ಬೆಳ್ಳೂರು: ನೇಣು ಬಿಗಿದು ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ: ಮಕ್ಕಳಿಲ್ಲದ ಹೆಸರಲ್ಲಿ ಸರೀನ ಭಾರೀ ಮಾನಸಿಕ ಕಿರುಕುಳ ಎದುರಿಸಿರುವುದಾಗಿ ಸಹೋದರನ ಹೇಳಿಕೆ
ಮುಳ್ಳೇರಿಯ: ಬೆಳ್ಳೂರು ಪಳ್ಳಪ್ಪಾಡಿಯಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಯುವತಿಯ ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕರ್ನಾಟಕದ ಪುತ್ತೂರು ಬಳಿಯ ಮಾಡಾವು ಬದ್ರಿಯಾ ಜುಮಾ ಮಸೀದಿ ಪರಿಸರ ದಲ್ಲಿ ನಿನ್ನೆ ರಾತ್ರಿ ಅಂತ್ಯ ಸಂಸ್ಕಾರ ನಡೆಸಲಾಯಿತು. ಬೆಳ್ಳೂರು ಪಳ್ಳ ಪ್ಪಾಡಿಯ ಸೈನುದ್ದೀನ್ ಎಂಬವರ ಪತ್ನಿ ಸರೀನ (27) ಮನೆ ಸಮೀಪದ ಶೆಡ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮೊನ್ನೆ ಸಂಜೆ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ತಲು ಪಿಸಿದರೂ ಜೀವ ರಕ್ಷಿಸಲಾಗಲಿಲ್ಲ. ನಾಲ್ಕನೇ …