ಮಾರುತಿ ಸ್ವಿಫ್ಟ್ ಕಾರಿನಲ್ಲಿ ಸಾಗಿಸಿದ 103.68 ಲೀಟರ್ ಮದ್ಯ ವಶ; ಕುಂಜತ್ತೂರು ನಿವಾಸಿ ಸೆರೆ

ಕಾಸರಗೋಡು: ಮಾರುತಿ ಸ್ವಿಫ್ಟ್‌ಕಾರಿನಲ್ಲಿ ಸಾಗಿಸುತ್ತಿದ್ದ 103.68 ಲೀಟರ್ ಕರ್ನಾಟಕ, ಗೋವಾ ನಿರ್ಮಿತ ಮದ್ಯ ಸಹಿತ ಯುವಕ ಸೆರೆಯಾಗಿದ್ದಾನೆ. ಕುಂಜತ್ತೂರು ಅಣ್ಣಮಜಲ್ ನಿವಾಸಿ ಕೆ.ಎ. ರವಿಕಿರಣ್ (38ನನ್ನು ಕಾಸರಗೋಡು ಅಬಕಾರಿ ರೇಂಜ್ ಇನ್ಸ್‌ಪೆಕ್ಟರ್ ಟಿ.ಕೆ. ಅಶ್ವಿನ್ ಹಾಗೂ ತಂಡ ಬಂಧಿಸಿದೆ. ಮುಂಜಾನೆ ಬೇಳ ನೀರ್ಚಾಲ್‌ನಲ್ಲಿ ಮದ್ಯ ವಶಪಡಿಸಲಾಗಿದೆ ಎಂದು ಅಬಕಾರಿ ಅಧಿಕಾರಿಗಳು ತಿಳಿಸಿದ್ದಾರೆ. ಸೆರೆಗೀಡಾದ ರವಿಕಿರಣ್ ಖಾಯಂ ಆಗಿ ಮದ್ಯ ಸಾಗಿಸುವ ವ್ಯಕ್ತಿಯಾಗಿದ್ದಾನೆಂದು ಈತನನ್ನು ತಿಂಗಳುಗಳಿಂದ ನಿರೀಕ್ಷಿಸುತ್ತಿದ್ದುದಾಗಿಯೂ ಅಧಿಕಾರಿಗಳು ತಿಳಿಸಿದ್ದಾರೆ. ಗೋವಾ ನಿರ್ಮಿತವಾದ 180 ಮಿಲ್ಲಿಯ ಬಾಟ್ಲಿಗಳು, ಕರ್ನಾಟಕ …

ಮರಿಕೆ ಈಶ್ವರ ನಾಯ್ಕ್ ನಿಧನ

ಪೈವಳಿಕೆ: ಮರಿಕೆ ನಿವಾಸಿ ಈಶ್ವರ ನಾಯ್ಕ್ (68) ನಿಧನ ಹೊಂದಿದರು. ಸ್ಟೇಟ್ ಬ್ಯಾಂಕ್ ಆಫ್ ಟ್ರಾವಂಕೂರ್‌ನಲ್ಲಿ ಅಟೆಂಡರ್ ಆಗಿ ಕೆಲಸ ನಿರ್ವಹಿಸಿದ್ದರು. ಇವರ ತಂದೆ ರಾಮ ನಾಯ್ಕ್, ತಾಯಿ ವೆಂಕಮ್ಮ, ಸಹೋದರ ಕೃಷ್ಣ ನಾಯ್ಕ್ ಈ ಹಿಂದೆ ನಿಧನ ಹೊಂದಿದ್ದಾರೆ. ಅವಿವಾಹಿತರಾಗಿದ್ದರು. ನಿಧನಕ್ಕೆ ಸಿಪಿಎಂ ಮಂಜೇಶ್ವರ ಏರಿಯಾ ಸಮಿತಿ ಸದಸ್ಯ ಅಬ್ದುಲ್ ರಜಾಕ್ ಚಿಪ್ಪಾರು, ಹಾರಿಸ್ ಪೈವಳಿಕೆ, ಶ್ರೀನಿವಾಸ ಭಂಡಾರಿ, ನಾರಾಯಣ ಶೆಟ್ಟಿ ಅಂಬಿಕಾನ, ಎಕೆಎಸ್ ಮಂಜೇಶ್ವರ ಏರಿಯಾ ಕಾರ್ಯದರ್ಶಿ ಚಂದ್ರ ನಾಕ್ ಮಾನಿಪ್ಪಾಡಿ ಮನೆಗೆ ತೆರಳಿ …

ಕೋಡಿಬೈಲು: ರಸ್ತೆ ಹದಗೆಟ್ಟು ಸಂಚಾರಕ್ಕೆ ಸಮಸ್ಯೆ

ಉಪ್ಪಳ: ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯ ಕೋಡಿಬೈಲುನಲ್ಲಿ ಎರಡು ರಸ್ತೆಗಳು ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆಯಾಗಿ ಪರಿಣಮಿಸಿರುವುದಾಗಿ ಸಾರ್ವಜನಿಕರು ದೂರಿದ್ದಾರೆ. ಮಣ್ಣಂಗುಳಿಯಿಂದ ಕೋಡಿಬೈಲು ಹಾಗೂ ಉಪ್ಪಳ ಪತ್ವಾಡಿ ರಸ್ತೆಯಿಂದ ಕೋಡಿಬೈಲು ಪ್ರದೇಶಕ್ಕೆ ಸೇರುವ ರಸ್ತೆಗಳು ಶೋಚನೀಯಗೊಂಡಿದೆ. ಈ ಪ್ರದೇಶದಲ್ಲಿ ಶಾಲೆ, ನೂರಾರು ಮನೆಗಳಿದ್ದು, ನೂರಾರು ವಾಹನಗಳು ದಿನನಿತ್ಯ ಸಂಚರಿಸುತ್ತಿವೆ. ರಸ್ತೆಯ ಅಲ್ಲಲ್ಲಿ ಡಾಮಾರೀಕರಣ, ಕಾಂಕ್ರೀಟ್, ಇಂಟರ್‌ಲಾಕ್ ಇದ್ದು ಇವುಗಳೆಲ್ಲ ಹೊಂಡ ಗುಂಡಿಗಳಿAದ ಕೂಡಿ ಸಂಚಾರ ದುಸ್ತರವಾಗಿದೆ. ಸಂಬAಧ ಪಟ್ಟ ಅಧಿಕಾರಿಗಳು ಹದಗೆಟ್ಟ ರಸ್ತೆಗಳನ್ನು ದುರಸ್ತಿಗೊಳಿಸಿ ಸುಗಮ ಸಂಚಾರಕ್ಕೆ ಸಾರ್ವಜನಿಕರು …

ಲಾಲ್ಭಾಗ್- ಕುರುಡಪದವು ರಸ್ತೆ ಕಾಮಗಾರಿ ಶೀಘ್ರ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಲು ಬಿಜೆಪಿ ಆಗ್ರಹ

ಪೈವಳಿಕೆ:  ಹಲವು ತಿಂಗಳ ಹಿಂದೆಯೇ ಆರಂಭಗೊಂಡ ಆದರೆ ಇನ್ನೂ ಪೂರ್ತಿಗೊಳ್ಳದ ಪೈವಳಿಕೆ ಪಂಚಾಯತ್‌ನ ಲಾಲ್ಭಾಗ್- ಕುರುಡಪದವು ಲೋಕೋಪಯೋಗಿ ಇಲಾಖೆ ರಸ್ತೆಯ ಕಾಮಗಾರಿಯನ್ನು ಶೀಘ್ರವೇ ಮುಗಿಸಿ ವಾಹನ ಸಂಚಾರಕ್ಕೆ ತೆರೆದುಕೊಡಬೇಕೆಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಎಂ.ಎಲ್. ಅಶ್ವಿನಿ ಆಗ್ರಹಿಸಿದ್ದಾರೆ. ಅವರು ಕಾಮಗಾರಿ ನಡೆಯುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡುತ್ತಿದ್ದರು. ಲಾಲ್ಭಾಗ್‌ನಿಂದ ಅಮ್ಮೇರಿ ತನಕ ನಾಲ್ಕೂವರೆ ಕೋಟಿ ರೂ. ವೆಚ್ಚದಲ್ಲಿ ಮೂರೂವರೆ ಕಿಲೋ ಮೀಟರ್ ರಸ್ತೆ ಅಭಿವೃದ್ಧಿ ನಡೆಯುತ್ತಿದೆ. ಆದರೆ ಕಾಮಗಾರಿ ಇದುವರೆಗೂ ಪೂರ್ತಿಗೊಳ್ಳದಿರುವುದು ಸ್ಥಳೀಯರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಕಾಮಗಾರಿ …

ವಿದ್ಯುತ್ ಸಬ್ ಸ್ಟೇಶನ್ ಬಳಿ ಭಾರೀ ಬೆಂಕಿ ಅನಾಹುತ: 65 ಲಕ್ಷ ರೂ. ಮೌಲ್ಯದ ಕೇಬಲ್ ಭಸ್ಮ

ಕಾಸರಗೋಡು: ವಿದ್ಯಾನಗರದಲ್ಲಿ ರುವ ವಿದ್ಯುತ್ ಸಬ್ ಸ್ಟೇಶನ್ ಬಳಿ ಇರಿಸಲಾಗಿದ್ದ ವಿದ್ಯುತ್ ಕೇಬಲ್‌ಗಳಿಗೆ ಬೆಂಕಿ ತಗಲಿ ಸುಮಾರು 65 ಲಕ್ಷ ರೂ.ತನಕ ನಷ್ಟ ಉಂಟಾಗಿದೆ. ನಿನ್ನೆ ಸಂಜೆ ಈ ಬೆಂಕಿ ಅನಾಹುತ ಸಂಭವಿಸಿದೆ. ಪ್ರಸ್ತುತ ಸಬ್ ಸ್ಟೇಶನ್ ಬಳಿಯ ರಸ್ತೆ ಬದಿ ರಾಶಿ ಹಾಕಿದ್ದ ಅಂಡರ್ ಗ್ರೌಂಡ್ ಕೇಬಲ್‌ಗಳು, 600 ಮೀಟರ್ ಪೀಸುಗಳು, ಜಿಲ್ಲೆಯ ವಿವಿಧೆಡೆಗಳಲ್ಲಾಗಿ ಕೆ-ಫೋನ್ ಸ್ಥಾಪಿಸಲೆಂದು ತಂದಿರಿಸಲಾಗಿದ್ದ ಒಪ್ಟಕ್ಕಲ್ ಫೈಬರ್‌ನ 97,000  ಮೀಟರ್ ನಷ್ಟು ಕೇಬಲ್‌ಗಳು ಬೆಂಕಿಗಾಹುತಿಯಾಗಿದೆ. ವಿದ್ಯುತ್  ಲೈನ್‌ನಲ್ಲಿ ಸ್ಪಾರ್ಕ್ ಉಂಟಾಗಿ ಅದು …

ಬಿರಿದ ಒಲಿವ್ ರೆಡ್ಲಿ ಆಮೆ ಮರಿಗಳನ್ನು ಕಡಲಿಗೆ ಬಿಟ್ಟ ಅರಣ್ಯ ಅಧಿಕಾರಿಗಳು

ಕಾಸರಗೋಡು: ಸಾಮಾಜಿಕ ಅರಣ್ಯೀಕರಣ ವಿಭಾಗ ಕಾವುಗೋಳಿ ಪ್ರದೇಶದಲ್ಲಿ ಲಭಿಸಿದ ಕಡಲಾಮೆಯ ಮೊಟ್ಟೆಗಳಲ್ಲಿ ಬಿರಿದ ೯೫ ಒಲಿವ್ ರೆಡ್ಲಿ ಆಮೆ ಮರಿಗಳನ್ನು ವಾರ್ಡ್ ಪ್ರತಿನಿಧಿ ಪಿ. ಮಲ್ಲಿಕರ ಉಪಸ್ಥಿತಿ ಯಲ್ಲಿ ಸಮುದ್ರಕ್ಕೆ ಬಿಡಲಾಯಿತು. ಕಾಸರಗೋಡು ಸೋಶ್ಯಲ್ ಫಾರೆಸ್ಟ್ರಿ ರೇಂಜ್ ಫಾರೆಸ್ಟ್ ಆಫೀಸರ್ ಗಿರೀಶ್ ಕೆ., ಡೆಪ್ಯುಟಿ ರೇಂಜ್ ಫಾರೆಸ್ಟ್ ಆಫೀಸರ್ ವಿಜಯನಾಥ್ ಕೆ.ಆರ್, ಸೆಕ್ಷನ್ ಫಾರೆಸ್ಟ್ ಆಫೀಸರ್ ಕೆ. ಜಯಕುಮಾರ್ ಎಂಬಿವರು ನೇತೃತ್ವ ನೀಡಿದರು. ಬೇಕಲ ಕೋಸ್ಟರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಯೂಸಫ್ ನಡುತ್ತರಪರಂಬಿಲ್, ಸಬ್ ಇನ್ಸ್‌ಪೆಕ್ಟರ್ ರಾಧಾಕೃಷ್ಣನ್, …

ನುಳ್ಳಿಪ್ಪಾಡಿಯಲ್ಲಿ ಲಿಫ್ಟ್ ಹೊಂಡದಲ್ಲಿ ಮೃತದೇಹ ಪತ್ತೆ ಪ್ರಕರಣ :ಯುವಕನ ಸಾವು ಕೊಲೆಯೆಂದು ಸಾಬೀತು; ಇಬ್ಬರು ಪೊಲೀಸ್ ಕಸ್ಟಡಿಗೆ 

ಕಾಸರಗೋಡು: ನಗರದ ನುಳ್ಳಿಪ್ಪಾಡಿ ರಾಷ್ಟ್ರೀಯ ಹೆದ್ದಾರಿ ಸಮೀಪ ನಿರ್ಮಿಸಲಾಗುತ್ತಿರುವ ಬಹು ಅಂತಸ್ತಿನ ಕಟ್ಟಡಕ್ಕೆ ಲಿಫ್ಟ್ ನಿರ್ಮಿಸಲು ತೋಡಲಾದ ನೀರು ತುಂಬಿದ ಹೊಂಡದಲ್ಲಿ ಮೊನ್ನೆರಾತ್ರಿ ಪತ್ತೆಯಾದ  ವ್ಯಕ್ತಿಯ ಮೃತದೇಹದ ಮರಣೋತ್ತರ ಪರೀಕ್ಷಾ ವರದಿ ಪೊಲೀಸರಿಗೆ ಲಭಿಸಿದ್ದು, ಇದರಲ್ಲಿ ವ್ಯಕ್ತಿಯ ಸಾವು ಕೊಲೆಯಾಗಿದೆ ಯೆಂದು ಸ್ಪಷ್ಟಗೊಂಡಿದೆ. ಮಾತ್ರವಲ್ಲ ಕೊಲೆಗೈಯ್ಯಲ್ಪಟ್ಟ ವ್ಯಕ್ತಿಯ ಗುರುತು ಪತ್ತೆಹಚ್ಚುವಲ್ಲಿ ಪೊಲೀಸರು ಸಫಲರಾಗಿದ್ದಾರೆ. ಮೃತ ವ್ಯಕ್ತಿ ಕರ್ನಾಟಕದ ಗದಗ ಜಿಲ್ಲೆಯ ಬಲೇಶ್ವರ ಬಾಲಹೊಸೂರು ನಿವಾಸಿ ಚಂದ್ರಶೇಖರ್ ಸುರೇಶ್ ಪಟ್ಟಾಡ್ (38) ಎಂಬವರೆಂದು ಗುರುತಿಸಲಾಗಿದೆ. ಇವರು ವಲಸೆ ಕಾರ್ಮಿಕನಾಗಿದ್ದರು. …

ಅಡುಗೆ ಅನಿಲ ಕ್ಷಾಮ : ಜಿಲ್ಲಾ ಪಂಚಾಯತ್ ಕ್ಯಾಂಟೀನ್‌ನಲ್ಲಿ ಸೌದೆ ಉಪಯೋಗಿಸಿ ಪರಂಪರಾಗತ ಅಡುಗೆ

ಕಾಸರಗೋಡು: ಮಧ್ಯಪ್ರಾಚ್ಯದ ಯುದ್ಧದ ಪರಿಣಾಮವಾಗಿ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾಗಿರುವ ಸಮಸ್ಯೆ ತಾರಕಕ್ಕೇರುವ ಲಕ್ಷಣಗಳು ಗೋಚರಿಸುತ್ತಿದೆ. ಬೆಂಗಳೂರು, ಮಂಗಳೂರು ಮೊದಲಾದ ಪೇಟೆಗಳಲ್ಲಿ ವಾಣಿಜ್ಯ ಬಳಕೆಯ ಅಡುಗೆ ಅನಿಲ ಜಾಡಿಗಳು ಲಭ್ಯವಾಗದ ಹಿನ್ನೆಲೆಯಲ್ಲಿ ಹೋಟೆಲ್, ರೆಸ್ಟೋರೆಂಟ್‌ಗಳನ್ನು ಮುಚ್ಚುವ ಪರಿಸ್ಥಿತಿ ಉಂಟಾಗಿರುವ ಮಧ್ಯೆ ಕಾಸರಗೋಡು ಜಿಲ್ಲೆಯಲ್ಲೂ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್‌ಗೆ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕೆಲವು ಹೋಟೆಲ್ಗಳು ಸೌದೆ ಒಲೆಯತ್ತ ತಿರುಗಿವೆ. ಕಾಸರಗೋಡು ಜಿಲ್ಲಾ ಪಂಚಾಯತ್‌ನ ನೇತೃತ್ವದ ಕುಟುಂಬಶ್ರೀ ಕಫೆಯಲ್ಲಿ ನಿನ್ನೆಯಿಂದ ಅಡುಗೆ ಒಲೆಯಲ್ಲಿ ಮಾಡಲು ಆರಂಭಿಸಿದ್ದಾರೆ. …

ಗೂಂಡಾ ಆಕ್ಟ್ ಪ್ರಕಾರ ಹಲವು ಪ್ರಕರಣಗಳ ಆರೋಪಿ ಬಂಧನ

ಕಾಸರಗೋಡು: ಗೂಂಡಾ ಆಕ್ಟ್ ಪ್ರಕಾರ ಹಲವು ಪ್ರಕರಣಗಳ ಆರೋಪಿಯನ್ನು ವಿದ್ಯಾನಗರ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಎಸ್. ಅನೂಬ್ ಬಂಧಿಸಿದ್ದಾರೆ. ಮಧೂರು ಶಿರಿಬಾಗಿಲು ಬಿ.ಆರ್.ಎಂ. ಹೌಸ್‌ನ ಅಬೂಬಕರ್ ಸಿದ್ದಿಕ್ ಬಿ.ಎ (31) ಬಂಧಿತ ಆರೋಪಿ. ವಿದ್ಯಾನಗರ, ಕಾಸರಗೋಡು, ಬದಿಯಡ್ಕ ಮತ್ತು ಆದೂರು ಪೊಲೀಸ್ ಠಾಣೆಗಳಲ್ಲಿ ಈತನ ವಿರುದ್ಧ ಹಲವು ಕೇಸುಗಳಿವೆ. ಇದರಲ್ಲಿ ಮಾದಕದ್ರವ್ಯ ಪ್ರಕರಣಗಳೂ  ಒಳಗೊಂಡಿವೆಯೆಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿ ಈ ಹಿಂದೆ ಬಂಧಿತನಾಗಿ ಆರೋಪಿ ಕಾಸರಗೋಡು ಸಬ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ವೇಳೆ ಯಲ್ಲೇ ಆತನ …

ಮನೆಯಲ್ಲಿ ಫ್ಯಾನ್ ರಿಪೇರಿ ವೇಳೆ ದುರ್ಘಟನೆ: ಆಟೋ ಚಾಲಕ ಶಾಕ್ ತಗಲಿ ಮೃತ್ಯು; ನಾಡಿನಲ್ಲಿ ಶೋಕಸಾಗರ

ಪೆರ್ಲ: ಆಟೋ ಚಾಲಕನಾದ ಯುವಕ ವಿದ್ಯುತ್ ಶಾಕ್ ತಗಲಿ ಮೃತಪಟ್ಟ ದಾರುಣ ಘಟನೆಯಿಂದ ಪೆರ್ಲ ಹಾಗೂ ಪರಿಸರ ಪ್ರದೇಶಗ ಳಲ್ಲಿ ಶೋಕಸಾಗರ ಸೃಷ್ಟಿಸಿದೆ. ಪಡ್ರೆ ಪರ್ತಾಜೆ ಶಿವಗಿರಿ ಅಂಗನವಾಡಿ ಸಮೀಪದ ನಿವಾಸಿಯಾ ದ ಧನ್‌ರಾಜ್ (40) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮನೆಯ ಬೆಡ್‌ರೂಂನಲ್ಲಿ ಕಾರ್ಯಾಚರಿಸದ ಫ್ಯಾನ್ ರಿಪೇರಿ ಮಾಡುತ್ತಿದ್ದಾಗ ನಿನ್ನೆ ಮಧ್ಯಾಹ್ನ ೨.೩೦ರ ವೇಳೆ ದುರ್ಘಟನೆ ಸಂಭವಿಸಿದೆ. ಫ್ಯಾನ್ ರಿಪೇರಿ ವೇಳೆ ವಿದ್ಯುತ್ ಶಾಕ್ ತಗಲಿದೆ. ಇದರಿಂದ ತೀವ್ರ ಅಸ್ವಸ್ಥಗೊಂಡ ಧನ್‌ರಾಜ್‌ರನ್ನು ಕೂಡಲೇ ಆಸ್ಪತ್ರೆಗೆ ತಲುಪಿಸಿದರೂ  ಜೀವ …