ಯುವತಿ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಓರ್ವ ಆರೋಪಿ ಬಂಧನ: ಇನ್ನೋರ್ವನಿಗಾಗಿ ಶೋಧ
ಹೊಸಂಗಡಿ: ಹೊಸಂಗಡಿ ಪೇಟೆಯಲ್ಲಿ ಹಾಡಹಗಲೇ ಯುವತಿಯ ಕುತ್ತಿಗೆಯಿಂದ ಎರಡೂಕಾಲು ಪವನ್ ಚಿನ್ನದ ಸರ ಕಸಿದು ಪರಾರಿಯಾದ ಆರೋಪಿಗಳ ಪೈಕಿ ಓರ್ವ ಸೆರೆಗೀಡಾಗಿದ್ದಾನೆ. ಬಂಬ್ರಾಣ ಕಳತ್ತೂರು ಚೆಕ್ಪೋಸ್ಟ್ ಬಳಿಯ ನಿವಾಸಿ ಸಂದೀಪ್ ಎ ಯಾನೆ ಸಂತು (31) ಎಂಬಾತನನ್ನು ಮಂಜೇಶ್ವರ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಸರ ಎಗರಿಸಲು ಈತನೊಂದಿಗಿದ್ದ ಇನ್ನೋರ್ವನ ಪತ್ತೆಗಾಗಿ ಶೋಧ ಮುಂದುವರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುವತಿಯ ಕುತ್ತಿಗೆಯಿಂದ ಕಸಿದ ಚಿನ್ನದ ಸರವನ್ನು ಆರೋಪಿಗಳು ಕಾಸರಗೋಡಿನ ಜ್ಯುವೆಲ್ಲರಿ ಯೊಂದರಲ್ಲಿ ಅಡವಿರಿಸಿದ್ದು, ಅದನ್ನು ಪೊಲೀಸರು ವಶಕ್ಕೆ ತೆಗೆದುಕೊಂ ಡಿದ್ದಾರೆ. …
Read more “ಯುವತಿ ಕುತ್ತಿಗೆಯಿಂದ ಚಿನ್ನದ ಸರ ಎಗರಿಸಿದ ಓರ್ವ ಆರೋಪಿ ಬಂಧನ: ಇನ್ನೋರ್ವನಿಗಾಗಿ ಶೋಧ”