ಕುಂಬಳೆಯಲ್ಲಿ ಐಕ್ಯರಂಗದ ನವಯುಗ ಯಾತ್ರೆಗೆ ಅದ್ಧೂರಿ ಚಾಲನೆ: ಐಕ್ಯರಂಗ ಅಧಿಕಾರಕ್ಕೇರಿದರೆ ದೇವಸ್ಥಾನ ಕಳ್ಳರನ್ನು ಸೆರೆ ಹಿಡಿಯಲಾಗುವುದು- ಕೆ.ಸಿ. ವೇಣುಗೋಪಾಲನ್

ಕುಂಬಳೆ: ವಿಧಾನಸಭಾ ಚುನಾವಣೆ ಯಲ್ಲಿ ಐಕ್ಯರಂಗ ಅಧಿಕಾರಕ್ಕೇರಿದರೆ ದೇವಸ್ಥಾನ ಕಳ್ಳರನ್ನು ಸೆರೆ ಹಿಡಿಯುವುದೇ ಪ್ರಥಮ ಕಾರ್ಯವೆಂದು ಎಐಸಿಸಿ ಜನರಲ್ ಸೆಕ್ರೆಟರಿ, ಸಂಸದ ಕೆ.ಸಿ. ವೇಣುಗೋಪಾಲ್ ನುಡಿದರು.  ಕುಂಬಳೆಯಲ್ಲಿ ಐಕ್ಯರಂಗದ ನವಯುಗ ಯಾತ್ರೆ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಜಾಥಾ ನಾಯಕ ವಿ.ಡಿ. ಸತೀಶನ್‌ರಿಗೆ ಐಕ್ಯರಂಗದ ಘಟಕ ಪಕ್ಷಗಳ ಪತಾಕೆಗಳು ಒಳಗೊಂಡ ಧ್ವಜವನ್ನು ಹಸ್ತಾಂತರಿಸಿ ಅವರು ಉದ್ಘಾಟನೆ ನೆರವೇರಿಸಿದರು. ಯಾತ್ರೆ ಮಾರ್ಚ್ 7ರಂದು ತಿರುವನಂತಪುರದಲ್ಲಿ ಸಮಾಪ್ತಿಗೊಳ್ಳುವಾಗ ರಾಜ್ಯದ ಎಡರಂಗ ಸರಕಾರ ಹೊರ ಹೋಗುವುದರ ರಣಕಹಳೆ ಮೊಳಗಲಿದೆ. ಪಿಣರಾಯಿ ವಿಜಯನ್ ಸರಕಾರ …

ಬಿಸಿಲಲ್ಲಿ ಬೆವರಿಳಿಸಿ ಬಸ್‌ಗಾಗಿ ಕಾಯಬೇಕಾಗುತ್ತಿದೆ ಹೊಸಂಗಡಿಯಲ್ಲಿ ತಂಗುದಾಣವಿಲ್ಲದೆ ಸಮಸ್ಯೆ

ಮಂಜೇಶ್ವರ: ಕಾಸರಗೋಡಿ ನಿಂದ ಮಂಗಳೂರು ಕಡೆಗೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಹೊಸಂಗಡಿ ಯಲ್ಲಿ ಬಸ್ ತಂಗುದಾಣ ನಿರ್ಮಿಸದೇ ಇರುವುದರಿಂದ ಪ್ರಯಾಣಿಕರು ಬಿಸಿ ಲಲ್ಲೇ ಬಸ್‌ಗೆ ಕಾಯುವ ಪರಿಸ್ಥಿತಿ ಉಂಟಾಗಿದೆ. ಹೆದ್ದಾರಿ ಹಾಗೂ ಸರ್ವೀಸ್ ರಸ್ತೆಯ ಕಾಮಗಾರಿ ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದರೂ ಹೊಸಂಗಡಿ ಪೇಟೆಯಲ್ಲಿ ಮಂ ಗಳೂರು ಭಾಗಕ್ಕೆ ತೆರಳುವ ಸರ್ವೀಸ್ ರಸ್ತೆಯಲ್ಲಿ ಇನ್ನೂ ಬಸ್ ತಂಗುದಾಣ ನಿರ್ಮಿಸದಿರುವುದು ಸಾರ್ವಜನಿಕರಿಗೆ ಸಮಸ್ಯೆಯಾಗಿದೆ. ಆನೆಕಲ್ಲು, ಮೀಯಪದವು, ಬಂಗ್ರಮAಜೇಶ್ವರ ಮೊದಲಾದ ಪ್ರದೇಶಗಳಿಂದ ದಿನನಿತ್ಯ ನೂರಾರು ಮಂದಿ ಮಂಗಳೂರಿಗೆ ತೆರ ಳಲು ಬಸ್‌ಗಾಗಿ …

ನಿವೃತ್ತ ಅಧ್ಯಾಪಕ ನಿಧನ

ನೀರ್ಚಾಲು: ಮಾನ್ಯ ಕಾರ್ಮಾರು ನಿವಾಸಿ ನಿವೃತ್ತ ಅಧ್ಯಾಪಕ, ಕೃಷಿಕ ಕಾರಿಂಜ ವೆಂಕಪ್ಪ ಶೆಟ್ಟಿ (94) ನಿಧನ ಹೊಂದಿದರು. ಎಡನೀರು, ಕಡಂಬಳ ಸಹಿತ ಹಲವಾರು ಶಾಲೆಗಳಲ್ಲಿ ಅಧ್ಯಾಪಕನಾಗಿದ್ದರು. ಇವರ ಪತ್ನಿ ರತ್ನಾವತಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ವಿಶಾಲಾಕ್ಷಿ, ವಿನುತ, ವಿನೋದಿನಿ, ಅಳಿಯಂದಿರಾದ ಮಹಾಬಲ, ಪ್ರಸನ್ನ, ಸುಧೀರ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ಆಟೋರಿಕ್ಷಾ ಮಜ್ದೂರ್ ಸಂಘ ಚೌಕಿ ಯೂನಿಟ್ ಸಮ್ಮೇಳನ

ಕಾಸರಗೋಡು: ಆಟೋ ರಿಕ್ಷಾ ಮಜ್ದೂರ್ ಸಂಘ ಬಿಎಂಎಸ್ ಚೌಕಿ ಘಟಕ ಸಮ್ಮೇಳನ ಕಾವುಗೋಳಿ ಶ್ರೀ ಶಿವದೇವಸ್ಥಾನದಲ್ಲಿ ನಡೆಯಿತು. ಯೂನಿಟ್ ಅಧ್ಯಕ್ಷ ದಯಾನಂದ ಅಧ್ಯಕ್ಷತೆ ವಹಿಸಿದರು. ಬಿಎಂಎಸ್ ಮಧೂರು ಮಂಡಲ ಅಧ್ಯಕ್ಷ ವಸಂತ ನಾಯ್ಕ್ ಕೊರುವೈಲು ದೀಪ ಬೆಳಗಿಸಿ ಉದ್ಘಾಟಿಸಿದರು. ಜಿಲ್ಲಾ ಸಮಿತಿ ಜೊತೆ ಕಾರ್ಯದರ್ಶಿ ಗುರುದಾಸ್ ಮಧೂರು ಶುಭ ಕೋರಿದರು. ಆಟೋರಿಕ್ಷಾ ಮಜ್ದೂರ್ ಸಂಘದ ಜಿಲ್ಲಾ ಉಪಾಧ್ಯಕ್ಷ ಉಮೇಶ್ ಪ್ರಸ್ತಾವಿಸಿದರು. ಮಧೂರು ಪಂಚಾಯತ್ ೨೪ನೇ ವಾರ್ಡ್‌ನಿಂದ ಪಂ. ಸದಸ್ಯನಾಗಿ ಆಯ್ಕೆಯಾದ ಆಟೋಚಾಲಕ ನವನೀತ್ ರೈ ಕಜೆ ಅವರನ್ನು …

ಸಮಸ್ತದ 100ನೇ ವಾರ್ಷಿಕಾಚರಣೆ: ನಾಳೆ ಜಿಲ್ಲೆಯಲ್ಲಿ ಸಾರಿಗೆ ಸಂಚಾರದಲ್ಲಿ ವ್ಯತ್ಯಯ

ಕಾಸರಗೋಡು: ಸಮಸ್ತದ 100ನೇ ವಾರ್ಷಿಕಾಚರಣೆ ಯಂಗವಾಗಿ ನಾಳೆ ಕಾಸರಗೋಡು ಜಿಲ್ಲೆಯಲ್ಲಿ ಸಾರಿಗೆ ವ್ಯತ್ಯಯ ಏರ್ಪಡಿಸಿರುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಕಣ್ಣೂರು ಭಾಗದಿಂದ ಕಾಸರಗೋಡು ಭಾಗಕ್ಕೆ ಆಗಮಿಸುವ ಹೆವಿ ವಾಹನಗಳು ತಳಿಪರಂಬ ಮೂಲಕ ಮಲೆನಾಡು ಹೆದ್ದಾರಿಯಲ್ಲಾಗಿ ಸಾಗಬೇಕಾಗಿದ್ದು, ಮಂಗಳೂರಿನಿಂದ ಬರುವ ವಾಹನಗಳು ಕುಂಬಳೆ ಭಾಗದಿಂದ ಮಲೆನಾಡು ಹೆದ್ದಾರಿ ಮೂಲಕ ಸಾಗಬೇಕಾಗಿದೆ. ಕಾರ್ಯಕ್ರಮಕ್ಕೆ ತೆರಳುವ ವಾಹನಗಳು ಪೆರಿಯ, ಪೊಯಿನಾಚಿ ಎಂಬೆಡೆಗಳಿಂದ ಸರ್ವೀಸ್ ರಸ್ತೆ ಮೂಲಕ ಬಂದು ಜನರನ್ನು ಇಳಿಸಿ ಪಾರ್ಕಿಂಗ್ ಏರಿಯಾಕ್ಕೆ ತೆರಳಬೇಕಾಗಿದೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ವ್ಯಕ್ತಿಗಳು ಸರ್ವೀಸ್ …

ಅಂಗನವಾಡಿಯಿಂದ ಕಳವುಗೈದ ಆರೋಪಿ ಮಂಜೇಶ್ವರ ಪೊಲೀಸರಿಂದ ಬಂಧನ: ಇಂದು ನ್ಯಾಯಾಲಯಕ್ಕೆ

ಉಪ್ಪಳ: ಮಣ್ಣಂಗುಳಿ ಮೈದಾನ ಸಮೀಪದ ಅಂಗನವಾಡಿಗೆ ನುಗ್ಗಿ ಹಲವಾರು ಸಾಮಗ್ರಿಗಳನ್ನು ಕಳವುಗೈದ ಪ್ರಕರಣದಲ್ಲಿ ಓರ್ವನನ್ನು ದೂರು ಲಭಿಸಿದ 24 ಗಂಟೆಗಳೊಳಗೆ ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಕರ್ನಾಟಕ ನೆಲ್ಯಾಡಿ ಕೊಕ್ಕಡ ನಿವಾಸಿ, ಪ್ರಸ್ತುತ ಮಣ್ಣಂಗುಳಿ ಪರಿಸರದಲ್ಲಿ ಬಾಡಿಗೆ ಕ್ವಾರ್ಟರ್ಸ್‌ನಲ್ಲಿ ವಾಸವಾಗಿರುವ ಅಶ್ರಫ್ (55)ನನ್ನು ನಿನ್ನೆ ಸಂಜೆ ಉಪ್ಪಳದಿಂದ ಮಂಜೇಶ್ವರ ಪೊಲೀಸರು ಸೆರೆಹಿಡಿದಿದ್ದಾರೆ. ಈತನನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಈತನ ವಿರುದ್ಧ ಮಂಜೇಶ್ವರ  ಠಾಣೆಯಲ್ಲಿ ೩ ಹಾಗೂ ಕುಂಬಳೆ ಠಾಣೆಯಲ್ಲಿ ಒಂದು ಕಳವುಕೇಸು ದಾಖಲಾಗಿದೆ. 2025 ಮೇ ತಿಂಗಳಲ್ಲಿ …

ಯುವ ನಟಿ ಅಂಜುಕೃಷ್ಣ  ಸಹಿತ ಎಂಟು ಮಂದಿ ಮಾದಕಪದಾರ್ಥದೊಂದಿಗೆ ಸೆರೆ

ಚೆನ್ನೈ: ಯುವ ನಟಿ ಅಂಜು ಕೃಷ್ಣ ಹಾಗೂ ಸಹಾಯಕ ನಿರ್ದೇಶಕ ವಿನ್ಸಿ ನಿವೇದ್ ಸಹಿತದ 8 ಮಂದಿ ಚೆನ್ನೈಯಲ್ಲಿ ಮಾದಕಪದಾರ್ಥ ದೊಂದಿಗೆ ಸೆರೆಯಾಗಿದ್ದಾರೆ. ಚೆನ್ನೈ ಪೊಲೀಸರ ಆಂಡ್ ನಾರ್ಕೋ ಟಿಕ್ ಇಂಟೆಲಿಜೆನ್ಸ್ ಘಟಕ ನಡೆಸಿದ  ಕಾರ್ಯಾಚರಣೆಂiiಲ್ಲಿ ತಂಡ ಸೆರೆಯಾಗಿದೆ. ಮೆಥಾಫೆಟಾ ಮಿನ್, ಎಲ್‌ಎಸ್‌ಡಿ ಸ್ಟ್ಯಾಂಪ್ ಗಳು, ಗಾಂಜಾ ಮೊದಲಾದ ಮಾದಕಪದಾ ರ್ಥಗಳು ಇವರ ಕೈವಶವಿತ್ತೆಂದು ಆಂಟಿ ನಾರ್ಕೋಟಿಕ್ ಇಂಟೆಲಿಜೆನ್ಸ್ ಘಟಕ ತಿಳಿಸಿದೆ. ನೆಶಪ್ಪಾಕಂ ನಿವಾಸಿ ವಿಘ್ನೇಶ್ವರನ್ ಎಂಬಾತನನ್ನು  ಮಾದಕಪದಾರ್ಥ ದೊಂದಿಗೆ ಪ್ರಥಮವಾಗಿ ಸೆರೆಹಿಡಿಯಲಾಗಿತ್ತು. ಈತನನ್ನು ಪ್ರಶ್ನಿಸಿದಾಗ ನಟಿ …

ನಾಯ್ಕಾಪು ನ್ಯಾಯವಾದಿಯ ಮನೆಯಿಂದ ಕಳವುಗೈದ ಆರೋಪಿ ಪೊಲೀಸ್ ಕಸ್ಟಡಿಗೆ

ಕುಂಬಳೆ: ನಾಯ್ಕಾಪು ನಿವಾಸಿ ನ್ಯಾಯವಾದಿ ಚೈತ್ರಾರ ಮನೆಯಿಂದ 29 ಪವನ್ ಚಿನ್ನ ಹಾಗೂ 25 ಸಾವಿರ ರೂ.  ಮೌಲ್ಯದ ಬೆಳ್ಳಿ ಹಾಗೂ ಐದು ಸಾವಿರ ರೂ. ಕಳವುಗೈದ ಪ್ರಕರಣದ ಆರೋಪಿ ಇಬ್ರಾಹಿಂ ಕಲಂದರ್‌ನನ್ನು ಕುಂಬಳೆ ಎಸ್‌ಐಯ ಕಸ್ಟಡಿಗೆ ಬಿಟ್ಟುಕೊಡಲಾಗಿದೆ. ಕಳವುಗೈದ ಚಿನ್ನ ಪತ್ತೆಹಚ್ಚಲು ಹಾಗೂ ಇದರಲ್ಲಿ ಇತರ ಆರೋಪಿಗಳಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲು ಆರೋಪಿಯನ್ನು ಕಸ್ಟಡಿಗೆ ನೀಡಬೇಕೆಂದು ಆಗ್ರಹಿಸಿ ಎಸ್‌ಐ  ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. ಇದರಂತೆ ಈತನನ್ನು ನಾಲ್ಕು ದಿನಕ್ಕೆ ಕಸ್ಟಡಿಗೆ ನೀಡಲಾಗಿದೆ. ಜನವರಿ 18ರಂದು …

ಚಿನ್ಮಯ ಅಮೃತ ಮಹೋತ್ಸವ: ವಿವಿಧ ಕಾರ್ಯಕ್ರಮ ನಾಳೆ

ಕಾಸರಗೋಡು:  ಚಿನ್ಮಯ ಮಿಷನ್‌ನ 25ನೇ ವಾರ್ಷಿಕವನ್ನು ಅಮೃತ ಮಹೋತ್ಸವವಾಗಿ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಗುವುದು. ನಾಳೆ ವಿದ್ಯಾನಗರ ಕ್ಯಾಂಪಸ್‌ನಲ್ಲಿ ಸಾಮೂಹಿಕ ಹನುಮಾನ್ ಚಾಲೀಸ ಹವನ, ಭಗವದ್ಗೀತೆ ಸಮೂಹ ಪಾರಾಯಣ, ಚಿನ್ಮಯ ಮಿಷನ್ ನಿರ್ಮಿಸಿ ನೀಡುವ ೯ನೇ ಮನೆಯ ಕೀಲಿ ಕೈ ಹಸ್ತಾಂತರ, ಚಿನ್ಮಯ ಅಮೃತಯಾತ್ರ ಸ್ವಾಗತ ಕಾರ್ಯಕ್ರಮ ಎಂಬಿವು ನಡೆಯಲಿದೆ. ಚಿನ್ಮಯ ಮಿಷನ್‌ನ ೭೫ನೇ ವಾರ್ಷಿಕವನ್ನು ವಿಶ್ವದಾದ್ಯಂತ ಆಚರಿಸುವುದರಂಗವಾಗಿ ಜಿಲ್ಲೆಯಲ್ಲಿ ಕಾಸರಗೋಡು, ಬದಿಯಡ್ಕ, ಪೊಯಿನಾಚಿ, ಕಾಞಂಗಾಡ್, ನೀಲೇಶ್ವರ ಕೇಂದ್ರಗಳು ಜಂಟಿಯಾಗಿ ನಾಳೆ ವಿದ್ಯಾನಗರ ಚಿನ್ಮಯ ವಿದ್ಯಾಲಯದಲ್ಲಿ ಕಾರ್ಯಕ್ರಮ …

ಜೀವಕ್ಕೆ ಕಾವಲು ನಿಂತ ನಾಡಿಗೆ ಕಣ್ಣೀರು ತರಿಸಿ ಇಹಲೋಕ ತ್ಯಜಿಸಿದ ರಿಷಾದ್

ಬದಿಯಡ್ಕ: ಜನ್ಮತಃ ಹೃದಯ ಸಮಸ್ಯೆಯಿದ್ದ ರಿಷಾದ್ (21) ನಿಧನ ಹೊಂದಿದರು. ಬದಿಯಡ್ಕ ಪಳ್ಳತ್ತಡ್ಕದ ಮುಹಮ್ಮದ್- ದೈನಾಬಿ ದಂಪತಿಯ ಪುತ್ರನಾಗಿದ್ದಾರೆ. ರಂಧ್ರವಿರುವ ಹೃದಯದೊಂದಿಗೆ ರಿಷಾದ್ ಜನಿಸಿದ್ದರು. 10 ವರ್ಷದವರೆಗೆ ಮಗುವಿನ ಶರೀರ ಪ್ರಕೃತಿ ರಿಷಾದ್‌ರಿಗಿತ್ತು. ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬ ಮಂಗಳೂರಿನ ಆಸ್ಪತ್ರೆಯಲ್ಲಿ ನಡೆಸಿದ ಶಸ್ತ್ರಚಿಕಿತ್ಸೆಯ ಬಳಿಕ ಆರೋಗ್ಯ ಸ್ಥಿತಿಯಲ್ಲಿ ಮತ್ತಷ್ಟು ಸಮಸ್ಯೆ ಕಂಡು ಬಂತು. ಎರಡೂವರೆ ಲಕ್ಷ ರೂ. ವೆಚ್ಚ ಮಾಡಿ ಶಸ್ತ್ರಚಿಕಿತ್ಸೆ ಮಾಡಿದರೆ ರಿಷಾದ್‌ರ ಜೀವ ಉಳಿಸಬಹುದೆಂದು ಕೊಚ್ಚಿ ಅಮೃತ ಆಸ್ಪತ್ರೆಯ ಡಾಕ್ಟರ್‌ಗಳು ತಿಳಿಸಿದ್ದರು. ಆದರೆ ಬದುಕಿನ …