ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳವು: ಗಲ್ಫ್‌ಗೆ ಪರಾರಿಯಾದ ಆರೋಪಿ ಕಣ್ಣೂರಿನಿಂದ ಸೆರೆ

ಕುಂಬಳೆ: ಕುಂಬಳೆ ರೈಲು ನಿಲ್ದಾಣ ಸಮೀಪ ನಿಲ್ಲಿಸಿದ್ದ ಬೈಕ್‌ನಿಂದ ಪೆಟ್ರೋಲ್ ಕಳವುಗೈದ ಪ್ರಕರಣದಲ್ಲಿ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಯುವಕನನ್ನು ಕಣ್ಣೂರು ವಿಮಾನ ನಿಲ್ದಾಣದಿಂದ ಸೆರೆ ಹಿಡಿಯಲಾಗಿದೆ. ಮೇಲ್ಪರಂಬ ನಿವಾಸಿ ರಿಸ್ವಾನ್ (23) ಎಂಬಾತ ಬಂಧಿತ ಆರೋಪಿಯಾಗಿ ದ್ದಾ ನೆಂದು ಪೊಲೀಸರು ತಿಳಿಸಿದ್ದಾರೆ. ಕಳೆದ ಜುಲೈ 13ರಂದು ಕುಂಬಳೆ ರೈಲು ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಬೈಕ್‌ನಿಂದ ರಿಸ್ವಾನ್ ಹಾಗೂ ಕುಂಬಳೆ ನೀರೋಳಿಯ ರುಮೈಸ್ ಎಂಬವರು ಪೆಟ್ರೋಲ್ ಕಳವುಗೈದಿದ್ದರು. ಕಳವುಗೈಯ್ಯುತ್ತಿರು ವುದನ್ನು ತಿಳಿದ ವಾಹನ ಪಾರ್ಕಿಂಗ್ ಸ್ಥಳದ ಕಾವಲುಗಾರ ಪೊಲೀಸರಿಗೆ ಮಾಹಿತಿ …

ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟಪರಾರಿಯಾದ ಆರೋಪಿ ಬಂಧನ

ಬದಿಯಡ್ಕ: ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಪೊಲೀಸರು ನಡೆಸಿದ ಕಾರ್ಯಾಚರಣೆ ವೇಳೆ ಪರಾರಿಯಾದ ಆರೋಪಿಯನ್ನು ಬಂಧಿಸಲಾಗಿದೆ.  ಬಾಪಾಲಿಪೊನ ನಿವಾಸಿ ಬಿ.ಎಂ. ಸಹದ್ ಯಾನೆ ಅದ್ದು ಎಂಬಾತನನ್ನು ನಿನ್ನೆ ರಾತ್ರಿ ಕಾಸರಗೋಡು ಅಣಂಗೂರಿನಿಂದ ಬದಿಯಡ್ಕ ಎಸ್‌ಐ ಅಖಿಲ್ ನೇತೃತ್ವದಲ್ಲಿ ಸೆರೆಹಿಡಿಯಲಾಗಿದೆ. ಮೊನ್ನೆ ರಾತ್ರಿ ಚೆರ್ಲಡ್ಕ ಬಸ್ ನಿಲ್ದಾಣ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಬಂದ ಆಟೋ ರಿಕ್ಷಾದಲ್ಲಿ 1.312 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಈವೇಳೆ ರಿಕ್ಷಾದಲ್ಲಿದ್ದ ಅಂಗಡಿಮೊಗರು ಪೆರ್ಲಾಡಂ ನಿವಾಸಿ ರಿಫಾಯಿ ಬಿ.ಎಂ. ಎಂಬಾತನನ್ನು ಬಂಧಿಸಲಾಗಿತ್ತು. …

ಮಹಿಳೆಯ ಕುತ್ತಿಗೆಯಿಂದ ಎಗರಿಸಿದ ಚಿನ್ನದ ಸರ ಕಾಸರಗೋಡಿನ ಜ್ಯುವೆಲ್ಲರಿಯಲ್ಲಿ ಪತ್ತೆ

ಕಾಸರಗೋಡು: ತಳಿಪರಂಬ ಮುಯ್ಯತ್ ಎಂಬಲ್ಲಿನ ಮಹಿಳೆಯ ಕುತ್ತಿಗೆಯಿಂದ ಎಗರಿಸಿದ ಒಂದೂ ಕಾಲು ಪವನ್ ತೂಕದ ಚಿನ್ನದ ಸರವನ್ನು ಕಾಸರಗೋಡಿನ ಜ್ಯುವೆಲ್ಲರಿಯೊಂದರಿಂದ ಪೊಲೀಸರು ಪತ್ತೆಹಚ್ಚಿ ವಶಕ್ಕೆ ತೆಗೆದಿದ್ದಾರೆ. ಪ್ರಕರಣದಲ್ಲಿ ಸೆರೆಗೀಡಾಗಿ ರಿಮಾಂಡ್‌ನಲ್ಲಿರುವ ಬೇಕಲ ಉದುಮ ವೆಡಿತ್ತರಕ್ಕಾಲ್ ಪಾಕ್ಯಾರ ಹೌಸ್‌ನ ಮುಹಮ್ಮದ್ ಇಜಾಸ್ (23), ಸುಳ್ಯದ ಅಬ್ದುಲ್ ರಹ್ಮಾನ್ (30) ಎಂಬಿವರನ್ನು ಕಸ್ಟಡಿಗೆ ತೆಗೆದು ತನಿಖೆ ನಡೆಸಿದಾಗ ಚಿನ್ನದ ಸರವನ್ನು ಕಾಸರಗೋಡಿನ ಜ್ಯುವೆಲ್ಲರಿಯಲ್ಲಿ ಮಾರಾಟ ನಡೆಸಿರುವುದಾಗಿ ತಿಳಿದು ಬಂದಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಸೇರಿಸಿಕೊಂಡು ಕಾಸರಗೋಡಿಗೆ ತಲುಪಿದ ತಳಿಪರಂಪ  ಪೊಲೀಸರು …

ಕಾರು-ಸ್ಕೂಟರ್ ಢಿಕ್ಕಿ: ಓರ್ವ ಮೃತ್ಯು

ಮಂಜೇಶ್ವರ: ಉಪ್ಪಳ ರೈಲ್ವೇ ಗೇಟ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಹಾಗೂ ಸ್ಕೂಟರ್ ಢಿಕ್ಕಿ ಹೊಡೆದು ಸ್ಕೂಟರ್ ಪ್ರಯಾಣಿಕ ಮೃತಪಟ್ಟ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿಯ ಅಬ್ದುಲ್ ಹಮೀದ್ (48) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸ್ಕೂಟರ್ ಚಲಾಯಿಸುತ್ತಿದ್ದ ಅಜಾಸ್ ಅಹಮ್ಮದ್ (41) ಎಂಬವರನ್ನು ಗಾಯಗಳೊಂದಿಗೆ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಸಂಜೆ ೬.೩೦ರ ವೇಳೆ ಅಪಘಾತ ಸಂಭವಿಸಿದೆ. ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಬರುತ್ತಿದ್ದ ಸ್ಕೂಟರ್ ಹಾಗೂ ಹೊಸಂಗಡಿ ಭಾಗದಿಂದ ಉಪ್ಪಳಕ್ಕೆ ಬಂದ ಕಾರು ಪರಸ್ಪರ …

ಓಣಂ ಆಚರಣೆಯ ವಿರುದ್ಧ ಮತೀಯ ವಿದ್ವೇಷ ಪರಾಮರ್ಶೆ: ಅಧ್ಯಾಪಿಕೆ ವಿರುದ್ಧ ಕೇಸು, ಅಮಾನತು

ತೃಶೂರು: ಓಣಂ ಹಬ್ಬಾಚರಣೆಯ ವಿರುದ್ಧ ಮತೀಯ ವಿದ್ವೇಷ ಪರಾಮರ್ಶೆ ನಡೆಸಿದ ಶಾಲಾ ಅಧ್ಯಾಪಿಕೆಯ ವಿರುದ್ಧ ಕುನ್ನಂಕುಳಂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕುನ್ನಂಕುಳಂ ಪೆರುಂಬಿಲಾವ್ ಕಲ್ಲುಂಪ್ಪುರದ ಮೆನೇಜ್‌ಮೆಂಟ್ ಶಾಲೆಯೊಂದರ ಅಧ್ಯಾಪಿಕೆ ಖದೀಜ ಎಂಬವರ ವಿರುದ್ದ ಈ ಕೇಸು ದಾಖಲಿಸಲಾಗಿದೆ. ಅದಾದ ಬೆನ್ನಲ್ಲೇ ಪ್ರಸ್ತುತ ಶಾಲಾ ಮೆನೇಜ್‌ಮೆಂಟ್ ಖದೀಜರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಮಾತ್ರವಲ್ಲ ಖದೀಜ ನಡೆಸಿದ ಪರಾಮರ್ಶೆಯಲ್ಲಿ ತಮ್ಮದೇನೂ ಪಾತ್ರವಿಲ್ಲವೆಂದು ಶಾಲಾ  ಮೆನೇಜ್‌ಮೆಂಟ್ ಸ್ಪಷ್ಟಪಡಿಸಿದೆ. ಓಣಂ ಹಬ್ಬಾಚರಣೆ ಒಂದು ಹಿಂದೂ ಧರ್ಮದ ಆಚರಣೆಯಾಗಿದೆ. ಆದ್ದರಿಂದ ಅಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು …

ಮನೆಯ ಹೆಂಚು ಸರಿಸಿ ಒಳನುಗ್ಗಿ ಕಳವಿಗೆತ್ನ: ತನಿಖೆ ಆರಂಭ

ಉಪ್ಪಳ: ಮಂಜೇಶ್ವರ ವಾಮಂಜೂರು ಚೆಕ್‌ಪೋಸ್ಟ್ ಸಮೀಪ ಮನೆಯೊಂದರಿಂದ ನಡೆದ ಕಳವು ಯತ್ನ ಪ್ರಕರಣ ದಲ್ಲಿ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಮಂಜೂರು ಚೆಕ್‌ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ಸಮೀಪವಿರುವ ಸಫಿ ಮುಮ್ತಾಜ್ ಎಂಬವರ ಮನೆಯಿಂದ ಸೋಮವಾರ ರಾತ್ರಿ ಕಳವು ಯತ್ನ ನಡೆದಿದೆ. ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು ಕಳವಿಗೆತ್ನಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಈ ಘಟನೆ ಅರಿವಿಗೆ ಬಂದಿದೆ. ಈ ಬಗ್ಗೆ ಮನೆಯವರು ನೀಡಿದ ದೂರಿ ನಂತೆ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿ ಕನಿಖೆ …

ಗಾಂಜಾ ಸಹಿತ ಯುವತಿ ಸೆರೆ

ಹೊಸದುರ್ಗ: ಮಾರಾಟಕ್ಕಾಗಿ ಸಾಗಿಸುತ್ತಿದ್ದ ಗಾಂಜಾ ಸಹಿತ ಯುವತಿಯನ್ನು ಅಬಕಾರಿ ತಂಡ ಬಂಧಿಸಿದೆ. ಪಯ್ಯನ್ನೂರು ಎಡಾಟ್ ನಿವಾಸಿ ಪಿ. ಪ್ರಜಿತ (29) ಎಂಬಾಕೆ ಬಂಧಿತ ಯುವತಿ.  ಓಣಂ ಸ್ಪೆಷಲ್ ಡ್ರೈವ್‌ನಂಗವಾಗಿ ಅಬಕಾರಿ ತಂಡ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಂಶಯಗೊಂಡು ಯುವತಿಯನ್ನು ತಪಾಸಣೆ ನಡೆಸಿದಾಗ 12 ಗ್ರಾಂ ಗಾಂಜಾ ಪತ್ತೆಯಾಗಿದೆ.

ಸಹೋದರಿ ಮನೆಗೆ ಬಂದ ಬಾಲಕಿಗೆ ಕಿರುಕುಳ ಯುವಕನ ವಿರುದ್ಧ ಕೇಸು

ಕಾಸರಗೋಡು: ಸಹೋದರಿಯ ಮನೆಗೆ ಬಂದ 17ರ ಹರೆಯದ ಬಾಲಕಿಗೆ ಕಿರುಕುಳ ನೀಡಿದ ಆರೋಪದಂತೆ ಪೊಲೀಸರು ಕೇಸು ದಾಖಲಿಸಿಕೊಂಡಿ ದ್ದಾರೆ. ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸಿಸುವ ಬಾಲಕಿಯ ದೂರಿನ ಮೇರೆಗೆ ಕಾಸರಗೋಡು ವನಿತಾ ಪೊಲೀಸರು 17ರ ಹರೆಯದ ಯುವಕನ ವಿರುದ್ಧ ಪೋಕ್ಸೋ ಪ್ರಕಾರ ಕೇಸು ದಾಖಲಿಸಿಕೊಂಡಿದ್ದಾರೆ. ಬಾಲಕಿಗೆ 15ನೇ ವರ್ಷ ಪ್ರಾಯದಿಂದ ಹಲವು ಬಾರಿ ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.  ಇತ್ತೀಚೆಗೆ ಪರೀಕ್ಷೆಗೆಂದು ಮನೆಯಿಂದ ಹೊರಟ ಬಾಲಕಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋದ ಘಟನೆ  ಬೆಳಕಿಗೆ ಬಂದ ಹಿನ್ನೆಲೆಯಲ್ಲಿ …

ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 11 ಲಕ್ಷ ರೂ. ಕಾಳಧನ ವಶ: ಓರ್ವ ಸೆರೆ

ಕಾಸರಗೋಡು: ಆಟೋ ರಿಕ್ಷಾದಲ್ಲಿ ಸಾಗಿಸುತ್ತಿದ್ದ 11 ಲಕ್ಷ ರೂಪಾಯಿ ಕಾಳ ಧನವನ್ನು ಪೊಲೀಸರು ವಶಪಡಿಸಿ ಕೊಂಡು ಈ ಸಂಬಂಧ ಓರ್ವನನ್ನು ಬಂಧಿಸಿದ್ದಾರೆ. ಪಡನ್ನ ಕೊಕ್ಕಕಡವ್ ನಿವಾಸಿ ಎಸ್.ಸಿ. ನಿಸಾರ್ (42) ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ನಿನ್ನೆ ಮಧ್ಯಾಹ್ನ ಪಳ್ಳಿಕ್ಕೆರೆ ಮೇಲ್ಸೇತುವೆ ಸಮೀಪ ನೀಲೇಶ್ವರ ಎಸ್‌ಐ ರತೀಶ್ ನೇತೃತ್ವದ ಪೊಲೀಸ್ ತಂಡ ನಡೆಸಿದ ವಾಹನ ತಪಾಸಣೆಯಲ್ಲಿ ಕಾಳಧನ ಪತ್ತೆಹಚ್ಚಲಾಗಿದೆ. ಹಣ ಸಾಗಾಟ ಬಗ್ಗೆ  ಗುಪ್ತ ಮಾಹಿತಿ ಲಭಿಸಿದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ತಲುಪಿ ವಾಹನ ತಪಾಸಣೆ ನಡೆಸಿದ್ದರು. ಹಣ …

ಆನ್‌ಲೈನ್ ವ್ಯಾಪಾರದ ಹೆಸರಲ್ಲಿ 22 ಲಕ್ಷ ರೂ. ಲಪಟಾವಣೆ

ಕಾಸರಗೋಡು: ಆನ್‌ಲೈನ್ ಪ್ಲಾಟ್ ಫಾಂ ಮೂಲಕ ಶೇರು ವ್ಯಾಪಾರಕ್ಕಾಗಿ  22.38 ಲಕ್ಷ ರೂ. ಠೇವಣಿ ಪಡೆದು ಅದರ ಲಾಭವನ್ನಾಗಲೀ ಠೇವಣಿ ಹಣ ವನ್ನಾಗಲೀ ಹಿಂತಿರುಗಿಸದೆ ವಂಚಿಸಿದ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಚೀಮೇನಿ ನಿವಾಸಿ ಪಿ.ಶ್ರೀಧರನ್ ಎಂಬವರು ಈ ರೀತಿ ವಂಚನೆಗೊಳಗಾಗಿದ್ದು, ಆ ಬಗ್ಗೆ ಅವರು ನೀಡಿದ ದೂರಿನಂತೆ ಚೀಮೇನಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಟ್ಸಪ್ ಮತ್ತು ಫೇಸ್‌ಬುಕ್‌ನಲ್ಲಿ ಯುಟಿಐಎಎಂಸಿ ಎಂಬ ಆನ್‌ಲೈನ್ ಪ್ಲಾಟ್ ಪಾಂನಲ್ಲಿ ಶೇರು ಟ್ರೇಡಿಂಗ್ ಎಂಬ ಹೆಸರಲ್ಲಿ ಅಮಿತ ಲಾಭ ನೀಡುವುದೆಂಬ ವಾಗ್ದಾನ …