ಎಂಡಿಎಂಎ ಪ್ರಕರಣದ ಆರೋಪಿಗೆ ಕಠಿಣ ಸಜೆ, ಜುಲ್ಮಾನೆ

ಕಾಸರಗೋಡು: ಎಂಡಿಎಂಎ ಪ್ರಕರಣದ ಆರೋಪಿಗೆ ಕಾಸರಗೋಡು ಹೆಚ್ಚುವರಿ ಜಿಲ್ಲಾ ಸೆಶನ್ಸ್ ನ್ಯಾಯಾಲಯ (ದ್ವಿತೀಯ)ದ ನ್ಯಾಯಾಧೀಶರಾದ ರಾಮು ರಮೇಶ್ ಚಂದ್ರಭಾನು ಅವರು ಎರಡು ವರ್ಷ ಕಠಿಣ ಸಜೆ ಹಾಗೂ 20,000 ರೂ. ಜುಲ್ಮಾನೆ ವಿಧಿಸಿ ತೀರ್ಪು ನೀಡಿದ್ದಾರೆ. ಉಪ್ಪಳ ಮಣಿಮುಂಡ ಬದರ್ ಮಂಜಿಲ್‌ನ ಶಮೀರ್ (41) ಎಂಬಾತನಿಗೆ ಈ ಶಿಕ್ಷೆ ವಿಧಿಸಲಾಗಿದೆ. ಜುಲ್ಮಾನೆ ಪಾವತಿಸದಿದ್ದಲ್ಲಿ ಆರೋಪಿ ಎರಡು ತಿಂಗಳು ಹೆಚ್ಚುವರಿ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪಿನಲ್ಲಿ ತಿಳಿಸಲಾಗಿದೆ. ಉಪ್ಪಳ ಪೇಟೆಯಲ್ಲಿ 2021 ಆಗಸ್ಟ್‌ನಲ್ಲಿ ಅಂದು ಪೊಲೀಸ್ ಠಾಣೆಯ ಎಸ್‌ಐ …

ಜಿಲ್ಲೆಯ 5 ಮಂಡಲಗಳಲ್ಲೂ ಅಭ್ಯರ್ಥಿಗಳ ಚಿತ್ರ ಸ್ಪಷ್ಟ: ಇನ್ನು ಹೋರಾಟದ ದಿನಗಳು

ಕಾಸರಗೋಡು: ಉದುಮ, ತೃಕರಿಪುರ ವಿಧಾನಸಭಾ ಮಂಡಲಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವುದರೊಂದಿಗೆ ಜಿಲ್ಲೆಯ ಅಭ್ಯರ್ಥಿಗಳ ಸ್ಪಷ್ಟ ಚಿತ್ರಣ ಲಭಿಸಿದೆ. ಮಂಜೇಶ್ವರದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಕೆ. ಸುರೇಂದ್ರನ್, ಯುಡಿಎಫ್ ಅಭ್ಯರ್ಥಿಯಾಗಿ ಮುಸ್ಲಿಂ ಲೀಗ್‌ನ ಎಕೆಎಂ ಅಶ್ರಫ್, ಎಡರಂಗ ಅಭ್ಯರ್ಥಿಯಾಗಿ ಕೆ.ಆರ್. ಜಯಾನಂದ ಈಗಾಗಲೇ ರಂಗಕ್ಕಿಳಿದಿದ್ದಾರೆ. ಕಾಸರಗೋಡು ವಿಧಾನಸಭಾ ಮಂಡಲದಲ್ಲಿ ಅನಿಶ್ಚಿತತೆಯ ಕೊನೆಯಲ್ಲಿ ಲೀಗ್ ಅಭ್ಯರ್ಥಿಯಾಗಿ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿಯನ್ನು ಆಯ್ಕೆ ಮಾಡಲಾಗಿದೆ. ಆದರೆ ಬಿಜೆಪಿ, ಎಡರಂಗದ ಅಭ್ಯರ್ಥಿಗಳನ್ನು ಇನ್ನಷ್ಟೇ ಘೋಷಿಸಬೇಕಾಗಿದೆ. ಉದುಮದಲ್ಲಿ ಎಡರಂಗದ ಅಭ್ಯರ್ಥಿ ಸಿ.ಎಚ್. ಕುಂಞಂಬು …

ಮಂಜೇಶ್ವರ ಮಂಡಲದಲ್ಲಿ ಬಿಜೆಪಿ ಚುನಾವಣಾ ಪ್ರಚಾರ ಬಿರುಸು ಕುಂಬಳೆ ಭಾಸ್ಕರನಗರದಲ್ಲಿ ಕೆ.ಸುರೇಂದ್ರನ್‌ರಿಗೆ ಅದ್ದೂರಿಯ ಸ್ವಾಗತ

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್‌ರ  ಚುನಾವಣಾ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಕುಂಬಳೆ ಭಾಸ್ಕರ ನಗರದಲ್ಲಿ ನಿನ್ನೆ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದ ಕೆ. ಸುರೇಂದ್ರನ್ ಕಾಸರಗೋಡು ಹಾಗೂ ಮಂಜೇಶ್ವರ ಮಂಡಲಗಳು ಎದುರಿಸುತ್ತಿರುವ ಅಭಿವೃದ್ಧಿ ಕುಂಠಿತವನ್ನು  ಮತದಾರರಿಗೆ ತಿಳಿಸಿದರು. ರಾಜ್ಯ ರೂಪೀಕರಿಸಿ 70 ವರ್ಷ ಕಳೆದರೂ  ಈ ಎರಡು ಮಂಡಲಗಳು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿ ರುವುದಾಗಿ ಅವರು ಆರೋಪಿಸಿದರು. ರಸ್ತೆ, ರೈಲು ಸಾರಿಗೆ ವಲಯದಲ್ಲಿ ನಡೆದಿರುವ ಅಭಿವೃದ್ಧಿ ಕೇಂದ್ರದಲ್ಲಿ ಆಡಳಿತ ನಡೆಸುವ ನರೇಂದ್ರ …

ಶ್ರೀ ಮಲ್ಲಿಕಾರ್ಜುನ ಕ್ಷೇತ್ರದ ಆರಾಟು ಕೆರೆ ಎಸ್‌ವಿಟಿ ಫ್ರೆಂಡ್ಸ್ ಸರ್ಕಲ್‌ನಿಂದ ಶುಚೀಕರಣ

ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಶ್ರೀ ದೇವರ ಅವಭೃತ ಸ್ನಾನದ ಆರಾಟುಕೊಳವನ್ನು ಎಸ್‌ವಿಟಿ ಫ್ರೆಂಡ್ಸ್ ಸರ್ಕಲ್ ಇದರ ಕಾರ್ಯಕರ್ತರು ಶ್ರಮದಾನದ ಮೂಲಕ ಶುಚಿಗೊಳಿಸಿದರು. ಧಾರ್ಮಿಕ, ಸಾಂಸ್ಕೃತಿಕ, ಸಾಮಾಜಿಕ ಸಹಿತ ವಿವಿಧ ವಲಯಗಳಲ್ಲಿ ಸುಮಾರು ನಾಲ್ಕು ದಶಕಗಳಿಂದ ಕಾರ್ಯಾಚರಿಸುತ್ತಿರುವ ಸಂಸ್ಥೆಯ ಸ್ಥಾಪಕಾಧ್ಯಕ್ಷ  ಕೆ.ಎನ್. ವೆಂಕಟ್ರಮಣ ಹೊಳ್ಳ, ನಗರಸಭಾ ಕೌನ್ಸಿಲರ್ ಕೆ.ಎನ್ ರಾಮಕೃಷ್ಣ ಹೊಳ್ಳ, ಗೋಕುಲ್, ರಘುರಾಜ ಅಗ್ಗಿತ್ತಾಯ, ರವಿ ಕೇಸರಿ, ನಾಮದೇವ ಪೈ, ಕೆ.ವಿ. ಶೇಷಾದ್ರಿ ಹೊಳ್ಳ, ಕಿಶೋರ್ ಎಸ್‌ವಿಟಿ ತುಳಸಿ, ಬಾಲಕೃಷ್ಣ …

ಕಾರಡ್ಕ ಬೀಡು ಗಿರಿಜಮ್ಮ ಚಿಪ್ಪಾರು ಅರಮನೆ ನಿಧನ

ಚಿಪ್ಪಾರು: ವಿಟ್ಲ ಅರಮನೆ ದಿ| ಮರಿಯಯ್ಯನವರ ಪತ್ನಿ ಕಾರಡ್ಕ ಬೀಡು ಗಿರಿಜಮ್ಮ ಚಿಪ್ಪಾರು ಅರಮನೆ (90) ನಿನ್ನೆ ನಿಧನ ಹೊಂದಿದರು. ಮೃತರು ಮಕ್ಕಳಾದ ಕೆ. ನರಸಿಂಹ ಬಲ್ಲಾಳ್ (ನಿವೃತ್ತ ಅಧ್ಯಾಪಕರು), ಕೆ.ಮುರಳೀಧರ ಬಲ್ಲಾಳ್ (ನಿವೃತ್ತ, ಬ್ಯಾಂಕ್ ಚೀಫ್ ಮ್ಯಾನೇಜರ್), ಕೆ. ಪ್ರವೀಣ್ ಚಂದ್ರ ಬಲ್ಲಾಳ್ ( ಪೈವಳಿಕೆ ಪಂ. ಮಾಜಿ ಸದಸ್ಯ), ಕೆ. ಶಿವ ಕುಮಾರ್ ಬಲ್ಲಾಳ್ (ನಿವೃತ್ತ ಮುಖ್ಯೋಪಾಧ್ಯಾಯ), ಕೆ. ರವಿರಾಜ್ ಬಲ್ಲಾಳ್, ಆಶಾದೇವಿ, ಪೂರ್ಣಿಮಾ, ಅಳಿಯಂದಿರಾದ ಕೆ.ಸುದರ್ಶನ ಪಾಣಿ ಬಲ್ಲಾಳ್ (ನಿವೃತ್ತ ಬ್ಯಾಂಕ್ ಉದ್ಯೋಗಿ), …

ಕೇಂದ್ರ ಸಚಿವ ಸುರೇಶ್ ಗೋಪಿ ಕುಂಬಳೆಗೆ: ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಗೋಡೆಬರಹ

ಕುಂಬಳೆ: ಮಂಜೇಶ್ವರ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಪರ ಪ್ರಚಾರಾರ್ಥ ಕೇಂದ್ರ ಸಚಿವ ಸುರೇಶ್‌ಗೋಪಿ ಇಂದು ಬೆಳಿಗ್ಗೆ ಕುಂಬಳೆಗೆ ಆಗಮಿಸಿ ದ್ದಾರೆ. ಕುಂಬಳೆಯಲ್ಲಿ  ಕೆ. ಸುರೇಂದ್ರನ್‌ರಿಗೆ  ಮತ ಯಾಚಿಸಿ ಸುರೇಶ್ ಗೋಪಿ  ಗೋಡೆ ಬರಹ ನಡೆಸಿದರು.  ಈ ವೇಳೆ ಅಭ್ಯರ್ಥಿ ಕೆ.ಸುರೇಂದ್ರನ್, ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ, ನೇತಾರರು ಸಹಿತ ಹಲವರು ಕಾರ್ಯಕರ್ತರು ಉಪಸ್ಥಿತರಿದ್ದರು. ಬಳಿಕ ಸುರೇಶ್ ಗೋಪಿ ಕಾಸರಗೋಡಿಗೆ ತೆರಳಿದರು. ಕಾಸರಗೋಡು ಮಂಡಲದಲ್ಲಿ ಬಿಜೆಪಿಯ ಗೆಲುವಿಗಾಗಿ ಗೋಡೆ ಬರಹ ನಡೆಸಲಿದ್ದಾರೆ. ಮಂಜೇಶ್ವರದಲ್ಲಿ ಕೆ. …

ನೀರ್ಚಾಲು ಗೋಳಿಯಡ್ಕದಿಂದ ಹುಳಿರಸ, ಬಾಡೂರಿನಿಂದ ಕರ್ನಾಟಕ ಮದ್ಯ ವಶ: ಇಬ್ಬರ ಬಂಧನ

ಕುಂಬಳೆ: ಕರ್ನಾಟಕ ಮದ್ಯ ಹಾಗೂ ಸಾರಾಯಿ ತಯಾರಿಸುವ ಹುಳಿರಸ ಸಹಿತ ಇಬ್ಬರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕನ್ಯೆಪ್ಪಾಡಿಯ ಜಿ.ಕೆ. ಸಂತೋಷ್ (35) ಎಂಬಾತನನ್ನು 50 ಲೀಟರ್ ಸಾರಾಯಿ ಹುಳಿರಸ ಸಹಿತ ಗೋಳಿಯಡ್ಕದಿಂದ ಬದಿಯಡ್ಕ ರೇಂಜ್ ಅಬಕಾರಿ ಇನ್ಸ್‌ಪೆಕ್ಟರ್ ಜಿಷ್ಣು ಪಿ.ಆರ್. ನೇತೃತ್ವದ ತಂಡ ಬಂಧಿಸಿದೆ. ಅಬಕಾರಿ ತಂಡದಲ್ಲಿ ಅಸಿಸ್ಟೆಂಟ್ ಇನ್ಸ್‌ಪೆಕ್ಟರ್ ಎ.ಕೃಷ್ಣ, ಪ್ರಿವೆಂಟಿವ್ ಆಫೀಸರ್‌ಗಳಾದ ಕೆ. ಸಾಬು, ಮಂಜುನಾಥ ಆಳ್ವ, ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ ಪಿ. ಸದಾ ನಂದನ್, ಟಿ. ಧನ್ಯ ಎಂಬಿವರಿದ್ದರು. ಇನ್ನೊಂದು ಪ್ರಕರಣದಲ್ಲಿ ಬಾಡೂರು …

25 ಕ್ಷೇತ್ರಗಳಲ್ಲಿ ಮುಸ್ಲಿಂಲೀಗ್ ಸ್ಪರ್ಧೆ: ಕಾಸರಗೋಡಿನಲ್ಲಿ ಕಲ್ಲಟ್ರ ಮಾಹಿನ್ ಹಾಜಿ

ಕಾಸರಗೋಡು: ವಿಧಾನಸಭಾ ಚುನಾವಣೆಯಲ್ಲಿ ಕಾಸರಗೋಡು ಕ್ಷೇತ್ರದ ಯುಡಿಎಫ್ (ಮುಸ್ಲಿಂ ಲೀಗ್)ನ ಅಭ್ಯರ್ಥಿಯಾಗಿ ಯುಡಿಎಫ್ ಜಿಲ್ಲಾಧ್ಯಕ್ಷ ಕಲ್ಲಟ್ರ ಮಾಹಿನ್ ಹಾಜಿಯವರನ್ನು ಮುಸ್ಲಿಂಲೀಗ್ ಕಣಕ್ಕಿಳಿಸಿದೆ. ಇವರು ಕಳೆದ ಐವತ್ತು ವರ್ಷಗಳಿಂದ ಮುಸ್ಲಿಂ ಲೀಗ್‌ನ ಸಕ್ರಿಯ ಕಾರ್ಯಕರ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಇವರು ಮುಸ್ಲಿಂ ಲೀಗ್‌ನ ಜಿಲ್ಲಾ ಉಪಾಧ್ಯಕ್ಷ, ಕೋಶಾಧಿಕಾರಿ ಇತ್ಯಾದಿ ಸ್ಥಾನಗಳನ್ನು ವಹಿಸಿದ್ದರು. ಇವರು ಮೇಲ್ಪರಂಬ ಕಟ್ಟೆಕ್ಕಾಲ್ ನಿವಾಸಿಯಾಗಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಯುಡಿಎಫ್ (ಮುಸ್ಲಿಂ ಲೀಗ್) ಅಭ್ಯರ್ಥಿಯಾಗಿ ಹಾಲಿ ಶಾಸಕ ಎಕೆಎಂ ಅಶ್ರಫ್‌ರ ಹೆಸರನ್ನು ಮುಸ್ಲಿಂಲೀಗ್ ಪ್ರಕಟಿಸಿದೆ. …

ಸ್ಕೂಟರ್ ವಿದ್ಯುತ್ ಕಂಬಕ್ಕೆ ಬಡಿದು ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತ್ಯು

ಕಲ್ಲಿಕೋಟೆ:  ಇಲೆಕ್ಟ್ರಿಕ್ ಸ್ಕೂಟರ್ ವಿದ್ಯುತ್ ಕಂಬಕ್ಕೆ ಬಡಿದು ಸಂಭವಿಸಿದ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ನಡೆದಿದೆ. ಇಂದು ಮುಂಜಾನೆ 2.30ರ ವೇಳೆ ಕೊಯಿಲಾಂಡಿಯಲ್ಲಿ  ಅಪಘಾತ ಸಂಭವಿಸಿದೆ.  ಅಪಘಾತ ಸಂಭವಿಸಿ ರುವುದಾಗಿ ಹೇಳಲಾಗುತ್ತಿದೆ. ಕಲ್ಲಿಕೋಟೆ  ಮಲಬಾರ್ ಮೆಡಿಕಲ್ ಕಾಲೇಜಿನ ಎಂಬಿಬಿಎಸ್ ವಿದ್ಯಾರ್ಥಿಗಳಾದ ಅವ್ಯಾನ್, ನಂದಕಿಶೋರ್, ಅಭಿನವ್ ಎಂಬಿ ವರು ಮೃತಪಟ್ಟವರಾಗಿ ದ್ದಾರೆಂದು ತಿಳಿದುಬಂದಿದೆ. ಮೃತದೇಹಗಳನ್ನು  ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ತಲುಪಿಸ ಲಾಗಿದೆ. ಮೂವರು ವಿದ್ಯಾರ್ಥಿ ಗಳೂ ಅಪಘಾತ ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು  ಪೊಲೀಸರು …

ಸಂಸದರಿಗೆ ಟಿಕೆಟಿಲ್ಲ: ಕಾಂಗ್ರೆಸ್‌ನಲ್ಲಿ ಅಸಂತೃಪ್ತಿ ಹೊಗೆ ತಾರಕಕ್ಕೆ

ತಿರುವನಂತಪುರ: ವಿಧಾನಸಭಾ ಚುನಾವಣೆಯಲ್ಲಿ  ತಮ್ಮ ಯಾವುದೇ ಸಂಸದರನ್ನು ಕಣಕ್ಕಿಳಿಸುವಂತಿಲ್ಲವೆಂಬ ಅಚಲ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ಕೈಗೊಂಡಿರುವುದನ್ನು ಪ್ರತಿಭಟಿಸಿ, ಕಣ್ಣೂರು ಸಂಸದ ಕೆ. ಸುಧಾ ಕರನ್ ಪ್ರತ್ಯಕ್ಷವಾಗಿ ರಂಗಕ್ಕಿಳಿದಿರುವ ಬೆನ್ನಲ್ಲೇ ಕಾಂಗ್ರೆಸ್‌ನ ಇತರ ಸಂಸದರ ಪೈಕಿ ಶಶಿ  ತರೂರ್, ಎಂ.ಕೆ. ರಾಘವನ್ ಮತ್ತು ಅಡೂರ್ ಪ್ರಕಾಶ್ ಕೂಡಾ ಅಸಂತೃಪ್ತಿ ವ್ಯಕ್ತಪಡಿಸಿ ರಂಗಕ್ಕಿಳಿದಿದ್ದಾರೆ. ಅಭ್ಯರ್ಥಿಗಳ ನಿರ್ಣಯ ವಿಷಯದಲ್ಲಿ ನನ್ನ ಅಭಿಪ್ರಾಯವನ್ನು ಪಕ್ಷ ಕೇಳಿಲ್ಲವೆಂದು ತಿರುವನಂತಪುರ ಸಂಸದ ಶಶಿ ತರೂರ್ ಆರೋಪಿಸಿದ್ದಾರೆ. ಮಾತ್ರವಲ್ಲ ಅಭ್ಯರ್ಥಿಗಳ ಯಾದಿ ಬಗ್ಗೆ ಅವರು ಅಸಂತೃಪ್ತಿಯನ್ನು ವ್ಯಕ್ತಪಡಿಸಿ …