ಪೊಡಿಪ್ಪಳ್ಳ -ಬೆಳಿಂಜ ರಸ್ತೆ ಅಭಿವೃದ್ಧಿಗೊಳಿಸುವುದಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಭರವಸೆ

ಕುಂಬ್ಡಾಜೆ: ಪೊಡಿಪ್ಪಳ್ಳ- ಕುಂಬ್ಡಾಜೆ- ಬೆಳಿಂಜ- ನಾಟೆಕಲ್ಲು ಜಿಲ್ಲಾ ಪಂಚಾಯತ್ ರಸ್ತೆ ಅಭಿವೃದ್ಧಿಗೊಳಿಸಲಾಗುವುದೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಾಬು ಎಬ್ರಹಾಂ ಜನಪರ ಅಭಿವೃದ್ಧಿ ಸಮಿತಿಗೆ ಭರವಸೆ ನೀಡಿದರು. ಸಮಿತಿ ಪ್ರತಿನಿಧಿಗಳು ಈ ಬಗ್ಗೆ ನೀಡಿದ ಮನವಿಗೆ ಉತ್ತರವಾಗಿ ಅವರು ಈ ಭರವಸೆ ನೀಡಿದ್ದಾರೆ. ರಸ್ತೆಗೆ ತುರ್ತಾಗಿ ಮಾಡಬೇಕಾದ ಕೆಲಸ ಆರಂಭಗೊಂಡಿತು. ರೀ ಟಾರಿಂಗ್ ನಡೆಸಿ ರಸ್ತೆಯನ್ನು ಸಂಚಾರ ಯೋಗ್ಯಗೊಳಿಸಲಾಗುವುದೆಂದು ಅವರು ತಿಳಿಸಿದರು. ಜನಪರ ಸಮಿತಿ ಸದಸ್ಯರಾದ ನ್ಯಾಯವಾದಿ ಪ್ರಸನ್ನ ಕುಮಾರ್, ಡಾ. ವೇಣುಗೋಪಾಲ್ ಕೆ, ಫಾರೂಕ್ ಕುಂಬ್ಡಾಜೆ, ನಾರಾಯಣ …

ರಾಷ್ಟ್ರೀಯ ಹೆದ್ದಾರಿ: ಸರ್ವೀಸ್ ರಸ್ತೆ ಪ್ರವೇಶಿಸದ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕು- ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ

ಕಾಸರಗೋಡು: ಸರ್ವೀಸ್ ರಸ್ತೆಗೆ ಪ್ರವೇಶಿಸದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾತ್ರ ಸೇವೆ ನಡೆಸುತ್ತಿರುವ ಬಸ್‌ಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯ ಮೊಗ್ರಾಲ್ ಪುತ್ತೂರು ಘಟಕದ ಮಹಾಸಭೆ ಆಗ್ರಹಪಟ್ಟಿದೆ. ಹಲವು ಬಸ್‌ಗಳು ಸರ್ವೀಸ್ ರಸ್ತೆಗೆ ಪ್ರವೇಶಿಸದೆ ನೇರವಾಗಿ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗುತ್ತಿವೆ. ಇದು ವಿದ್ಯಾರ್ಥಿಗಳು, ವ್ಯಾಪಾರಿಗಳು ಹಾಗೂ ಇತರ ಪ್ರಯಾಣಿಕರನ್ನು ತೀವ್ರ ಸಂಕಷ್ಟದಲ್ಲಿ ಸಿಲುಕಿಸುವಂತೆ ಮಾಡುತ್ತಿದೆ. ಆದ್ದರಿಂದ ಸಂಬಂಧಪಟ್ಟವರು ಇದಕ್ಕೆ ತುರ್ತು ಪರಿಹಾರ ಕ್ರಮಕೈಗೊಳ್ಳಬೇಕೆಂದು ಸಭೆ ಆಗ್ರಹಪಟ್ಟಿದೆ. ಘಟಕದ ಅಧ್ಯಕ್ಷ ಎಸ್.ಎಂ. …

ವಿಶ್ವ ಪರಿಸರ ದಿನಾಚರಣೆ: ಎಕೆಪಿಎ ಈಸ್ಟ್ ಘಟಕದಿಂದ ಗಿಡ ವಿತರಣೆ

ಕಾಸರಗೋಡು: ವಿಶ್ವ ಪರಿಸರ ದಿನಾಚರಣೆಯಂಗವಾಗಿ ಎಕೆಪಿಎ ಭವನದಲ್ಲಿ ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಈಸ್ಟ್ ಘಟಕದ ನೇತೃತ್ವದಲ್ಲಿ ಗಿಡ ವಿತರಣೆ ನಡೆಯಿತು. ವಲಯಾಧ್ಯಕ್ಷ ವಾಮನ್ ಕುಮಾರ್ ಸಂಜೀವ ರೈಯವರಿಗೆ ಗಿಡ ನೀಡಿ ಉದ್ಘಾಟಿಸಿದರು. ಬಳಿಕ ೫೦ ಗಿಡಗಳನ್ನು ಘಟಕದ ಸದಸ್ಯರಿಗೆ ವಿತರಿಸಲಾಯಿತು. ಕಾರ್ಯದರ್ಶಿ ಅಖಿಲ್ ಸ್ವಾಗತಿಸಿದರು. ಕೋಶಾಧಿಕಾರಿ ಶ್ರೀಕಾಂತ್, ನೇಚರ್ ಕ್ಲಬ್ ಕೋ-ಆರ್ಡಿನೇಟರ್ ದಿನೇಶ್, ಮನೀಶ್, ಸತೀಶ್ ಭಾಗವಹಿಸಿದರು.

ಹೊನ್ನಮೂಲೆ ಕ್ಷೇತ್ರಕ್ಕೆ ಧರ್ಮಸ್ಥಳದಿಂದ ಸಹಾಯ ಮೊತ್ತ ಹಸ್ತಾಂತರ

ಕಾಸರಗೋಡು: ಹೊನ್ನಮೂಲೆ ಶ್ರೀ ಮಹಾಮಾಯಿ ದುರ್ಗಾಪರ ಮೇಶ್ವರಿ ದೇವಸ್ಥಾನ ನೂತನ ಶಿಲಾಮಯದಿಂದ ನಿರ್ಮಾಣವಾಗು ತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ೨ಲಕ್ಷ ರೂ. ನೀಡಿರುತ್ತಾರೆ. ಈ ಮೊತ್ತದ ಡಿ.ಡಿ.ಯನ್ನು ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆಯ ಕಾಸರಗೋಡು ಯೋಜನಾಧಿಕಾರಿ ದಿನೇಶ್, ದರ್ಮಸ್ಥಳ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾಸರಗೋಡು ಇದರ ಗೌರವಾಧ್ಯಕ್ಷ ಜಯಾನಂದ ಕುಮಾರ್ ಹೊಸದುರ್ಗ, ಅಧ್ಯಕ್ಷ ಕೆ. ಎನ್. ವೆಂಕಟ್ರಮಣ ಹೊಳ್ಳ,  ವಲಯ ಮೆಲ್ವಿಚಾರಕ ಗೋಪಾಲಕೃಷ್ಣ, ಜನ ಜಾಗೃತಿ ವಲಯ ಅಧ್ಯಕ್ಷ ಕಿರಣ ಪ್ರಸಾದ್ ಕೂಡ್ಲು ಇವರು ಕ್ಷೇತ್ರ …

ಚೆರ್ಕಳದಲ್ಲಿ ಮಳೆನೀರಿನೊಂದಿಗೆ ಮಣ್ಣು ಹರಿಯುವುದನ್ನು ತಡೆಗಟ್ಟಲು ತುರ್ತು ಕ್ರಮ

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ 66ರ ಅಭಿವೃದ್ಧಿಗೆ ಸಂಬಂಧಿಸಿ ಚೆರ್ಕಳದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕಾಗಿ ರಾಶಿ ಹಾಕಿದ್ದ ಮಣ್ಣು ಮಳೆ ನೀರಿನೊಂದಿಗೆ ಕೆಳ ಭಾಗದಲ್ಲಿದ್ದ ಮನೆಗಳಿಗೆ ಹರಿದು ಬಂದು ಉಂಟಾದ ಸಮಸ್ಯೆಗೆ ತುರ್ತು ಪರಿಹಾರ ಕಾಣಬೇಕೆಂದು ಆಗ್ರಹಿಸಿದ ಹಿನ್ನೆಲೆಯಲ್ಲಿ ಪರಿಹಾರ ಕ್ರಮ ಉಂಟಾಗುತ್ತಿದೆ. ಚೆಂಗಳ ಪಂಚಾಯತ್‌ನ ಅಧ್ಯಕ್ಷ ವಸಂತ  ಅಜಕ್ಕೋಡ್, ವಾರ್ಡ್ ಪ್ರತಿನಿಧಿಗಳು, ಇತರ ಜನಪ್ರತಿನಿಧಿಗಳು ತೀವ್ರ ಬೇಡಿಕೆ ಒಡ್ಡಿದ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳ ಸಂದರ್ಶಿಸಿ ತುರ್ತು ಕ್ರಮ ಕೈಗೊಳ್ಳಲು ಯೋಜನೆ ಹಾಕಿದ್ದಾರೆ. ಕಾಸರಗೋಡು ಆರ್‌ಡಿಒ ಬಿನು ಜೋಸೆಫ್, ತಹಶೀಲ್ದಾರ್ …

ಇಂಧನ ಬೆಲೆ ಏರಿಕೆ: ಸಿಪಿಎಂನಿಂದ ಪ್ರತಿಭಟನೆ

ಉಪ್ಪಳ: ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಗೆದುರಾಗಿ ಸಿಪಿಎಂ ನೇತೃತ್ವದಲ್ಲಿ ರಾಜ್ಯದೆ ಲ್ಲಡೆ ಪ್ರತಿಭಟನೆ ನಡೆಸುವುದರ ಅಂಗವಾಗಿ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪೈವಳಿಕೆ ಅಂಚೆ ಕಚೇರಿಗೆ ಧರಣಿ ನಡೆಸಲಾಯಿತು. ಸಿಪಿಎಂ ರಾಜ್ಯ ಸಮಿತಿ ಸದಸ್ಯ ಕೆ.ಪಿ ಸತೀಶ್ಚಂದ್ರನ್ ಉದ್ಘಾಟಿಸಿ ಮಾತನಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಆರ್ ಜಯಾನಂದ ಮಾತನಾಡಿದರು. ಸಿಪಿಎಂ ಏರಿಯಾ ಸಮಿತಿ ಸದಸ್ಯ ಅಬ್ದುಲï ರಝಾಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದ್ದರು. ಸಿಪಿಎಂ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಸಿಜಿ ಮ್ಯಾಥ್ಯು ಸ್ವಾಗತಿಸಿದರು. ಏರಿಯಾ ಸಮಿತಿ …

ಪುತ್ತಿಗೆ ಪಂಚಾಯತ್‌ನ ಸ್ಥಳದಿಂದ ಮರಗಳನ್ನು ಕಡಿದು ಸಾಗಾಟ: ಕೇಸು ದಾಖಲು; ಪಂಚಾಯತ್ ಕಚೇರಿಗೆ ಡಿವೈಎಫ್‌ಐ ಮಾರ್ಚ್

ಪುತ್ತಿಗೆ: ಪುತ್ತಿಗೆ ಪಂಚಾಯತ್‌ನ ಅಧೀನತೆಯಲ್ಲಿರುವ ಸ್ಥಳದಿಂದ 1 ಲಕ್ಷ ರೂ. ಮೌಲ್ಯದ ಮರಗಳನ್ನು ಕಡಿದು ಸಾಗಿಸಿರುವುದಾಗಿ ದೂರಲಾಗಿದೆ. ಈ ಬಗ್ಗೆ ಕಾರ್ಯದರ್ಶಿ ಸುದೀಶ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಎಡನಾಡು ವಿಲ್ಲೇಜ್‌ನ ಕೋರ್ನಕಂಡ ಎಂಬಲ್ಲಿ ಪಂಚಾಯತ್ ಅಧೀನತೆಯಲ್ಲಿರುವ ತೋಡಿನ ಬದಿಯಲ್ಲಿದ್ದ ಸುಮಾರು 50 ವರ್ಷಗಳ ಹಳಮೆಯುಳ್ಳ ಮಾವು, ಹಾಲೆ, ಅಕೇಶಿಯಾ ಮರಗಳನ್ನು ಕಡಿದು ಸಾಗಿಸಿರುವುದಾಗಿ ಪಂಚಾಯತ್ ಕಾರ್ಯದರ್ಶಿ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮೇ 26ರಂದು ಮರ ಕಡಿದು ಸಾಗಿಸಿರುವುದಾಗಿ ಸಂಶಯಿಸಲಾಗುತ್ತಿದೆ. ತೋಡಿನ …

ಹಿರಿಯ ವ್ಯಾಪಾರಿ ನಿಧನ

ಬದಿಯಡ್ಕ:  ಬದಿಯಡ್ಕ ಬಸ್ ನಿಲ್ದಾಣ ಬಳಿಯ ನಿವಾಸಿ ಉಮಾನಾಥ್ ಕಾಮತ್ (72) ನಿನ್ನೆ ರಾತ್ರಿ ನಿಧನ ಹೊಂದಿದರು. ಹಿರಿಯ ಆರ್‌ಎಸ್‌ಎಸ್ ಕಾರ್ಯಕರ್ತನೂ ಆಗಿದ್ದ ಇವರು ಬದಿಯಡ್ಕದ ವಿದ್ಯಾದೀಪ ವೆರೈಟಿ ಸ್ಟೋರ್ಸ್‌ನ ಮಾಲಕನಾಗಿದ್ದರು. ಮೃತರು ಪತ್ನಿ ಉಷಾ ಕಾಮತ್, ಮಕ್ಕಳಾದ ದೀಪ, ವಿದ್ಯಾ, ಅಳಿಯ ಪ್ರಮೋದ್ ಕುಮಾರ್ ಕಿಣಿ, ಸಹೋ ದರ ಸುಬ್ರಹ್ಮಣ್ಯ ಕಾಮತ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಬಸ್ ಮಾಲಕ ನಿಧನ

ಕಾಸರಗೋಡು: ಕಾಸರಗೋಡು- ತಲಪಾಡಿ ರೂಟ್‌ನಲ್ಲಿ ಸಂಚರಿಸುವ ನೈಮಾ ಬಸ್‌ನ ಮಾಲಕ ಮೊಗ್ರಾಲ್ ರಹ್ಮತ್ ನಗರದ ನೈಮಾ ಮಂಜಿಲ್ ನಿವಾಸಿ ನಸೀರ್ ಯಾನೆ ನಜ್ಜು (50) ನಿಧನ ಹೊಂದಿದರು. ಅಲ್ಪಕಾಲದಿಂದ ಅಸೌಖ್ಯ ಬಾಧಿಸಿ ಇವರು ಚಿಕಿತ್ಸೆಯಲ್ಲಿದ್ದರು. ಮೃತರು ಪತ್ನಿ ನೂರ್‌ಜಹಾನ್, ಮಕ್ಕಳಾದ ಮಿಸ್ರಿಯ, ನುಹುಮಾನ್, ನುಫ, ನೂರ, ಸಹೋದರರಾದ ನಿಸಾರ್, ಶಬೀರ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಮೃತದೇಹದ ಅಂತ್ಯ ಸಂಸ್ಕಾರ ಇಂದು ಬೆಳಿಗ್ಗೆ ಮೊಗ್ರಾಲ್ ಚಳಿಯಂಗೋಡ್ ಜುಮಾ ಮಸೀದಿ ಪರಿಸರದಲ್ಲಿ ನಡೆಸಲಾಯಿತು.

ವಿಧಾನಸಭೆಯಲ್ಲಿ ಶ್ವೇತಪತ್ರ ಮಂಡಿಸಿದ ಸರಕಾರ: ಕೇರಳದ: ಒಟ್ಟು ಸಾಲ 5.07 ಲಕ್ಷ ಕೋಟಿ ರೂ.

ತಿರುವನಂತಪುರ: ಕೇರಳದ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಸಮಗ್ರ ಮಾಹಿತಿಗಳು  ಒಳಗೊಂಡ ಶ್ವೇಪತ್ರವನ್ನು ಮುಖ್ಯಮಂತ್ರಿ ವಿ.ಡಿ. ಸತೀಶನ್ ವಿಧಾನಸಭೆಯಲ್ಲಿ ಇಂದು ಬೆಳಿಗ್ಗೆ ಮಂಡಿಸಿದರು.  ಕೇರಳದ ಆರ್ಥಿಕ ಸ್ಥಿತಿ ಅತ್ಯಂತ ಗಂಭೀರವಾಗಿದ್ದು, ಒಟ್ಟು 5.07 ಲಕ್ಷ ಕೋಟಿ ರೂ. ಗಳ ಸಾಲ ಹೊಂದಿದೆ. ಸರಕಾರದ ಒಟ್ಟು ವಾರ್ಷಿಕ ಆದಾಯದಲ್ಲಿ ಶೇ. 77ರಷ್ಟು ಮೊತ್ತವನ್ನು ಸರಕಾರಿ ಸಿಬ್ಬಂದಿಗಳ ವೇತನ, ಪಿಂಚಣಿ ಮತ್ತು  ಪಡೆದ ಸಾಲದ ಬಡ್ಡಿ ಪಾವತಿಗಾಗಿ ವಿನಿಯೋಗಿಸಲಾಗುತ್ತಿದೆ. ರಾಜ್ಯದ ಸಾಲದ ಸ್ಥಿತಿ ಮಿತಿಮೀರ ತೊಡಗಿದ್ದು, ಇದನ್ನು ನಿಯಂತ್ರಿಸುವ ಅಗತ್ಯವಿದೆಯೆಂದು ಮುಖ್ಯಮಂತ್ರಿ …