ಕರ್ನಾಟಕ ಮದ್ಯ ಸಹಿತ ಓರ್ವ ಸೆರೆ
ಉಪ್ಪಳ: ಬೈಕ್ನಲ್ಲಿ ಸಾಗಿಸುತ್ತಿದ್ದ ಕರ್ನಾಟಕ ಮದ್ಯ ಸಹಿತ ಓರ್ವನನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಪೈವಳಿಕೆ ಗ್ರಾಮದ ಬಾಯಿಕಟ್ಟೆ ಜೆ.ಪಿ ನಿಲಯದ ಜಯರಾಮ ಬಿ (53) ಬಂಧಿತ ವ್ಯಕ್ತಿ. ಈತನ ಕೈಯಿಂದ ೩.೪೨ ಲೀಟರ್ ಕರ್ನಾಟಕ ಮದ್ಯ ವಶಪಡಿಸಲಾಗಿದೆ. ಈ ತಿಂಗಳ ೧೪ರಂದು ರಾತ್ರಿ 7.30ಕ್ಕೆ ಬಾಯಿಕಟ್ಟೆಯಲ್ಲಿ ಕುಂಬಳೆ ಅಬಕಾರಿ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆ ವೇಳೆ ಜಯರಾಮ ಬೈಕ್ನಲ್ಲಿ ಮದ್ಯವನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿದ್ದನೆನ್ನಲಾಗಿದೆ. ಕಾರ್ಯಾಚರಣೆ ನಡೆಸಿದ ಅಬಕಾರಿ ತಂಡದಲ್ಲಿ ಅಸಿಸ್ಟೆಂಟ್ ಎಕ್ಸೈಸ್ ಇನ್ಸ್ಪೆಕ್ಟರ್ (ಗ್ರೇಡ್) ಎ.ಬಿ. ಅಬ್ದುಲ್ಲ, ಸಿವಿಲ್ …