ಕೊಲೆಗೀಡಾದ ಬಿ.ಕೆ. ಸುರೇಶ್ರಿಗೆ ನಾಡಿನ ಅಂತಿಮ ನಮನ
ಮಾರ್ಪನಡ್ಕ: ಕುಂಬ್ಡಾಜೆ ಬೆದ್ರಕೂಡ್ಲು ನಿವಾಸಿ, ಎಸ್ಸಿ ಮೋರ್ಚಾ ಜಿಲ್ಲಾ ಸಮಿತಿ ಸದಸ್ಯ, ಎಸ್ಸಿ ಮೋರ್ಚಾ ಬದಿಯಡ್ಕ ಮಂಡಲ ಮಾಜಿ ಅಧ್ಯಕ್ಷ ಬಿ.ಕೆ. ಸುರೇಶ್ರಿಗೆ ಭಾರೀ ಜನಸಂದಣಿಯ ಮೂಲಕ ಬಿಜೆಪಿ ಜಿಲ್ಲಾ ಸಮಿತಿ ಅಂತಿಮ ನಮನ ಸಲ್ಲಿಸಿದೆ. ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್, ರಾಷ್ಟ್ರೀಯ ಕೌನ್ಸಿಲ್ ಸದಸ್ಯ ಎಂ. ಸಂಜೀವ ಶೆಟ್ಟಿ, ಆರ್ಎಸ್ಎಸ್ ಕಾಸರಗೋಡು ಜಿಲ್ಲಾ ಸಂಘ ಚಾಲಕ್ ಪ್ರಭಾಕರನ್, ಜಿಲ್ಲಾ ಕಾರ್ಯವಾಹ್ ಪವಿತ್ರನ್ ಕೆ.ಕೆ.ಪುರ, ಬಿಜೆಪಿ ವಲಯ ಪ್ರಧಾನ ಕಾರ್ಯದರ್ಶಿ ಸುಧಾಮ ಗೋಸಾಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ …