ಕಣಿಪುರ ಕ್ಷೇತ್ರ ಜಾತ್ರೆ: ಸಹಸ್ರಾರು ಭಕ್ತರಿಂದ ದೇವರ ದರ್ಶನ

ಕುಂಬಳೆ: ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿರುವ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಭಕ್ತಾದಿಗಳು ತಲುಪಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಹೋತ್ಸವದ ಮೂರನೇ ದಿನವಾದ ಇಂದು ಬೆಳಿಗ್ಗೆ ಉತ್ಸವ ಶ್ರೀಬಲಿ, ಬಳಿಕ ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ಬಲಿ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ ಗಂಟೆ ೨ರಿಂದ ಶೇಡಿಕಾವು ಪಾರ್ತಿಸುಬ್ಬ ಯಕ್ಷಗಾನ ಕಲಾಸಂಘದವರಿಂದ ‘ಶ್ರೀಕೃಷ್ಣ ಸಂದಾನ’ ಯಕ್ಷಗಾನ ತಾಳಮದ್ದಳೆ, ಸಂಜೆ 4.30ರಿಂದ ವೈಷ್ಣವಿ ನಾಟ್ಯಾಲಯ ಪುತ್ತೂರು …

ಕುಸಿದು ಬಿದ್ದು ಮಹಿಳೆ ನಿಧನ

ಮಂಗಲ್ಪಾಡಿ: ಪ್ರತಾಪನಗರ ಬೀಟಿಗದ್ದೆ ನಿವಾಸಿ ದಿ| ದಿವಾಕರ ಪೂಜಾರಿಯವರ ಪತ್ನಿ ದೇವಕಿ (63) ನಿಧನ ಹೊಂದಿದರು. ಇವರು ನಿನ್ನೆ ಸಂಜೆ ಮನೆಯಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಉಪ್ಪಳದ ಖಾಸಗಿ ಆಸ್ಪತ್ರೆಗೆ ತಲುಪಿಸಿದರೂ ಅಷ್ಟರಲ್ಲಿ ನಿಧನ ಹೊಂದಿದರು.ಮೃತರು ಮಕ್ಕಳಾದ ಉಷಾ, ಉದಯ, ಅನಿಲ್, ಸೊಸೆ ರಕ್ಷಿತಾ, ಅಳಿಯ ಹರೀಶ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ಮನೆಗೆ ಸಂಘ ಪರಿವಾರದ ಮುಖಂಡರು, ಕಾರ್ಯಕರ್ತರ ಸಹಿತ ಹಲವಾರು ಮಂದಿ ಭೇಟಿ ನೀಡಿ ಅಂತಿಮನಮನ ಸಲ್ಲಿಸಿದರು. ನಿಧನಕ್ಕೆ ಪ್ರತಾಪನಗರ …

ನಗರಸಭೆಯ ಮೊದಲ ಮಹಿಳಾ ಕೌನ್ಸಿಲರ್ ನಿಧನ

ಕಾಸರಗೋಡು: ನಗರಸಭಾ ಮಾಜಿ ಕೌನ್ಸಿಲರ್, ನೆಲ್ಲಿಕುಂಜೆ ನಿವಾಸಿ ದಿ| ಗಣೇಶ್‌ಅಬ್ದುಲ್ಲಕುಂಞಿಯವರ ಪತ್ನಿ ಸೌದಾಬಿ ಅಬ್ದುಲ್ಲಕುಂಞಿ (84) ನಿಧನ ಹೊಂದಿದರು.  ನೆಲ್ಲಿಕುಂಜೆ ವಾರ್ಡನ್ನು ಪ್ರತಿನಿಧೀಕರಿಸಿ ನಗರಸಭೆಗೆ ತಲುಪಿದ ಮೊದಲ ಮಹಿಳಾ ಸದಸ್ಯೆಯಾಗಿದ್ದರು. ಮೃತರು ಮಕ್ಕಳಾದ ರಹೀಂ, ಸಾದಿಕ್, ನಸೀರ್, ಸಾಹಿರ, ಖದೀಜ, ಸಮೀರ, ಸಲ್ಮಾ, ಅಳಿಯಂದಿರಾದ ಮೊಹಮ್ಮದ್ ಕುಂಞಿ, ಬಶೀರ್ ಸೂಫಿ ತಳಂಗರೆ, ಅಬ್ದುಲ್ಲ ಕುಂಞಿ ಚೆರ್ಕಳ, ಅಬ್ದುಲ್ಲ ಕುಂಞಿ ಮೊಗ್ರಾಲ್, ಸೊಸೆಯಂದಿರಾದ ಸೌದಾ, ನಬೀಸ, ಮರಿಯಾಂಬಿ, ಫೌಸಿಯ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಓರ್ವ ಪುತ್ರ ಬಶೀರ್ …

ಮುಖ್ಯಮಂತ್ರಿಯ ವಿದೇಶ ಯಾತ್ರೆಗೆ ಎರಡು ವರ್ಷದಲ್ಲಿ ವಿಮಾನ ಖರ್ಚು 41.57 ಲಕ್ಷ ರೂ.

ತಿರುವನಂತಪುರ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ 2022-23ರಲ್ಲಿ ನಡೆಸಿದ ವಿಮಾನ ಯಾತ್ರೆಗಳ ಖರ್ಚಿನ ವತಿಯಿಂದ 41.57 ಲಕ್ಷ ರೂ. ಪಡೆದಿದ್ದಾರೆ. 2022 ಜನವರಿ 15ರಿಂದ ಕಳೆದ ವರ್ಷ ಡಿಸೆಂಬರ್ ತನಕದ ಅವಧಿಯಲ್ಲಿ ಮುಖ್ಯಮಂತ್ರಿ ಗಲ್ಫ್ ರಾಷ್ಟ್ರಗಳಿಗೆ ಯಾತ್ರೆ ಮಾತ್ರವಲ್ಲ, ಅಮೇರಿಕ, ಬ್ರಿಟನ್, ಕ್ಯೂಬಾ ಸೇರಿದಂತೆ ಒಟ್ಟು 16 ರಾಷ್ಟ್ರಗಳಿಗೆ ಯಾತ್ರೆ ನಡೆಸಿದ್ದಾರೆ.  ಹೀಗೆ ನಡೆಸಲಾದ ವಿದೇಶಯಾತ್ರೆಯ ವಿಮಾನ ಶುಲ್ಕದ ವತಿಯಿಂದ ಅವರು 2022 ಮತ್ತು 2023ರಲ್ಲಿ ಒಟ್ಟು 41.57 ಲಕ್ಷ ರೂ. ಪಡೆದಿದ್ದಾರೆಂದು ಮಾಹಿತಿ ಹಕ್ಕು ಕಾನೂನುಪ್ರಕಾರ ರಾಜ್ಯ …

ಕೇರಳದ ಅರ್ಜಿ ಪರಿಗಣಿಸಿ ಸುಪ್ರೀಂಕೋರ್ಟ್ ನಿರ್ದೇಶ: ಎಸ್‌ಐಆರ್ ಸಮಯ ವ್ಯಾಪ್ತಿ ಇನ್ನೂ ಎರಡು ವಾರಗಳ ತನಕ ವಿಸ್ತರಣೆ

ತಿರುವನಂತಪುರ: ಮತದಾರ ಪಟ್ಟಿಯ ಸಮಗ್ರ ವಿಶೇಷ ಪರಿಷ್ಕರಣೆಗಾಗಿ ಕೇರಳದಲ್ಲಿ ನಿಗದಿಪಡಿಸಲಾಗಿರುವ ಸಮಯಾವ ಕಾಶವನ್ನು ಇನ್ನೂ ಎರಡು ವಾರಗಳ ತನಕ ವಿಸ್ತರಿಸುವಂತೆ ಸುಪ್ರೀಂಕೋರ್ಟ್ ಕೇಂದ್ರ ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಿದೆ.  ಎಸ್‌ಐಆರ್ ವಿಷಯದಲ್ಲಿ  ಜನರು ಎದುರಿಸುತ್ತಿರುವ ಸಂಕಷ್ಟಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಕೇರಳ ಸೇರಿದಂತೆ ಇತರ ರಾಜ್ಯದಲ್ಲಿ ಸಲ್ಲಿಸಿರುವ ಅರ್ಜಿಗಳನ್ನು ಪರಿಶೀಲಿಸಿ ಸುಪ್ರೀಂಕೋರ್ಟ್ ಈ ನಿರ್ದೇಶ ನೀಡಿದೆ.  ಎಸ್‌ಐಆರ್ ಕ್ರಮಗಳನ್ನು ಈ ತಿಂಗಳ 22ರೊಳಗೆ ಪೂರ್ತೀಕರಿಸುವಂತೆ ಆಯೋಗ ಈ ಹಿಂದೆ ಅಂತಿಮ ಗಡು ನೀಡಿತ್ತು. ಈಗ ಸುಪ್ರೀಕೋರ್ಟ್ ನೀಡಿರುವ ನಿರ್ದೇಶ …

ರಾಜ್ಯದ ಕುಂಭಮೇಳಕ್ಕೆ ಔಪಚಾರಿಕ ಚಾಲನೆ ಇಂದು: 19ರಂದು ರಾಜ್ಯಪಾಲರಿಂದ ಉದ್ಘಾಟನೆ

ತಿರುನಾವಾಯ: ಕೇರಳದ ಕುಂಭಮೇಳವೆಂದು  ವಿಶೇಷಿಸಲ್ಪಡುವ ಮಹಾ ಮಾಘ ಮಹೋತ್ಸವಕ್ಕೆ ಭಾರತ ಹೊಳೆಯಲ್ಲಿ ವಿಶೇಷ ಪೂಜೆಗಳೊಂದಿಗೆ ಇಂದು ಚಾಲನೆ ದೊರೆಯಲಿದೆ. ಈತಿಂಗಳ 19ರಿಂದ ಫೆ. ೩ರವರೆಗೆ ಮಹಾ ಮಾಘ ಮಹೋತ್ಸವ ನಡೆಯಲಿದೆ. ೧೯ರಂದು ಬೆಳಿಗ್ಗೆ 11 ಗಂಟೆಗೆ  ನಾವಾ ಮುಕುಂದಕ್ಷೇತ್ರ ಪರಿಸರದಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ ಅರ್ಲೇಕರ್ ಕುಂಭಮೇಳ ಉದ್ಘಾಟಿಸುವರು. ಇದಕ್ಕಿರುವ ಸಿದ್ಧತೆಗಳು ಪೂರ್ತಿಗೊಂಡಿದೆಯೆಂದು  ಮಹಾಮಾಘ ಸಭಾಪತಿ  ಸ್ವಾಮಿ ಆನಂದವನಂ ಭಾರತಿ ಸ್ವಾಮೀಜಿ ತಿಳಿಸಿದ್ದಾರೆ. ಪ್ರಯಾಗ್‌ನಲ್ಲಿ ಕುಂಭಮೇಳಕ್ಕೆ ನೇತೃತ್ವ ನೀಡುವ ನಾಗ ಸನ್ಯಾಸಿಗಳ ಸಮೂಹವಾದ ಜುನ ಅಘಾಢ ಇಲ್ಲಿ …

ಕುಂಬಳೆ ಟೋಲ್ ಬೂತ್‌ನ ಕ್ಯಾಮರಾ, ಗೇಟ್ ನಾಶ: ವಾಹನಗಳನ್ನು ತಡೆಯುವ ಹ್ಯಾಂಡಲ್‌ಗೆ ಹಾನಿ; 500 ಮಂದಿ ವಿರುದ್ಧ ಕೇಸು ದಾಖಲು, ಚಳವಳಿ ನಿರತ ಶಾಸಕ ಸಹಿತ 15  ಮಂದಿ ಬಂಧನ: ಚಪ್ಪರ ತೆರವು

ಕುಂಬಳೆ: ಕುಂಬಳೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ವಿರುದ್ಧ  ಇಂದು ಬೆಳಿಗ್ಗೆ ಚಳವಳಿ ಪುನರಾರಂಭಿಸಿದ ಶಾಸಕ  ಸಹಿತ ೧೫ ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.  ಚಳವಳಿಗಾಗಿ ನಿರ್ಮಿಸಿದ ಚಪ್ಪರವನ್ನು ಪೊಲೀಸರು ಮುರಿದು ತೆರವುಗೊಳಿಸಿದರು.  ಶಾಸಕ ಎಕೆಎಂ ಅಶ್ರಫ್, ಪಂ. ಅಧ್ಯಕ್ಷ ವಿ.ಪಿ. ಅಬ್ದುಲ್ ಖಾದರ್ ಹಾಜಿ, ಬ್ಲೋಕ್ ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಅಶ್ರಫ್ ಕಾರ್ಳೆ, ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಎ.ಕೆ. ಆರಿಫ್, ಸಿಪಿಎಂ ಏರಿಯಾ ಸೆಕ್ರೆಟರಿ ಸಿ.ಎ.ಸುಬೈರ್, ಕಾಂಗ್ರೆಸ್ ನೇತಾರ ಲಕ್ಷ್ಮಣ ಪ್ರಭು ಮೊದಲಾದವರನ್ನು ಪೊಲೀಸರು …

ಶಬರಿಮಲೆ ದೇಗುಲದಿಂದ ಚಿನ್ನ ಕಳವು ಪ್ರಕರಣ: ಕೆ.ಪಿ. ಶಂಕರ್‌ದಾಸ್ ಸೆರೆ ನ್ಯಾಯಾಂಗ ಬಂಧನ

ತಿರುವನಂತಪುರ: ಶಬರಿಮಲೆ ದೇಗುಲದ ಚಿನ್ನ ಕಳವು ಪ್ರಕರಣದ ೧೧ನೇ ಆರೋಪಿಯಾಗಿರುವ ತಿರು ವಿದಾಂಕೂರ್ ಮುಜರಾಯಿ ಮಂ ಡಳಿಯ ಮಾಜಿ ಸದಸ್ಯ ಹಾಗೂ ಸಿಪಿಐ ಪ್ರತಿನಿಧಿಯೂ ಆಗಿದ್ದ ಕೆ.ಪಿ. ಶಂಕರ್ ದಾಸ್‌ರನ್ನು  ವಿಶೇಷ ತನಿಖಾ ತಂಡ (ಎಸ್‌ಐಟಿ) ಕೊನೆಗೂ ಬಂಧಿಸಿದೆ. ಶಬರಿಮಲೆಯಲ್ಲಿ ನಿನ್ನೆ ಮಕರ ಜ್ಯೋತಿ   ಬೆಳಗುವ ವೇಳೆಯಲ್ಲೇ ಇವರ ಬಂಧನ ನಡೆದಿದೆ. ಆಮೂಲಕ ಶಬರಿ ಮಲೆ ಚಿನ್ನ ಕಳವು ನಡೆದ ಸಮಯದಲ್ಲಿ  ಮುಜರಾಯಿ ಮಂಡಳಿಯ ಆಡಳಿತ ಸಮಿತಿಯಲ್ಲಿದ್ದ ಎಲ್ಲರೂ  ಬಂಧಿಸ ಲ್ಪಟ್ಟಂತಾಯಿತು.  ಅಂದು ಮಂಡಳಿಯ ಅಧ್ಯಕ್ಷರಾಗಿದ್ದ ಪದ್ಮಕುಮಾರ್ …

ಸಿಪಿಎಂ ನೇತಾರನ ವಿರುದ್ಧ ಅತ್ಯಾಚಾರ ಪ್ರಕರಣ : ದೂರುದಾತೆಯಿಂದ ನ್ಯಾಯಾಲಯ ಗುಪ್ತ ಮಾಹಿತಿ ಸಂಗ್ರಹ

ಕಾಸರಗೋಡು: ಸಿಪಿಎಂ ನೇತಾರನ ವಿರುದ್ಧ  ಕೇಳಿ ಬಂದ ಅತ್ಯಾಚಾರ ಪ್ರಕರಣದಲ್ಲಿ  ದೂರುದಾತೆಯಿಂದ ನ್ಯಾಯಾಲಯ ಗುಪ್ತ ಹೇಳಿಕೆ ದಾಖಲಿಸಿಕೊಂಡಿದೆ. ಕಾಸರಗೋಡು ಮಹಿಳಾ ಠಾಣೆಯ ಎಸ್‌ಐ ಕೆ. ಅಜಿತ ದೂರುದಾತೆ ಯಿಂದ ಮಾಹಿತಿ ಸಂಗ್ರಹಿಸಿದ ಬಳಿಕ ಆಕೆಯನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿತ್ತು. ಇದೇ ವೇಳೆ ವೈದ್ಯಕೀಯ ತಪಾಸಣೆಗೆ ವಿಧೇಯಗೊಳಿಸಬೇಕೆಂಬ ಪೊಲೀಸರ ಆಗ್ರಹಕ್ಕೆ ದೂರುದಾತೆಯಾದ ಗೃಹಿಣಿಯಿಂದ ಅನುಕೂಲ ಪ್ರತಿಕ್ರಿಯೆ  ಉಂಟಾಗಿಲ್ಲವೆಂಬ ಸೂಚನೆಯಿದೆ. ಸಿಪಿಎಂ ಮಾಜಿ ಕುಂಬಳೆ ಏರಿಯಾ ಸೆಕ್ರೆಟರಿಯೂ ಪ್ರಸ್ತುತ ಎಣ್ಮಕಜೆ ಪಂಚಾಯತ್ ಸದಸ್ಯನೂ, ಇಚ್ಲಂಪಾಡಿ ಶಾಲೆ ಅಧ್ಯಾಪಕನಾದ ಸುಧಾಕರ ಈ ಪ್ರಕರಣದಲ್ಲಿ …