ಬೀಗ ಜಡಿದ ಮನೆಗೆ ಕಳ್ಳರು ನುಗ್ಗಿ ವಿದೇಶಿ ಕರೆನ್ಸಿ, ನಗದು, ವಾಚ್‌ಗಳು ಕಳವು

ಕುಂಬಳೆ: ಬೀಗ ಜಡಿದ ಮನೆಗೆ ಕಳ್ಳರು ನುಗ್ಗಿ ವಿದೇಶಿ ಕರೆನ್ಸಿ, ನಗದು ಹಾಗೂ ವಾಚ್‌ಗಳನ್ನು ಕಳವುಗೈದ ಬಗ್ಗೆ ಕುಂಬಳೆ ಪೊಲೀಸರಿಗೆ ದೂರು ನೀಡಲಾಗಿದೆ. ಕಯ್ಯಾರು ಕೊಕ್ಕೆಚ್ಚಾಲ್ ಉಬೈಸ್ ಮಂಜಿಲ್‌ನ ಉಮ್ಮರ್ ಉಸೈದ್ ಎಂಬವರ ಮನೆಯಲ್ಲಿ ಈ ಕಳವು ನಡೆದಿದೆ.   ಈತಿಂಗಳ ೧೨ರಂದು ಮನೆಯವರು ಬೀಗ ಜಡಿದು ಕಲ್ಲಿಕೋಟೆಗೆ ಹೋಗಿದ್ದರು. ಆ ಬಳಿಕ ಮನೆ ಮನೆಗೆ ಬಂದಾಗ ಕಳವು ನಡೆದ ವಿಷಯ ಅವರ ಗಮನಕ್ಕೆ ಬಂದಿದೆ. ಅದರಂತೆ ಉಮ್ಮರ್ ಉಸೈದ್ ನೀಡಿದ ದೂರಿನಂತೆ ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿ …

ನಡೆದು ಹೋಗುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತ್ಯು

ಕುಂಬಳೆ: ಕುಂಬಳೆ ಪೇಟೆಯಲ್ಲಿ ನಡೆದು ಹೋಗುತ್ತಿದ್ದ ವ್ಯಕ್ತಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.  ಮಾಟೆಂಗುಳಿ ನಿವಾಸಿಯೂ ಆರಿ ಕ್ಕಾಡಿ ತಂಙಳ್‌ರ ಮನೆ  ಸಮೀಪ ವಾಸಿಸುವ ಕೆ.ಎಂ. ಅಬ್ಬಾಸ್ (55) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ಕುಂಬಳೆ ಪೇಟೆಯಲ್ಲಿ ಸ್ನೇಹಿತ ನೊಂದಿಗೆ ಮಾತನಾಡುತ್ತಿದ್ದಾಗ ಇವ ರಿಗೆ ಎದೆ ನೋವು ಉಂಟಾಗಿತ್ತೆನ್ನ ಲಾಗಿದೆ. ಈ ಬಗ್ಗೆ  ಸ್ನೇಹಿತನಿಗೆ ತಿಳಿಸಿ ಆಸ್ಪತ್ರೆಗೆ ನಡೆದು ಹೋಗುತ್ತಿ ದ್ದಾಗ ರಸ್ತೆ ಬದಿ ಕುಸಿದು ಬಿದ್ದಿದ್ದಾರೆ. ಕೂಡಲೇ ನಾಗರಿಕರು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಿದರೂ …

ಮನೆಗೆ ಬೆಂಕಿಗಾಹುತಿ: ಲಕ್ಷಾಂತರ ರೂ.ಗಳ ನಷ್ಟ

ಪೆರ್ಲ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೆಂಕಿ ತಗಲಿ ಲಕ್ಷಾಂತರ ರೂ.ಗಳ ನಾಶನಷ್ಟ ಉಂಟಾದ ಘಟನೆ ಬೆದ್ರಂಪಳ್ಳ ನಡುಬಯಲ್‌ನಲ್ಲಿ ನಿನ್ನೆ ನಡೆದಿದೆ. ನಡುಬಯಲಿನ ರಮೇಶ್ಚಂದ್ರ ಎಂಬವರ ಮನೆಗೆ ನಿನ್ನೆ ಸಂಜೆ ಬೆಂಕಿ ತಗಲಿದೆ. ಇದರಿಂದ ಮನೆಯೊಳಗಿದ್ದ ಫ್ರಿಡ್ಜ್, ಟಿವಿ, ಪೀಠೋಪಕರಣಗಳು, ಕಪಾಟುಗಳು, ದಾಖಲೆಪತ್ರಗಳು  ಮೊದಲಾದವುಗಳು ಪೂರ್ಣವಾಗಿ ಉರಿದು ನಾಶಗೊಂಡಿದೆ.  ಮನೆಗೆ ಬೆಂಕಿ ತಗಲುವ ವೇಳೆ ಅಲ್ಲಿ ಯಾರೂ ಇರಲಿಲ್ಲ. ಮನೆಯವರು  ಮಡಿಕೇರಿಯ ದೇವಸ್ಥಾನವೊಂದಕ್ಕೆ  ಹೋಗಿದ್ದ ವೇಳೆ ಮನೆಗೆ ಬೆಂಕಿ ತಗಲಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗಲಿರಬ …

ಶಬರಿಮಲೆ ಕ್ಷೇತ್ರ ಕಾಣಿಕೆ ಹುಂಡಿಯಿಂದ ವಿದೇಶಿ ಕರೆನ್ಸಿ, ಚಿನ್ನ ಬಾಯಿಯೊಳಗಿಟ್ಟು ಸಾಗಾಟ: ಇಬ್ಬರು ಸೆರೆ

ಶಬರಿಮಲೆ: ಕ್ಷೇತ್ರದಿಂದ ಚಿನ್ನ ಕಳವು ಪ್ರಕರಣ ತೀವ್ರಗತಿಯಲ್ಲಿ ತನಿಖೆ ಮುಂದುವರಿಯುತ್ತಿರುವ ಮಧ್ಯೆ ಕ್ಷೇತ್ರದ ಕಾಣಿಕೆ ಹುಂಡಿಯಿಂದ ವಿದೇಶಿ ಕರೆನ್ಸಿಗಳು ಹಾಗೂ ಚಿನ್ನವನ್ನು ಬಾಯಿಯೊಳಗಿಟ್ಟು ಸಾಗಿಸಿದ ಇಬ್ಬರು ದೇವಸ್ವಂ ನೌಕರರನ್ನು ಪೊಲೀಸರು ಬಂಧಿಸಿದ್ದಾರೆ. ಆಲಪ್ಪುಳ ಕೊಡುಪ್ಪುನ ನಿವಾಸಿ ಎಂ.ಜಿ. ಗೋಪಕುಮಾರ್ (51), ಕೈನಕ್ಕರಿ ನಾಲ್‌ಪುರೈಕ್ಕಲ್ ಸುನಿಲ್ ಜಿ. ನಾಯರ್ (51) ಎಂಬಿವರನ್ನು ದೇವಸ್ವಂ ವಿಜಿಲೆನ್ಸ್ ಬಂಧಿಸಿದೆ. ಇವರನ್ನು ಸನ್ನಿಧಾನ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಇವರಿಬ್ಬರು ತಾತ್ಕಾಲಿಕ ನೌಕರರಾಗಿದ್ದಾರೆ. ಕೆಲಸ ಮುಗಿಸಿ ಹೊರಗೆ ಹೋಗುವಾಗ ಇವರ ಬಾಯಿ ಉಬ್ಬಿದ ಸ್ಥಿತಿಯಲ್ಲಿ …

ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಕಂಡು ಬಂದ ವೃದ್ದನ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜನರಲ್ ಆಸ್ಪತ್ರೆಗೆ

ಕಾಸರಗೋಡು: ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಿದ ವೃದ್ದನ ಮೃತದೇಹವನ್ನು ತಜ್ಞ ಪರೀಕ್ಷೆಗಾಗಿ ಕಾಸರಗೋಡಿನ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ. ಚೋಯಾಂಗೋಟ್‌ನ ಹಿರಿಯ ಆಟೋ ಚಾಲಕ ಕೆ. ಕೃಷ್ಣನ್ (68) ನಿನ್ನೆ ಮಧ್ಯಾಹ್ನ ಮನೆಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಮನೆಯಲ್ಲಿ ಏಕಾಂಗಿಯಾಗಿ ವಾಸಿಸುವ ಇವರು ಕಳೆದೆರಡು ದಿನದಿಂದ ಹೊರ ಬಾರದ ಹಿನ್ನೆಲೆಯಲ್ಲಿ ನೆರೆಮನೆಯವರು ನೋಡಿದಾಗ ಮನೆಯೊಳಗೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ದೇಹಕ್ಕೆ ಎರಡು ದಿನಕ್ಕಿಂತಲೂ ಹೆಚ್ಚು ಹಳಮೆ ಇದೆ ಎಂದು ಶಂಕಿಸಲಾಗಿದೆ. ಹೃದಯಾಘಾತ ಮರಣಕ್ಕೆ ಕಾರಣ ವೆಂದು …

ವಿವಿಧೆಡೆ ಎನ್‌ಫೋರ್ಸ್‌ಮೆಂಟ್ ಸ್ಕ್ವಾಡ್‌ನಿಂದ ತಪಾಸಣೆ: 500 ಕಿಲೋ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನ ವಶ

ಕಾಸರಗೋಡು: ತ್ಯಾಜ್ಯ ಸಂಸ್ಕರಣೆಗೆ ಸಂಬಂಧಿಸಿ ಕಾನೂನು ಉಲ್ಲಂಘನೆಗಳನ್ನು ಪರಿಶೀಲಿಸುವ ಜಿಲ್ಲಾ ಎನ್‌ಫೋರ್ಸ್‌ಮೆಂಟ್ ಸ್ಕ್ವಾಡ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಸಿದ ತಪಾಸಣೆಯಲ್ಲಿ ಎರಡು ದಿನಗಳೊಳಗೆ 500 ಕಿಲೋಗಿಂತಲೂ ಹೆಚ್ಚು ನಿಷೇಧಿತ ತಟ್ಟೆಗಳು, ಗ್ಲಾಸ್‌ಗಳನ್ನು ಪತ್ತೆಹಚ್ಚಿ ದಂಡ ಹೇರಿದೆ. ಮೀಂಜ ಪಂ.ನ ಸೂಪರ್ ಮಾರ್ಕೆಟ್‌ನಿಂದ, ಅಂಗಡಿಗಳಿಂದ ಮಾರಾಟಕ್ಕಾಗಿ ಇರಿಸಿದ್ದ ೧೫೦ ಕಿಲೋ ಗ್ರಾಂ ನಿಷೇಧಿತ ಉತ್ಪನ್ನಗಳನ್ನು ಪತ್ತೆಹಚ್ಚಿ ಮಾಲಕರಿಗೆ 10,000 ರೂ.ನಂತೆ ದಂಡ ವಿಧಿಸಲಾಗಿದೆ. ಪೈವಳಿಕೆ ಪಂಚಾಯತ್ ವ್ಯಾಪ್ತಿಯ ಸೂಪರ್ ಮಾರ್ಕೆಟ್‌ನಿಂದ 50 ಕಿಲೋ ಗ್ರಾಂ ನಿಷೇಧಿತ ಉತ್ಪನ್ನಗಳನ್ನು ಪತ್ತೆಹಚ್ಚಿ …

ಪ್ರತಾಪನಗರ ಒಳರಸ್ತೆ ಚರಂಡಿ ನಿರ್ಮಾಣಕ್ಕೆ ಚಾಲನೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್‌ನ 7ನೇ ವಾರ್ಡ್ ಪ್ರತಾಪನಗರದ ಒಳರಸ್ತೆಯಲ್ಲಿ ಚರಂಡಿ ನಿರ್ಮಾಣ ಕೆಲಸಕ್ಕೆ ನಿನ್ನೆ ಚಾಲನೆ ನೀಡಲಾಗಿದೆ. ಪಂಚಾಯತ್ ಪsಂಡ್‌ನಿAದ ಸುಮಾರು 5ಲಕ್ಷ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣಗೊಳ್ಳಲಿದೆ. ಚರಂಡಿಯ ಅವ್ಯವಸ್ಥೆಯಿಂದ ಮಳೆ ನೀರು ಪೂರ್ತಿ ರಸ್ತೆಯಲ್ಲಿ ಹರಿದು ಶೋಚನೀಯÁವಸ್ಥೆಯಿಂದ ಸ್ಥಳೀಯರ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದೆ. ಚರಂಡಿ ನಿರ್ಮಾಣದಿಂದ ಸಮಸ್ಯೆ ಬಗೆ ಹರಿಯಲಿದೆ. ಎರಡು ತಿಂಗಳ ಹಿಂದೆ ಚರಂಡಿ ನಿರ್ಮಾಣಕ್ಕೆ ಹೊಂಡ ತೋಡಿ ಮುಹೂರ್ತ ಮಾಡಲಾಗಿತ್ತು. ಕೆಲಸ ಆರಂಭ ವಿಳಂಬಗೊAಡಿರುವುದು ಸ್ಥಳೀಯರಿಗೆ ಸಮಸ್ಯೆಯÁಗಿತ್ತು. ಅಲ್ಲದೆ ಹೊಂಡ ತೋಡುವ …

18ರಿಂದ 30ರ ಮಧ್ಯೆ ಪ್ರಾಯದವರಿಗೆ ಸ್ಕಾಲರ್‌ಶಿಪ್ ‘ಕನೆಕ್ಟ್ ಟು ವರ್ಕ್’ ಯೋಜನೆಯ ರೂಪುರೇಷೆಗೆ ಅಂಗೀಕಾರ

ತಿರುವನಂತಪುರ: ಮುಖ್ಯಮಂತ್ರಿಯ ಕನೆಕ್ಟ್ ಟು ವರ್ಕ್ ಯೋಜನೆಯ ನವೀಕೃತ ರೂಪುರೇಷೆಗೆ ಸಚಿವಸಂಪುಟ ಸಭೆ ಅಂಗೀಕಾರ ನೀಡಿದೆ. ಯುವಕರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿ ಉದ್ಯೋಗ ಸಾಧ್ಯತೆಗಳನ್ನು ಉತ್ತಮ ಪಡಿಸುವುದು ಯೋಜನೆಯ ಉದ್ದೇಶವಾಗಿದೆ. ಅರ್ಜಿದಾರರ ಕುಟುಂಬ ವಾರ್ಷಿಕ ಆದಾಯ 5 ಲಕ್ಷ ರೂ.ಗಿಂತ ಹೆಚ್ಚಾಗ ಬಾರದು. ಅರ್ಜಿದಾರ ಕೇರಳದಲ್ಲೇ ಖಾಯಂ ವಾಸವಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕಕ್ಕೆ 18 ವರ್ಷ ಪೂರ್ತಿಯಾಗಿದ್ದು, 30 ವರ್ಷಕ್ಕಿಂತ ಹೆಚ್ಚಾಗಬಾರದು. ಕೇಂದ್ರ, ರಾಜ್ಯ ಸರಕಾರಿ ಇಲಾಖೆಗಳು, ಕೇಂದ್ರ, ರಾಜ್ಯ ಸಾರ್ವಜನಿಕ ಸಂಸ್ಥೆಗಳು, ಅಂಗೀಕೃತ ವಿ.ವಿ.ಗಳು, ಅಂಗೀಕೃತ ಖಾಸಗಿ …

ಬಂಗ್ರಮಂಜೇಶ್ವರ ಶ್ರೀ ಕಾಳಿಕಾ ಪರಮೇಶ್ವರಿ ಕ್ಷೇತ್ರದಲ್ಲಿ ವಿಶೇಷ ದೀಪೋತ್ಸವದೊಂದಿಗೆ ಧನುರ್ಮಾಸ ಪೂಜೆ ಸಮಾಪ್ತಿ

ಮಂಜೇಶ್ವರ: ಬಂಗ್ರಮಂಜೇಶ್ವರ ಶ್ರೀ ಕಾಳಿಕಾಪರಮೇಶ್ವರೀ ದೇವಸ್ಥಾನ ದಲ್ಲಿ ಧನುರ್ಮಾಸ ಪೂಜಾ ಮಹೋ ತ್ಸವ ನಿನ್ನೆ ವಿಶೇಷ ದೀಪೋತ್ಸವದೊಂ ದಿಗೆ ಸಮಾಪ್ತಿಗೊಂಡಿತು. ಶ್ರೀ ಕಾಳಿಕಾ ಪರಮೇಶ್ವರೀ ದೇವಿ, ಶ್ರೀ ಮಹಾಗಣ ಪತಿ, ಶ್ರೀ ವಿಶ್ವಕರ್ಮ ದೇವರಿಗೆ ಪೂಜೆ ನೆರವೇರಿತು. ಶ್ರೀ ದೇವರಿಗೆ ಪಂಚಾ ಮೃತ ಅಭಿಷೇಕ, ಸೀಯಾಳ ಅಭಿಷೇಕ ನಡೆಯಿತು. ಬಳಿಕ ಕಾಸರಗೋಡು ಉಳಿಯತಡ್ಕ ಶ್ರೀ ಗುರುಕೃಪಾ ವೈದಿಕ ಶಿಕ್ಷಣ ಸಮಿತಿ ಭಜನಾ ಮಂಡಳಿಯಿAದ ಭಜನಾ ಸಂಕೀರ್ತನೆ ನಡೆಯಿತು. ಈ ವೇಳೆ ಮಾತೆಯರು, ಮಕ್ಕಳು ಸೇರಿ ಕ್ಷೇತ್ರ ವಠಾರದಲ್ಲಿ …

ಪೈವಳಿಕೆ ಪಂ. ನಲ್ಲಿ ಕೋ-ಲೀ-ಬಿ ಮೈತ್ರಿ ಪ್ರತಿಭಟಿಸಿ ಸಿಪಿಎಂನಿಂದ ವಾಹನ ಪ್ರಚಾರ ಜಾಥಾ

ಪೈವಳಿಕೆ: ಪಂಚಾಯತ್‌ನಲ್ಲಿ ಶಿಕ್ಷಣ ಆರೋಗ್ಯ ಸ್ಥಾಯಿ ಸಮಿತಿ  ಸದಸ್ಯರಿಗೆ ಹಾಗೂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಲೀಗ್ ಸದಸ್ಯೆ ಹಾಗೂ ಕಾಂಗ್ರೆಸ್ ಸದಸ್ಯರು ಬಿಜೆಪಿಗೆ ಮತ ನೀಡಿರುವುದನ್ನು ಪ್ರತಿಭಟಿಸಿ ಸಿಪಿಎಂ ಪೈವಳಿಕೆ ಪಂಚಾಯತ್ ಸಮಿತಿ ನೇತೃತ್ವದಲ್ಲಿ ವಾಹನ ಜಾಥಾ ನಡೆಸಲಾಯಿತು. ಕಯ್ಯಾರ್‌ನಲ್ಲಿ ಸಿಪಿಎಂ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯ ಕೆ.ಆರ್. ಜಯಾನಂದ ಜಾಥಾ ಉದ್ಘಾಟಿಸಿ ಮಾತನಾಡಿದರು. ಬೇಬಿ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಜಾಥಾ ಲೀಡರ್ ಅಬ್ದುಲ್ ರಜಾಕ್ ಚಿಪ್ಪಾರು, ಜಾಥಾ ನಾಯಕ ಪುರುಷೋತ್ತಮ ಬಳ್ಳೂರು, ಸದಸ್ಯ ಚಂದ್ರ ನಾಯ್ಕ್ …