ಆರ್ಥಿಕ ವರ್ಷ ಕೊನೆಗೊಳ್ಳುವ ವೇಳೆ ಯೋಜನೆ ಪೂರ್ತಿಗೆ ಸಮಸ್ಯೆ: ಬದಿಯಡ್ಕ ಪಂಚಾಯತ್ನಿಂದ ಅಧಿಕಾರಿಗಳ ವರ್ಗಾವಣೆ ಮಾಡಬಾರದೆಂದು ಅಧ್ಯಕ್ಷರಿಂದ ಸಚಿವರಿಗೆ ಪತ್ರ
ಬದಿಯಡ್ಕ: ಆರ್ಥಿಕ ವರ್ಷ ಕೊನೆಗೊಳ್ಳುವ ಮಾರ್ಚ್ ತಿಂಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಬದಿಯಡ್ಕ ಪಂಚಾಯತ್ನಲ್ಲಿ ಸಮಸ್ಯೆ ಸೃಷ್ಟಿಗೆ ಯತ್ನಿಸುತ್ತಿದೆ ಎಂದು ಪಂಚಾಯತ್ ಅಧ್ಯಕ್ಷ ಶಂಕರ ಡಿ. ದೂರಿದ್ದಾರೆ. ಈ ಬಗ್ಗೆ ಸ್ಥಳೀಯಾಡಳಿತ ಇಲಾಖೆ ಸಚಿವರಿಗೆ ಪತ್ರ ಬರೆದ ಅವರು ಮಾರ್ಚ್ ತಿಂಗಳು ಕೊನೆಗೊಳ್ಳುವ ಮೊದಲು ಪಂಚಾಯತ್ ಕಚೇರಿಯಿಂದ ಯಾವುದೇ ಅಧಿಕಾರಿಯನ್ನು ವರ್ಗಾಯಿಸಬಾರದೆಂದು ಒತ್ತಾಯಿಸಿದ್ದಾರೆ. ಪಂಚಾಯತ್ನಲ್ಲಿ ನೂತನ ಆಡಳಿತ ಮಂಡಳಿ ಅಧಿಕಾರ ವಹಿಸಿದ್ದ ವೇಳೆ ಕಚೇರಿಯಲ್ಲಿ ೧೦ರಷ್ಟು ಹುದ್ದೆಗಳು ಖಾಲಿಯಾಗಿತ್ತು. ಪಂಚಾಯತ್ ಆಡಳಿತ ನಿರಂತರ ಒತ್ತಾಯದ ಮೇರೆಗೆ …