ಚೆಂಗಳ ಪಂ. ಕೃಷಿಕರ ದಿನಾಚರಣೆ ಪ್ರಹಸನ- ಬಿಜೆಪಿ ಆರೋಪ

ಚೆರ್ಕಳ: ಚೆಂಗಳ ಪಂಚಾಯತ್‌ನ ಕೃಷಿಕರ ದಿನಾಚರಣೆ ಆಡಳಿತ ಪಕ್ಷದ ಕಾರ್ಯಕ್ರಮವಾಗಿ ಬದಲಾಗಿದೆ ಎಂದು ಪಂಚಾಯತ್ ಬಿಜೆಪಿ ಅಧ್ಯಕ್ಷ ಪ್ರಭಾಕರ ಎಡನೀರು ಆರೋಪಿಸಿದ್ದಾರೆ. ಕೃಷಿಕರ ದಿನಾಚರಣೆ ಪಂಚಾಯತ್ ನೇತೃತ್ವದಲ್ಲಿ ನಡೆಯಬೇಕಾಗಿದ್ದು, ಆ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದವರನ್ನು ಆಹ್ವಾನಿಸಬೇಕಾಗಿತ್ತು. ಆದರೆ ಬಿಜೆಪಿ ಪ್ರತಿನಿಧಿಗಳಿಗೆ ಯಾವುದೇ ಆಹ್ವಾನ ನೀಡಿಲ್ಲ. ಪಂಚಾಯತ್‌ನ ಆಡಳಿತ ಮಂಡಳಿಯ ಈ ಕ್ರಮ ಖಂಡನೀಯವಾಗಿದೆ ಎಂದು ಪ್ರಭಾಕರ ಅಭಿಪ್ರಾಯಪಟ್ಟಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವನ್ನು ಸ್ವಂತ ಪಕ್ಷದ್ದೆಂಬ ರೀತಿಯಲ್ಲಿ ನಡೆಸುವ ಮುಸ್ಲೀಂಲೀಗ್ ಆಡಳಿತ ಸಮಿತಿಯ ನಿಲುವು ಅಪಹಾಸ್ಯಕರವಾಗಿದೆ. ಇಂತಹ ನೀತಿಯನ್ನು ಆಡಳಿತ …

ಕನ್ನಡ-ಮಲಯಾಳ ನಿಘಂಟು ಪ್ರಕಾಶನ

ಕಾಸರಗೋಡು: ಬಿ.ಟಿ. ಜಯರಾಮ್ ರಚಿಸಿ ಕೇರಳ ಭಾಷಾ ಇನ್‌ಸ್ಟಿಟ್ಯೂಟ್ ಪ್ರಕಟಿಸಿದ ಕನ್ನಡ-ಮಲಯಾಳ ನಿಘಂಟನ್ನು ನಿನ್ನೆ ಕಾಸರಗೋಡು ಮುನಿಸಿಪಲ್ ಕಾನ್ಫರೆನ್ಸ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ತುಳು ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕ್ಕಾಡ್  ಪ್ರಕಾಶನಗೈದು ಉದ್ಘಾಟನೆ ನೆರವೇರಿಸಿದರು. ಸರಕಾರದ ವಿವಿಧ ಇಲಾಖೆಗಳಲ್ಲಿ ದೀರ್ಘ ಕಾಲ ಸೇವೆ ಸಲ್ಲಿಸಿರುವ ಬಿ,ಟಿ. ಜಯರಾಮ್ ಈ ನಿಘಂಟು ರಚನೆಗಾಗಿ ಸತತ ಆರು ವರ್ಷ ಕಠಿಣ ಪರಿಶ್ರಮ ನಡೆಸಿದ್ದಾರೆ. ಕನ್ನಡ ಪದಗಳ ಉಚ್ಛರಣೆಯನ್ನು ಹೇಗೆ ನಡೆಸಬೇ ಕೆನ್ನುವುದನ್ನು ಮಲೆಯಾಳ ಲಿಪಿಯಲ್ಲೇ ಈ ನಿಘಂಟಿನಲ್ಲಿ …

ಮೊಗ್ರಾಲ್ ಪುತ್ತೂರು ಹೆದ್ದಾರಿ ಬದಿ ಬೀದಿ ದೀಪಗಳಿಲ್ಲ : ಸಮಸ್ಯೆ ಬಗ್ಗೆ ಸಿಪಿಎಂ ಅಧಿಕಾರಿಗಳಿಗೆ ಮನವಿ

ಮೊಗ್ರಾಲ್ ಪುತ್ತೂರು: ಪಂಚಾಯತ್ ವ್ಯಾಪ್ತಿಯ ಸಿಪಿಸಿಆರ್‌ಐ ಪ್ರಧಾನ ಕವಾಟದಿಂದ  ಚಂದ್ರಗಿರಿ ರೆಸ್ಟ್ ಹೌಸ್‌ವರೆಗಿರುವ ಸ್ಥಳಗಳಲ್ಲಿ ಹೆದ್ದಾರಿ ಅಭಿವೃದ್ಧಿಯ ಬಳಿಕ ಬೀದಿ ದೀಪಗಳನ್ನು ಸ್ಥಾಪಿಸದಿರುವುದು ಸಮಸ್ಯೆಗೀಡಾಗಿದ್ದು, ಇಲ್ಲಿ ಕೂಡಲೇ ಬೀದಿ ದೀಪ ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಿಪಿಎಂ ಮೊಗ್ರಾಲ್ ಪುತ್ತೂರು ಲೋಕಲ್ ಸಮಿತಿ ಪ್ರೊಜೆಕ್ಟ್ ಡೈರೆಕ್ಟರ್‌ಗೆ ಮನವಿ ನೀಡಿದೆ. ಸುಮಾರು ಒಂದೂವರೆ ಕಿಲೋ ಮೀಟರ್‌ನಷ್ಟು ಸ್ಥಳದಲ್ಲಿ ಬೀದಿ ದೀಪಗಳನ್ನು ಸ್ಥಾಪಿಸಲಾಗಿಲ್ಲ. ಈ ಪ್ರದೇಶದಲ್ಲಿ ಪಂಚಾಯತ್ ಕಚೇರಿ, ಇತರ ಕಚೇರಿಗಳು, ಪೇಟೆ ಒಳಗೊಂಡಿದ್ದು, ದಿನನಿತ್ಯ ತಲುಪುವ ಮಂದಿಗೆ ರಾತ್ರಿ …

ಎಕೆಪಿಎಯಿಂದ ಕೃಷಿಕರ ದಿನಾಚರಣೆ, ಸನ್ಮಾನ

ಕಾಸರಗೋಡು: ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಕಾಸರಗೋಡು ಈಸ್ಟ್ ಘಟಕ ವತಿಯಿಂದ ಕೃಷಿರಂಗದಲ್ಲಿ ಉತ್ತಮ ಸಾಧನೆಗೈದ ಹಮೀದ್ ಮಣಿಯನ್ನು ಗೌರವಿಸಲಾಯಿತು. ಸಾಮಾಜಿಕ, ಸಾಂಸ್ಕೃತಿಕ ಶಿಕ್ಷಣ ವಲಯಗಳಲ್ಲಿ ಸಕ್ರಿಯರಾಗಿದ್ದ ಇವರು ಯುವ ಕೃಷಿಕ ಪ್ರತಿಭೆಯಾಗಿದ್ದಾರೆ. ೨೦೨೫ರಲ್ಲಿ ಉತ್ತಮ ಸಂಯೋಜಿತ ಮೀನು ಕೃಷಿಗಿರುವ ಬ್ಲೋಕ್ ಮಟ್ಟದ ಪ್ರಶಸ್ತಿ ಇವರಿಗೆ ಲಭಿಸಿದೆ. ಅವರ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಲ್ ಕೇರಳ ಫೊಟೋಗ್ರಾಫರ್ಸ್ ಅಸೋಸಿಯೇಶನ್ ಈಸ್ಟ್ ಘಟಕ ಅಧ್ಯಕ್ಷ ಅಜಿತ್ ಕುಮಾರ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾಧ್ಯಕ್ಷ ರಾಜೇಂದ್ರನ್ ಅಭಿನಂದಿಸಿದರು. ಕಾರ್ಯದರ್ಶಿ ಸುಜಿತ್ ಸ್ವಾಗತಿಸಿ, …

ರಸ್ತೆ ದಾಟುತ್ತಿದ್ದ ಮಹಿಳೆ ಬಸ್ ಢಿಕ್ಕಿ ಹೊಡೆದು ಮೃತ್ಯು

ಕಾಸರಗೋಡು: ರಸ್ತೆ ದಾಟುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದು ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಣ್ಣೂರು ವಾಣಿಯಂಬಾರೆ ನಿವಾಸಿ ಸರಸ್ವತಿ (75) ಸಾವನ್ನಪ್ಪಿದ ಮಹಿಳೆ. ಇವರು ನಿನ್ನೆ ಪಾಲಕುನ್ನು ಬಳಿ ರಸ್ತೆ ದಾಟುತ್ತಿದ್ದ ವೇಳೆ ಆ ದಾರಿಯಾಗಿ ಕಾಸರಗೋಡು ಭಾಗದಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಢಿಕ್ಕಿ ಹೊಡೆದು ಬಸ್‌ನ ಚಕ್ರದಡಿ ಸಿಲುಕಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಯಿತಾದರೂ ಅದು ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಬೇಕಲ …

ಪೆರಡಾಲ ಕ್ಷೇತ್ರದಲ್ಲಿ ಶ್ರೀಶಕ್ತಿ ಪಂಚಾಕ್ಷರಿ ಯಾಗ ಸಮಾಪ್ತಿ

ಬದಿಯಡ್ಕ: ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನದಲ್ಲಿ ಶ್ರೀಶಕ್ತಿ ಪಂಚಾಕ್ಷರಿ ಹೋಮ ಸಮಾಪ್ತಿಗೊಂಡಿತು. ಹಲವಾರು ಮಂದಿ ಭಕ್ತರು ಭಾಗವಹಿಸಿದ್ದರು. ಇದೇ ವೇಳೆ ಗರ್ಭಗುಡಿಯ ನವೀಕರಣಕ್ಕೆ ದೇವರ ಬಾಲಾಲಯ ಪ್ರತಿಷ್ಠೆ ಕೈಗೊಳ್ಳಲಾಯಿತು. ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಪೌರೋಹಿತ್ಯ ವಹಿಸಿದರು. ಶಿಲ್ಪಿ ಕೃಷ್ಣ ಪ್ರಸಾದ ಮುನಿಯಂಗಳ, ವಸಂತ ಪೈ ಬದಿಯಡ್ಕ, ಆಡಳಿತ ಮೊಕ್ತೇಸರ ವೆಂಕಟ್ರಮಣ ಭಟ್ ಚಂಬಲ್ತಿಮಾರ್, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ನಿರಂಜನ ರೈ, ಕೋಶಾಧಿಕಾರಿ ಸೂರ್ಯನಾರಾಯಣ, ವಿವಿಧ ಸಮಿತಿ ಪದಾಧಿಕಾರಿಗಳು ಭಾಗವಹಿಸಿದರು.

ಮಜೀರ್ಪಳ್ಳದಿಂದ ಯುವಕರ ಅಪಹರಣ: ಹೊಸಬೆಟ್ಟಿನಲ್ಲಿ ಕಳ್ಳ ಬಂದೂಕು, ಮದ್ದುಗುಂಡುಗಳು ವಶ; ಹಲವು ಪ್ರಕರಣಗಳ ಆರೋಪಿ ಸಹಿತ ಏಳು ಮಂದಿ ಬಂಧನ

ಮಂಜೇಶ್ವರ: ಕಾಪಾ ಸಹಿತ ಹಲವು ಪ್ರಕರಣಗಳಲ್ಲಿ ಆರೋಪಿಯಾದ ಕುಖ್ಯಾತ ಕ್ರಿಮಿನಲ್ ಸಹಿತ ಏಳು ಮಂದಿಯನ್ನು ಮಂಜೇಶ್ವರ ಪೊಲೀಸರು ಸೆರೆಹಿಡಿದಿದ್ದಾರೆ. ತಂಡದ ಕೈಯಿಂದ ಬಂದೂಕು ಹಾಗೂ 5 ಮದ್ದುಗುಂಡುಗಳನ್ನು ವಶಪಡಿಸಲಾಗಿದೆ. ಅಂಗಡಿಪದವಿನ  ಸೈಫುದ್ದೀನ್ ಯಾನೆ ಪೂಚ ಸೈಫುದ್ದೀನ್ (29), ಬೇಡಗಂ ಕುತ್ತಿಕ್ಕೋಲ್ ಅಳಕ್ಕಾವ್ ಹೌಸ್‌ನ ನಿತಿನ್‌ರಾಜ್ (25), ಕುತ್ತಿಕ್ಕೋಲ್ ವೆಳ್ಳಾಲ ಹೌಸ್‌ನ ಎಚ್. ರತೀಶ್ (26), ಚೆಮ್ನಾಡ್ ಕೊಂಬನಡ್ಕದ ಪ್ರವಿತ್ ಸಿ.ಆರ್ (20) ಎಂಬಿವರನ್ನು ಮಂಜೇಶ್ವರ ಠಾಣೆ ಇನ್‌ಸ್ಪೆಕ್ಟರ್ ಇ. ಅನೂಬ್ ಕುಮಾರ್ ಹಾಗೂ ತಂಡ  ಕಳ್ಳಬಂದೂಕು ಪ್ರಕರಣದಲ್ಲಿ …

ಮುಖ್ಯೋಪಾಧ್ಯಾಯ ವಿದ್ಯಾರ್ಥಿ ಕೆನ್ನೆಗೆ ಹೊಡೆದು ಕರ್ಣ ತಮ್ಮಟೆಗೆ ಹಾನಿವುಂಟಾದ ಪ್ರಕರಣ: ಸಮಗ್ರ ತನಿಖೆಗೆ ಶಿಕ್ಷಣ ಸಚಿವ ನಿರ್ದೇಶ

ಕಾಸರಗೋಡು: ಮುಖ್ಯೋ ಪಾಧ್ಯಾಯರು ವಿದ್ಯಾರ್ಥಿಯ ಕೆನ್ನೆಗೆ ಹೊಡೆದ ಪರಿಣಾಮ ಆತನ ಕರ್ಣ ತಮಟೆಗೆ ಹಾನಿಯುಂಟಾದ ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ  ರಾಜ್ಯ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಇಂದು ಬೆಳಿಗ್ಗೆ ನಿರ್ದೇಶ ನೀಡಿದ್ದಾರೆ.  ಇದೇ ವೇಳೆ ಈ ಘಟನೆಗೆ  ಸಂಬಂಧಿಸಿ ರಾಜ್ಯ ಮಕ್ಕಳ ಹಕ್ಕು ಆಯೋಗ  ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಕುಂಡಂಕುಳಿ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಗೆ  ಮುಖ್ಯೋಪಾಧ್ಯಾಯರು ಕೆನ್ನೆಗೆ ಹೊಡೆದಿರು ವುದಾಗಿ ಆರೋಪಿಸ ಲಾಗಿದೆ.  ಆ ವಿಷಯ  ತಿಳಿದ ಅದೇ …

ಪೊದೆಗಳಿಂದ ಆವರಿಸಿರುವ ಕೆರೆಯಲ್ಲಿ ಮಾನವ ಅಸ್ತಿ ಪಂಜರ ಪತ್ತೆ: ಉನ್ನತ ಮಟ್ಟದ ಪರೀಕ್ಷೆಗಾಗಿ ಪರಿಯಾರಂ ವೈದ್ಯಕೀಯ ಕಾಲೇಜಿಗೆ ರವಾನೆ

ಕಾಸರಗೋಡು: ಪೊದೆಗಳಿಂದ ಆವರಿಸಿರುವ ಕೆರೆಯಲ್ಲಿ ಮಾನವ ಅಸ್ತಿಪಂಜರ ಪತ್ತೆಯಾಗಿದೆ. ಚೆರ್ಕಳಕ್ಕೆ ಸಮೀಪದ ಪಡಿಞ್ಞಾರಮೂಲೆ ಕುಂಞಿಕಾನದ ಅಬ್ದುಲ್ಲ ಎಂಬವರ ಹಿತ್ತಿಲಲ್ಲಿ ಪೊದೆಗಳಿಂದ ಆವರಿಸಿರುವ ಕೆರೆಯಲ್ಲಿ ಈ ಅಸ್ತಿ ಪಂಜರ ಪತ್ತೆಯಾಗಿದೆ. ಮಕ್ಕಳು ನಿನ್ನೆ ಅಪರಾಹ್ನ ಮೀನು ಹಿಡಿಯಲೆಂದು  ಆ ಕೆರೆಗೆ ಹೋದಾಗ ಅವರು ಮೊದಲು ಅಸ್ತಿಪಂಜರ ಪತ್ತೆಹಚ್ಚಿದ್ದಾರೆ. ಆ ಬಗ್ಗೆ ನೀಡಲಾದ ಮಾಹಿತಿಯಂತೆ ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಯು.ಪಿ. ವಿಪಿನ್, ಎಸ್.ಐ.ಗಳಾದ ವಿಜಯನ್ ಮೇಲೋತ್ತ್, ಕೆ. ಉಮೇಶನ್‌ರ ನೇತೃತ್ವದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಇದು …

ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಸೆರೆ

ಕಾಸರಗೋಡು: 13ರ ಹರೆಯದ ವಿದ್ಯಾರ್ಥಿನಿಯನ್ನು ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ ಪೋಕ್ಸೋ ಪ್ರಕರಣದ ಆರೋಪಿಯನ್ನು ಕಾಸರಗೋಡು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಯಾದ ಎಸ್‌ಐ ಅಜಿತಾ ಕೆ. ಬಂಧಿಸಿದ್ದಾರೆ. ಮೂಲತಃ ಕಾಸರಗೋಡು ಚೇರಂಗೈ ಕಡಪ್ಪುರ ನಿವಾಸಿ ಹಾಗೂ ಈಗ ಅಡ್ಕತ್ತಬೈಲು ಅರ್ಜಾಲ್ ರಸ್ತೆ ಬಳಿ ವಾಸಿಸುತ್ತಿರುವ ಅಬ್ದುಲ್ ಮುನೀರ್ (31) ಬಂಧಿತ ಆರೋಪಿ. 13ರ ಹರೆಯದ ವಿದ್ಯಾರ್ಥಿನಿಯನ್ನು ಪ್ರೀತಿಸಿ ಆಕೆಯನ್ನು ಬೈಕ್‌ನಲ್ಲಿ ಬೇಕಲ ಪೋರ್ಟ್‌ಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ನೀಡಲಾದ ದೂರಿನಂತೆ ಕಾಸರಗೋಡು ಮಹಿಳಾ ಪೊಲೀಸ್ …