ಆರ್ಟಿಒ, ಪೊಲೀಸ್ ನೇತೃತ್ವದಲ್ಲಿ ನಡೆದ ಸಭೆಯಿಂದ ಹೊರ ನಡೆದ ಪಂ. ಜನಪ್ರತಿನಿಧಿಗಳು: ಕುಂಬಳೆಯಲ್ಲಿ ಪರಿಹಾರವಾಗದ ಬಸ್ ನಿಲುಗಡೆ ಸಮಸ್ಯೆ
ಕುಂಬಳೆ: ಕುಂಬಳೆಯಲ್ಲಿ ಖಾಸಗಿ ಬಸ್ಗಳ ನಿಲುಗಡೆಗೆ ಸಂಬಂಧಿಸಿ ಹುಟ್ಟಿಕೊಂಡ ವಿವಾದ ಪರಿಹಾರ ವಾಗದೆ ಇನ್ನಷ್ಟು ಉಲ್ಭಣಾವಸ್ಥೆಗೆ ತಲುಪುತ್ತಿದೆ. ಸಮಸ್ಯೆ ಪರಿಹರಿಸಲು ಆರ್ಟಿಒ, ಪೊಲೀಸರ ನೇತೃತ್ವದಲ್ಲಿ ನಿನ್ನೆ ನಡೆದ ಚರ್ಚೆ ಯಾವುದೇ ನಿರ್ಧಾರ ಕೈಗೊಳ್ಳಲಾಗದೆ ಕೊನೆಗೊಂಡಿತು. ಕುಂಬಳೆ ಪಂಚಾಯತ್ ಕಚೇರಿಯಲ್ಲಿ ಎಎಸ್ಪಿ ಅಚ್ಯುತ್ ಅಶೋಕ್, ಕುಂಬಳೆ ಸಿಐ ಬೈಜು ಕೆ ಜೋಸ್, ಆರ್ಟಿಒ ನೇತೃತ್ವದಲ್ಲಿ ನಿನ್ನೆ ಸಂಜೆ ನಡೆದ ಸಭೆಯಲ್ಲಿ ಪಂಚಾಯತ್ ಆಡಳಿತ ಪಕ್ಷದ ಜನಪ್ರತಿನಿಧಿಗಳು, ಬ್ಲಾಕ್, ಜಿಲ್ಲಾ ಪಂಚಾಯತ್ ಸದಸ್ಯರು, ಬಸ್ ನೌಕರರು, ಬಸ್ ನೌಕರರ ಸಂಘಟನೆಗಳ …