ಮೃತದೇಹದ ಹೆಸರಲ್ಲಿ ರಾಜಕೀಯ ಲಾಭ ಗಳಿಸಲು ಮುಸ್ಲಿಂಲೀಗ್ ಪ್ರಯತ್ನಿಸುತ್ತಿರುವುದು ಖಂಡನೀಯ-ಎಂ.ಎಲ್. ಅಶ್ವಿನಿ
ಉಪ್ಪಳ: ಅಸೌಖ್ಯ ಬಾಧಿಸಿ ಕಲ್ಲಿಕೋಟೆ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಮೃತದೇಹದ ಹೆಸರಲ್ಲಿ ರಾಜಕೀಯ ಲಾಭ ಗಳಿಸಲು ಮುಸ್ಲಿಂಲೀಗ್ ಹಾಗೂ ಲೀಗ್ನ ಜನಪ್ರತಿನಿಧಿಗಳು ಪ್ರಯತ್ನಿಸುತ್ತಿರುವುದು ಖಂಡನೀಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ತಿಳಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಕುಟುಂಬದ ಸದಸ್ಯನ ಅಂತ್ಯ ಸಂಸ್ಕಾರದ ಖರ್ಚು ಭರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅದಕ್ಕಿರುವ ಅನುಮತಿಯನ್ನು ಜನಪ್ರತಿನಿಧಿಗಳಿಗೆ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಮೃತದೇಹದ ಅಂತ್ಯ ಸಂಸ್ಕಾರದ ಖರ್ಚು ವಹಿಸಿರು ವುದು, ಸಂಸ್ಕಾರ ಕಾರ್ಯಗಳಿಗೆ ನೇತೃತ್ವ ನೀಡಿರುವುದು ಸೇವಾಭಾರತಿಯಾಗಿದೆ …