ಕು ಮಂದಿ ಭಾಗಿಯಾಗಿರಬಹುದೆಂದು ಪೊಲೀಸರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ.  …

ಕೃಷಿಕ ತೋಟದ ಕೆರೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಬದಿಯಡ್ಕ: ತೋಟಕ್ಕೆ ತೆರಳಿದ ಕೃಷಿಕ ಕೆರೆಯಲ್ಲಿ ಬಿದ್ದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನೆಕ್ರಾಜೆ ಕೃಷ್ಣಕೃಪಾ ನಿವಾಸಿ ಎನ್. ಸುಬ್ಬಣ್ಣ ಆಳ್ವ (82) ಎಂಬವರು ಮೃತಪಟ್ಟ ವ್ಯಕ್ತಿ. ಇವರು ನಿನ್ನೆ ಮಧ್ಯಾಹ್ನ ೧ ಗಂಟೆಗೆ ಮನೆ ಬಳಿಯ ತೋಟಕ್ಕೆ ತೆರಳಿದ್ದರು. ಸಂಜೆ 3 ಗಂಟೆ ಯಾದರೂ ಇವರು ಮರಳಿ ಬಾರದ ಹಿನ್ನೆಲೆಯಲ್ಲಿ ಮನೆಯವರು ತೋಟದಲ್ಲಿ ಹುಡುಕಾಡಿದರೂ ಪತ್ತೆಹಚ್ಚಲಾಗಲಿಲ್ಲ. ಇದೇ ವೇಳೆ ಸುಬ್ಬಣ್ಣ ಆಳ್ವರ ಚಪ್ಪಲಿ  ತೋಟದ ಕೆರೆ ಬಳಿ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಕಾಸರಗೋಡು ಅಗ್ನಿಶಾಮಕದಳಕ್ಕೆ ಮನೆಯವರು ಮಾಹಿತಿ …

ಗಣರಾಜ್ಯೋತ್ಸವದಂದು ಕುಂಬಳೆ ಟೋಲ್ ಪ್ಲಾಜಾಕ್ಕೆ ಮಹಿಳಾ ಮಾರ್ಚ್

ಕುಂಬಳೆ: ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಟೋಲ್ ಪ್ಲಾಜಾದಲ್ಲಿ ವಾಹನ ಗಳಿಂದ ಟೋಲ್ ಸಂಗ್ರಹ ಮುಂದುವರಿ ಯುತ್ತಿರುವ ಹಿನ್ನೆಲೆಯಲ್ಲಿ ಟೋಲ್ ಪ್ಲಾಜಾ ಮುಚ್ಚುಗಡೆಗೊಳಿಸುವವರೆಗೆ ಚಳವಳಿ ಮುಂದುವರಿಸಲು ಕ್ರಿಯಾಸಮಿತಿ ನಿರ್ಧರಿಸಿದೆ. ಇದರಂತೆ ಗಣರಾಜ್ಯೋತ್ಸವ ದಿನದಂದು ಜಿಲ್ಲೆಯ ಎಲ್ಲಾ ಮಹಿಳಾ ಸಂಘಟನೆಗಳು ಹಾಗೂ ಒಕ್ಕೂಟಗಳನ್ನು ಸೇರಿಸಿಕೊಂಡು ಟೋಲ್ ಪ್ಲಾಜಾಕ್ಕೆ ಮಹಿಳಾಮಾರ್ಚ್ ನಡೆಸಲಾಗುವುದು.  ಇದರ ಜತೆಗೆ ಕಾನೂನು ಹೋರಾಟವನ್ನು ತೀವ್ರಗೊಳಿಸಲು ಕ್ರಿಯಾ ಸಮಿತಿ ಸಭೆ ನಿರ್ಧರಿಸಿದೆ. ವಿ.ಪಿ. ಅಬ್ದುಲ್ ಖಾದರ್‌ರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಿ.ಎ. ಸುಬೈರ್, ಅಶ್ರಫ್ ಕಾರ್ಳೆ, ಅಸೀಸ್ ಕಳತ್ತೂರು, …

ಹನಿ ಟ್ರಾಪ್‌ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನ: ಯುವತಿ ಸೇರಿ ನಾಲ್ವರ ಸೆರೆ

ಕಾಸರಗೋಡು: ಹನಿಟ್ರಾಪ್‌ನಲ್ಲಿ ಸಿಲುಕಿಸಿ ಯುವಕನಿಂದ ಹಣ ಎಗರಿಸಲೆತ್ನಿಸಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಯುವತಿ ಸೇರಿದಂತೆ ಮೂವರ ವಿರುದ್ಧ  ಚಕ್ಕರಕಲ್ ಪೊಲೀಸರು ಪ್ರಕರಣ ದಾಖಲಿಸಿ ಅವರನ್ನು ಬಂಧಿಸಿದ್ದಾರೆ. ಹೊಸದುರ್ಗ ನಿವಾಸಿಗಳಾದ ೧೭ರ ಹರೆಯದ ಯುವತಿ, ಇಬ್ರಾಹಿಂ ಸಜ್ಮಲ್ ಅರ್ಶಾದ್ (28), ಮೈಮೂನಾ (51) ಮತ್ತು ಎ.ಕೆ. ಅಬ್ದುಲ್ ಕಲಾಂ (52) ಬಂಧಿತ ಆರೋಪಿಗಳು. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ ಚಕ್ಕರಕಲ್ ಕೊಯ್ಯೋಡು ನಿವಾಸಿಯಾಗಿರುವ ಯುವಕನೋರ್ವ ನೀಡಿದ ದೂರಿನಂತೆ ಪೊಲೀಸರು ಈ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೊಬೈಲ್ ಆಪ್ ಮೂಲಕ ಪರಿಚಯಗೊಂಡ …

ಕಿರುಕುಳಕ್ಕೊಳಗಾದ 13,17 ವರ್ಷ ಪ್ರಾಯದ ಇಬ್ಬರು ಬಾಲಕಿಯರು ಗರ್ಭಿಣಿಯರು: ಯುವಕ ಬಂಧನ; ಇನ್ನೋರ್ವನಿಗಾಗಿ ಶೋಧ

ಕಾಸರಗೋಡು:  ಪ್ರಾಯಪೂರ್ತಿ ಯಾಗದ ಇಬ್ಬರು ಬಾಲಕಿಯರಿಗೆ ಮದುವೆ ಭರವಸೆಯೊಡ್ಡಿ ಲೈಂಗಿಕ ಕಿರುಕುಳ ನೀಡಿ ಗರ್ಭಿಣಿಯಾಗಿಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಪೋಕ್ಸೋ ಪ್ರಕಾರ ಎರಡು ಕೇಸುಗಳನ್ನು ದಾಖಲಿಸಿಕೊಂಡಿದ್ದಾರೆ. ರಾಜಪುರಂ ಹಾಗೂ ನೀಲೇಶ್ವರ ಪೊಲೀಸ್ ಠಾಣೆಗಳಲ್ಲಿ ಈ ಕೇಸು ದಾಖಲಿಸಲಾಗಿದೆ. ರಾಜಪುರಂ  ಪೊಲೀಸರು ದಾಖಲಿಸಿಕೊಂಡ ಪ್ರಕರಣದಲ್ಲಿ ಕರ್ನಾಟಕ ನಿವಾಸಿಯಾದ ಸಿದ್ದಾರ್ಥ್ ಎಂಬಾತನನ್ನು ಕಸ್ಟಡಿಗೆ ತೆಗೆಯಲಾಗಿದೆ. ಕಿರುಕುಳ ನೀಡಿರುವುದು ಅಂಬಲತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಾದುದರಿಂದ  ಪ್ರಕರಣವನ್ನು ಅಲ್ಲಿಗೆ ಹಸ್ತಾಂತರಿಸಲಾಗಿದೆ. ಕರ್ನಾಟಕ ನಿವಾಸಿಯಾದ 13ರ ಬಾಲಕಿ ಕೆಲವು ವರ್ಷಗಳಿಂದ  ಅಂಬಲತ್ತರ ಪೊಲೀಸ್ ಠಾಣೆ …