ಕಾಸರಗೋಡು ರೈಲ್ವೇ ಪಾರ್ಸಲ್ ಸೇವೆ ಸ್ಥಗಿತಗೊಳಿಸದಂತೆ ಕೇಂದ್ರ ರೈಲ್ವೇ ಸಚಿವರಿಗೆ ಮನವಿ- ಎಂ.ಎಲ್. ಅಶ್ವಿನಿ

ಕಾಸರಗೋಡು: ಕಾಸರಗೋಡು ರೈಲ್ವೇ ನಿಲ್ದಾಣದಿಂದ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸುವ ದಕ್ಷಿಣ ರೈಲ್ವೆಯ ನಿರ್ಧಾರವನ್ನು ಹಿಂಪಡೆಯಬೇ ಕೆಂದು ಆಗ್ರಹಿಸಿ ಕೇಂದ್ರ ರೈಲ್ವೇ ಸಚಿವರಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ ಈ ವಿಷಯವನ್ನು ಖುದ್ದಾಗಿ ಭೇಟಿಯಾಗಿ ಮಂಡಿಸಲಾಗುವುದೆಂದು ಬಿಜೆಪಿ ಜಿಲ್ಲಾ ಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದ್ದಾರೆ. ಕಾಸರಗೋಡು ರೈಲ್ವೇ ನಿಲ್ದಾಣದಲ್ಲಿ ಪಾರ್ಸಲ್ ಸೇವೆಯನ್ನು ಸ್ಥಗಿತಗೊಳಿಸಿದರೆ ಜಿಲ್ಲೆಯ ವಾಣಿಜ್ಯ ಕ್ಷೇತ್ರಕ್ಕೆ ದೊಡ್ಡ ಹೊಡೆತ ಬೀಳಲಿದೆ. ಸಣ್ಣ ಮತ್ತು ಮಧ್ಯಮ ಪ್ರಮಾಣದ ವ್ಯಾಪಾರಿಗಳು ಹಾಗೂ ವಿವಿಧ ವಾಣಿಜ್ಯ ಸಂಸ್ಥೆಗಳು ಸರಕು ಸಾಗಾಟಕ್ಕೆ ರೈಲ್ವೇ ಪಾರ್ಸಲ್ …

ಐಲ ಮೈದಾನವನ್ನು ಯಾವುದೇ ಕಾರಣಕ್ಕೂ ಇತರ ಉಪಯೋಗಕ್ಕೆ ಬಿಟ್ಟುಕೊಡಲಾಗುವುದಿಲ್ಲ- ಸಾರ್ವಜನಿಕ ಮೊಸರುಕುಡಿಕೆ ಉತ್ಸವ ಸಮಿತಿ

ಉಪ್ಪಳ: ಹಿಂದೂಗಳ ಶ್ರದ್ಧಾ ಕೇಂದ್ರವಾಗಿ ದಿನನಿತ್ಯವೂ ಸಾವಿರಾರು ಭಕ್ತರು ಆಗಮಿಸಿ ದೇವಿಯ ಅನುಗ್ರಹ ಪಡೆಯುವ ಐಲ ಶ್ರೀ ದುರ್ಗಾ ಪರಮೇಶ್ವರೀ ಕ್ಷೇತ್ರ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾಗಿದೆ. ಅನಾದಿ ಕಾಲದಿಂ ದಲೂ ಕ್ಷೇತ್ರದ ಮುಂಭಾಗದ ಐಲ ಮೈದಾನದಲ್ಲಿ ಉತ್ಸವ ನಡೆಯುತ್ತಿದೆ. ಬೆಡಿ ಕಟ್ಟೆ ಹಾಗೂ ಅಷ್ಟ ದಿಕ್ಪಾಲಕರ ಕಟ್ಟೆಯು ಇಲ್ಲಿ ಇದ್ದು ಪೂಜೆ, ಧಾರ್ಮಿಕ ವಿಧಿಗಳು ಪ್ರತಿ ತಿಂಗಳು ನೆರವೇರುತ್ತಿದೆ. ಸಾರ್ವಜನಿಕ ಮೊಸರು ಕುಡಿಕೆಯು ಐಲ ಮೈದಾನದಲ್ಲಿ ಹಲವಾರು ದಶಕಗಳಿಂದ ನಡೆಯುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ನಡೆಯುವ …

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ರೂಪಶ್ರೀ  ವರ್ಕಾಡಿಯವರಿಗೆ ಬಿಜೆಪಿ ಅಭಿನಂದನೆ

 ವರ್ಕಾಡಿ: ರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿಗೆ ಭಾಜನರಾಗಿರುವ ರೂಪಶ್ರೀ ವರ್ಕಾಡಿಯವರನ್ನು ಬಿಜೆಪಿ  ವರ್ಕಾಡಿ ಸಮಿತಿ ವತಿಯಿಂದ ಅಭಿನಂದಿಸಲಾಯಿತು. ಬಿಜೆಪಿ ಜಿಲ್ಲಾ ಸಮಿತಿ ಉಪಾಧ್ಯಕ್ಷ ಮಣಿಕಂಠ ರೈ ಪಟ್ಲ, ರಾಜ್ಯ ಕೌನ್ಸಿಲ್ ಸದಸ್ಯ ಹರೀಶ್ ನಾರಂಪಾಡಿ, ಮಂಜೇಶ್ವರ ಮಂಡಲ ಪ್ರಧಾನ ಕಾರ್ಯದರ್ಶಿ ಯತಿರಾಜ್ ಶೆಟ್ಟಿ, ಪಂಚಾಯತ್ ಸದಸ್ಯೆ ತುಳಸಿ ಕುಮಾರಿ, ಪಂಚಾಯತ್ ಸಮಿತಿ ಅಧ್ಯಕ್ಷ ಭಾಸ್ಕರ್ ಪೊಯ್ಯೆ, ಪ್ರಧಾನ ಕಾರ್ಯದರ್ಶಿ ನಾಗೇಶ್ ಬಳ್ಳೂರು, ಕೃಷ್ಣಮೂರ್ತಿ ಪ್ರಶಾಂತ್, ರಕ್ಷಣ್ ಅಡೆಕಳಕಟ್ಟೆ, ಪ್ರಶಾಂತ್, ರವಿರಾಜ್ ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ವಿವಿಧೆಡೆಗಳಲ್ಲಿ ಬಿಎಂಎಸ್ ಸ್ಥಾಪನಾ ದಿನಾಚರಣೆ

ಕುಂಬಳೆ: ಕುಂಬಳೆಯ ವಿವಿಧ ಘಟಕಗಳಲ್ಲಿ ಬಿಎಂಎಸ್ ಸ್ಥಾಪಕ ದಿನಾಚರಣೆ ಕಾರ್ಯಕ್ರಮ ಜರಗಿತು. ನಾಯ್ಕಾಪು ಶಾಸ್ತಾ ಆಟೋ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಲೋಹಿತಾಕ್ಷ ಧ್ವಜಾ ರೋಹಣ ಗೈದರು. ಬಿಎಂಎಸ್ ನಿರ್ಮಾಣ ಸಮಿತಿ ಜಿಲ್ಲಾ ಕೋಶಾಧಿ ಕಾರಿ ಐತ್ತಪ್ಪ ನಾರಾಯಣಮಂಗಲ ಮಾಹಿತಿ ನೀಡಿದರು. ಸಾಮಾಜಿಕ ಮುಂದಾಳು ಮುರಳೀಧರ ಯಾದವ್ ಶುಭ ಹಾರೈಸಿದರು. ಭಾಸ್ಕರ ಎನ್. ಸ್ವಾಗತಿಸಿ, ಲಕ್ಷ್ಮಣ ಒ. ವಂದಿಸಿದರು. ಬಿಎಂಎಲ್ ಟೈಲರ್ ಸಮಿತಿ ಕುಂಬಳೆ ಘಟಕದ ಆಶ್ರಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ನಾಗವೇಣಿ ದಿನೇಶ್ ಧ್ವಜಾರೋಹಣ …

ಬಿಎಂಎಸ್ ಮಂಜೇಶ್ವರ ವಲಯ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಮಂಜೇಶ್ವರ: ಬಿಎಂಎಸ್ ಮಂಜೇಶ್ವರ ವಲಯ ಸಮಿತಿಯ ನೇತೃತ್ವದಲ್ಲಿ ವಲಯ ಸಮ್ಮೇಳನ ಹೊಸಂಗಡಿ ಯೂನಿಟ್ ಸಭಾಂ ಗಣದಲ್ಲಿ ಜರಗಿತು. ವಲಯಾಧ್ಯಕ್ಷ ರವಿ ಎಂ.ಕೆ. ಕೋಳ್ಯೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾಧ್ಯಕ್ಷ ಉಪೇಂದ್ರನ್ ಕೋಟೆಕಣಿ ಉದ್ಘಾಟಿಸಿ ಮಾತನಾಡಿ, ನೀಟ್ ಪರೀಕ್ಷಾ ಪೇಪರ್ ಸೋರಿಕೆ ಹಾಗೂ ಅದಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಇದೇ ವೇಳೆ ಪರೀಕ್ಷಾ ಸೋರಿಕೆಯ ನೆಪದಲ್ಲಿ ಪಾರ್ಲಿಮೆಂಟ್ ಸೇರಿದಂತೆ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ವಿಷಯವನ್ನು ಮುಂದಿಟ್ಟುಕೊAಡು …

ಕುಂಬಳೆಯಲ್ಲಿ ಮನೆಯವರನ್ನು ಕಟ್ಟಿಹಾಕಿ 42 ಪವನ್ ಚಿನ್ನಾಭರಣ, ಹಣ ದರೋಡೆಗೈದ ಆರೋಪಿ ಬಂಧನ

ಕುಂಬಳೆ: ಕುಂಬಳೆಯಲ್ಲಿ ಮನೆ ಮಂದಿಯನ್ನು ಕಟ್ಟಿ ಹಾಕಿ 42 ಪವನ್ ಚಿನ್ನಾಭರಣ ಹಾಗೂ 25,000 ರೂಪಾಯಿಗಳನ್ನು ದರೋಡೆಗೈದ ಪ್ರಕರಣದ ಆರೋಪಿಗಳಲ್ಲೋರ್ವನನ್ನು ಬಂಧಿಸಲಾಗಿದೆ. ಕರ್ನಾಟಕದ ಸಾಂಬಿಯ ಅಸೀಸ್ ಯಾನೆ ಅಬ್ದುಲ್ ಅಸೀಸ್ (58) ಎಂಬಾತನನ್ನು ಇಂದು ಬೆಳಿಗ್ಗೆ ಪುತ್ತೂರಿನಿಂದ ಬಂಧಿಸಲಾಗಿದೆ. 2012 ಡಿಸೆಂಬರ್‌ನಲ್ಲಿ ನಡೆದ ಈ ದರೋಡೆ ಪ್ರಕರಣದ ಆರೋಪಿಯಾದ ಅಬ್ದುಲ್ ಅಸೀಸ್‌ನನ್ನು ಕಾಸರಗೋಡು ಕ್ರೈಮ್ ಬ್ರಾಂಚ್ ಡಿವೈಎಸ್‌ಪಿ ಮಧುಸೂದನನ್ ನಾಯರ್ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ಬಂಧಿಸಲು ಸಾಧ್ಯವಾಗಿದೆ. ಮಂಗಳೂರಿನಲ್ಲಿ ಟ್ರಾನ್ಸ್‌ಪೋರ್ಟ್ ಆಪರೇಟರ್ ಆಗಿದ್ದ ಕುಂಬಳೆಯ ಅನಿಲ್ …

ಶಬರಿಮಲೆ ಚಿನ್ನ ಕಳವು: ಮುಜರಾಯಿ ಮಂಡಳಿ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಎಸ್‌ಐಟಿ ವಶಕ್ಕೆ

ತಿರುವನಂತಪುರ: ಶಬರಿಮಲೆ ದೇಗುಲದಲ್ಲಿ ನಡೆದ ಚಿನ್ನ ಕಳವು ಪ್ರಕರಣಕ್ಕೆ ಸಂಬಂಧಿಸಿ ತಿರುವಿದಾಂಕೂರ್ ಮುಜರಾಯಿ ಮಂಡಳಿಯ ಮಾಜಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್‌ರನ್ನು ವಿಶೇಷ ತನಿಖಾ ತಂಡ ಇಂದು ಬೆಳಿಗ್ಗೆ ವಶಕ್ಕೆ ತೆಗೆದುಕೊಂಡಿದೆ. ಮಾತ್ರವಲ್ಲ ಅವರನ್ನು  ತಿರುವನಂತಪುರದಲ್ಲಿರುವ ಕ್ರೈಂ ಬ್ರಾಂಚ್ ಕಚೇರಿಗೆ ಸಾಗಿಸಿ  ಅಧಿಕಾರಿಗಳು   ವಿಚಾರಣೆಗೊಳಪಡಿಸತೊಡಗಿದ್ದಾರೆ. ಶಬರಿಮಲೆ ದೇಗುಲದ ಗರ್ಭಗುಡಿಯ ದ್ವಾರಪಾಲಕ ಮೂರ್ತಿಗಳ  ಚಿನ್ನ ಲೇಪಿತ ಕವಚಗಳನ್ನು 2025ರಲ್ಲಿ ಕಾನೂನು ಉಲ್ಲಂಘಿಸಿ ಮರು  ಲೇಪನಗೊಳಿಸುವ ಹೆಸರಲ್ಲಿ ಅವುಗಳನ್ನು ಚೆನ್ನೈಗೆ ಸಾಗಿಸಿದ  ಪ್ರಕರಣದಲ್ಲಿ ಪಿ.ಎಸ್. ಪ್ರಶಾಂತ್ ಸೇರಿದಂತೆ ಏಳು ಮಂದಿಯ ಕೈವಾಡವಿದೆ …

ಯುವತಿ ಮದುವೆಗೆ ಅಡ್ಡಿ ಯುವಕನ ವಿರುದ್ಧ ಕೇಸು

ಮುಳ್ಳೇರಿಯ: ಮದುವೆಗೆ ಅಡ್ಡಿಪಡಿಸುತ್ತಿರುವುದಾಗಿ ಆರೋ ಪಿಸಿ ಯುವತಿ ನೀಡಿದ ದೂರಿನಂತೆ ಆದೂರು ಪೊಲೀಸರು ಓರ್ವನ ವಿರುದ್ಧ ಕೇಸು ದಾಖಲಿಸಿಕೊಂ ಡಿದ್ದಾರೆ. ಮಿದ್‌ಲಾಜ್ ಎಂಬಾತನ ವಿರುದ್ಧ ಕೇಸು ದಾಖಲಿಸಿ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮಿದ್‌ಲಾಜ್ ತನ್ನನ್ನು ಹಿಂಬಾಲಿಸಿ ಉಪಟಳ ನೀಡುತ್ತಿರು ವುದಾಗಿಯೂ ಯುವತಿ ಆರೋಪಿ ಸಿದ್ದಾಳೆ. ಉಪಟಳ ತೀವ್ರಗೊಂಡ ಹಿನ್ನೆಲೆಯಲ್ಲಿ  ಯುವತಿ ಪೊಲೀ ಸರಿಗೆ ದೂರು ನೀಡಿದ್ದಾಳೆ ಮಿದ್‌ಲಾಜ್‌ನನ್ನು ಪತ್ತೆಹಚ್ಚಲು ಪೊಲೀಸರು ಕಾರ್ಯಾ ಚರಣೆ ತೀವ್ರಗೊಳಿಸಿದ್ದಾರೆ.

ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು ಮೃತ್ಯು

ಕುಂಬಳೆ: ಫುಟ್ಬಾಲ್ ಆಟದ ಮಧ್ಯೆ ರೆಫರಿ ಕುಸಿದುಬಿದ್ದು  ಮೃತಪಟ್ಟ ಘಟನೆ ನಡೆದಿದೆ. ಉಳುವಾರು ಬದ್ರಿಯ ಮಂಜಿಲ್‌ನ ಅಬ್ದುಲ್ಲ-ಖದೀಜ ದಂಪತಿಯ ಪುತ್ರ ಹಸನ್ ಉಳುವಾರು (46) ಮೃತಪಟ್ಟ ವ್ಯಕ್ತಿ. ನಿನ್ನೆ ಸಂಜೆ 6 ಗಂಟೆ ವೇಳೆ ಫುಟ್ಬಾಲ್ ಆಟದ ಮಧ್ಯೆ  ಕುಸಿದು ಬಿದ್ದ ಇವರನ್ನು  ಕೂಡಲೇ ಕುಂಬಳೆಯ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಇವರು ಮುಸ್ಲಿಂ ಲೀಗ್ ಹಾಗೂ ಸಮಸ್ತದ ಸಕ್ರಿಯ ಕಾರ್ಯಕರ್ತನಾಗಿದ್ದರು. ಮೃತರು  ಪತ್ನಿ ಸಮೀರ, ಪುತ್ರಿ ಖದೀಜ ಅನ್ಫಾ, ಸಹೋದರ-ಸಹೋ ದರಿಯರಾದ ಹುಸೈನ್, ಮುಹಮ್ಮದ್, …

ಪಾಕಿಸ್ತಾನ ಪೌರತ್ವ ಮರೆಮಾಚಿ ಭಾರತೀಯ ಪಾಸ್‌ಪೋರ್ಟ್ ಸಂಪಾದಿಸಿದ ಯುವತಿ ಸೆರೆ

ಕಾಸರಗೋಡು: ಪಾಕಿಸ್ತಾನದ ಪೌರತ್ವವನ್ನು ಮರೆಮಾಚಿ ಭಾರತೀಯ ಪಾಸ್‌ಪೋರ್ಟ್ ಪಡೆದ ಯುವತಿ ವಿರುದ್ಧ ಕಣ್ಣೂರು ಮೈಯಿಲ್ ಪೊಲೀಸರು ಪಾಸ್‌ಪೋರ್ಟ್ ಆಕ್ಟ್  ೨೨, ಇಂಟರ್ ನ್ಯಾಶನಲ್ ಫಾರಿನರ್ಸ್ ಆಕ್ಟ್ 2025 ಸೇರಿದಂತೆ ೭ರಷ್ಟು ಸೆಕ್ಷನ್‌ಗಳ ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕಣ್ಣೂರು ಕನ್ನಾಡಿಪರಂಬು ಕೊಟ್ಟಿಚ್ಚಾಲಿಲ್ ನಿವಾಸಿ ಎಂ.ಕೆ. ಅಲೀನಾ (24) ಎಂಬಾಕೆಯ ವಿರುದ್ಧ ಈ ಪ್ರಕರಣ ದಾಖಲಿಸಲಾಗಿದೆ.  ಕನ್ನಾಡಿಪರಂಬು ನಿವಾಸಿ ಅಬ್ದುಲ್ ಹಕೀಂ ಎಂಬವರು 1946ರಂದು ಭಾರತ ತೊರೆದು ಪಾಕಿಸ್ತಾನಕ್ಕೆ ಹೋಗಿ  ಖಾಯಂ ಆಗಿ ಜೀವಿಸತೊಡಗಿದ್ದರು. ನಂತರ ಅಲ್ಲಿ ಹಸೀನಾ ಬೀಗಂ …