ಬಾವಿಗೆ ಬಿದ್ದ ವ್ಯಕ್ತಿಯನ್ನು ರಕ್ಷಿಸಿದ ಅಗ್ನಿಶಾಮಕದಳ

ಕಾಸರಗೋಡು: 25 ಕೋಲು ಆಳ ಹಾಗೂ 8 ಕೋಲು ನೀರಿರುವ ಬಾವಿಗೆ ಬಿದ್ದ ವ್ಯಕ್ತಿಯನ್ನು ಅಗ್ನಿಶಾಮಕದಳ ಹಾಗೂ ನಾಗರಿಕರು ಸೇರಿ ರಕ್ಷಿಸಿದ ಘಟನೆ ನಡೆದಿದೆ. ಚೆಮ್ನಾಡ್ ಅಣಿಂಞ್ಞದ ರಾಜ್‌ಮೋಹನ್ (65)ರನ್ನು ರಕ್ಷಿಸಲಾಗಿದೆ. ಇವರು ಇಂದು ಬೆಳಿಗ್ಗೆ ಮನೆಯ ಬಾವಿಗೆ ಬಿದ್ದಿದ್ದರು. ವಿಷಯ ತಿಳಿದು ತಲುಪಿದ ನಾಗರಿಕರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದು, ಆದರೆ ಅವರನ್ನು ಮೇಲಕ್ಕೆತ್ತಲಾಗಲಿಲ್ಲ. ಇದರಿಂದ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು. ಸೀನಿಯರ್ ಫಯರ್ ಆಂಡ್ ರೆಸ್ಕ್ಯೂ ಆಫೀಸರ್ ವಿ.ಎಂ. ಸತೀಶನ್‌ರ ನೇತೃತ್ವದಲ್ಲಿ ಅಗ್ನಿಶಾಮ ಕದಳ ತಲುಪಿ ರಾಜ್‌ಮೋಹನ್‌ರನ್ನು …

ಹನ್ನೊಂದರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ: ನಿವೃತ್ತ ಎಸ್‌ಐ ಸೆರೆ

ಕಾಸರಗೋಡು:  11ರ ಹರೆಯದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಆರೋಪಿಯಾಗಿರುವ ನಿವೃತ್ತ ಸಬ್ ಇನ್ಸ್‌ಪೆಕ್ಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪರಿಯಾರಂ ಕಾಪುಮೈಲ್  ಇಳಯಡತ್ ನಿವಾಸಿ ಇ.ವಿ. ಗೋಪಿನಾಥನ್ (62) ಬಂಧಿತ ಆರೋಪಿ. ಪರಿಯಾರಂ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಪ್ರದೇಶದ 11ರ ಹರೆಯದ ಬಾಲಕಿಯನ್ನು ಮೊನ್ನೆ ಪುಸಲಾಯಿಸಿ ಆರೋಪಿ ಮನೆಗೆ ಕರೆತಂದು ಆಕೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಪರಿಯಾರಂ ಪೊಲೀಸರು ಗೋಪಿನಾಥನ್ ವಿರುದ್ಧ ಪೋಕ್ಸೋ ಕಾನೂನು ಪ್ರಕಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿ ಆತನನ್ನು …

ಬಾವಿಗೆ ಹಾರಿದ ಯುವತಿ ಮೃತ್ಯು: ರಕ್ಷಿಸಲೆತ್ನಿಸಿದ ತಾಯಿಗೆ ಗಂಭೀರ

ಹೊಸದುರ್ಗ: ಯುವತಿ ಯೋರ್ವೆ ಬಾವಿಗೆ ಹಾರಿ ಮೃತ ಪಟ್ಟಿದ್ದು, ಈಕೆಯನ್ನು ರಕ್ಷಿಸಲು ಹಾರಿದ ತಾಯಿ ಗಂಭೀರ ಗಾಯ ಗೊಂಡಿದ್ದಾರೆ.  ತಳಿಪರಂಬ ಬಳಿಯ ಚವನಪ್ಪುಳ ಎಂಬಲ್ಲಿ ಘಟನೆ ನಡೆದಿದ್ದು, ಕರಿಯ್ಯಾಪತ್ತ್ ಚಿತ್ರಲೇಖ (38) ಮೃತಪಟ್ಟ ಯುವತಿಯಾಗಿ ದ್ದಾರೆ.   ಚಿತ್ರಲೇಖ ಹಾಗೂ ತಾಯಿ ಲಕ್ಷ್ಮಿ ಮಾತ್ರವೇ ಮನೆಯಲ್ಲಿ ವಾಸಿಸುತ್ತಿದ್ದರು.  ಚಿತ್ರಲೇಖರಿಗೆ ಮಾನಸಿಕ  ಅಸ್ವಸ್ಥತೆ ಇದ್ದುದಾಗಿ ಹೇಳಲಾಗುತ್ತಿದೆ. ನಿನ್ನೆ ಬೆಳಿಗ್ಗಿನಿಂದ ತಾಯಿ ಹಾಗೂ ಮಗಳು ನಾಪತ್ತೆಯಾಗಿದ್ದರು. ಸಂಬಂಧಿಕರು  ಹಾಗೂ ನೆರೆಮನೆ ನಿವಾಸಿಗಳು ಇವರಿಗೆ ಫೋನ್ ಮಾಡಿದರೂ ಪ್ರತಿಕ್ರಿಯೆ ಉಂಟಾಗಿಲ್ಲ. ಇದರಿಂದ  ಸಂಜೆ …

2 ಲಕ್ಷ ರೂ. ನೀಡದಿದ್ದರೆ ನಗ್ನ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರಪಡಿಸುವ ಬೆದರಿಕೆ: 63ರ ಹರೆಯದ ವ್ಯಕ್ತಿ ವಿರುದ್ಧ ಕೇಸು

ಕಾಸರಗೋಡು: ಹಣ ನೀಡದಿದ್ದರೆ ನಗ್ನ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಪಡಿಸುವು ದಾಗಿ ಬೆದರಿಕೆಯೊಡ್ಡಿ ಹಣ ಪಡೆಯಲು ಯತ್ನಿಸಿದ ಘಟನೆಯಲ್ಲಿ ಕೇಸು ದಾಖಲಿಸಲಾಗಿದೆ. ನೀಲೇಶ್ವರ ಪಳ್ಳಿಕೆರೆ ನಿವಾಸಿಯಾದ 63ರ ಹರೆಯದ ವ್ಯಕ್ತಿ ನೀಡಿದ ದೂರಿನಂತೆ ಆಲಕ್ಕೋಡ್ ನಿವಾಸಿ ಕೆ.ಕೆ. ನಾರಾಯಣ (69)ನ ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ. ೯ ತಿಂಗಳ ಹಿಂದೆ ಎರ್ನಾಕುಳಂನ ಒಂದು ಹೋಟೆಲ್‌ನಲ್ಲಿ ೬೩ರ ವ್ಯಕ್ತಿ ಸ್ನಾನ ಮಾಡುತ್ತಿರುವ ದೃಶ್ಯವನ್ನು ಆತ ತಿಳಿಯದಂತೆ ಆರೋಪಿ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದನು. ಈ ದೃಶ್ಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಪ್ರಚಾರಪಡಿಸುವುದಾಗಿಯೂ, …

ಮನೆ ಕುಸಿತ: ವ್ಯಾಪಕ ನಾಶನಷ್ಟ

ಮಂಜೇಶ್ವರ: ಹೆಂಚು ಹಾಸಿದ ಮನೆಯೊಂದು ನಿನ್ನೆ  ರಾತ್ರಿ ಕುಸಿದುಬಿದ್ದಿದ್ದು ಕುಟುಂಬ ಅದೃಷ್ಟವಶಾತ್ ಅಪಾಯದಿಂದ ಪಾರಾಗಿದೆ. ಮಂಜೇಶ್ವರ ರೈಲು ನಿಲ್ದಾಣ ಪರಿಸರದ ನಿವಾಸಿಯಾಗಿ ರುವ ವೇದಾವತಿ ಎಂಬವರ ಮನೆ ನಿನ್ನೆ ರಾತ್ರಿ 12 ಗಂಟೆ ವೇಳೆ ಕುಸಿದಿದೆ. ಶಬ್ದ ಕೇಳಿ ಮನೆಯವರು ಹೊರಗೆ ಓಡಿ ಹೋಗಿದ್ದು, ಇದರಿಂದ ಭಾರೀ ದುರಂತ ತಪ್ಪಿಹೋಗಿದೆ. ಹೆಂಚು ಹಾಸಿದ ಮನೆಯ ಛಾವಣಿ ಕುಸಿದು ಬಿದ್ದಿದ್ದು ಇದರಿಂದ ವ್ಯಾಪಕ ನಾಶನಷ್ಟ ಸಂಭವಿಸಿದೆ. ಬಿಜೆಪಿ ನೇತಾರ ಹರಿಶ್ಚಂದ್ರ ಮಂಜೇಶ್ವರ, ಕಲ್ಕಿ ಮಂಜೇಶ್ವರ ಇದರ  ಪದಾಧಿಕಾರಿ ಅರುಣ್ …

ಹವಾಮಾನ ವೈಪರೀತ್ಯ ದುರಂತಗಳಿಗೆ ಶೀಘ್ರವೇ ನಷ್ಟಪರಿಹಾರ ಲಭ್ಯಗೊಳಿಸಲು ಜಿಲ್ಲಾಧಿಕಾರಿ ನಿರ್ದೇಶ

ಕಾಸರಗೋಡು: ಹವಾಮಾನ ವೈಪರೀತ್ಯಕ್ಕೆ ಸಂಬಂಧಿಸಿ ಉಂಟಾಗಿರುವ ದುರಂತಗಳಿಗೆ ಶೀಘ್ರದಲ್ಲಿಯೇ ನಷ್ಟ ಪರಿಹಾರ ಲಭ್ಯಗೊಳಿಸಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಕೋಪ ನಿವಾರಣಾ ಪ್ರಾಧಿಕಾರದ ಸಭೆಯಲ್ಲಿ ಆಗ್ರಹಿಸಲಾಗಿದೆ. ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ಅಧ್ಯಕ್ಷತೆ ವಹಿಸಿದರು. ಹವಾಮಾನಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಏರ್ಪಟ್ಟಿರುವ ಅಧಿಕಾರಿಗಳು ಯಾವುದೇ ಸನ್ನಿವೇಶವನ್ನು ಎದುರಿಸಲು ಯಾವಾಗಲೂ ಸಿದ್ಧರಾಗಿರಬೇಕೆಂದು, ದುರಂತಗಳು ಸಂಭವಿಸಿದರೆ ಕೂಡಲೇ ಮಧ್ಯಪ್ರವೇಶಿಸಿ ಶೀಘ್ರವೇ ನಷ್ಟ ಪರಿಹಾರ ಲಭ್ಯಗೊಳಿಸುವು ದಕ್ಕಿರುವ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದರು. ಶಿಬಿರಗಳನ್ನು ಸಜ್ಜುಗೊಳಿಸಬೇಕಾದ ಸಿದ್ಧತೆಗಳನ್ನು ಮುಂದಾಗಿಯೇ ಕಂಡುಕೊಳ್ಳಬೇಕೆಂದು ಜಿಲ್ಲಾಧಿಕಾರಿ …

ಪುತ್ತಿಗೆಯಲ್ಲಿ ನಾಟಿ ಸಂತೆ, ಕೃಷಿಕರ ಸಂಗಮ

ಪುತ್ತಿಗೆ: ಪಂಚಾಯತ್ ಹಾಗೂ ಕೃಷಿ ಇಲಾಖೆ ಯಿಂದ ಜಂಟಿಯಾಗಿ ಕೃಷಿ ಭವನ ಪರಿಸರದಲ್ಲಿ ನಾಟಿ ಕೆಲಸ ಸಂತೆ ಹಾಗೂ ಕೃಷಿಕರ ಸಂಗಮ ನಡೆಲಾಗಿದೆ. ಪುತ್ತಿಗೆ ಪಂಚಾಯತ್ ಉಪಾಧ್ಯಕ್ಷ ಇ.ಕೆ. ಮುಹಮ್ಮದ್ ಕುಂಞಿಯವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷೆ ಫಿದಾ ಊಜಂಪದವು ಉದ್ಘಾಟಿಸಿದರು. ಸ್ಥಾಯೀ ಸಮಿತಿ ಅಧ್ಯಕ್ಷ ಸಕೀನಾ ಶರೀಫ್, ಬ್ಲೋಕ್ ಸದಸ್ಯ ಜುನೈದ್ ಉರ್ಮಿ, ವಾರ್ಡ್ ಪ್ರತಿನಿಧಿಗಳಾದ ಎಸ್.ಎ. ಅಬ್ದುಲ್ಲ, ಬಾಲಕೃಷ್ಣ ರೈ, ಶಿವಪ್ಪ ರೈ, ಲಕ್ಷ್ಮಿ ವಿ. ಭಟ್, ಹಮೀದ್ ಬಾಡೂರು, ಜಯಂತಿ, ಪ್ರಗತಿಪರ …

ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದಿಂದ ಕನ್ನಡ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ

ಕಾಸರಗೋಡು: ಕನ್ನಡ ಗ್ರಾಮದಲ್ಲಿ ಜಿಲ್ಲಾ ಫ್ರೀಲಾನ್ಸ್ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ, ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು, ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ಇದರ ಸಹಕಾರದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ, ಮಾಧ್ಯಮ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರಗಿತು. ಕವಿ ರಾಧಾಕೃಷ್ಣ ಕೆ. ಉಳಿಯತ್ತಡ್ಕ ಜಿಲ್ಲೆಯಲ್ಲಿ ಕನ್ನಡ ಪತ್ರಿಕೋಧ್ಯಮ ನಡೆದು ಬಂದ ದಾರಿ ಮತ್ತು ಇತಿಹಾಸದ ಬಗ್ಗೆ ಮಾತ ನಾಡಿದರು. ಅಂಕಣಕಾರ ಕೆ. ಶ್ಯಾನು ಭೋಗ್ ಕೂಡ್ಲು …

ಚೆರುಗೋಳಿಯಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ:ಹಲವು ವಿದ್ಯುತ್ ಕಂಬ ಹಾನಿ, ತಪ್ಪಿದ ದುರಂತ

ಮಂಗಲ್ಪಾಡಿ: ಚೆರುಗೋಳಿ ಶಾಲಾ ಬಳಿಯಲ್ಲಿರುವ ಬೃಹತ್ ಮರವೊಂದು ವಿದ್ಯುತ್ ತಂತಿ ಮೇಲೆ ಮುರಿದು ಬಿದ್ದ ಪರಿಣಾಮ ಪರಿಸರದ ಸುಮಾರು ಎಂಟು ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. ಈ ವೇಳೆ ರಸ್ತೆಯಲ್ಲಿ ಯಾರು ಇಲ್ಲದಿರು ವುದರಿಂದ ಸಂಭವಿಸಬಹುದಾದ ದೊಡ್ಡ ದುರಂತ ತಪ್ಪಿಹೋಗಿದೆ. ಮರ ಬಿದ್ದ ವೇಳೆ ತಂತಿ ಹಾಗೂ ಕಂಬಗಳು ಮುರಿದು ರಸ್ತೆಯಲ್ಲಿ ಚೆಲ್ಲಾಪಿಲ್ಲಿಗೊಂಡಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಾಹನ ಸಹಿತ ಜನರÀÄ ನಿತ್ಯವೂ ಸಂಚರಿಸುತ್ತಿದ್ದು, ಘಟನೆ ವೇಳೆ ರಸ್ತೆಯಲ್ಲಿ ಯಾರೂ ಇಲ್ಲದಿದ್ದುದರಿಂದ ಅಪಾಯತಪ್ಪಿದೆ. ಕೂಡಲೇ ವಿದ್ಯುತ್ ಇಲಾಖೆ …

ಬದಿಯಡ್ಕದಲ್ಲಿ ವಿಬಿ ಜಿ ರಾಮ್ ಜಿ ಆರಂಭದ ನೇರಪ್ರಸಾರ ವೀಕ್ಷಣೆ

ಬದಿಯಡ್ಕ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ನೂತನ ವಿಬಿ ಜಿ ರಾಮ್ ಜಿ (ವಿಕಸಿತ್ ಭಾರತ್ – ಗ್ಯಾರಂಟಿ ಫಾರ್ ರೋಜ್‌ಗಾರ್ ಆಂಡ್ ಆಜೀವಿಕಾ ಮಿಷನ್ – ಗ್ರಾಮೀಣ್) ಯೋಜನೆಯ ಆರಂಭದ ನೇರ ಪ್ರಸಾರ ವೀಕ್ಷಣೆ ಬದಿಯಡ್ಕ ಪಂಚಾಯತ್ ಸಭಾಂಗಣದಲ್ಲಿ ಜರಗಿತು.ದೇಶದಾದ್ಯಂತ ಜುಲೈ ೧ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿರುವ ಈ ಯೋಜನೆಯ ರಾಷ್ಟ್ರೀಯ ಉದ್ಘಾಟನಾ ಸಮಾರಂಭದ ನೇರ ಪ್ರಸಾರಕ್ಕೆ ಪಂಚಾಯತ್ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಬದಿಯಡ್ಕ ಪಂಚಾಯತ್ ಉಪಾಧ್ಯಕ್ಷೆ …