ಮರಬಿದ್ದು ಮನೆ ಹಾನಿಗೊಂಡು ಸಂಕಷ್ಟದಲ್ಲಿದ್ದ ದಂಪತಿಗೆ ಕಲ್ಕಿ ಮಂಜೇಶ್ವರ ಸಹಾಯಹಸ್ತ

ಮಂಜೇಶ್ವರ: ಇತ್ತೀಚೆಗೆ ಸುರಿದ ಭಾರೀ ಮಳೆಯಿಂದಾಗಿ ಹೊಸಂಗಡಿ ಬಳಿಯ ಮಜಿಬೈಲು ನಿವಾಸಿ ಕೇಶವ ಹಾಗೂ ಲಲಿತಾ ದಂಪತಿಯ ಹೆಂಚು ಹಾಸಿದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿಯುಂಟಾಗಿದ್ದು, ಈ ಸಂಕಷ್ಟದ ಸಂದರ್ಭದಲ್ಲಿ ಕಲ್ಕಿ ಮಂಜೇಶ್ವರ ತಂಡ ಸ್ಪಂದಿಸಿ ಮನೆ ದುರಸ್ತಿ ಕಾರ್ಯಕ್ಕೆ ನೆರವಾಗಿ ಮಾನವೀಯತೆ ಮೆರೆದಿದೆ. ಸುಮಾರು 7೦,೦೦೦ ರೂ. ವೆಚ್ಚದಲ್ಲಿ ದುರಸ್ತಿ ಕಾರ್ಯ ನೆರವೇರಿದ್ದು, ಈ ಮಹತ್ಕಾರ್ಯಕ್ಕೆ ಟೀಮ್‌ನ ಸಹೃದಯಿ ದಾನಿಗಳು ಹಾಗೂ ಚಕ್ರವರ್ತಿ ಹೊಸಂಗಡಿ ಸಂಸ್ಥೆ ಸಹಕರಿಸಿದೆ. ಈ ಸಹಾಯ ಕಾರ್ಯಕ್ಕೆ ಪ್ರೋತ್ಸಾಹ ನೀಡಿದ …

ನರೇಂದ್ರ ಮೋದಿ ಆಡಳಿತಕ್ಕೆ 12 ವರ್ಷ :ಬಿಜೆಪಿಯಿಂದ ‘ವಿಕಸಿತ ಭಾರತಂ’ ಸಮಾವೇಶ

ಕಾಸರಗೋಡು: ನರೇಂದ್ರ ಮೋದಿ ಸರಕಾರದ 12ನೇ ವಾರ್ಷಿಕಾಚರಣೆಯಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ನವಭಾರತ ಸದಸ್ ಎಂಬ ಹೆಸರಲ್ಲಿ ‘ವಿಕಸಿತ ಭಾರತಂ’ ಸಮಾವೇಶ ಆಯೋಜಿಸಲಾಯಿತು. ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ವಿಶ್ವದ ೧೦ನೇ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ತಲುಪಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಸಾಧ್ಯವಾಗಿದೆ ಎಂದು ಅಶ್ವಿನಿ ಅಭಿಪ್ರಾಯಪಟ್ಟರು. ಭ್ರಷ್ಟಾಚಾರ, ಆಡಳಿತ ಪರವಾದ ಅಸ್ಥಿರತೆಗಳಿಂದ ಹಾನಿಗೊಂಡಿದ್ದ …

ಕಟ್ಟೆಬಜಾರ್ ತಿರುವಿನಲ್ಲಿ ಬಾಯ್ತೆರೆದ ಚರಂಡಿ: ವಾಹನ ಸವಾರರಲ್ಲಿ ಆತಂಕ

ಮಂಜೇಶ್ವರ: ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಬಂಗ್ರಮAಜೇಶ್ವರ ರಸ್ತೆಯ ಕಟ್ಟೆಬಜಾರ್ ತಿರುವು ವಾಹನ ಸವಾರರಲ್ಲಿ ಆತಂಕವನ್ನು ಉಂಟುಮಾಡುತ್ತಿದೆ. ಈ ತಿರುವಿನ ಇಕ್ಕೆಡೆಗಳಲ್ಲಿ ರಸ್ತೆಗೆ ತಾಗಿಕೊಂಡು ತೆರೆದ ಸ್ಥಿತಿಯಲ್ಲಿರುವ ಚರಂಡಿ ವಾಹನ ಸವಾರರಿಗೆ ಅಪಾಯ ಒಡ್ಡುತ್ತಿದೆ. ಮಂಜೇಶ್ವರ ಭಾಗದಿಂದ ಹೊಸಂಗಡಿ ಕಡೆಗೆ ಸಂಚರಿಸುವಾಗ ಈ ತಿರುವಿನಲ್ಲಿ ಎದುರಿನಿಂದ ಬರುವ ವಾಹನಕ್ಕೆ ಸೈಡು ನೀಡುವ ವೇಳೆ ಚರಂಡಿಗೆ ಬಿದ್ದು ಅಪಘಾತಕ್ಕೆ ಕಾರಣವಾಗುತ್ತಿದ್ದು, ಕೆಲವರು ಕೂದಲೆಳೆ ಅಂತರದಿAದ ಪಾರಾಗಿದ್ದಾರೆ. ಈ ಪರಿಸರದಲ್ಲಿ ಚರಂಡಿಯಲ್ಲಿ ಗಿಡ, ಪೊದೆಗಳು ತುಂಬಿ ಚರಂಡಿ ಗಮನಕ್ಕೆ ಬಾರದೆ ಇನ್ನಷ್ಟು …

ವಾಹನ ಅಪಘಾತ ಗಾಯಗೊಂಡಿದ್ದ ಯುವಕ ಮೃತ್ಯು

ಕಾಸರಗೋಡು: ಖಾಸಗಿ ಬಸ್-ಸ್ಕೂಟರ್ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾದಲ್ಲಿ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಇರಿಯ ಮಂಡೆಂಗಾನದ ಫಾರೂಕ್ (32) ಮೃತಪಟ್ಟ ದುರ್ದೈವಿ. ಇವರು ಇರಿಯದಲ್ಲಿ ಕೊರಿಯರ್  ಸಂಸ್ಥೆಯ ನೌಕರಾಗಿ ದ್ದರು. ಕಳೆದ ಬುಧವಾರ ಬೆಳಿಗ್ಗೆ ಇರಿಯಾ ಮಸೀದಿ ಮುಂಭಾಗದ ರಸ್ತೆಯಲ್ಲಿ ಅಪಘಾತವುಂಟಾಗಿತ್ತು. ಕಾಞಂಗಾಡ್‌ಗೆ ಬರುತ್ತಿದ್ದ ಬಸ್‌ಗೆ ಫಾರೂಕ್ ಪ್ರಯಾಣಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದಿತ್ತು. ಇದರಿಂದ ಗಂಭೀರ ಗಾಯಗೊಂಡು ಚಿಕಿತ್ಸೆಯಲ್ಲಿದ್ದ ಫಾರೂಕ್ ನಿನ್ನೆ ರಾತ್ರಿ ಮೃತಪಟ್ಟರು

ಸಮಸ್ತ ಕೇಂದ್ರ ಮುಶಾವರ ಸದಸ್ಯ ತ್ವಾಖ ಅಹಮ್ಮದ್ ಮೌಲವಿ ಅಲ್ ಅಸ್ಹರಿ ನಿಧನ

ಕಾಸರಗೋಡು: ಸಮಸ್ತ ಮುಶಾವರ ಸದಸ್ಯ ಹಾಗೂ ಕಾಸರಗೋಡು ಜಿಲ್ಲಾ ಅಧ್ಯಕ್ಷರಾದ  ತ್ವಾಖ ಅಹಮ್ಮದ್ ಮೌಲವಿ ಅಲ್ ಅಸ್ಹರಿ ನಿಧನ ಹೊಂದಿದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಈ ಮಧ್ಯೆ ಇಂದು ಬೆಳಿಗ್ಗೆ ನಿಧನ ಸಂಭವಿಸಿದೆ. ಇವರು ಮಂಗಳೂರು-ಕೀಳೂರು ಸಂಯುಕ್ತ ಖಾಝಿಯಾಗಿದ್ದರು.

ಅಸೌಖ್ಯ ಬಾಧಿಸಿದ್ದ ಯುವಕ ನಿಧನ

ನೀರ್ಚಾಲು: ಅಸೌಖ್ಯ ಬಾಧಿಸಿ ಚಿಕಿತ್ಸೆಯಲ್ಲಿದ್ದ ಯುವಕ ಮೃತಪಟ್ಟನು. ಪುದುಕೋಳಿ ಪರಿಶಿಷ್ಟ ಜಾತಿ ಉನ್ನತಿಯ ಉಮೇಶ್ (34) ಮೃತ ವ್ಯಕ್ತಿ.  ಅಸೌಖ್ಯ ಬಾಧಿಸಿದ್ದ ಇವರು ಹಲವು ತಿಂಗಳುಗಳಿಂದ ತಲಶ್ಶೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದರು. ಬಾಲಕೃಷ್ಣ-ಲಕ್ಷ್ಮಿ ದಂಪತಿಯ ಪುತ್ರನಾದ ಮೃತರು ಸಹೋದರ ಅಭಿಲಾಶ್ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಬಸ್ ನಿಲ್ದಾಣಕ್ಕೆ ನುಗ್ಗಿ ವಿದ್ಯಾರ್ಥಿ ಸಹಿತ 3 ಮಂದಿ ಮೃತ್ಯು

ಕೊಲ್ಲಂ: ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಬಸ್ ನಿಲ್ದಾಣಕ್ಕೆ ನುಗ್ಗಿ ವಿದ್ಯಾರ್ಥಿ ಸಹಿತ ಮೂರು ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಗಾಯಗೊಂಡ ಐದು ಮಂದಿಯನ್ನು  ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವೆನ್ನಲಾಗಿದೆ. ಟಿಪ್ಪರ್ ಲಾರಿ ಚಾಲಕನಿಗೂ ಗಾಯವುಂಟಾಗಿದೆ. ಇಂದು ಬೆಳಿಗ್ಗೆ 7 ಗಂಟೆಗೆ ಕೊಟ್ಟಾರಕ್ಕರ ನೀಲೇಶ್ವರ ಎಂಬಲ್ಲಿ ಅಪಘಾತ ಸಂಭವಿಸಿದೆ. ಮೃತಪಟ್ಟವರು ಹರಿಲಾಲ್ (54), ಕಾರ್ಮಲ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಪಾರ್ತಿಪ್ (15), ಕೆಎಸ್‌ಆರ್‌ಟಿಸಿ ನೌಕರ ಅಜಯ್ ಕುಮಾರ್ (45) ಎಂದು  ಗುರುತುಹಚ್ಚ ಲಾಗಿದೆ. …

ನಾಯಮ್ಮಾರಮೂಲೆ, ಶಿರಿಯದಲ್ಲಿ ವಾಹನ ಅಪಘಾತ: ಮೂವರು ಯುವಕರ ದಾರುಣ ಮೃತ್ಯು

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ  ಎರಡು ಕಡೆಗಳಲ್ಲಿ ನಿನ್ನೆ ಸಂಭವಿಸಿದ ವಾಹನ ಅಪಘಾತಗ ಳಲ್ಲಾಗಿ ಮೂವರು ಯುವಕರು ಸಾವನ್ನಪ್ಪಿದ್ದಾರೆ. ನಾಯಮ್ಮಾರಮೂಲೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿನ್ನೆ ಸಂಜೆ ಬೈಕ್‌ಗೆ ಮೀನು ಲಾರಿ ಢಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಅದೇ ರೀತಿ ಕುಂಬಳೆ ಬಳಿ ನಿನ್ನೆ ಬೈಕ್ ನಿಯಂ ತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಢಿಕ್ಕಿ ಹೊಡೆದು ಅದರಲ್ಲಿ ಸಂಚರಿಸುತ್ತಿದ್ದ ಇಬ್ಬರು ಯುವಕರು ಪ್ರಾಣಕಳೆದುಕೊಂಡಿದ್ದಾರೆ. ನಾಯಮ್ಮಾರಮೂಲೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸಿದ ವಾಹನ ಅಪಘಾತದಲ್ಲಿ ನಾಯಮ್ಮಾ ರಮೂಲೆ ಮಿನಿ …

ಸ್ಕೂಟರ್‌ನಲ್ಲಿ ತಲುಪಿದ ತಂಡ ಯುವತಿ ಕುತ್ತಿಗೆಯಿಂದ ಚಿನ್ನದ ಸರ ಕಸಿದು ಪರಾರಿ

ಉಪ್ಪಳ: ಸ್ಕೂಟರ್‌ನಲ್ಲಿ ತಲುಪಿದ ಇಬ್ಬರು ಯುವಕರು ಯುವತಿಯ ಕುತ್ತಿಗೆಯಿಂದ ಎರಡೂಕಾಲು ಪವನ್‌ನ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ನಿನ್ನೆ ಅಪರಾಹ್ನ 3.10ರ ವೇಳೆ ಹೊಸಂಗಡಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್  ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೈವಳಿಕೆ ಬಾಯಿಕಟ್ಟೆಯ ಕೆ.ನಯನ (30) ಎಂಬವರ ಚಿನ್ನದ ಸರವನ್ನು ತಂಡ ಎಗರಿಸಿದೆ. ಹೊಸಂಗಡಿ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ರಸ್ತೆ ಮೂಲಕ ನಯನ ನಡೆದು ಹೋಗುತ್ತಿದ್ದಾಗ ಹೆಲ್ಮೆಟ್ ಹಾಗೂ ರೈನ್‌ಕೋಟ್ ಧರಿಸಿದ್ದ ಇಬ್ಬರು ಕಡಂಬಾರ್‌ಗೆ ತೆರಳುವ ರಸ್ತೆ ಯಾವುದೆಂದು ಕೇಳಿದ್ದಾರೆನ್ನಲಾಗಿದೆ. ನಯನ …

ಕುಂಬಳೆಯಲ್ಲಿ ಯುವಕ, ಸ್ನೇಹಿತೆಗೆ ಚಾಕು ತೋರಿಸಿ ಬೆದರಿಕೆಯೊಡ್ಡಿ ಅಪಹರಿಸಿ ಹಲ್ಲೆ: 50 ಸಾವಿರ ರೂ.ಗಾಗಿ ಬೇಡಿಕೆ; ಕೊಲೆ ಪ್ರಕರಣದ ಆರೋಪಿ ಸಹಿತ ಇಬ್ಬರ ಬಂಧನ

ಕುಂಬಳೆ: ಕಾರಿನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ ಹಾಗೂ  ಸ್ನೇಹಿತೆಗೆ ತಂಡವೊಂದು  ಚಾಕು ತೋ ರಿಸಿ ಬೆದರಿಕೆಯೊಡ್ಡಿ ಅಪಹರಿಸಿಕೊಂ ಡೊಯ್ದ ಬಳಿಕ ಅವರಿಗೆ ಹಲ್ಲೆಗೈದ ಬಗ್ಗೆ ದೂರಲಾಗಿದೆ. ಈ ಘಟನೆಗೆ ಸಂಬಂ ಧಿಸಿ ಕೇಸು ದಾಖಲಿಸಿಕೊಂಡ ಕುಂಬಳೆ ಪೊಲೀಸರು ಕೊಲೆ ಪ್ರಕರಣದ ಆರೋಪಿ ಸಹಿತ ಇಬ್ಬರನ್ನು ಬಂಧಿಸಿದ್ದಾರೆ. ಇನ್ನೋರ್ವನಿಗಾಗಿ ಹುಡುಕಾಟ ನಡೆಯುತ್ತಿದೆ. ಮೊಗ್ರಾಲ್ ಮೈಮೂನ್‌ನಗರ ನೀರೋಳಿ ಹೌಸ್‌ನ ಅಪ್ಸಲ್ (29), ಕುನ್ನಿಲ್ ಹೌಸ್‌ನ ಮುಹಮ್ಮದ್ ಮನ್ಸೂರ್ ಯಾನೆ ಜಿನ ಯಾನೆ ಫೈಸಿ (27) ಎಂಬಿವರನ್ನು ಕುಂಬಳೆ  ಎಸ್ ಐ …