ಕಾಸರಗೋಡು ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸರಾಗುತ್ತಿರುವುದಾಗಿ ಬಿಎಂಎಸ್ ಆರೋಪ

ಕಾಸರಗೋಡು: ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸ್‌ಗಿರಿ ತೋರಿಸುತ್ತಿರುವು ದಾಗಿ ಬಿಎಂಎಸ್ ಆರೋಪಿಸಿದೆ. ರಾತ್ರಿ ಕಾಲದ ಗೂಂಡಾ ಪ್ರವೃತ್ತಿಯನ್ನು ಕೊನೆಗೊಳಿಸಬೇಕೆಂದು ಪೊಲೀಸರಲ್ಲಿ ಬಿಎಂಎಸ್ ಆಗ್ರಹಿಸಿದೆ. ಪೇಟೆಯಲ್ಲಿ ರಾತ್ರಿ ಕಾಲಗಳಲ್ಲಿ ಆಟೋ ನಿಲುಗಡೆ ಸ್ಥಳಗಳಲ್ಲಿ ನಿಲ್ಲಿಸುವ ಆಟೋ ರಿಕ್ಷಾಗಳ ಚಾಲಕರಲ್ಲಿ ಸ್ಟಾಂಡ್‌ನಿಂದ ಆಟೋ ವನ್ನು ತೆಗೆಯಬೇಕೆಂದು ಆಗ್ರಹಿಸುತ್ತಿ ರುವುದಾಗಿಯೂ, ತೆಗೆಯದಿದ್ದರೆ ಆಕ್ರಮಣ ನಡೆಸುವುದಾಗಿಯೂ ಬೆದರಿಕೆಯೊಡ್ಡುತ್ತಿರುವುದಾಗಿ ಬಿಎಂಎಸ್ ಸಭೆ ಆರೋಪಿಸಿದೆ. ಫೆಬ್ರವರಿ ೨೫ರಂದು ರಾತ್ರಿ ಕೆಎಸ್‌ಆರ್‌ಟಿಸಿ ಕಿಂಗ್ ಕೋಬ್ರಾ ಆಟೋ ಸ್ಟಾಂಡ್‌ನಲ್ಲಿ ಸ್ಥಿರವಾಗಿ ನಿಲುಗಡೆ ಮಾಡುವ …

ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ ಸಹಕಾರಿ ರತ್ನ ಪುರಸ್ಕಾರ

ಕಾಸರಗೋಡು:  ತೃಶೂರು ಕೇಂದ್ರವಾಗಿ ಕಾರ್ಯಾಚರಿಸುವ ಟೀಮ್ ಕೋ-ಆಪರೇಟಿವ್‌ನ ಸಹಕಾರಿ ರತ್ನ ಪುರಸ್ಕಾರ ಕಾಸರಗೋಡು ಜಿಲ್ಲಾ ಸಹಕಾರಿ ಆಸ್ಪತ್ರೆ ಸಂಘಕ್ಕೆ ಲಭಿಸಿದೆ. ಸಂಘದ ಸ್ತುತ್ಯರ್ಹವಾದ ಚಟುವಟಿಕೆ, ನೂತನ ಸಹಕಾರಿ ಮಾದರಿಗಳು ಎಂಬಿವುಗಳನ್ನು ಪರಿಗಣಿಸಿ ಪುರಸ್ಕಾರ ಲಭಿಸಿದೆ. ಕಲ್ಲಿಕೋಟೆ ನಳಂದ ಸಭಾಂಗಣದಲ್ಲಿ ನಡೆದ ಸಹಕಾರಿ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಂಘಕ್ಕೆ ಬೇಕಾಗಿ ಕಾರ್ಯದರ್ಶಿ ಪ್ರದೀಪ್ ಕೆ. ಪುರಸ್ಕಾರ ಸ್ವೀಕರಿಸಿದರು. ಅಗ್ರಿಕಲ್ಚರ್ ಕೋ-ಓಪರೇಟಿವ್ ಸ್ಟಾಫ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್‌ನ ಮಾಜಿ ನಿರ್ದೇಶಕ ಬಿ.ಪಿ. ಪಿಳ್ಳ, ಐ.ಸಿ.ಎಂ. ಮಾಜಿ ನಿರ್ದೇಶಕ ಎಂ.ವಿ. ಶಶಿಕುಮಾರ್, …

ಬಿಜೆಪಿ ಬದಿಯಡ್ಕ ಮಂಡಲ ಕಾರ್ಯಕರ್ತರ ಶಿಬಿರ

ಬದಿಯಡ್ಕ: ಬಿಜೆಪಿ ಬದಿಯಡ್ಕ ಮಂಡಲ ಕಾರ್ಯಕರ್ತರ ಶಿಬಿರ ಮಾರ್ಪನಡ್ಕದಲ್ಲಿ ಜರಗಿದ್ದು, ಬೆಳ್ತಂಗಡಿ ಶಾಸಕ ಹಾಗೂ ಕಾಸರಗೋಡು ವಿಧಾನಸಭಾ ಮಂಡಲ ಚುನಾವಣಾ ಪ್ರಭಾರಿ ಹರೀಶ್ ಪೂಂಜ ಉದ್ಘಾಟಿಸಿದರು. ಬಿಜೆಪಿ ಕೇರಳದಲ್ಲೂ ಅಧಿಕಾರಕ್ಕೇರಬೇಕಾದುದು ಕಾಲ ಘಟ್ಟದ ಅನಿವಾರ್ಯತೆ ಎಂದು, ಸ್ಥಳೀಯಾಡಳಿತ ಚುನಾವಣೆಯಲ್ಲಿ ಕೇರಳದಾದ್ಯಂತ ಗಳಿಸಿದ ಮುನ್ನಡೆ ವಿಧಾನಸಭಾ ಚುನಾವಣೆಯಲ್ಲೂ ಪ್ರತಿಫಲಿಸಲಿದೆ ಎಂದು ಅವರು ನುಡಿದರು. ಮಂಡಲ ಅಧ್ಯಕ್ಷ ಕೆ. ಗೋಪಾಲಕೃಷ್ಣ ಅಧ್ಯಕ್ಷತೆ ವಹಿಸಿದರು. ಮುಖಂಡರಾದ ಕೆ. ಶ್ರೀಕಾಂತ್, ಸುಧಾಮ ಗೋಸಾಡ, ಎಂ.ಎಲ್. ಅಶ್ವಿನಿ, ಮಣಿಕಂಠ ರೈ, ಶ್ರೀಧರ ಬೆಳ್ಳೂರು, ರವೀಂದ್ರ …

ಮಹಿಳೆಯರನ್ನು ಗೌರವಿಸುವುದು ಭಾರತೀಯ ಸಂಸ್ಕಾರ- ಬ್ರಹ್ಮಚಾರಿಣಿ ದಿಶಾ ಚೈತನ್ಯ

ಕಾಸರಗೋಡು: ಮಹಿಳೆಯರನ್ನು ಗೌರವಿಸುವುದು, ಅಂಗೀಕರಿಸುವ ಸಂಸ್ಕಾರ ಭಾರತೀಯ ಸಂಸ್ಕಾರವಾಗಿದೆ ಎಂದು ಚಿನ್ಮಯ ಮಿಷನ್‌ನ ಬ್ರಹ್ಮಚಾರಿಣಿ ದಿಶಾ ಚೈತನ್ಯ ನುಡಿದರು. ಭಾರತೀಯ ಅಭಿಭಾಷಕ ಪರಿಷತ್‌ನ ಆಶ್ರಯದಲ್ಲಿ ನಡೆಸಿದ ರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ನ್ಯಾಯವಾದಿ ಬೀನ ಕೆ.ಎಂ. ಅಧ್ಯಕ್ಷತೆ ವಹಿಸಿದರು. ಅಭಿಭಾಷಕ ಪರಿಷತ್ ಜಿಲ್ಲಾಧ್ಯಕ್ಷ ನ್ಯಾಯವಾದಿ ಎ.ಸಿ. ಅಶೋಕ್ ಕುಮಾರ್, ನ್ಯಾಯವಾದಿಗಳಾದ ಬಿ. ರವೀಂದ್ರನ್, ಹರ್ಷಿತ, ಜಾಹ್ನವಿ ಮಾತನಾಡಿದರು.

ಎಕೆಪಿಎ ಈಸ್ಟ್ ಘಟಕದಿಂದ ಹಸಿರು ಕ್ರಿಯಾ ಸೇನೆ ಕಾರ್ಯಕರ್ತೆಗೆ ಅಭಿನಂದನೆ

ಕಾಸರಗೋಡು: ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಕಾಸರಗೋಡು ಈಸ್ಟ್ ಘಟಕದ ವತಿಯಿಂದ ನಡೆದ ಮಹಿಳಾ ದಿನಾಚರಣೆಯಂಗವಾಗಿ ಹಸಿರು ಕ್ರಿಯಾಸೇನೆಯಲ್ಲಿ ಕಳೆದ 9 ವರ್ಷದಿಂದ ದುಡಿಯುತ್ತಿರುವ ಗಾಯತ್ರಿ ಕಿಣಿಯವರನ್ನು ಅಭಿನಂದಿಸಲಾಯಿತು. ಈಸ್ಟ್ ಯೂನಿಟ್ ಅಧ್ಯಕ್ಷ ರಾಜಶೇಖರ ಅಭಿನಂದಿಸಿದರು. ಕಾರ್ಯದರ್ಶಿ ಅಖಿಲ್, ಕೋಶಾಧಿಕಾರಿ ಶ್ರೀಕಾಂತ್, ರಾಜ್ಯ ಸಮಿತಿ ಸದಸ್ಯ ರಾಜೇಂದ್ರನ್, ಜಿಲ್ಲಾ ಸಮಿತಿ ಸದಸ್ಯ ಸಂಜೀವ್ ರೈ, ವಲಯ ಕೋಶಾಧಿಕಾರಿ ಅಜಿತ್ ಕುಮಾರ್, ಘಟಕ ಸದಸ್ಯರಾದ ಫೈಸಲ್, ಸುರೇಶ್ ಬಿ.ಜೆ. ಭಾಗವಹಿಸಿದರು.

ಭಾರತಕ್ಕೂ ತಟ್ಟಿದ ಮಧ್ಯಪ್ರಾಚ್ಯ ಯುದ್ಧದ ಬಿಸಿ: ಅಡುಗೆ ಅನಿಲ ಬೆಲೆ ಹೆಚ್ಚಳ

ಹೊಸದಿಲ್ಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಶಮನಗೊಳ್ಳದೆ ಇನ್ನೂ ಮುಂದುವರಿಯುತ್ತಿರುವ ವೇಳೆಯಲ್ಲೇ ಭಾರತಕ್ಕೂ ಅದರ ಬಿಸಿ ತಟ್ಟಿದ್ದು, ಇದರ ಪರಿಣಾಮ ಅಡುಗೆ ಅನಿಲ ಬೆಲೆ ಇಂದು ಬೆಳಿಗ್ಗಿನಿಂದ ಗಗನಕ್ಕೇರಿದೆ.  ಮಧ್ಯಪ್ರಾಚ್ಯ ಯುದ್ದದ ಪರಿಸ್ಥಿತಿಯೇ ಬೆಲೆಯೇರಿಕೆಗೆ ಕಾರಣವೆಂದು ವಿಶ್ಲೇಷಿಸಲಾಗಿದೆ. ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ತಲಾ 60 ರೂ.ನಂತೆ  ಇಂದಿನಿಂದ ಹೆಚ್ಚಿಸಲಾಗಿದೆ. ಇದರಿಂದಾಗಿ 14 ಕೆಜಿ ಸಿಲಿಂಡರೊಂದರ ಬೆಲೆ ಈಗ 915 ರೂ.ಗೇರಿದೆ. ಇನ್ನು ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯಲ್ಲೂ ಹೆಚ್ಚಳ ತರಲಾಗಿದೆ. ಇದರಂತೆ 19 ಕೆಜಿ ವಾಣಿಜ್ಯ ಎಲ್‌ಪಿಜಿ …

ಜಸೀಲಾ ಆತ್ಮಹತ್ಯೆ ಪ್ರಕರಣ: ನೆರೆಮನೆ ನಿವಾಸಿ ಮಹಿಳೆ ಸೆರೆ

ಕಾಸರಗೋಡು: ಚಿನ್ನ ಕಳವುಗೈದಿರುವುದಾಗಿ ಹೊರಿಸಲಾದ ಆರೋಪದಿಂದ ಮನನೊಂದು ಆಲಂಪಾಡಿ ನಾಲತ್ತಡ್ಕ ನಿವಾಸಿ ಜಸೀಲಾ (24) ಎಂಬಾಕೆ ವಿಷಸೇವಿಸಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿ ಮನೆಯ ನೆರೆಮನೆ ನಿವಾಸಿಯಾದ ಮಹಿಳೆಯನ್ನು ಬಳಿಕ ವಿದ್ಯಾನಗರ  ಠಾಣೆಯ ಎಸ್‌ಐ ಸಫ್ವಾನ್ ನೇತೃತ್ವದ ಪೊಲೀಸರು ಬಂಧಿಸಿದ್ದಾರೆ. ಮುಳಿಯಾರು ಪೊವ್ವಲ್ ಬೆಂಚ್‌ಕೋರ್ಟ್‌ಗೆ ಸಮೀಪದ ಆಯಿಷಾ (48) ಬಂಧಿತಳಾದ ಆರೋಪಿ. ನಂತರ ನ್ಯಾಯಾಲಯದ ಆದೇಶ ಪ್ರಕಾರ ಆಕೆಯನ್ನು ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಆಕೆಯ ವಿರುದ್ಧ ಆತ್ಮಹತ್ಯೆಗೆ ಪ್ರೇರಣೆ ನೀಡಿದ ಸೆಕ್ಷನ್ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ವಿಷಪ್ರಾಶನಗೈದ …

ಪೊಲೀಸರನ್ನು ಕಂಡು ಪರಾರಿಯಾಗಲೆತ್ನ ಎಂಡಿಎಂಎ ಸಹಿತ ಯುವಕ ಸೆರೆ

ಬದಿಯಡ್ಕ: 3.01 ಗ್ರಾಂ ಎಂಡಿಎಂಎ ಹಾಗೂ 16,700 ರೂಪಾಯಿ ಸಹಿತ ಯುವಕನನ್ನು  ಬಂಧಿಸಲಾಗಿದೆ. ಚೆಂಗಳ ರಹ್ಮತ್ ನಗರದ ಮನಿಯಡ್ಕಂ ನಿವಾಸಿ  ಸಿ.ಝೆಡ್. ನುಹ್‌ಮ (25) ಎಂಬಾತನನ್ನು ಬದಿಯಡ್ಕ ಪೊಲೀಸ್ ಇನ್‌ಸ್ಪೆಕ್ಟರ್  ಅನೂಪ್ ನೇತೃತ್ವದ ತಂಡ ಬಂಧಿಸಿದೆ. ನಿನ್ನೆ ಮಧ್ಯಾಹ್ನ 1.30ರ ವೇಳೆ ನೀರ್ಚಾಲು ಬಳಿಯ ಕನ್ಯೆಪ್ಪಾಡಿಯಿಂದ ಈತನನ್ನು ಬಂಧಿಸಲಾಗಿದೆ. ಎಸ್‌ಐ ಪಿ. ರೂಪೇಶ್ ಹಾಗೂ  ಪೊಲೀಸರು ಪಟ್ರೋಲಿಂಗ್ ನಡೆಸುತ್ತಾ ಕನ್ಯೆಪ್ಪಾಡಿಗೆ ತಲುಪಿದ್ದರು. ಈ ವೇಳೆ ಅಲ್ಲಿದ್ದ ಯುವಕ ಪೊಲೀಸರನ್ನು ಕಂಡು  ಓಡಿ ಪರಾರಿಯಾಗಲು ಯತ್ನಿಸಿದ್ದನು. ಇದರಿಂದ ಸಂಶಯಗೊಂಡ …

ವೈದ್ಯರಿಗೆ ಹಲ್ಲೆ : ಇಬ್ಬರ ಸೆರೆ

ಉಪ್ಪಳ: ವೈದ್ಯರಿಗೆ ಹಲ್ಲೆಗೈದು ಗಾಯಗೊಳಿಸಿದ ಪ್ರಕರಣದಲ್ಲಿ ಆರೋಪಿಗಳಾದ ಇಬ್ಬರನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಕೋಡಿಬೈಲು ನಿವಾಸಿ ಉಮ್ಮರ್ (45), ಈತನ ಸಹೋದರ ಕೋಡಿಬೈಲು ಅಡ್ಕತ್ತೊಟ್ಟಿಯ ಹೈದರಾಲಿ (33) ಎಂಬಿವರು ಬಂಧಿತ ಆರೋಪಿಗಳಾ ಗಿದ್ದಾರೆ.  ಉಪ್ಪಳ ರೈಲು ನಿಲ್ದಾಣ ರಸ್ತೆಯ ದೇವಿಪ್ರಸಾದ್ ಮಾವೆ ಆಸ್ಪತ್ರೆಯ ವೈದ್ಯ ಕುಮಾರ್ ಶಾಶ್ವತ್(೪೨)ರಿಗೆ ಹಲ್ಲೆಗೈದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸ ಲಾಗಿದೆ.  ಈ ತಿಂಗಳ 4ರಂದು ರಾತ್ರಿ 8.30ಕ್ಕೆ ಆಸ್ಪತ್ರೆ ಆವರಣ ದೊಳಗೆ ಆರೋಪಿಗಳು ವೈದ್ಯರಿಗೆ ಹಲ್ಲೆಗೈದಿರುವುದಾಗಿ ದೂರಲಾಗಿದೆ.

ನೇಂದ್ರ ಬಾಳೆಯನ್ನು ಕೈಬಿಟ್ಟ ಬೆಲೆಯೇರಿಕೆ: ರಂಜಾನ್ ಮಾಸದಲ್ಲೂ ದರ ಕುಸಿತದಿಂದ ಕೃಷಿಕರು ಕಂಗಾಲು

ಕಾಸರಗೋಡು: ನಿತ್ಯೋಪಯೋಗ ಸಾಮಗ್ರಿ, ಹಣ್ಣುಹಂಪಲುಗಳ ಬೆಲೆಯೇರಿಕೆ ಕಾಲವಾದ ರಂಜಾನ್ ಮಾಸದಲ್ಲಿ ಬೆಲೆಯೇರಿಕೆಯಾಗದ ಹಣ್ಣಾಗಿದೆ ನೇಂದ್ರ ಬಾಳೆಹಣ್ಣು. ಮೂರು ಕಿಲೋ ನೇಂದ್ರ ಹಣ್ಣಿಗೆ ಇತ್ತೀಚೆಗೆ 100 ರೂ. ಆಗಿತ್ತು ಬೆಲೆ. ಆದರೆ ವಿದೇಶ ಹಣ್ಣುಗಳಿಗೆ ಬೆಲೆ ಕಡಿತ ಕಂಡು ಬರುವುದಿಲ್ಲ. ವ್ಯಾಪಾರಿಗಳಿಗೆ ನಾಲ್ಕು ಕಿಲೋ ನೇಂದ್ರ ಬಾಳೆ ಹಣ್ಣು 100 ರೂ.ಗೆ ಲಭಿಸುತ್ತಿದೆ ಎಂದು ಹೇಳಲಾಗುತ್ತಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದಾರೆ. ರಂಜಾನ್ ಮಾಸಾರಂಭದಲ್ಲೇ ಮಾವಿನ ಹಣ್ಣಿಗೆ 180ರಿಂದ 300 ರೂ.ವರೆಗೆ ಬೆಲೆ ಏರಿಕೆಯಾಗಿತ್ತು. ಆಪಲ್‌ಗೂ ದರ ಹೆಚ್ಚಳವಿದೆ. ತುರ್ಕಿ, …