ಡಾ. ರಮಾನಂದ ಬನಾರಿ ಅಭಿನಂದನೆ : ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ
ನೀರ್ಚಾಲು: ಕಾಸರಗೋಡು ಸಹಿತ ಕರಾವಳಿ ಕರ್ನಾಟಕದ ಸಾಧಕ ಶ್ರೇಷ್ಠರ ಯಶೋಗಾಥೆಗಳ ಮರು ಓದುವಿಕೆ ಸ್ಪೂರ್ತಿದಾಯಕವಾದುದು. ಕಾಸರಗೋಡು ಗಡಿನಾಡನ್ನು ಸಾಂಸ್ಕೃತಿಕವಾಗಿ ಕರ್ನಾಟಕದೊಂದಿಗೆ ಬೆಸೆಯುವ ಪರಿಕಲ್ಪನೆಯನ್ನು ಬಲವಾಗಿ ಪ್ರತಿಪಾದಿಸಿದವರಲ್ಲಿ ಡಾ.ರಮಾನಂದ ಬನಾರಿ ಪ್ರಮುಖರು. ಅವರ ೮೫ರ ವಸಂತದಲ್ಲಿ ಆಯೋಜಿಸಿರುವ ಈ ಕಾರ್ಯಕ್ರಮ ಆ ಆಶಯ ಪ್ರತಿಬಿಂಬಿಸುವಲ್ಲಿ ಯಶಸ್ವಿಯಾಗಿದೆ ಎಂದು ಹಂಪಿ ಕನ್ನಡ ವಿಶ್ವವಿದ್ಯಾ ನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಮೋಹನ ಕುಂಟಾರು ಅಭಿಪ್ರಾಯ ವ್ಯಕ್ತಪಡಿಸಿದರು.ಜಿಲ್ಲಾ ಕನ್ನಡ ಲೇಖಕರ ಸಂಘದ ನೇತೃತ್ವದಲ್ಲಿ ಕ.ಸಾ.ಪ ಕೇರಳ ಗಡಿನಾಡ ಘಟಕ, ಬನಾರಿ ಶ್ರೀಗೋಪಾಲಕೃಷ್ಣ ಯಕ್ಷಗಾನ ಕಲಾಸಂಘ …
Read more “ಡಾ. ರಮಾನಂದ ಬನಾರಿ ಅಭಿನಂದನೆ : ನೀರ್ಚಾಲಿನಲ್ಲಿ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ”