ಒಂದಕ್ಕಿಂತ ಹೆಚ್ಚು ಮತದಾರ ಪಟ್ಟಿಯಲ್ಲಿ ಹೆಸರುಳ್ಳವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ-ಸುಪ್ರೀಂಕೋರ್ಟ್

ನವದೆಹಲಿ: ಒಂದಕ್ಕಿಂತ ಹೆಚ್ಚು ಮತದಾರ ಯಾದಿಯಲ್ಲಿ ಹೆಸರು ಹೊಂದಿದವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲವೆಂದು ಸ್ಪಷ್ಟಪಡಿಸಿ ಸುಪ್ರೀಂಕೋರ್ಟ್ ಮಹತ್ತರ ತೀರ್ಪು ನೀಡಿದೆ. ಒಂದಕ್ಕಿಂತ ಹೆಚ್ಚು ಮತದಾರ ಯಾದಿಯಲ್ಲಿ ಹೆಸರು ಹೊಂದಿರುವವರಿಗೆ ಸ್ಥಳೀಯಾಡಳಿತ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ತರಾಖಂಡ ಚುನಾವಣಾ  ಆಯೋಗ ಅನುಮತಿ ನೀಡಿ  ಅಧಿಸೂಚನೆ ಜ್ಯಾರಿಗೊಳಿಸಿತ್ತು. ಅದನ್ನು ಬಳಿಕ ಉತ್ತರಾಖಂಡ ಹೈಕೋರ್ಟ್ ರದ್ದುಪಡಿಸಿತ್ತು.  ಆ ತೀರ್ಪಿನ ವಿರುದ್ಧ ಉತ್ತರಾಖಂಡ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ ಮೇಲ್ಮನವಿ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಸಂದೀಪ್ ಮೆಹ್ತಾರನ್ನೊಳಗೊಂಡ ಸುಪ್ರೀಂಕೋರ್ಟ್‌ನ …

ಶಾಲಾ ಪರಿಸರದ ಅಂಗಡಿಗಳಲ್ಲಿ ತಪಾಸಣೆ : ನಾಲ್ಕು ಕಿಲೋ ತಂಬಾಕು ಉತ್ಪನ್ನ ವಶ

ಕುಂಬಳೆ: ವಿವಿಧೆಡೆಗಳಲ್ಲಿ ಶಾಲಾ ಪರಿಸರದ ವ್ಯಾಪಾರ ಸಂಸ್ಥೆಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ನಡೆಯುತ್ತಿದೆಯೆಂಬ ಮಾಹಿತಿಯಂತೆ ಅಬಕಾರಿ, ಆರೋಗ್ಯ ಇಲಾಖೆ ಅಧಿಕಾರಿಗಳು ಸಂಯುಕ್ತವಾಗಿ  ತಪಾಸಣೆ ನಡೆಸಿದ್ದಾರೆ. ಈ ವೇಳೆ ನಾಲ್ಕು ಕಿಲೋ ನಿಷೇಧಿತ ತಂಬಾಕು ಉತ್ಪನ್ನಗಳನ್ನು ಪತ್ತೆಹಚ್ಚಿ ವಶಪಡಿಸಲಾಗಿದೆ. ಈ ಸಂಬಂಧ  ಅಂಗಡಿ ಮಾಲಕನಿಂದ 3000 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.  ಕುಂಬಳೆ ಅಬಕಾರಿ ರೇಂಜ್ ಕಚೇರಿ ಹಾಗೂ ಮಂಜೇಶ್ವರ ಆರೋಗ್ಯ ಇಲಾಖೆ ಅಧಿಕಾರಿಗಳು ಸಂಯುಕ್ತವಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೊಸಂಗಡಿ, ಉದ್ಯಾವರ, ಕುಂಜತ್ತೂರು ಎಂಬಿಡೆಗಳ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಗಿದೆ. …

ಕಾರು-ಬೈಕ್ ಢಿಕ್ಕಿ ಇಬ್ಬರಿಗೆ ಗಾಯ

ಉಪ್ಪಳ: ಹೊಸಂಗಡಿ ಸರ್ವೀಸ್ ರಸ್ತೆಯಲ್ಲಿ ನಿನ್ನೆ ರಾತ್ರಿ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಗಾಯ ಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಆಸ್ಪತ್ರೆಯಲ್ಲಿ ದಾಖ ಲಿಸಲಾಗಿದೆ. ನಿನ್ನೆ ರಾತ್ರಿ 11.45 ರ ವೇಳೆ ಅಪಘಾತವುಂಟಾಗಿದೆ. ಹೊಸಂಗಡಿ ಭಾಗದಿಂದ ತಲಪಾಡಿಯತ್ತ ತೆರಳುತ್ತಿದ್ದ ಕಾರು ಹಾಗೂ ಎದುರು ಭಾಗದಿಂದ ಬರುತ್ತಿದ್ದ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಅಪಘಾತವುಂಟಾಗಿದೆ. ಗಾಯಗೊಂಡವರ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆಯೆಂದು ಮಂಜೇಶ್ವರ ಪೊಲೀಸರು ತಿಳಿಸಿದ್ದಾರೆ.

ಓಣಂ ಬಂಪರ್ ಡ್ರಾ ಅ. 4ಕ್ಕೆ ಮುಂದೂಡಿಕೆ

ತಿರುವನಂತಪುರ: ಇಂದು ನಡೆಯಬೇಕಾಗಿದ್ದ ಓಣಂ ಬಂಪರ್ ಲಾಟರಿಯ ಡ್ರಾವನ್ನು ಅಕ್ಟೋಬರ್ 4ಕ್ಕೆ ಮುಂದೂಡಲಾಗಿದೆ. ಜಿಎಸ್‌ಟಿಯಲ್ಲಿ ಕೈಗೊಳ್ಳಲಾಗಿ ರುವ ಸುಧಾರಣಾ ಕ್ರಮ, ಮಳೆ, ಹವಾಮಾನ ವೈಪರೀತ್ಯ ಇತ್ಯಾದಿ ಕಾರಣಗಳಿಂದಾಗಿ ಲಾಟರಿ ಟಿಕೆಟ್ ಮಾರಾಟವನ್ನು ಪೂರ್ತೀಕರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಡ್ರಾವನ್ನು ಮುಂದೂಡಬೇಕೆಂದು  ಲಾಟರಿ ಟಿಕೆಟ್ ಮಾರಾಟ ಏಜೆನ್ಸಿಗಳು ಮತ್ತು  ಮಾರಾಟಗಾರರು ಆಗ್ರಹಪಟ್ಟಿದ್ದರು. ಅದನ್ನು ಪರಿಗಣಿಸಿ ಇಂದು ನಡೆಯಬೇಕಾಗಿದ್ದ ಡ್ರಾವನ್ನು ಹಣಕಾಸು ಇಲಾಖೆ ಅ. ೪ಕ್ಕೆ ಮುಂದೂಡಿದೆ.

ಅಂಗಡಿಯ ಗೋಡೆ ಕೊರೆದು ಮೂರು ಗೋಣಿ ಚೀಲ ಕಾಳುಮೆಣಸು ಕಳವು

ಕಾಸರಗೋಡು: ಕಾಡುತ್ಪನ್ನ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಮೂರು ಗೋಣಿ ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಒಂದೂವರೆ ಕ್ವಿಂಟಾಲ್ ಕಾಳುಮೆಣ ಸನ್ನು ಕಳವುಗೈದ ಘಟನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ರಾಷ್ಟ್ರೀಯ ಹೆದ್ದಾರಿ ಬಳಿ ಕಾರ್ಯವೆಸಗುತ್ತಿರುವ ವೆಳ್ಳಿಕ್ಕೋತ್ ನಿವಾಸಿ ಬಿ. ಗುರುದತ್ತ್ ಪ್ರಭು ಎಂಬವರ ಆರ್ಯ ದುರ್ಗಾ ಟ್ರೇಡರ್ಸ್ ಎಂಬ ಅಂಗಡಿಯಲ್ಲಿ ಈ ಕಳವು ನಡೆದಿದೆ.  ಮಾಲಕ ನಿನ್ನೆ ಬೆಳಿಗ್ಗೆ ಅಂಗಡಿ ಬಾಗಿಲು ತೆಗೆಯಲು ಬಂದಾಗ ಕಳವು ನಡೆದ ವಿಷಯ ಅವರ ಗಮನಕ್ಕೆ ಬಂದಿದೆ. ಒಂದು ಲಕ್ಷ ರೂಪಾಯಿ ಮೌಲ್ಯದ …

ಕುಂಬಳೆ ಪೇಟೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ: ವಿಜಿಲೆನ್ಸ್‌ನಿಂದ ತನಿಖೆ

ಕುಂಬಳೆ: ಕುಂಬಳೆ ಪೇಟೆಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಅದಕ್ಕೆ ಪಂಚಾಯತ್ ಆಡಳಿತ ಸಮಿತಿ ಒತ್ತಾಸೆ ನೀಡುತ್ತಿದೆ ಎಂಬ ಆರೋಪದ ಕುರಿತು ವಿಜಿಲೆನ್ಸ್ ತನಿಖೆ ಆರಂಭಗೊಂಡಿದೆ. ವಿಜಿಲೆನ್ಸ್ ಡಿವೈಎಸ್‌ಪಿ ನೇತೃತ್ವದಲ್ಲಿ ಪಂಚಾಯತ್ ಕಚೇರಿಗೆ ತಲುಪಿದ ವಿಜಿಲೆನ್ಸ್ ತಂಡ ಕಟ್ಟಡನಿರ್ಮಾಣ ಹಾಗೂ ಅದಕ್ಕೆ ಪಂಚಾಯತ್ ನೀಡಿದ ಅನುಮತಿಯ ಕುರಿತಾದ ಕಡತಗಳನ್ನು ಪರಿಶೀಲಿಸಿದೆ. ಮಾತ್ರವಲ್ಲದೆ ಹೆಚ್ಚಿನ ತನಿಖೆಗೆ ಅಗತ್ಯವುಳ್ಳ ಕಡತಗಳನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಆರೋಪಕ್ಕೆಡೆಯಾದ ಕುಂಬಳೆ ಪೇಟೆಯ ಕೆಲವು ಕಟ್ಟಡಗಳನ್ನು ಅಳತೆ ಮಾಡಿ ವಿಜಿಲೆನ್ಸ್ ತಂಡ ಪರಿಶೀಲಿಸಿದೆ. ಕುಂಬಳೆ ಪಂಚಾಯತ್ …

ಒಂಭತ್ತು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ

ತಿರುವನಂತಪುರ: ಅತಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಸಹಿತ 9 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ಘೋಷಿಸಿದೆ. ಕಾಸರಗೋಡು, ಕಣ್ಣೂರು, ವಯನಾಡು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಅತಿ ತೀವ್ರ ಮಳೆಯ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಎರ್ನಾಕುಲಂ, ಇಡುಕ್ಕಿ, ತ್ರಿಶೂರು, ಪಾಲಕ್ಕಾಡ್, ಮಲಪ್ಪುರಂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯ ಜತೆ ಭಾರೀ ಬಿರುಗಾಳಿ, ಸಿಡಿಲು, ಮಿಂಚು ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಇಂದು ಕೇರಳ, ಕರ್ನಾಟಕ ಸಮುದ್ರದಲ್ಲಿ ಮೀನುಗಾರಿಕೆ ನಿಷೇಧಿಸಲಾಗಿದೆ

ಮಂಜೇಶ್ವರ ಚುನಾವಣಾ ತಕರಾರು ಪ್ರಕರಣ: ಜಿಲ್ಲಾ ಸೆಶನ್ಸ್ ನ್ಯಾಯಾಲಯ ನೀಡಿದ ತೀರ್ಪಿನ ವಿರುದ್ಧ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ರಾಜ್ಯ ಸರಕಾರ

ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರಕ್ಕೆ 2021ರಲ್ಲಿ ನಡೆದ ಚುನಾವಣೆಯಲ್ಲಿ ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ಹಣ ಹಾಗೂ ಮೊಬೈಲ್ ಫೋನ್ ನೀಡಿ ಅವರ ನಾಮಪತ್ರ ವನ್ನು ಹಿಂತೆಗೆದುಕೊಳ್ಳುವಂತೆ ಮಾಡಲಾಗಿದೆಯೆಂದು ಆರೋಪಿಸಿ ನೀಡಲಾದ ದೂರಿನಂತೆ ಪೊಲೀಸರು ದಾಖಲಿಸಿಕೊಂಡಿದ್ದ ಕೇಸನ್ನು ರದ್ದುಪಡಿಸಿ ಕಾಸರಗೋಡು ಜಿಲ್ಲಾ ಸೆಶನ್ಸ್ ನ್ಯಾಯಾಲಯ  ನೀಡಿದ್ದ ತೀರ್ಪಿನ ವಿರುದ್ಧ ಕೇರಳ ಸರಕಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ. ಅಂದು ಬಿಎಸ್‌ಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಕೆ. ಸುಂದರರಿಗೆ ಎರಡು ಲಕ್ಷ ರೂ. ಹಾಗೂ 8,300 ರೂ. ಮೌಲ್ಯದ ಮೊಬೈಲ್ …

ಮುಖ್ಯಮಂತ್ರಿ ಕೋಮು ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿದ್ದಾರೆ-ಮುಲ್ಲಪ್ಪಳ್ಳಿ

ಕಾಸರಗೋಡು: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ರಾಜ್ಯದಲ್ಲಿ ಕೋಮು ಧ್ರುವೀಕರಣಕ್ಕೆ ಪ್ರಯತ್ನಿಸುತ್ತಿದ್ದಾರೆಂದು ಕಾಂಗ್ರೆಸ್ ನೇತಾರ ಮುಲ್ಲಪಳ್ಳಿ ರಾಮಚಂದ್ರನ್ ಆರೋಪಿಸಿದ್ದಾರೆ. ಮೂರನೇ ಬಾರಿಯೂ ಅಧಿಕಾರಕ್ಕೇರ ಬಹುದೆಂಬ ವ್ಯಾಮೋಹದಿಂದ ಬಹುಸಂಖ್ಯಾತ ಕೋಮುವಾದವನ್ನು ಪ್ರೋತ್ಸಾಹಿಸುತ್ತಿರುವುದಾಗಿಯೂ ಅವರು ಆರೋಪಿಸಿದರು. ಕಾಂಗ್ರೆಸ್ ನೇತಾರನಾಗಿದ್ದ ಕೆ.ಪಿ.ಕುಂಞಿ ಕಣ್ಣನ್‌ರ ಪ್ರಥಮ ಸಂಸ್ಮರಣಾ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಯುವತಿಯರನ್ನು ಶಬರಿಮಲೆಗೆ ಪ್ರವೇಶಿಸಲು ಮುಂದಾದ ವ್ಯಕ್ತಿಯೇ  ಜಾಗತಿಕ ಅಯ್ಯಪ್ಪ ಸಂಗಮ ನಡೆಸುತ್ತಿರುವುದರ ಪ್ರಾಧಾನ್ಯತೆಯೇ ನೆಂದೂ  ಮುಲ್ಲಪ್ಪಳ್ಳಿ ಪ್ರಶ್ನಿಸಿದರು. ಕೋಮು ಧ್ರುವೀಕ ರಣದ ವಿಷಯ ದಲ್ಲಿ ಪಿಣರಾಯಿ  ಹಾಗೂ ಮೋದಿ ಸಮಾನರು …

ಮೌಲ್ಯಗಳನ್ನರಿತು ನಡೆಸುವ ಆಚರಣೆಗಳು ಬೇಕು-ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ

ಕಾಸರಗೋಡು: ಭಾರತೀಯ ಸಂಸ್ಕೃತಿಯ ಪ್ರತಿಯೊಂದು ಆಚರಣೆಗಳ ಹಿಂದೆಯೂ ಜೀವನ ಮೌಲ್ಯಗಳು, ಬದುಕಿನ ಶ್ರೇಯಸ್ಸ್ಸಿನ ಶಕ್ತಿ ಅಡಗಿದೆ. ಬಹು ವೈಶಿಷ್ಟ್ಯದ ನಮ್ಮ ಸಂಸ್ಕೃತಿ ನಮ್ಮ ಪ್ರತಿಬಿಂಬಗಳಾಗಿದ್ದು, ಸಂಸ್ಕೃತಿಯನ್ನು ತಿರುಚಿ ವಿಕೃತಗೊಳಿಸುವುದರಿಂದ ನಮ್ಮ ಅವನತಿಗೆ ನಾವೇ ಕಾರಣರಾಗುತ್ತಿದ್ದೇವೆ ಎಂದು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಆಶೀರ್ವಚನ ನೀಡಿದರು. ಕೋಟೆಕಣಿ ಶ್ರೀ ರಾಮನಾಥ ಸಾಂಸ್ಕೃತಿಕ ಭವನ ಸಮಿತಿಯು ಪೇಟೆ ಶ್ರೀ ವೆಂಕಟ್ರಮಣ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಕಲಾಸಂಘದ ಆಶ್ರಯದಲ್ಲಿ ಕಾಸರಗೋಡು ಪೇಟೆ ವೆಂಕಟ್ರಮಣ ದೇವಾಲಯದ ವ್ಯಾಸಮಂಟಪದಲ್ಲಿ ಆಯೋಜಿಸಿದ್ದ ಕಾಸರಗೋಡು ದಸರಾ ಕಾರ್ಯಕ್ರಮವನ್ನು …