ಚೆಂಗಳ ಬಂಟರ ಸಂಘದಿಂದ ಆಟಿಡೊಂಜಿ ದಿನ ಆಚರಣೆ
ಮುಳ್ಳೇರಿಯಾ : ಬಂಟರ ಸಂಘ ಚೆಂಗಳ ಪಂಚಾಯತ್ ಘಟಕದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ವೈವಿದ್ಯ ಮಯ ರೀತಿಯಲ್ಲಿ ಆಚರಿಸಲಾಯಿತು. ಮಳೆಗಾಲದ ಆಷಾಢ ಮಾಸದಲ್ಲಿ ತುಳುನಾಡಿನಲ್ಲಿ ಆಚರಿಸಲಾಗುವ ಆಟಿ ತಿಂಗಳು ವಿಶೇಷ ಮಹತ್ವವನ್ನು ಪಡೆದುಕೊಂಡಿದೆ. ಕೃಷಿಯನ್ನೇ ಮೂಲ ಕಸುಬನ್ನಾಗಿಸಿ ಕೊಂಡಿರುವ ಬಂಟ ಸಮುದಾಯದವರು ಮಳೆ ತೀವ್ರಗೊಳ್ಳುತ್ತಿರುವ ಈ ತಿಂಗಳು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಾರೆ. ಚೆಂಗಳ ಪಂಚಾಯತ್ ಬಂಟರ ಸಂಘದ ಅಧ್ಯಕ್ಷ ಸಂಜೀವ ರೈ ಬೀಜಂತಡ್ಕ, ಅವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮಕ್ಕೆ ಗೌರವಾಧ್ಯಕ್ಷ ನಾರಂಪಾಡಿ ಗುತ್ತು ಬಾಲಕೃಷ್ಣ …