ಯುವಕ ನಾಪತ್ತೆ: ಬೈಕ್ ಹೊಳೆ ಬಳಿ ಪತ್ತೆ, ವ್ಯಾಪಕ ಶೋಧ
ಕಾಸರಗೋಡು: ಯುವಕನೋರ್ವ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದ್ದು, ಇದೇ ಸಂದರ್ಭದಲ್ಲಿ ಆತನ ಬೈಕ್ ಹೊಳೆ ಬಳಿ ಪತ್ತೆಯಾಗಿದೆ. ಕೋಡೋಂ ಗ್ರಾಮ ಕರಿಯಂವಳಪ್ಪಿನ ಬಾಲಕೃಷ್ಣನ್ ಎಂಬವರ ಪುತ್ರ, ಪೊಯಿನಾಚಿಯ ವಾಹನ ಶೋರೂಂ ಸಿಬ್ಬಂದಿ ಸಜಿತ್ಲಾಲ್ (26) ನಾಪತ್ತೆಯಾದ ಯುವಕ. ಇವರು ಮೊನ್ನೆ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಕೆಲಸ ಮಾಡುವ ಕಚೇರಿಗೆ ಹೋಗಿದ್ದು ನಂತರ ಅವರು ಮನೆಗೆ ಹಿಂತಿರುಗಿಲ್ಲ ವೆಂದು ರಾಜಪುರಂ ಪೊಲೀಸ್ ಠಾಣೆಗೆ ಮನೆಯವರು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ಬೇಕಲ ಪೊಲೀಸ್ ಠಾಣೆ ವ್ಯಾಪ್ತಿಗೊಳ ಪಟ್ಟ …