ಯುಡಿಎಫ್ ಮಂಜೇಶ್ವರ ಮಂಡಲ ಚುನಾವಣಾ ಸಮಾವೇಶ

ಉಪ್ಪಳ: ಯು.ಡಿ.ಎಫ್ ಮಂಜೇಶ್ವರ ಮಂಡಲ ಚುನಾವಣಾ ಸಮಾವೇಶ ನಿನ್ನೆ ನಯಬಜಾರಿ ನಲ್ಲಿರುವ ಫೆರೋ ಹಾಲ್‌ನಲ್ಲಿ ನಡೆಯಿತು. ಕರ್ನಾಟಕ ಆರೋಗ್ಯ ಮತ್ತು ದ.ಕ ಜಿಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು. ಅಜೀಜ್ ಮರಿಕೆ ಅಧ್ಯಕ್ಷತೆ ವಹಿಸಿದರು. ಸಂಸದ ರಾಜಮೋಹನ್ ಉಣ್ಣಿತ್ತಾನ್, ಅಭ್ಯರ್ಥಿ ಎ.ಕೆ.ಎಂ ಅಶ್ರಫ್, ಮಾಜಿ ಸಚಿವ ರಮಾನಾಥ ರೈ, ಆರ್.ಎಸ್.ಪಿ ನಾಯಕ ಬಾಲಕೃಷ್ಣನ್, ಎಂ.ಸಿ ಪ್ರಭಾಕರನ್, ಹಾದಿ ತಂಙಳ್, ಸುಬ್ಬಯ್ಯ ರೈ, ಸುಂದರ ಆರಿಕ್ಕಾಡಿ, ಅಶ್ರಫ್ ಕಾರ್ಲೆ, ಎ.ಕೆ ಆರೀಫ್, ಕಮಲಾಕ್ಷಿ, ಸೋಮಶೇಖರ ಜೆ.ಎಸ್, ಲಕ್ಷ÷್ಮಣ …

ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಬಿರುಸುಗೊಂಡ ಚುನಾವಣಾ ಪ್ರಚಾರ

ಉಪ್ಪಳ: ವಿಧಾನ ಸಭಾ ಕ್ಷೇತ್ರ ಚುನಾವಣೆಗೆ ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿರುವಂತೆ ಮಂಜೇಶ್ವರ ವಿಧಾನ ಸಭಾ ಕ್ಷೇತ್ರದಲ್ಲಿ ಸ್ಪರ್ಧಾಕಣದಲ್ಲಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್, ಯು.ಡಿ.ಎಫ್ ಅಭ್ಯರ್ಥಿ ಎ.ಕೆ.ಎಂ ಅಶ್ರಫ್, ಎಡರಂಗ ಅಭ್ಯರ್ಥಿ ಕೆ.ಆರ್.ಜಯಾನಂದ ಹಾಗೂ ಎಸ್.ಡಿ.ಪಿ.ಐ ಅಭ್ಯರ್ಥಿ ಕೆ.ಎಂ ಅಶ್ರಫ್‌ರ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ಸೋಂಕಾಲಿನಲ್ಲಿ ಗೋಡೆ ಬರಹದ ಮೂಲಕ ಪ್ರಚಾರಕ್ಕೆ ಚಾಲನೆ ನೀಡಿದ್ದರು. ಬಳಿಕ ವಿವಿಧ ಆರಾಧನಾಲಯದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಹಾಗೂ ಹಿರಿಯರನ್ನು ಭೇಟಿ ಮಾಡಿ ಮತಯಾಚನೆ ನಡೆಸಿದ್ದಾರೆ. ಮಂಗಲ್ಪಾಡಿ …

ಮಲಯಾಳಂ ಭಾಷಾ ಮಸೂದೆ ವಿರುದ್ಧ ಉಚ್ಛ ನ್ಯಾಯಾಲಯದಲ್ಲ್ಲಿ ರಿಟ್ ಅರ್ಜಿ ಸಲ್ಲಿಸಲು ನಿರ್ಧಾರ

ಕಾಸರಗೋಡು: ಕೇರಳ ಸರಕಾರದ ಮಲಯಾಳ ಭಾಷಾ ಮಸೂದೆಯ ವಿರುದ್ಧ ಕಾಸರಗೋಡಿನ ಕನ್ನಡಿಗರು ಮತ್ತು ಕನ್ನಡ ಸಂಘಟ ನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲು ಸಿದ್ಧತೆ ಅಂತಿಮ ಹಂತದಲ್ಲಿದೆ.ಈ ಮಸೂದೆಯು ಕನ್ನಡ ಭಾಷಾ ಅಲ್ಪಸಂಖ್ಯಾತರ ಹಕ್ಕುಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ತಜ್ಞರು ಅಭಿ ಪ್ರಾಯಪಟ್ಟಿದ್ದಾರೆ. ಮಸೂದೆಯಲ್ಲಿರುವ ವಿಧಿಗಳು ಸಂವಿಧಾನಾತ್ಮಕ ಹಕ್ಕುಗಳಿಗೆ ವಿರುದ್ಧವಾಗಿದ್ದು, ಕನ್ನಡ ಭಾಷೆಯ ಬಳಕೆ ಮತ್ತು ಅಭಿವೃದ್ದಿಗೆ ಅಡ್ಡಿಯಾಗಬಹುದು ಎಂಬ ಆತಂಕ ವ್ಯಕ್ತವಾಗಿದೆ.ಈ ಕುರಿತು ಕನ್ನಡ …

ಕನ್ನಡ ಗ್ರಾಮ ಗೋ ಕುಟೀರದ ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಇದರ 36ನೇ ಸಂಸ್ಥಾಪನಾ ವರ್ಷಾಚರಣೆ ಪ್ರಯುಕ್ತ  ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ಗೋ ಕುಟೀರದ ಕಾಮಗಾರಿಯ ಎರಡನೇ ಹಂತಕ್ಕೆ ಚಾಲನೆ ನೀಡಲಾಯಿತು.  ಕಳೆದ ನವಂಬರ್‌ನಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದರ ಮೊದಲ ಹಂತ ಪೂರ್ಣಗೊಂಡಿದ್ದು, ದ್ವಿತೀಯ ಹಂತದ ಕಾಮಗಾರಗೆ ಧಾರ್ಮಿಕ ಮುಂದಾಳು ಕೆ.ಎನ್. ವೆಂಕಟ್ರಮಣ ಹೊಳ್ಳ ನಿನ್ನೆ ಚಾಲನೆ ನೀಡಿದರು. ಈ ವೇಳೆ ಪ್ರತಿಷ್ಠಾನದ ಅಧ್ಯಕ್ಷ ಜಯರಾಮ ಕಾಸರಗೋಡು ಅಧ್ಯಕ್ಷತೆ ವಹಿಸಿದರು. …

ಶ್ರೀ ವಾಣಿಯ ಗಾಣಿಗ ಮಹಿಳಾ ಭಜನಾ ಮಂಡಳಿ ವಾರ್ಷಿಕೋತ್ಸವ

ಪೆರ್ಲ:  ಶ್ರೀ ವಾಣಿಯ ಗಾಣಿಗ ಮಹಿಳಾ ಭಜನಾ ಮಂಡಳಿ ಮಂಗಳೂರು ಇದರ ೫ನೇ ವಾರ್ಷಿಕೋತ್ಸವ ಕಾಟುಕುಕ್ಕೆ ಶ್ರೀ ಸುಬ್ರಾಯ ದೇವಸ್ಥಾನದಲ್ಲಿ ಜರಗಿತು. ಈ ವೇಳೆ ವಿಶೇಷ ಪೂಜೆ, ಭಜನಾ ಗುರುಗಳಾದ ರಾಮಕೃಷ್ಣ ಕಾಟುಕುಕ್ಕೆಯವರಿಗೆ ಗುರುವಂದನೆ ನಡೆಯಿತು.  ಇದೇ ವೇಳೆ ಭಜನಾ ತಂಡದ ಹಿರಿಯ ಸದಸ್ಯೆ ಅನಿತಾ ಟೀಚರ್‌ರನ್ನು ಸನ್ಮಾನಿಸಲಾಯಿತು. ಕಾಟುಕುಕ್ಕೆ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯೇಶ್ವರ ಮಹಿಳಾ ಭಜನಾ ಮಂಡಳಿ ಹಾಗೂ  ವನಿತಾ ಭಜನಾ ಮಂಡಳಿ ಸದಸ್ಯೆಯರಿಂದ ಭಜನೆ ಜರಗಿತು. ಮೃದಂಗದಲ್ಲಿ ತೇಜಸ್, ಹಾರ್ಮೋನಿಯಂನಲ್ಲಿ ಮನೋಜ್ ಸಹಕರಿಸಿದರು. ಅನಿತಾ, …

ನಿಲ್ಲಿಸಿದ್ದ ಲಾರಿ ಕಳವುಗೈದ ಇಬ್ಬರ ಬಂಧನ

ಕುಂಬಳೆ: ಬಂದ್ಯೋಡು ಬಳಿಯ ಅಡ್ಕದಿಂದ ಲಾರಿಯನ್ನು ಕಳವುಗೈದ ಪ್ರಕರಣದ ಆರೋಪಿ ಗಳನ್ನು ಗಂಟೆಗಳೊಳಗೆ ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಕಳವಿಗೀಡಾದ ಲಾರಿಯನ್ನು ಸೀತಾಂಗೋಳಿ ಬಳಿಯಿಂದ ಪತ್ತೆಹಚ್ಚಲಾಗಿದೆ.  ಕೊಡ್ಯಮ್ಮೆ ಇಚ್ಲಂಪಾಡಿ ಮುಳಿಯಡ್ಕ ನಿವಾಸಿ ಅಬ್ದುಲ್ಲ ಎ.ಪಿ. (32), ಎಡನಾಡು ಮುಕಾರಿಖಂಡದ ಮೊಹಮ್ಮದ್ ರಿಸ್ವಾನ್ (27) ಎಂಬಿವರನ್ನು ಕುಂಬಳೆ ಪೊಲೀಸ್ ಇನ್ಸ್‌ಪೆಕ್ಟರ್ ಬೈಜು ಕೆ. ಜೋಸ್, ಎಸ್‌ಐ ಸನಿತ್ ಎಂಬಿವರು ಬಂಧಿಸಿದ್ದಾರೆ. ಅಡ್ಕ ಝಡ್‌ಎಂಎಸ್ ಫಿಶ್ ಸರ್ವೀಸ್ ಕಚೇರಿಯ ಮುಂಭಾಗ ದಲ್ಲಿ  ಲಾರಿಯನ್ನು ಮಾರ್ಚ್ 21ರಂದು ರಾತ್ರಿ ನಿಲ್ಲಿಸಲಾಗಿತ್ತು. 22ರಂದು ಬೆಳಿಗ್ಗೆ …

ಬಸ್ ಪ್ರಯಾಣ ವೇಳೆ ಹೃದಯಾಘಾತ: ಚಿಗುರುಪಾದೆ ನಿವಾಸಿ ನಿಧನ

ಮಂಜೇಶ್ವರ: ಬಸ್ ಪ್ರಯಾಣ ವೇಳೆ ಹೃದಯಾಘಾತ ಉಂಟಾಗಿ ವ್ಯಕ್ತಿಯೋರ್ವರು ನಿಧನ ಹೊಂದಿದ ಘಟನೆ ನಡೆದಿದೆ. ಚೇವಾರು ನಿವಾಸಿ, ಚಿಗುರುಪಾದೆ ಬಾಡಿಗೆ ಕ್ವಾಟರ್ಸ್ನಲ್ಲಿ ವಾಸವಾಗಿರುವ ಮೊಹಮ್ಮದ್ (65) ಎಂಬವರು ನಿಧನ ಹೊಂದಿದ್ದಾರೆ. ನಿನ್ನೆ ಮಧ್ಯಾಹ್ನ ಇವರು ಉಪ್ಪಳದಿಂದ ಖಾಸಗಿ ಬಸ್‌ನಲ್ಲಿ ಹೊಸಂಗಡಿಗೆ ಪ್ರಯಾಣಿ ಸುತ್ತಿರುವ ವೇಳೆ ಹೃದಯಾಘಾತ ಉಂಟಾಗಿತ್ತೆನ್ನಲಾಗಿದೆ. ಕೂಡಲೇ ಇತರ ಪ್ರಯಾಣಿಕರನ್ನು ಇಳಿಸಿ ಬಸ್ ಸಿಬ್ಬಂದಿಗಳು ಅವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ವೈದ್ಯರು ತಪಾಸಣೆ ನಡೆಸಿದಾಗ ನಿಧನ ಹೊಂದಿದ್ದರು. ಮೃತರು ಪತ್ನಿ ಕದೀಜಮ್ಮ, ಮಕ್ಕಳಾದ ಅಬ್ದುಲ್ …

ಕಬಡ್ಡಿ ಸ್ಥಳದಲ್ಲಿ ಹೊಡೆದಾಟ ತಡೆಯಲು ಯತ್ನಿಸಿದ ದ್ವೇಷ : ಯುವಕರನ್ನು ಕೊಲೆಗೈಯ್ಯಲೆತ್ನಿಸಿದ ಪ್ರಕರಣದಲ್ಲಿ ಎಂಟು ಮಂದಿ ಬಂಧನ

ಮುಳ್ಳೇರಿಯ: ಕಬಡ್ಡಿ ಆಟದ ಸ್ಥಳದಲ್ಲಿ ನಡೆದ ಹೊಡೆದಾಟವನ್ನು ತಡೆಯಲು ಯತ್ನಿಸಿದ ದ್ವೇಷದಿಂದ ಯುವಕರ ಮೇಲೆ ಹಲ್ಲೆ ನಡೆಸಿ ಕೊಲೆಗೈಯ್ಯಲು ಪ್ರಯತ್ನಿಸಲಾಯಿತೆಂಬ ಪ್ರಕರಣದಲ್ಲಿ ಎಂಟು ಮಂದಿ ಆರೋಪಿಗಳನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಆದೂರು ಬರ್ತಕುನ್ನು ಹೌಸ್‌ನ ಸಿ.ಆರ್. ತಾಜುದ್ದೀನ್ (36), ಅಬ್ದುಲ್ ಸತ್ತಾರ್ (30), ಸಿ.ಎ. ನಗರದ ಅಬ್ಬಾಸ್ ಫೈಸಲ್ ಎ.ಪಿ (32), ಮುಹಮ್ಮದ್ ಸುರಕ್ಕಾತ ವೈ.ಎಂ. (35), ಆದೂರು ಬಣ್ಣಾಂತಬಾಡಿಯ ಬಿ. ಮುಹಮ್ಮದ್ ರಫೀಕ್ (32), ಆದೂರು ಮುಕ್ಕೂರು ಹೌಸ್‌ನ ಆಶಿಕ್ (29), ಕುಂಟಾರು ಮಞಂಪಾರೆ ಹೌಸ್‌ನ …

ತಂದೆಯನ್ನು ಕೊಲೆಗೈದ ಪ್ರಕರಣ: ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡ ಆರೋಪಿ ಸೆರೆ

ಮುಳ್ಳೇರಿಯ: ತಂದೆಯನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನಂತರ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಆದೂರು ಪೊಲೀಸರು ಬಂಧಿಸಿದ್ದಾರೆ. ಅಡೂರಿಗೆ ಸಮೀಪದ ಪಾಂಡಿ ವಳ್ಳಿರಿಕಯ ನಿವಾಸಿ ನರೇಂದ್ರ ಪ್ರಸಾದ್ (28) ಬಂಧಿತ ಆರೋಪಿ. 2022 ಎಪ್ರಿಲ್ 5ರಂದು ತಂದೆ ಬಾಲಕೃಷ್ಣ ನಾಯ್ಕರನ್ನು ಹೊಡೆದು ಕೊಲೆಗೈದ ಆರೋಪದಂತೆ ನರೇಂದ್ರ ಪ್ರಸಾದ್‌ನನ್ನು ಪೊಲೀಸರು ಬಂಧಿಸಿದ್ದರು. ನಂತರ ನ್ಯಾಯಾಂಗ ಬಂಧನಕ್ಕೊಳಗಾದ ಆರೋಪಿಗೆ ಆ ಬಳಿಕ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆ ಬಳಿಕ ಆತ ತಲೆಮರೆಸಿಕೊಂಡಿದ್ದನೆಂದು ಪೊಲೀಸರು ತಿಳಿಸಿದ್ದಾರೆ. ಈ …

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ 210 ಮಂಡಲಗಳು

ನವದೆಹಲಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕೇರಳದಲ್ಲಿ ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 210ಕ್ಕೇರಲಿದೆ. ಪ್ರಸ್ತುತ 140 ಮಂಡಲಗಳಿವೆ. 2029ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಪ್ರಸ್ತುತ ಇರುವ 20ರಿಂದ 30ಕ್ಕೇರಲಿದೆ. ಇದರೊಂದಿಗೆ ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ 543ರಿಂದ 816ಕ್ಕೇರಲಿದೆ. ದೇಶದಲ್ಲಿ ಮಹಿಳೆಯರಿಗೆ ಕಾನೂನು ನಿರ್ಮಾಣ ಸಭೆಗಳಲ್ಲಿ ಮೂರರಲ್ಲೊಂದು ಪ್ರಾತಿನಿಧ್ಯ ಖಚಿತಪಡಿಸುವ ಅಂಗವಾಗಿ 2023ರಲ್ಲಿ ನಾರಿವಂದನ್ ನಿಯಮವನ್ನು ಪಾರ್ಲಿಮೆಂಟ್ ಮಂಜೂರು ಮಾಡಿತ್ತು. 2029ರ ಲೋಕಸಭಾ ಚುನಾವಣೆಯಲ್ಲಿ 2026ರ ಜನಗಣತಿ ಅನುಸರಿಸಿ ಮಹಿಳಾ ಮೀಸಲಾತಿ ಜ್ಯಾರಿಗೊಳಿಸಬೇಕು ಎಂದು …