ವಿಶ್ವ ಸಹೋದರತ್ವ ದಿನ ಪ್ರಯುಕ್ತ ರಕ್ತದಾನ ಶಿಬಿರ

ಕಾಸರಗೋಡು: ವಿಶ್ವ ಸಹೋದರತ್ವ ದಿನದ ಅಂಗವಾಗಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀ ಯ ವಿಶ್ವವಿದ್ಯಾಲಯ ಹಾಗೂ ಭಾರತಾಂಬಾ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆ ಬ್ಲಡ್ ಬ್ಯಾಂಕ್‌ನ ಸಹಯೋಗದೊಂದಿಗೆ ರಕ್ತದಾನ ಶಿಬಿರ ನಡೆಸಲಾಯಿತು. ಅಣಂಗೂರಿ ನಲ್ಲಿರುವ ಭಾರತಾಂಬಾ ಸೇವಾ ಪ್ರತಿಷ್ಠಾನದ ಕಾರ್ಯಾಲಯದಲ್ಲಿ ನಡೆದ ಶಿಬಿರದಲ್ಲಿ ಜನರಲ್ ಆಸ್ಪತ್ರೆಯ ಬ್ಲಡ್ ಬ್ಯಾಂಕ್  ಮೆಡಿಕಲ್ ಆಫೀಸರ್ ಡಾ| ಸೌಮ್ಯ ನಾಯರ್, ಕಾಸರಗೋಡು ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ. ವಿಜಯ ಲಕ್ಷ್ಮಿ, ಅಣಂಗೂರು ಭಾರತೀಯ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜಯಂತ, ಸೇವಾ ಭಾರತಿಯ …

ರಾಹುಲ್ ಮಾಕೂಟತ್ತಿಲ್ ರಾಜೀನಾಮೆ ಆಗ್ರಹಿಸಿ ಡಿಫಿ ಪ್ರತಿಭಟನೆ

ಬಂದ್ಯೋಡು: ಯೂತ್ ಕಾಂಗ್ರೆಸ್ ಮುಖಂಡನಾಗಿದ್ದ ಪಾಲಕ್ಕಾಡ್ ಶಾಸಕ ರಾಹುಲ್ ಮಾಕೂಟತ್ತಿಲ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿ ಡಿವೈಎಫ್‌ಐ ಬಂದ್ಯೋಡ್‌ನಲ್ಲಿ ಪ್ರತಿಭಟನೆ ನಡೆಸಿತು. ಡಿಫಿ ಜಿಲ್ಲಾ ಜೊತೆ ಕಾರ್ಯದರ್ಶಿ ಸಾದಿಕ್ ಚೆರುಗೋಳಿ ಉದ್ಘಾಟಿಸಿದರು. ದೀಕ್ಷಿತ್ ಉಪ್ಪಳ ಅಧ್ಯಕ್ಷತೆ ವಹಿಸಿದರು. ಮಂಜೇಶ್ವರ ಬ್ಲೋಕ್ ಕಾರ್ಯದರ್ಶಿ ವಿನಯ್ ಕುಮಾರ್ ಬಾಯಾರು, ಇಕ್ಬಾಲ್ ಪೆರಿಂಗಡಿ, ಇಕ್ಬಾಲ್ ಶಿರಿಯಾ ಮಾತನಾಡಿದರು. ನೌಶಾದ್ ಹೇರೂರು ಸ್ವಾಗತಿಸಿದರು.

ಬದಿಯಡ್ಕದಲ್ಲಿ ಜೀಪು-ಬೈಕ್ ಢಿಕ್ಕಿ: ಬಿ.ಎಂ.ಎಸ್ ಕಾರ್ಯಕರ್ತ ಮೃತ್ಯು; ಇನ್ನೋರ್ವನಿಗೆ ಗಾಯ

ಬದಿಯಡ್ಕ: ಬದಿಯಡ್ಕದಲ್ಲಿ ನಿನ್ನೆ ಸಂಜೆ ಜೀಪು-ಬೈಕ್ ಢಿಕ್ಕಿ ಹೊಡೆದು ಮಧೂರು ನಿವಾಸಿಯಾದ  ಬಿಎಂಎಸ್ ಕಾರ್ಯಕರ್ತ ಯುವಕ ಮೃತಪಟ್ಟ ದಾರುಣ ಘಟನೆ ಸಂಭ ವಿಸಿದೆ. ಅಪಘಾತದಲ್ಲಿ ಇನ್ನೋರ್ವ  ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಮಧೂರು ಕೋಡಿಮಜಲು ನಿವಾಸಿ ದಿ| ಕೃಷ್ಣನ್ ಎಂಬವರ ಪುತ್ರ ವಿಜಯ ಕುಮಾರ್ ಯಾನೆ ಪಮ್ಮು (38) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ.  ಇವರ ಸ್ನೇಹಿ ತನಾದ ನೀರ್ಚಾಲು ಮಧೂರು ನಿವಾಸಿಯಾದ ರಾಧಾಕೃಷ್ಣ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗ ಳೂರಿನ  ಆಸ್ಪತ್ರೆಯಲ್ಲಿ ದಾಖಲಿ ಸಲಾಗಿದೆ. ನಿನ್ನೆ ಸಂಜೆ …

ಜುಗಾರಿ ನಿರತ ಐದು ಮಂದಿ ಸೆರೆ

ಬದಿಯಡ್ಕ: ಜುಗಾರಿ ನಿರತ ಐದು ಮಂದಿಯನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಕೈಯಿಂದ 11,840 ರೂಪಾಯಿ ವಶಪಡಿಸಲಾಗಿದೆ. ನಾರಾಯಣಮಂಗಲ ರಾಜೀವಗಾಂಧಿ ಕಾಲನಿಯ ಸತೀಶ್ (39), ನೆಕ್ರಾಜೆ ಅರ್ಲಡ್ಕ ನಿವಾಸಿಗಳಾದ ರಮೇಶ್ (43), ಸಂತೋಷ್ (36), ರಜಿಲೇಶ್ (39), ಪೈಕದ ಸುರೇಶ್ (41) ಎಂಬಿವರು ಬಂಧಿತ ವ್ಯಕ್ತಿಗಳಾಗಿ ದ್ದಾರೆ.  ನಿನ್ನೆ ಸಂಜೆ ಪೈಕ ಅರ್ಲ ಡ್ಕದ ನೀರಿನ ಟ್ಯಾಂಕ್ ಸಮೀಪ ಇವರು ಜುಗಾರಿ ನಿರತರಾಗಿದ್ದರು. ಈ ಬಗ್ಗೆ ಮಾಹಿತಿ ಲಭಿಸಿದ ಬದಿಯಡ್ಕ ಎಸ್‌ಐ ಅಖಿಲ್ ನೇತೃತ್ವದ ಪೊಲೀಸರು ಕಾರ್ಯಾಚರಣೆ …

ಸ್ಕೂಟರ್-ಕಾರು ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು; ಶೋಕ ಸಾಗರ

ಉಪ್ಪಳ: ಸ್ಕೂಟರ್-ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ನಾಡಿನಲ್ಲಿ ಶೋಕಸಾಗರ ಸೃಷ್ಟಿಸಿದೆ. ಮಂಗಲ್ಪಾಡಿ ಪ್ರತಾಪನಗರ ತಿಂಬರ ನಿವಾಸಿ ನಾರಾಯಣ ಆಚಾರ್ಯರ ಪುತ್ರ ನವೀನ್ ಆಚಾರ್ಯ (50) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಇವರು ಬಡಗಿ  ವೃತ್ತಿ ನಡೆಸುತ್ತಿದ್ದರು. ಶನಿವಾರ ಸಂಜೆ ಕೆಲಸ ಮುಗಿಸಿ ಸ್ಕೂಟರ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ ಆರಿಕ್ಕಾಡಿ ಸಮೀಪದ ಹೆದ್ದಾರಿಯಲ್ಲ್ಲಿ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆ ದಿದೆ. ಇದರಿಂದ ಗಂಭೀರ ಗಾಯ ಗೊಂಡ ಅವರನ್ನು ಸ್ಥಳೀಯರು ಕುಂಬಳೆ ಆಸ್ಪತ್ರೆಗೆ ಸಾಗಿಸಿ, ಬಳಿಕ …

ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದ ದೈವ ಕಲಾವಿದ ಮೃತ್ಯು

ಕುಂಬಳೆ: ಅರೆಪ್ರಜ್ಞಾವಸ್ಥೆಯಲ್ಲಿ ಕಂಡುಬಂದ ದೈವ ಕಲಾವಿದನೋ ರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಧ್ಯೆ ಮೃತಪಟ್ಟ ಘಟನೆ ನಡೆದಿದೆ. ಪೇರಾಲ್ ಕಣ್ಣೂರು ಚೋಡಾಲ ನಿವಾಸಿ ಮಂಚ ಎಂಬವರ ಪುತ್ರ ಉಮೇಶ (31) ಮೃತಪಟ್ಟ ವ್ಯಕ್ತಿ. ಕಳೆದ ಗುರುವಾರ ಬೆಳಿಗ್ಗೆ 11 ಗಂಟೆಗೆ ಉಮೇಶ ಶಿರಿಬಾಗಿಲು ಬಳಿಯ ಮಂಜತ್ತಡ್ಕದಲ್ಲಿ ಅರೆಪ್ರಜ್ಞಾವಸ್ಥೆಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಕಾಸರಗೋಡು ಜನರಲ್ ಆಸ್ಪತ್ರೆಗೆ ತಲುಪಿಸಲಾಗಿತ್ತು. ಸ್ಥಿತಿ ಗಂಭೀರವಾಗಿದ್ದುದರಿಂದ ವೈದ್ಯರ ನಿರ್ದೇಶ ಮೇರೆಗೆ ಪರಿಯಾರಂನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ಘಟನೆ ಬಗ್ಗೆ ಕಾಸರಗೋಡು  …

ಯುವತಿಯರೊಂದಿಗೆ ಅನುಚಿತ ವರ್ತನೆ ಆರೋಪ: ಕಾಂಗ್ರೆಸ್‌ನಿಂದ ರಾಹುಲ್ ಮಾಕೂಟತ್ತಿಲ್ ಅಮಾನತು

ತಿರುವನಂತಪುರ: ಯುವತಿಯ ರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಾಕೂಟತ್ತಿಲ್‌ರನ್ನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತನದಿಂದ ಮುಂದಿನ ಆರು ತಿಂಗಳ ತನಕ ಅಮಾನತುಗೊಳಿಸಲಾ ಗಿದೆ. ಆದರೆ ಪಕ್ಷದಿಂದ ಅಮಾನತು ಗೊಂಡರೂ ರಾಹುಲ್ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿಲ್ಲ ವೆಂಬ ನಿಲುವಿಗೆ ಕಾಂಗ್ರೆಸ್ ನೇತೃತ್ವ ಬಂದಿದೆ. ಆ ಮೂಲಕ  ರಾಹುಲ್ ವಿರುದ್ದದ ಕ್ರಮವನ್ನು ಕಾಂಗ್ರೆಸ್ ಅಮಾನತಿಗೆ ಮಾತ್ರವಾಗಿ ಸೀಮಿತಗೊಳಿಸಿದೆ. ಇದರಿಂದಾಗಿ ರಾಹುಲ್ ಇನ್ನು ಕಾಂಗ್ರೆಸ್ ಮತ್ತು ಯುಡಿಎಫ್‌ನ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುವಂತಿಲ್ಲ. ರಾಹುಲ್ ತನ್ನ …

ಕರ್ನಾಟಕ ಮದ್ಯ ವಶ: ಓರ್ವ ಸೆರೆ

ಬದಿಯಡ್ಕ: ಓಣಂ ಸ್ಪೆಷಲ್ ಡ್ರೈವ್ ಕಾರ್ಯಾಚರಣೆಯಲ್ಲಿ ಬದಿಯಡ್ಕ ಎಕ್ಸೈಸ್ ರೇಂಜ್‌ನ ಅಸಿಸ್ಟೆಂಟ್ ಇನ್ಸ್‌ಪೆಕ್ಟರ್ (ಗ್ರೇಡ್) ಬಿಜೋಯ್ ಇ.ಕೆ.ರ ನೇತೃತ್ವದ ತಂಡ ನಡೆಸಿದ ಕಾರ್ಯಾಚರಣೆಯಲ್ಲಿ ೫.೨೨ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ಪತ್ತೆಹಚ್ಚಿ ವಶಪಡಿಸಿದೆ. ಇದಕ್ಕೆ ಸಂಬಂಧಿಸಿ ನೆಲ್ಲಿಕಟ್ಟೆ ಅದ್ರ್‌ಕುಳಿ ಅನಿಲ್ ಕುಮಾರ್ ಬಿ. ಎಂ ಬಾತನನ್ನು ಬಂಧಿಸಿ ಕೇಸು ದಾಖಲಿಸ ಲಾಗಿದೆ. ಈತ ಚಲಾಯಿಸುತ್ತಿದ್ದ ಸ್ಕೂಟರನ್ನು ಅಬಕಾರಿ ತಂಡ ವಶಕ್ಕೆ ತೆಗೆದುಕೊಂಡಿದೆ. ಸಿವಿಲ್ ಎಕ್ಸೈಸ್ ಆಫೀಸರ್‌ಗಳಾದ  ಪ್ರಿಷಿ, ಟಿಪ್ಸನ್ ಟಿ.ಜೆ. ಮತ್ತು ಚಾಲಕ ಸಾಗರ್ ಎಂಬವರು ಈ …

ಮಧ್ಯರಾತ್ರಿ ಯುವಕ, ಸಂಬಂಧಿಕರನ್ನು ಮನೆಯಿಂದ ಹೊರಗೆ ಕರೆದು ಬಂದೂಕು ತೋರಿಸಿ ಬೆದರಿಕೆ: ನಾಲ್ಕು ಮಂದಿ ವಿರುದ್ಧ ಕೇಸು

ಮಂಜೇಶ್ವರ: ಯುವಕ ಹಾಗೂ ಸಂಬಂಧಿಕರನ್ನು ಮಧ್ಯರಾತ್ರಿ ವೇಳೆ ಮನೆಯಿಂದ ಹೊರಗೆ ಕರೆದು  ಬಂದೂಕ ತೋರಿಸಿ ಬೆದರಿಕೆಯೊಡ್ಡಿದ ಬಗ್ಗೆ ಆರೋಪವುಂಟಾಗಿದೆ. ಈ ಘಟನೆಗೆ ಸಂಬಂಧಿಸಿ  ನಾಲ್ಕು ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ ೧೧.೪೫ರ ವೇಳೆ ಘಟನೆ ನಡೆದಿದೆ. ಬಂಗ್ರಮಂಜೇಶ್ವರ ಕಾಡಿಯಾರ್‌ನ ಬಸನ್ ಬಾವ ಮಂಜಿಲ್‌ನ ಮುಹಮ್ಮದ್ ಸಮೀರ್ (20) ನೀಡಿದ ದೂರಿನಂತೆ ಬಂಗ್ರಮಂ ಜೇಶ್ವರದ ರಶೀದ್ ಹಾಗೂ ಕಂಡರೆ ಪತ್ತೆಹಚ್ಚಬಹುದಾದ ಇತರ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ರಾತ್ರಿ ಮನೆಗೆ ತಲುಪಿದ ತಂಡ …

30 ಪವನ್ ಚಿನ್ನಾಭರಣ 4 ಲಕ್ಷ ರೂ. ಕಳವು ನಡೆದ ಮನೆಯ ಸೊಸೆ ಸಾಲಿಗ್ರಾಮದಲ್ಲಿ ಮೃತಪಟ್ಟ ಘಟನೆ ಕೊಲೆಯೆಂದು ಸಾಬೀತು: ಗೆಳೆಯ ಸೆರೆ

ಕಣ್ಣೂರು: ಇತ್ತೀಚೆಗೆ 30 ಪವನ್ ಚಿನ್ನಾಭರಣ, 4 ಲಕ್ಷ ರೂ. ಕಳವು ಹೋದ ಮನೆಯ ಸೊಸೆಯನ್ನು ಕರ್ನಾ ಟಕದ ಸಾಲಿಗ್ರಾಮದ ವಸತಿಗೃಹದಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಹಚ್ಚಲಾಗಿದ್ದು, ಇದು ಕೊಲೆ ಕೃತ್ಯವೆಂದು ಪೊಲೀಸರು ತಿಳಿಸಿದ್ದಾರೆ. ಕಲ್ಯಾಟ್ ಚುಂಗಸ್ತಾನಂ ನಿವಾಸಿ ಎ.ಪಿ. ಸುಭಾಷ್‌ರ ಪತ್ನಿ ದರ್ಶಿತ (22) ಕೊಲೆಗೀಡಾಗಿರುವುದು. ಜೊತೆಗಿದ್ದ ಗೆಳೆಯ ಕರ್ನಾಟಕ ಪಿರಿಯಾಪಟ್ಟಣ ನಿವಾಸಿ ಸಿದ್ಧರಾಜು (22)ನನ್ನು ಸಾಲಿಗ್ರಾಮದಿಂದ ಪೊಲೀಸರು ಬಂಧಿಸಿದ್ದಾರೆ. ವಸತಿಗೃಹದಲ್ಲಿ ದರ್ಶಿತ ಹಾಗೂ ಸಿದ್ಧರಾಜು ಮಧ್ಯೆ ವಾಗ್ವಾದವುಂಟಾಗಿದ್ದು, ಸಿದ್ಧರಾಜು ದರ್ಶಿತಳ ಬಾಯಿಗೆ ಇಲೆಕ್ಟ್ರಿಕ್ ಡಿಟಾನೇಟರ್ ತುರುಕಿಸಿ …