ಅಪಘಾತಕ್ಕೀಡಾದ ಬೈಕ್ ಕಳವುಗೈದ ಆರೋಪಿ ಬಂಧನ

ಮಂಜೇಶ್ವರ: ಅಪಘಾತಕ್ಕೀಡಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಲ್ಲಿಸಿದ್ದ ಬೈಕ್ ಕಳವುಗೈದ ಆರೋಪಿ ಸೆರೆಗೀಡಾಗಿದ್ದಾನೆ. ಮೀಂಜ ಸಂತಡ್ಕ ನಿವಾಸಿ ಮುಹಮ್ಮದ್ ಮುನ್ನ (21) ಎಂಬಾತನನ್ನು ಮಂಜೇಶ್ವರ ಎಸ್‌ಐ  ವೈಷ್ಣವ್ ರಾಮಚಂದ್ರನ್ ಹಾಗೂ ತಂಡ ಬಂಧಿಸಿದೆ. ಕರ್ನಾಟಕದ ಗದಗ ನಿವಾಸಿಯೂ ಕಾಸರಗೋಡು ನುಳ್ಳಿಪ್ಪಾಡಿಯ ಕ್ವಾರ್ಟರ್ಸ್‌ನಲ್ಲಿ ವಾಸಿಸುವ ಎಂ.ಎನ್. ಸಂತೋಷ್ ಎಂಬವರ ಬೈಕ್ ಕಳವುಗೈದ ಪ್ರಕರಣದಲ್ಲಿ ಮುಹಮ್ಮದ್ ಮುನ್ನನನ್ನು ಬಂಧಿಸಲಾಗಿದೆ. ಸಂತೋಷ್ ಚಲಾಯಿಸಿದ ಬೈಕ್ ಮೇ 1ರಂದು ರಾತ್ರಿ 9.30ಕ್ಕೆ ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿತ್ತು.  ಕಾರಿನ ಹಿಂಬದಿಗೆ ಬೈಕ್ …

ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಾತ ಬಂಧನ

ಕುಂಬಳೆ: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡ ವ್ಯಕ್ತಿಯನ್ನು ಸೆರೆಹಿಡಿಯಲಾಗಿದೆ. ಕುಂಬಳೆ ಆರಿಕ್ಕಾಡಿ ಬನ್ನಂಗಳ ನಿವಾಸಿ ಅಬ್ದುಲ್ ಜಲೀಲ್ ಯಾನೆ ಜಲ್ಲು (28) ಎಂಬಾತನನ್ನು ಕುಂಬಳೆ ಎಸ್ ಐ ಅನಂತಕೃಷ್ಣನ್ ಆರ್ ಮೆನೋನ್ ಹಾಗೂ ತಂಡ  ಬಂಧಿಸಿದೆ. ೨೦೨೧ರಲ್ಲಿ ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ದಾಖಲಾದ ಹತ್ಯೆಯತ್ನ ಪ್ರಕರಣ, ಕುಂಬಳೆ ಠಾಣೆಯಲ್ಲಿ ದಾಖಲಾದ ಆಮ್ಸ್ ಆಕ್ಟ್ ಪ್ರಕರಣ, ಹೊಡೆದಾಟ, ಗಾಂಜಾ ಮೊದಲಾದ ಪ್ರಕರಣಗಳಲ್ಲಿ ಅಬ್ದುಲ್ ಜಲೀಲ್  ಆರೋಪಿಯಾಗಿದ್ದಾನೆ. ಅನಂತರ ತಲೆಮರೆಸಿಕೊಂಡಿದ್ದ ಈತನಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಈಮಧ್ಯೆ ಇತ್ತೀಚೆಗೆ ಈತ …

ಕುಂಬಳೆಯಲ್ಲಿ ಬಸ್ ನಿಲ್ದಾಣ, ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮರುಜೀವ: ಇಂಜಿನಿಯರ್ ಸ್ಥಳ ಸಂದರ್ಶಿಸಿ ಪರಿಶೀಲನೆ

ಕುಂಬಳೆ: ಹನ್ನೆರಡು ವರ್ಷಗಳ ಹಿಂದೆ ಕೆಡವಲಾದ ಕುಂಬಳೆ ಬಸ್ ನಿಲ್ದಾಣದ ಬದಲಿಯಾಗಿ ನೂತನ ಬಸ್ ನಿಲ್ದಾಣ ಹಾಗೂ ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಮತ್ತೆ ಕಾಲ ಕೂಡಿ ಬಂದಿದೆ. ನಿರ್ಮಾಣಕ್ಕೆ ಚಾಲನೆ ನೀಡುವ ಅಂಗವಾಗಿ ಇಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಾಲ್ಕಂತಸ್ತಿನ ಕಟ್ಟಡ ನಿರ್ಮಿ ಸಲಿರುವ ಯೋಜನೆ ಸಿದ್ಧಪಡಿಸ ಲಾಗಿದೆ. ಗ್ರೌಂಡ್ ಫ್ಲೋರ್‌ನಲ್ಲಿ ವಾಹನ ಪಾರ್ಕಿಂಗ್, ಸ್ಯಾನಿಟರಿ ಸೌಕರ್ಯ ಏರ್ಪಡಿಸಲಾಗು ವುದು. ಒಂದು ಹಾಗೂ ಎgಡನೇ ಮಹಡಿಗಳು ಶಾಪಿಂಗ್ ಕಾಂಪ್ಲೆಕ್ಸ್ ಗಳಾಗಿರುವುದು. ನಾಲ್ಕನೇ ಮಹಡಿ ಯಲ್ಲಿ …

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಮಹಾಸಭೆ, ನೂತನ ಪದಾಧಿಕಾರಿಗಳ ಆಯ್ಕೆ

ಕಾಸರಗೋಡು: ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘ ಕಾಸರಗೋಡು ಇದರ ಕೇಂದ್ರ ಸಮಿತಿ ಮಹಾಸಭೆ ಬೀರಂತಬೈಲುನಲ್ಲಿರುವ ಕನ್ನಡ ಅಧ್ಯಾಪಕಭವನದಲ್ಲಿ ನಡೆಯಿತು. ಕೇಂದ್ರ ಸಮಿತಿ ಅಧ್ಯಕ್ಷ ಸುಕೇಶ್ ಎ. ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಶರತ್ ಕುಮಾರ್ ಲೆಕ್ಕಪತ್ರ ಮಂಡಿಸಿದರು. ಕುಂಬಳೆ ಉಪಜಿಲ್ಲಾ ಅಧ್ಯಕ್ಷ ಹರ್ಷ ಎಂ.ಪಿ., ಬೇಕಲ ಹೊಸದುರ್ಗ ಉಪಜಿಲ್ಲಾ ಸಮಿತಿ ಅಧ್ಯಕ್ಷ ವಿಠಲ ಅಡ್ವಳ, ಕಾಸರಗೋಡು ಉಪಜಿಲ್ಲಾ ಅಧ್ಯಕ್ಷ ಕುಶ ಪಿ.ಎಲ್, ಕಾರ್ಯದರ್ಶಿ ಪೂರ್ಣಿಮ …

ಹೃದಯಾಘಾತ ಯುವಕ ನಿಧನ

ಬಂದ್ಯೋಡು: ಅಡ್ಕ ಭಗವತೀನಗರ ನಿವಾಸಿ ದಿ| ಕುಂಞಿರಾಮ ಎಂಬವರ ಪುತ್ರ ಕೂಲಿ ಕಾರ್ಮಿಕ ಸುರೇಶ್ (48) ನಿಧನ ಹೊಂದಿದರು. ಹೃದಯಾಘಾತ ಮರಣಕ್ಕೆ ಕಾರಣವೆನ್ನಲಾಗಿದೆ. ಮೃತರು ತಾಯಿ ಯಮುನ, ಸಹೋದರ- ಸಹೋದರಿಯರಾದ ಗೀತ, ಶಶಿಕಲ, ಸಂತೋಷ್, ಸುಮಿತ್ರ, ಸುನಿಲ್, ಹರೀಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಬದಿಯಡ್ಕ, ಕಾಸರಗೋಡಿನಲ್ಲಿ  ಕಾಂಗ್ರೆಸ್‌ನಿಂದ ಹರ್ಷಾಚರಣೆ

ಬದಿಯಡ್ಕ: ಕೇರಳ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್‌ರನ್ನು ಆಯ್ಕೆ ಮಾಡಿರುವುದಕ್ಕೆ ಹರ್ಷ ಸೂಚಿಸಿ ಬದಿಯಡ್ಕ ಮಂಡಲ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಬದಿಯಡ್ಕದಲ್ಲಿ  ಮೆರವಣಿಗೆ ನಡೆಸಲಾಯಿತು. ಮಂಡಲ ಕಾಂಗ್ರೆಸ್ ಅಧ್ಯಕ್ಷ ಶ್ಯಾಮ್ ಪ್ರಸಾದ್ ಮಾನ್ಯ, ನೇತಾರರಾದ ಪಿ.ಜಿ. ಚಂದ್ರಹಾಸ ರೈ, ತಿರುಪತಿ ಕುಮಾರ್ ಭಟ್, ಶ್ರೀನಾಥ್ ಬದಿಯಡ್ಕ, ರಾಮ ಪಟ್ಟಾಜೆ, ನಾರಾಯಣ ಭಂಡಾರಿ, ಲೋಹಿತಾಕ್ಷ ಪಟ್ಟಾಜೆ, ಕುಮಾರನ್ ನಾಯರ್, ರಜನಿ, ರವಿ ಕುಂಟಾಲುಮೂಲೆ, ಕೃಷ್ಣ ಕುಮಾರ್ ಪಿ, ಗಿರೀಶ್, ನಿಜೀಶ್ ಪಟ್ಟಾಜೆ, ಉದಯ ಕುಂಟಾಲುಮೂಲೆ, ಸತೀಶ್ ಪೆರುಮುಂಡ, ಖಮರುದ್ದೀನ್, ವಿನ್ಸೆಂಟ್ …

ದತ್ತಿನಿಧಿ ಪ್ರಶಸ್ತಿ ಪ್ರದಾನ, ಕನ್ನಡ ಸಂಸ್ಕೃತಿ ಉತ್ಸವ ನಾಳೆ

ಪೈವಳಿಕೆ: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ಇದರ ಜಂಟಿ ಆಶ್ರಯದಲ್ಲಿ ದತ್ತಿನಿಧಿ ಪ್ರಶಸ್ತಿ ಪ್ರದಾನ ಹಾಗೂ ಕನ್ನಡ ಸಂಸ್ಕೃತಿ ಉತ್ಸವ ನಾಳೆ ಬೆಳಿಗ್ಗೆ ೯ರಿಂದ ಕುಡಾಲುಮೇರ್ಕಳ ಅನುದಾನಿತ ಕಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಲಿದೆ. ಬೆಳಿಗ್ಗೆ ೯ಕ್ಕೆ ಶೋಭಾಯಾತ್ರೆ ಆರಂಭಗೊಳ್ಳಲಿದ್ದು, ಪೈವಳಿಕೆ ಪಂ. ಅಧ್ಯಕ್ಷೆ ಬದರುನ್ನೀಸ ಸಲೀಂ, ಸೀತಾರಾಮ ಶೆಟ್ಟಿ ಭಂಡಾರಗುತ್ತು ಚಾಲನೆ ನೀಡುವರು. ಬಳಿಕ ಸುಗಮ …

ಅಸೌಖ್ಯ: ಚಿಕಿತ್ಸೆಯಲ್ಲಿದ್ದ ಮಹಿಳೆ ನಿಧನ

ಬದಿಯಡ್ಕ: ಅಸೌಖ್ಯ ತಗಲಿ ಚಿಕಿತ್ಸೆಯಲ್ಲಿದ್ದ ಮಹಿಳೆ ಮೃತಪಟ್ಟರು. ಪೆರಡಾಲ ಪ್ರಶಾಂತಿ ನಿಲಯದ ಪ್ರೇಮಲತ (60) ನಿಧನ ಹೊಂದಿದವರು. ಇವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದು, ಅಲ್ಲಿ ನಿಧನ ಸಂಭವಿಸಿದೆ. ಮೃತರು ಪತಿ ಕೃಷ್ಣಪ್ರಸಾದ್ ರೈ (ಪೆರಡಾಲ ಎಜ್ಯುಕೇಷನ್ ಸೊಸೈಟಿ ಮೆನೇಜಿಂಗ್ ಕಮಿಟಿ ಸದಸ್ಯ), ಪುತ್ರಿ ಪ್ರಜ್ಞ, ಅಳಿಯ ಪ್ರತಿವಿಂಧು, ಸಹೋದರರಾದ ಗಂಗಾಧರ್ ರೈ, ಲೋಕನಾಥ ಶೆಟ್ಟಿ, ಸುರೇಶ್ ರೈ, ಸಹೋದರಿಯರಾದ ಕೃಷ್ಣವೇಣಿ, ಬೇಬಿ, ಕಸ್ತೂರಿ, ಅನುರಾಧ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಲಾರಿ-ಬೈಕ್ ಢಿಕ್ಕಿ ಹೊಡೆದು ಬಿಬಿಎ ವಿದ್ಯಾರ್ಥಿ ಮೃತ್ಯು

ಕಾಸರಗೋಡು: ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರನಾದ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ. ಉದುಮ ಕೋಟೆಕುನ್ನಿನ ನಸೀರ್- ರಸೀನಾ ದಂಪತಿ ಪುತ್ರ ಲುಕ್ಮಾನ್ (22) ಸಾವನ್ನಪ್ಪಿದ ದುರ್ದೈವಿ. ಮಂಗಳೂರಿನ ಶ್ರೀದೇವಿ ಕಾಲೇಜಿನ ಪ್ರಥಮ ವರ್ಷ ಬಿಬಿಎ ವಿದ್ಯಾರ್ಥಿಯಾಗಿರುವ ಲುಕ್ಮಾನ್ ಜಿಮ್‌ಗೆ ಹೋಗಿ ಬೈಕ್‌ನಲ್ಲಿ ನಿನ್ನೆ ರಾತ್ರಿ ಮನೆಗೆ ಹಿಂತಿರುಗುತ್ತಿದ್ದ ದಾರಿ ಮಧ್ಯೆ ಪಾಲಕುನ್ನು ಪೇಟೆಗೆ ತಲುಪಿ ದಾಗ ಕಾಸರಗೋಡು ಭಾಗದಿಂದ ಸರಕು ಹೇರಿಕೊಂಡು ಬರುತ್ತಿದ್ದ ಲಾರಿ ಬೈಕ್‌ಗೆ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಗಂಭೀರ …

ಯುವಕನನ್ನು ಕೊಠಡಿಯಲ್ಲಿ ಕೂಡಿ ಹಾಕಿ ಪಟಾಕಿ ಸ್ಫೋಟ: ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆಯಲ್ಲಿ; ಸ್ನೇಹಿತನ ವಿರುದ್ಧ ಕೇಸು 

ಬದಿಯಡ್ಕ: ಯುವಕನನ್ನು ಕೊಠಡಿಯೊಳಗೆ ಕೂಡಿ ಹಾಕಿದ ಬಳಿಕ ಮಾಲೆ ಪಟಾಕಿ ಸ್ಫೋಟಿಸಿದ್ದು, ಇದರಿಂದ ಯುವಕ ಗಂಭೀರ ಗಾಯಗೊಂಡಿರುವುದಾಗಿ ದೂರಲಾಗಿದೆ. ಮಲ್ಲ ಚೋಕೆಮೂಲೆ ನಿವಾಸಿಯಾದ ಎಂ.ಅಭಿಲಾಷ್ (32) ಗಂಭೀರ ಗಾಯಗೊಂಡಿದ್ದು, ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.  ಘಟನೆಗೆ ಸಂಬಂಧಿಸಿ ಅಭಿಲಾಷ್ ನೀಡಿದ ದೂರಿನಂತೆ ಸ್ನೇಹಿತನಾದ ಮುಳ್ಳೇರಿಯದ ಪ್ರಣವ್ ಎಂಬಾತನ ವಿರುದ್ಧ ಬದಿಯಡ್ಕ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 15ರಂದು ರಾತ್ರಿ 10 ಗಂಟೆಯಿಂದ 16ರಂದು ಬೆಳಿಗ್ಗೆ 8 ಗಂಟೆ ಮಧ್ಯೆ ಅಭಿಲಾಷ್‌ರನ್ನು ಮನೆಯೊಂದರ ಕೊಠಡಿಯೊಳಗೆ ಕೂಡಿ ಹಾಕಿದ …