ಬೇವಿಂಜೆಯಲ್ಲಿ ಟ್ಯಾಂಕರ್ ಲಾರಿ ಅಪಘಾತ: ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕನ ರಕ್ಷಣೆ

ಕಾಸರಗೋಡು: ಕಾಸರಗೋಡು ಭಾಗದಿಂದ ಕಣ್ಣೂರಿನತ್ತ ಸಿಮೆಂಟ್ ಮಿಶ್ರಣದೊಂದಿಗೆ ಸಾಗುತ್ತಿದ್ದ ಟ್ಯಾಂಕರ್ ಲಾರಿ ಚೆರ್ಕಳಕ್ಕೆ ಸಮೀಪದ ಬೇವಿಂಜೆ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ನಿಯಂ ತ್ರಣ ತಪ್ಪಿ ಮಗುಚಿ ಬಿದ್ದು, ಈ ವೇಳೆ ಅದರ ಕ್ಯಾಬಿನ್‌ನೊಳಗೆ ಸಿಲುಕಿಕೊಂ ಡಿದ್ದ ಚಾಲಕನನ್ನು ಕಾಸರಗೋಡು ಅಗ್ನಿಶಾಮಕದಳ ರಕ್ಷಿಸಿದ ಘಟನೆ ನಡೆದಿದೆ. ತಮಿಳುನಾಡು ನಿವಾಸಿ ಸಿದ್ದಿಕ್(42) ಎಂಬವರು ಕ್ಯಾಬಿನ್‌ನಲ್ಲಿ ಸಿಲುಕಿಕೊಂಡ ಚಾಲಕನಾಗಿದ್ದಾರೆ. ನಿನ್ನೆ ಸಂಜೆ ಈ ಅಪಘಾತ ಸಂಭವಿಸಿದೆ. ವಿಷಯ ತಿಳಿದು ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ಸುಕು ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ …

ನಿವೃತ್ತ ಎಸ್‌ಐ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ಪಾರಕಟ್ಟೆಯಲ್ಲಿ  ವಾಸಿಸುತ್ತಿದ್ದ ನಿವೃತ್ತ ಎಸ್.ಐ ಧನ್‌ರಾಜ್ (65) ನೇಣು  ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಿನ್ನೆ ಬೆಳಿಗ್ಗೆ ಮನೆಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಇವರನ್ನು ಕೂಡಲೇ ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕೆಲಸ ನಿರ್ವಹಿಸಿದ್ದ ಧನ್‌ರಾಜ್ ಹಲವು ಪ್ರಕರಣಗಳನ್ನು ಬೆಳಕಿಗೆ ತರುವಲ್ಲಿ ಪ್ರಧಾನ ಪಾತ್ರ ವಹಿಸಿದ್ದರು. ಕಾಸರಗೋಡು ಕ್ರೈಂ ಬ್ರಾಂಚ್ ಯೂನಿಟ್‌ನಿಂದ ನಿವೃತ್ತಿ ಹೊಂದಿದ ಬಳಿಕ ಚೆರ್ಕಳದ ಖಾಸಗಿ ಆಸ್ಪತ್ರೆಯೊಂದರ ಸೆಕ್ಯುರಿಟಿ ಆಫೀಸರ್ ಆಗಿ ಲಸ …

ಮಾಜಿ ಅನಿವಾಸಿ ಬಾಪುಂಞಿ ಮೈಂಕೂಡಲ್ ನಿಧನ

ಕುಂಬಳೆ: ಕೊಡ್ಯಮ್ಮೆ ನಿವಾಸಿ ಬಾಪುಂಞಿ ಮೈಂಕೂಡಲ್ (61) ನಿಧನಹೊಂದಿದರು. ಇವರು ಮಾಜಿ ಅನಿವಾಸಿಯಾಗಿದ್ದರು. ಅಸೌಖ್ಯ ನಿಮಿತ್ತ ಕಾಸರಗೋಡಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಮೃತರ ಅಂತ್ಯಕ್ರಿಯೆ ಇಂದು ಬೆಳಿಗ್ಗೆ ಕೊಡ್ಯಮ್ಮೆಯ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು. ಮೃತರು ಪತ್ನಿ ಖದೀಜ, ಮಕ್ಕಳಾದ ಮುನ್ಶಿರ, ಮುಹಾಸ್ (ಸೌದಿ), ಮುಫಸಲ್ (ದುಬೈ), ಅಳಿಯ-ಸೊಸೆಯಂದಿರಾದ ಆರಿಸ್ ಉಳವಾರ್, ಸಹದಿಯ, ರಿಫ, ಸಹೋದರ-ಸಹೋ ದರಿಯರಾದ ಮುಹಮ್ಮದ್ ಕುಂಞಿ (ಸೌದಿ), ಆಸ್ಯುಮ್ಮ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತ ಬಾಪುಂಞಿ ಅವರು ಕಾರವಲ್ ವರದಿಗಾರ ಅಬ್ದುಲ್ಲ ಕುಂಬಳೆ …

ಕೊಂಡೆವೂರು ಶ್ರೀಗಳ ಚಾತುರ್ಮಾಸ್ಯ ಸಂಕಲ್ಪ ನಾಳೆ

ಉಪ್ಪಳ: ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 23ನೇ ಚಾತುರ್ಮಾಸ್ಯ ವೃತ ಸಂಕಲ್ಪ ನಾಳೆ ಗುರುಪೂರ್ಣಿಮೆಯಂದು ನಡೆಯಲಿದೆ. ಬೆಳಿಗ್ಗೆ ಗಣಹೋಮ, ನಿತ್ಯಾನಂದ ಗುರುಗಳಿಗೆ ಪಂಚಾಮೃತಾಭಿಷೇಕ, ವಿಶೇಷ ಸೀಯಾಳಾಭಿಷೇಕ ಬಳಿಕ ವ್ಯಾಸಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಮಹಾಪೂಜೆಯ ನಂತರ ಶ್ರೀ ಗುರುಪಾದುಕಾಪೂಜೆ, ಚಾತುರ್ಮಾಸ್ಯ ಸಂದೇಶ ನೀಡಿ ಶ್ರೀಗಳು ಅನುಗ್ರಹಿಸುವರು. ಚಾತುರ್ಮಾಸ್ಯ ಸಂದರ್ಭದಲ್ಲಿ ಶ್ರೀ ವಿಷ್ಣುಸಹಸ್ರನಾಮ ಪಾರಾಯಣ ಮತ್ತು ಯಜ್ಞ ಸಹಿತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

ಶ್ರೀ ವಿಶ್ವ ಬ್ರಾಹ್ಮಣ ಸೇವಾ ಸಂಘ, ಉಪ ಸಮಿತಿಗಳ ವಾರ್ಷಿಕ ಮಹಾಸಭೆ

ಕಾಸರಗೋಡು: ಶ್ರೀ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಹಾಗೂ ಉಪಸಮಿತಿ ಗಳಾದ ಶ್ರೀ ವಿಶ್ವಕರ್ಮ ಯುವಕ ಸಂಘ, ಶ್ರೀ ವಿಶ್ವಕರ್ಮ ಮಹಿಳಾ ಸಂಘ ಕಾಸರಗೋಡು ಇದರ ವಾರ್ಷಿಕ ಮಹಾಸಭೆ ಕರಂದಕ್ಕಾಡು ಶ್ರೀ ವಿಶ್ವಕರ್ಮ ಮಂದಿರದಲ್ಲಿ ಸಂಘದ ಅಧ್ಯಕ್ಷ ಕೆ ಭುವನೇಶ ಆಚಾರ್ಯ ತಾಳಿಪಡ್ಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ವಾರ್ಷಿಕ ವರದಿಯನ್ನು ಕಾರ್ಯದರ್ಶಿ ಕೆ ಜಿ ಗಣೇಶ ಆಚಾರ್ಯ ಹಾಗೂ ಲೆಕ್ಕ ಪತ್ರವನ್ನು ಕೋಶಾಧಿಕಾರಿ ಪ್ರವೀಣ್ ಕುಮಾರ್ ಆಚಾರ್ಯ ನಲ್ಕ ಮಂಡಿಸಿದರು.ಮಹಿಳಾ ಸಂಘದ ವಾರ್ಷಿಕ ವರದಿ ಮತ್ತು ಲೆಕ್ಕಪತ್ರ …

ಬಿಎಂಎಸ್ ಕಾರಡ್ಕ ಪಂ. ಕುಟುಂಬ ಸಂಗಮ

ಮುಳ್ಳೇರಿಯ: ಭಾರತೀಯ ಮಜ್ದೂರ್ ಸಂಘ್ (ಬಿಎಂಎಸ್) ಕಾರಡ್ಕ ಪಂಚಾಯತ್ ಕುಟುಂಬ ಸಂಗಮ ಮುಳ್ಳೇರಿಯದಲ್ಲಿ ನಡೆಯಿತು. ಬಿಎಂಎಸ್ ಜಿಲ್ಲಾ ಕಾರ್ಯದರ್ಶಿ ಕೆ.ವಿ. ಬಾಬು ಉದ್ಘಾಟಿಸಿದರು. ಪಂಚಾಯತ್ ಸಮಿತಿ ಅಧ್ಯಕ್ಷ ಸಿ.ಕೆ. ಚಂದ್ರನ್ ಅಧ್ಯಕ್ಷತೆ ವಹಿಸಿದರು.  ಭಾರತೀಯ ವಿಚಾರ ಕೇಂದ್ರ ಸ್ಥಾನೀಯ ಸಮಿತಿ ಕಾರ್ಯದರ್ಶಿ ಸೂರಜ್, ಕಾರಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷೆ  ಜನನಿ, ಬಿಎಂಎಸ್ ಜಿಲ್ಲಾ ಜತೆ ಕಾರ್ಯದರ್ಶಿ ಲೀಲಾಕೃಷ್ಣನ್, ಪಂಚಾಯತ್ ಸದಸರಾದ ಸವಿತ, ಪ್ರಶಾಂತ್, ವಲಯ ಅಧ್ಯಕ್ಷ ಸದಾಶಿವ ಮೊದಲಾದವರು ಮಾತನಾಡಿದರು. ಬಿಎಂಎಸ್ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯಎಂ.ಕೆ. …

ಫ್ರೆಂಡ್ಸ್ ಕ್ಲಬ್ ಜೋಡುಕಲ್ಲು ವತಿಯಿಂದ ಸನ್ಮಾನ

ಉಪ್ಪಳ: ಹೊಳೆಗೆ ಬಿದ್ದ ಯುವತಿ ಯನ್ನು ರಕ್ಷಿಸಿದ ಉದಯ ಕುಮಾರ್ ಶೆಟ್ಟಿ ದೇರಂಬಳ ಹಾಗೂ ಜೋಡು ಕಲ್ಲು ಹಾಲಿನ ಸೊಸೈಟಿಯ ನಿವೃತ್ತ ಕಾರ್ಯದರ್ಶಿ ರಾಜರಾಮ್ ಬಲ್ಲಾಳ್ ರನ್ನು ಫ್ರೆಂಡ್ಸ್ ಕ್ಲಬ್ ಜೋಡುಕಲ್ಲು ಇದರ ವತಿಯಿಂದ ಸನ್ಮಾನಿಸಲಾ ಯಿತು. ಸಭೆಯಲ್ಲಿ ಕ್ಲಬ್‌ನ ಗೌರವಾಧ್ಯಕ್ಷ ದಯಾನಂದ ಮಾಡ, ಅಧ್ಯಕ್ಷ ಪ್ರೇಮ್ ಕಾಂತ್ ಶೆಟ್ಟಿ ದೇರಂಬಳ, ನಾರಾಯಣ ಕೆ ಪಿ ಪಟ್ಲ, ಅಶ್ವಿನ್ ಭಟ್ ಆಟಿಕುಕ್ಕೆ, ರವಿರಾಜ್ ನಾಯ್ಕ್ ಗುಂಡಿಬೈಲ್, ಪ್ರಭಾತ್ ರೈ ಬೊಳಂಪಾಡಿ, ತ್ಯಾಂಪಣ್ಣ ಶೆಟ್ಟಿ ದೇರಂಬಳ, ಕನ್ಯಾಕಮಾರಿ ಮಾತಾಜಿ …

ಊರಾಳುಂಗಲ್ ಚೆಯರ್‌ಮೆನ್ ರಮೇಶನ್ ಪಾಲೇರಿ ನಿಧನ

ಕಲ್ಲಿಕೋಟೆ: ಊರಾಳುಂಗಲ್ ಲೇಬರ್ ಕಾಂಟ್ರಾಕ್ಟ್ ಕೋ ಆಪರೇಟಿವ್ ಸೊಸೈಟಿ ಯ ಚೆಯರ್‌ಮೆನ್  ವಡಗರ ನಿವಾಸಿ ರಮೇಶನ್ ಪಾಲೇರಿ (66) ಇಂದು ಬೆಳಿಗ್ಗೆ ಕೊಯಂಬತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅಸೌಖ್ಯ ನಿಮಿತ್ತ ಇವರನ್ನು ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.  ಅದು ಫಲಕಾರಿಯಾಗದೆ ಇಂದು ಬೆಳಿಗ್ಗೆ ನಿಧನಹೊಂದಿದರು. ಕಾಸರಗೋಡು ಜಿಲ್ಲೆಯ ತಲಪಾಡಿಯಿಂದ ಆರಂಭಗೊಂಡು ಚೆಂಗಳ ತನಕದ 16೦೦ ಕೋಟಿ ರೂ.ಗಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಗುತ್ತಿಗೆ ವಹಿಸಿಕೊಂಡು ಅದನ್ನು ಈಗಾಗಲೇ ಯಶಸ್ವಿಯಾಗಿ ಪೂರ್ತೀಕರಿಸಿದ ಸಂಸ್ಥೆಯಾಗಿದೆ ಊರಾಳುಂಗಲ್ ಲೇಬರ್ …

ಕುಸಿದು ಬಿದ್ದ ದೇರಂಬಳ ಸೇತುವೆ: ಪುನರ್ ನಿರ್ಮಾಣ ಬಗ್ಗೆ ಶಾಸಕರ ನೇತೃತ್ವದಲ್ಲಿ ಪೂರ್ವಭಾವಿ ಭೇಟಿ

ಉಪ್ಪಳ: ಮೀಂಜ- ಮಂಗಲ್ಪಾಡಿ ಪಂಚಾಯತ್‌ಗಳನ್ನು ಸಂಪರ್ಕಿಸುವ ದೇರಂಬಳ ಸೇತುವೆ ಕುಸಿದ ಸ್ಥಳಕ್ಕೆ ಶಾಸಕ ಎಕೆಎಂ ಅಶ್ರಫ್‌ರ ನೇತೃತ್ವದ ತಂಡ ನಿನ್ನೆ ಭೇಟಿ ನೀಡಿದೆ. ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ನಲ್ಲಿ ಅಳವಡಿಸಿ ನೂತನ ಸೇತುವೆ ಶೀಘ್ರ ನಿರ್ಮಿಸುವ ಯೋಜನೆ ಸಿದ್ಧವಾಗುತ್ತಿದ್ದು, ಇದರ ಪೂರ್ವಭಾವಿಯಾಗಿ ಲೋಕೋಪ ಯೋಗಿ ಇಲಾಖೆ, ಮೇಜರ್ ಮತ್ತು ಮೈನರ್ ಇರಿಗೇಶನ್ ಇಲಾಖೆ ಪ್ರತಿ ನಿಧಿಗಳ ಸಹಿತ ಶಾಸಕರು, ಜನಪ್ರತಿ ನಿಧಿಗಳು ಸ್ಥಳ ಸಂದರ್ಶಿಸಿದ್ದಾರೆ. ಈ ವೇಳೆ ಸ್ಥಳೀಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಕಾಸರಗೋಡಿನ ಮಣ್ಣಿನಲ್ಲಿ ಮಾದಕವಸ್ತುವಿಗೆ ಸ್ಥಾನವಿಲ್ಲ :ಮಾಫಿಯಾಗಳ ವಿರುದ್ಧ ಕಠಿಣ ಕ್ರಮ-ಗೃಹ ಸಚಿವ

ಕಾಸರಗೋಡು: ಆಪರೇಶನ್ ತೂಫಾನ್ ಕಾರ್ಯಾಚರಣೆಗೆ ಅತೀ ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿರುವುದು ತಾಯಂದಿರಾಗಿದ್ದಾರೆ. ಇವರು ದಿನಂಪ್ರತಿ ಕಳುಹಿಸುತ್ತಿರುವ ಪತ್ರಗಳು, ಫೋನ್ ಕರೆಗಳು ಹಾಗೂ ಸಂದೇಶಗಳು ಇದನ್ನು ಸಾಬೀತುಪಡಿಸುತ್ತಿವೆಯೆಂದು ರಾಜ್ಯ ಗೃಹ ಸಚಿವ ರಮೇಶ್ ಚೆನ್ನಿತ್ತಲ ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ನಾಯಮ್ಮಾರಮೂಲೆ ತನ್‌ಬೀಹುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯಲ್ಲಿ ನಿನ್ನೆ ನಡೆಸಿದ ‘ಆಪರೇಶನ್ ತೂಫಾನ್ ದಿ ನಾರ್ಕೋ ಹಂಟ್’ ಜಾಗರಣ್ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕಾಸರಗೋಡಿನ ಮಣ್ಣಿನಲ್ಲಿ ಮಾದಕವಸ್ತುಗಳಿಗೆ ಜಾಗವೊದ ಗಿಸುವುದಿಲ್ಲ. ಅದನ್ನು ತಡೆಯಲು ರಾಜ್ಯದ ಗಡಿ ಪ್ರದೇಶಗಳಲ್ಲಿ ತೂಪಾನ್ …