ಕಾಸರಗೋಡು ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸರಾಗುತ್ತಿರುವುದಾಗಿ ಬಿಎಂಎಸ್ ಆರೋಪ
ಕಾಸರಗೋಡು: ನಗರದಲ್ಲಿ ರಾತ್ರಿ ಕಾಲ ಆಟೋ ಚಾಲಕರಲ್ಲಿ ಕೆಲವರು ನೈತಿಕ ಪೊಲೀಸ್ಗಿರಿ ತೋರಿಸುತ್ತಿರುವು ದಾಗಿ ಬಿಎಂಎಸ್ ಆರೋಪಿಸಿದೆ. ರಾತ್ರಿ ಕಾಲದ ಗೂಂಡಾ ಪ್ರವೃತ್ತಿಯನ್ನು ಕೊನೆಗೊಳಿಸಬೇಕೆಂದು ಪೊಲೀಸರಲ್ಲಿ ಬಿಎಂಎಸ್ ಆಗ್ರಹಿಸಿದೆ. ಪೇಟೆಯಲ್ಲಿ ರಾತ್ರಿ ಕಾಲಗಳಲ್ಲಿ ಆಟೋ ನಿಲುಗಡೆ ಸ್ಥಳಗಳಲ್ಲಿ ನಿಲ್ಲಿಸುವ ಆಟೋ ರಿಕ್ಷಾಗಳ ಚಾಲಕರಲ್ಲಿ ಸ್ಟಾಂಡ್ನಿಂದ ಆಟೋ ವನ್ನು ತೆಗೆಯಬೇಕೆಂದು ಆಗ್ರಹಿಸುತ್ತಿ ರುವುದಾಗಿಯೂ, ತೆಗೆಯದಿದ್ದರೆ ಆಕ್ರಮಣ ನಡೆಸುವುದಾಗಿಯೂ ಬೆದರಿಕೆಯೊಡ್ಡುತ್ತಿರುವುದಾಗಿ ಬಿಎಂಎಸ್ ಸಭೆ ಆರೋಪಿಸಿದೆ. ಫೆಬ್ರವರಿ ೨೫ರಂದು ರಾತ್ರಿ ಕೆಎಸ್ಆರ್ಟಿಸಿ ಕಿಂಗ್ ಕೋಬ್ರಾ ಆಟೋ ಸ್ಟಾಂಡ್ನಲ್ಲಿ ಸ್ಥಿರವಾಗಿ ನಿಲುಗಡೆ ಮಾಡುವ …